ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಕೆ.ಎಸ್.ಗಣೇಶ್ ಅವಿರೋಧ ಆಯ್ಕೆ – ಹ್ಯಾಟ್ರಿಕ್ ಸಾಧನೆ

ಕೋಲಾರ:- ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಮುಂದಿನ ಐದು ವರ್ಷಗಳ ಅವಗೆ ಅಧ್ಯಕ್ಷರಾಗಿ ಕೆ.ಎಸ್.ಗಣೇಶ್ ಸತತ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದರು.
ಸಂಘದ ಉಪಾಧ್ಯಕ್ಷರಾಗಿ ಅಬ್ಬಣಿ ಶಂಕರ್ ಅವಿರೋಧವಾಗಿ ಆಯ್ಕೆಯಾದರು.
ನಗರದ ಅಂತರಗಂಗೆ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಗುರುವಾರ ಚುನಾವಣಾಧಿಕಾರಿ ಶಿವಶಂಕರ್ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಸಭೆಯಲ್ಲಿ ಇವರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು.
ಇದಕ್ಕೂ ಮುನ್ನ ಜರುಗಿದ ನಿರ್ದೇಶಕರ ಚುನಾವಣೆಯಲ್ಲಿ ಸಂಘದ ನಿರ್ದೇಶಕರಾಗಿ 19 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ಸಂಘದ ನಿರ್ದೇಶಕರಾಗಿ ಕೆ.ಎಸ್.ಗಣೇಶ್, ಬಿ.ವಿ.ಗೋಪಿನಾಥ್, ಬ್ಯಾಲಹಳ್ಳಿ ಗೋವಿಂದಗೌಡ, ಅಬ್ಬಣಿ ಶಂಕರ್, ಎಚ್.ಎನ್.ಮುರಳೀಧರ್, ವಿ.ಮುನಿರಾಜು, ಎ.ಸದಾನಂದ, ಎ.ಜಿ.ಸುರೇಶ್‍ಕುಮಾರ್, ಬಿ.ಎಲ್.ರಾಜೇಂದ್ರಸಿಂಹ, ಎಸ್.ರವಿಕುಮಾರ್, ಪಿ.ಎನ್.ದಾಸ್, ಎಂ.ನಾಗರಾಜಯ್ಯ, ಸಿ.ವಿ.ನಾಗರಾಜ್, ಎಚ್.ಎಲ್.ಸುರೇಶ್, ಎಂ.ಸೋಮಶೇಖರ್, ವಿ.ಈಶ್ವರ್, ಎಲ್.ರೂಪೇಶ್, ಎಂ.ವರಲಕ್ಷ್ಮಿ, ಕೆ.ಗೋಪಿಕಾ ಮಲ್ಲೇಶ್ ಅವಿರೋಧವಾಗಿ ಆಯ್ಕೆಯಾಗಿದ್ದರು.
2007 ರಲ್ಲಿ ಆರಂಭವಾಗಿದ್ದ ಪತ್ರಕರ್ತರ ಸಹಕಾರ ಸಂಘಕ್ಕೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಪತ್ರಕರ್ತರು ಷೇರುದಾರ ಸದಸ್ಯರಾಗಿದ್ದಾರೆ. ಹಿಂದಿನ ಎರಡು ಅವಧಿಯಿಂದಲೂ ಕೆ.ಎಸ್.ಗಣೇಶ್ ಅವಿರೋಧವಾಗಿ ಆಯ್ಕೆಯಾಗಿ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದ್ದು, ಇದೀಗ ಮೂರನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವುದು ಹ್ಯಾಟ್ರಿಕ್ ಸಾಧನೆಯಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‍ಬಾಬು, ಕಾಂಗ್ರೆಸ್ ಎಸ್ಸಿಘಟಕದ ಜಿಲ್ಲಾಧ್ಯಕ್ಷ ನಾಗರಾಜ್, ಸಜ್ಜಾದುಲ್ಲಾ, ಅತಾವುಲ್ಲ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಪತ್ರಕರ್ತರಾದ ಕೋ.ನಾ.ಮಂಜುನಾಥ್,ವೆಂಕಟೇಶಬಾಬಾ, ಸಿ.ಜಿ.ಮುರಳಿ, ಎಸ್.ಎನ್.ಪ್ರಕಾಶ್,ಬೆಟ್ಟಪ್ಪ, ಮಹೇಶ್, ಸುನೀಲ್‍ಕುಮಾರ್, ಲಕ್ಷ್ಮೀಪತಿ, ಪುನೀತ್,ಚಾಂದ್‍ಪಾಷಾ, ಚಂದು, ರಾಘವೇಂದ್ರ, ಅಮರೇಶ್,ಮದನ್, ವೆಂಕಟೇಶ್, ಅಮರ್, ಸುಧಾಕರ್, ಸಂಘದ ಸಿಇಒ ಗಂಗಾಧರ್,ಮುಖಂಡರಾದ ಮುನಿವೆಂಕಟಯಾದವ್ ಮತ್ತಿತರರಿದ್ದರು.

ಸಂತ ಮದರ್ ತೆರೆಸಾ ವಿಚಾರ ವೇದಿಕೆಯಿಂದ – ಅವರ 26ನೇ ಸಂಸ್ಮರಣಾ ದಿನ – ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ: ಪ್ರೊ. ಕೆ. ಫಣಿರಾಜ್

ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೋ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ವೈವಿದ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ತತ್ವದಡಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ್ವೇಷ ಎನ್ನುವುದು ಬಹಳ ಸರಳವಾದ ವಿಷಯ, ಪ್ರೀತಿಯೆಂಬುವುದು ಸರಳವಲ್ಲ. ಅಧಿಕಾರಕ್ಕಾಗಿ, ಹಣಕ್ಕಾಗಿ ವೇಷ ಮಾಡುವುದು ಸುಲಭ, ಅದಕ್ಕೆ ಪ್ರಚೋದನೆ ನೀಡಲು ಹಲವರಿದ್ದಾರೆ. ಅಂತಹ ಸಂದರ್ಭಲ್ಲಿ ಪ್ರೀತಿಸುವ ಗುಣವು ನಿಜವಾದ ಒಂದು ಆಧ್ಯಾತ್ಮವಾಗಿದೆ. ಭಾರತ ಬಹಳ ದೊಡ್ಡ ಕೋಮು ಹಿಂಸೆಯನ್ನು ಅನುಭವಿಸಿದೆ, ಮತೀಯ ದ್ವೇಷದಿಂದ ಒಬ್ಬರನ್ನು ಒಬ್ಬರು ಕೊಂದಿದ್ದಾರೆ, ಅತ್ಯಾಚಾರ ಎಸಗಿದ್ದಾರೆ. ಭಾರತದಲ್ಲಿ ಸಹೋದರತ್ವ ಎನ್ನುವ ಭಾವನೆ ದಿನ ನಿತ್ಯ ಮಾಡುವ ಊಟ, ನಿದ್ದೆಯ, ಉಸಿರಾಡುವ ಗಾಳಿಯ ಹಾಗೇ ದಿನ ನಿತ್ಯದ ಮೌಲ್ಯವಾಗದೆ ಹೋದರೆ ಸಾಮಾಜಿಕ ಪ್ರಜಾಪ್ರಭುತ್ವ ಇರಲು ಸಾಧ್ಯವಿಲ್ಲ. ಕಾನೂನಿನ ಆಸರೆಯಲ್ಲಿ ಸಮಾನತೆಯನ್ನು ರಕ್ಷಿಸಲು ಸಾಧ್ಯವಿಲ್ಲ ಮತ್ತು ಬಹಳ ದಿವಸ ಉಳಿಯುವುದಿಲ್ಲ. ಸಮಾನತೆ, ಭ್ರಾತೃತ್ವ ಬಹಳ ದಿನ ಉಳಿಯಬೇಕಾದರೆ ಸಮಾನ ಸಂಪನ್ಮೂಲ ಹಂಚಿಕೆಯಾಗುವ ಕ್ರಮವಾಗಬೇಕು. ಸ್ನೇಹದ ಭಾವನೆ ಅಂದರೆ ಮೈತ್ರಿಯ ಭಾವವನ್ನು ಕೆಡಿಸುವವರಿಂದ ಸಂಘರ್ಷ ಉಂಟಾಗುತ್ತಿದೆ ಎಂದು ಪ್ರೊ. ಫಣಿರಾಜ್ ಹೇಳಿದರು.

ಸಂವಿಧಾನದ ಮೂಲ ತತ್ವ ಅರಿತುಕೊಳ್ಳಿ: ಎಕ್ಕಾರು

ಹಲವು ಜಾತಿ, ಧರ್ಮ, ಸಂಸ್ಕೃತಿ, ಭಾಷೆ ಹೀಗೆ ಹಲವುಗಳನ್ನು ಒಪ್ಪಿಕೊಂಡು ಬದುಕುವುದೇ ಬಹುತ್ವ, ಈ ವೈವಿಧ್ಯತೆಯನ್ನು ಮತ್ತು ಭಾರತೀಯ ಸಂವಿಧಾನದ ಮೂಲ ತತ್ವಗಳನ್ನು ಅರ್ಥ ಮಾಡಿಕೊಂಡರೆ ನಾವು ಪ್ರೀತಿಯ ಸೆಲೆಯಲ್ಲಿ ಮೊಳಗುವುದಕ್ಕೆ ಸಾಧ್ಯವಾಗುತ್ತದೆ ಎಂದು ಜನಪದ ವಿದ್ವಾಂಸ, ನಿವೃತ್ತ ಎನ್‍ಎಸ್‍ಎಸ್ ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ವಿಷಯ ಮಂಡನೆ ಮಾಡಿ ಮಾತನಾಡಿದ ಅವರು, ಗಾಂಧೀಜಿ ಹೇಳುತ್ತಾರೆ ನಿಜವಾದ ಕ್ರಾಂತಿ ಎಂಬುವುದು ನಮ್ಮ ಅಂತರಂಗದಿಂದ ಆರಂಭವಾಗುತ್ತದೆ ಎಂದು. ನೈಜತೆಯನ್ನು ಅರ್ಥ ಮಾಡಿಕೊಂಡಾಗ ಅಂತರಂಗದ ಕ್ರಾಂತಿಯಾಗಲು ಸಾಧ್ಯವಾಗುತ್ತದೆ. ಇದರಿಂದಾಗಿ ನಮ್ಮ ಯೋಚನಾ ಕ್ರಮ, ನಮ್ಮ ಮತ್ತು ನಾಡಿನ ಬೆಳವಣಿಗೆ ಮಾತ್ರವಲ್ಲ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಭಾರತ ಸಂವಿಧಾನದ ಮೂಲ ತಿರುಳುಗಳಾದ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಹಾಗೂ ಸಾಮಾಜಿಕ ನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ನನಗೆ ಸಮಾನತೆ, ಸ್ವಾತಂತ್ರ್ಯ ಇರುವಾಗ ಇನ್ನೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ ಇದೆ ಎಂಬುದನ್ನು ಅರಿತುಕೊಂಡು ಪರಸ್ಪರ ಗೌರವದಿಂದ ಬದುಕುವ ಅನಿವಾರ್ಯತೆ ಮತ್ತು ಅಗತ್ಯವಿದೆ. ಸಮಾನತೆಗೆ ತೊಂದರೆ ಆದಾಗ ಮದರ್ ತೆರೆಸಾರಂತಹ ಮಹನೀಯರು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಇಂದು ಪ್ರೀತಿಯ ಬೋಧನೆಗಳಿಗಿಂತ ಆಚರಣೆಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದೇವೆ. ಮಾನವೀಯತೆ ಎಂದರೆ ಪ್ರೀತಿಯ ಸೆಲೆ. ಇದರ ಅಗತ್ಯ ಬಹಳಷ್ಟಿದೆ. ಮದರ್ ತೆರೆಸಾ ಅವರು ತನ್ನನ್ನು ತಾನು ಸೇವೆಗಾಗಿ ಸಮರ್ಪಿಸಿಕೊಂಡು ಬದುಕಿದರು. ಹೊಟ್ಟೆ ಬಟ್ಟೆಗೆ ಇಲ್ಲದವರು, ಸೂರಿಲ್ಲದವರು, ಅಂಗವಿಕಲರು, ಕುರುಡರು, ಕುಷ್ಠ ರೋಗಿಗಳು, ಸಮಾಜಕ್ಕೆ ಬೇಡವಾದವರು, ಪ್ರೀತಿ ವಂಚಿತರು ಇವರೆಲ್ಲರ ಸೇವೆ ಮಾಡುವ ಮೂಲಕ ಅವರಲ್ಲಿ ದೇವರನ್ನು ಕಂಡವರು ಹಾಗೂ ತನ್ನನ್ನು ಟೀಕೆ ಮಾಡಿದವರಿಗೆ ಕೂಡ ಜನಸೇವೆಯನ್ನು ಮಾಡಿದ ಮಹನೀಯರು ಮದರ್ ತೆರೇಸಾರವರು. ಆಸೆಯೇ ದುಃಖಕ್ಕೆ ಕಾರಣ, ಆದರೆ ಆಸೆಯೆಂದರೆ ಯಾವುದೋ ವಸ್ತುವಿನ ಮೇಲಿನ ಆಸೆಯಲ್ಲ ನಮ್ಮ ಮನಸ್ಸಿನಲ್ಲಿರುವ ಸ್ವಾರ್ಥ, ದ್ವೇಷ, ಕೋಪ, ಕೋಮುವಾದ ಇವೆಲ್ಲವೂ ಆಸೆಗಳು. ಅದನ್ನು ಬಿಟ್ಟು ನಾವು ಹೊರ ಬಂದಾಗ ಕುವೆಂಪು ಹೇಳಿದಂತೆ ನಾವು ವಿಶ್ವ ಮಾನವರಾಗುತ್ತೇವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರಾಯ್ ಕ್ಯಾಸ್ಟೆಲಿನೊ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಜನರು ಭಾರತದ ಭವಿಷ್ಯ, ದೇಶದ 60% ಜನರು 30ರ ವಯಸ್ಸಿನ ಒಳಗಿನವರು. ಯುವಕರು ಮುಂದಿನ ತಾರೆಗಳು. ಮದರ್ ತೆರೆಸಾ ನಾವು ಕಂಡ ಮಹಾನ್ ಮಾನವತಾವಾದಿ. ಸಮಾಜದ ಕಟ್ಟಕಡೆಯ ವ್ಯಕ್ತಿಯಲ್ಲಿ ಪರಮಾತ್ಮನನ್ನು ಕಂಡವರು. ಭಾರತವನ್ನು ಅವರು ಕರ್ಮಭೂಮಿಯನ್ನಾಗಿಸಿದವರು. ಮರಣ ಹೊಂದಿ 26 ವರ್ಷಗಳ ನಂತರವೂ ಮನುಕುಲಕ್ಕೆ ಪ್ರೇರಣೆ ನೀಡುತ್ತಿರುವ ಹಿರಿಮೆ ಅವರದು. ಅವರ ಸ್ಫೂರ್ತಿ ಪಡೆದು ಪ್ರೀತಿ ಹರಡಲಿ ಎಲ್ಲೆಡೆ ಎಂಬ ಧ್ಯೇಯದೊಂದಿಗೆ ಸಂತ ಮದರ್ ತೆರೆಸಾ ವಿಚಾರ ವೇದಿಕೆ ಸ್ಥಾಪಿಸಲ್ಪಟ್ಟಿದೆ ಎಂದು ಅವರು ವಿವರಿಸಿದರು.

ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ವಸಂತ್ ಕುಮಾರ್ ಪ್ರತಿಕ್ರಿಯೆ ನೀಡಿದರು. ಮಂಗಳೂರು ಧರ್ಮಪ್ರಾಂತ್ಯದ ಪಿಆರ್‍ಒ ಫಾ. ಜೆ.ಬಿ. ಸಲ್ದಾನ, ಸಿಸ್ಟರ್ ಶಾಂತಿಧನ್, ಸಿಸ್ಟರ್ ರೋನಾ, ಫಾ. ಪ್ರವೀಣ್, ಫಾ. ರೂಪೇಶ್ ಮಾಡ್ತಾ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಮಾಜಿ ಸಚಿವ ರಮಾನಾಥ ರೈ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಕಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ ಉಪಸ್ಥಿತರಿದ್ದರು. ವೇದಿಕೆಯ ಜಂಟಿ ಕಾರ್ಯದರ್ಶಿ ಮಂಜುಳಾ ನಾಯಕ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ನಿರೂಪಿಸಿದರು. ಸ್ಟ್ಯಾನಿ ಅಲ್ವಾರಿಸ್ ವಂದಿಸಿದರು. ಪ್ರಾರಂಭದಲ್ಲಿ ಏಕತಾರಿ ಹಾಡುಗಾರ ನಾದ ಮಣಿನಾಲ್ಕೂರು ಬಳಗ ಹಾಗೂ ಜನಪ್ರೀತಿ ಬಳಗದವರಿಂದ ಪ್ರೀತಿಯ ಸಿಂಚನ ಸೌಹಾರ್ದ ಗಾಯನ ಕಾರ್ಯಕ್ರಮ ನಡೆಯಿತು.

ನಿಫಾ ವೈರಸ್ ಸೋಂಕು ರಾಜ್ಯಕ್ಕೆ ಹರಡದಂತೆ ಕಟ್ಟೆಚ್ಚರ ಮುಂಜಾಗೃತಾ ಕ್ರಮ ವಹಿಸಲಾಗಿದೆ-ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: “ಕೇರಳದಲ್ಲಿ ಕಾಣಿಸಿರುವ ನಿಫಾ ವೈರಸ್ ಸೋಂಕು ರಾಜ್ಯಕ್ಕೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿ ಯಾರಿಗೂ ಸೋಂಕು ತಟ್ಟಬಾರದು. ಆ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ” ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೇರಳದ ಗಡಿಗೆ ತಾಗಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಸಭೆಯನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ನಿಫಾದ ಬಗ್ಗೆ ಯಾರೂ ಭಯಪಡಬೇಕಾಗಿಲ್ಲ. ಕೇರಳಕ್ಕೆ ಸಮೀಪದಲ್ಲಿರುವ ನಾಲ್ಕು ಜಿಲ್ಲೆಗಳ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯ ನಡೆಯುತ್ತಿದೆ.

ದ.ಕ ಜಿಲ್ಲೆಯ 12 ಚೆಕ್‌ಪೋಸ್ಟ್‌ಗಳಲ್ಲಿ 2184, ಮೈಸೂರಿನ 4 ಚೆಕ್ ಪೋಸ್ಟ್‌ಗಳಲ್ಲಿ 6,500, ಕೊಡಗು 4 ಚೆಕ್‌ಪೋಸ್ಟ್‌ ಗಳಲ್ಲಿ 1,132 ಮತ್ತು ಚಾಮರಾಜನಗರದ 2 ಚೆಕ್‌ಪೋಸ್ಟ್‌ಗಳಲ್ಲ್ 1,600 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಆರೋಗ್ಯ ಇಲಾಖೆಯು ಅಗತ್ಯದ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಸೋಂಕು ಪತ್ತೆಯಾದರೆ ಕ್ವಾರಂಟೈನ್, ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಬೆಡ್‌ಗಳು , ಮಾಸ್ಕ್ ಮತ್ತಿತರ ವ್ಯವಸ್ಥೆಗೆ ಅಗತ್ಯದ ತಯಾರಿ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಆನಂದ್, ಆರೋಗ್ಯ, ಇಲಾಖೆಯ ಜಂಟಿ ನಿರ್ದೇಶಕಿ ಡಾ. ತ್ರಿವೇಣಿ, ವಿಭಾಗೀಯ ಸಹ ನಿರ್ದೇಶಕಿ ಡಾ. ರಾಜೇಶ್ವರಿ ದೇವಿ ಮೊದಲಾದವರು ಉಪಸ್ಥಿತರಿದ್ದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ನೀಡುತ್ತಿರುವ ಹಣ ಕಟ್ಟ ಕಡೆಯ ವ್ಯಕ್ತಿಗೂ ತಲುಪಲಿ : ಸಚಿವ ಕೆ.ಹೆಚ್. ಮುನಿಯಪ್ಪ 

ಕೋಲಾರ : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹಣ ಅಂತ್ಯೋದಯ ಕಾರ್ಡ್ ದಾರರು ಹಾಗೂ ಬಿಪಿಎಲ್ ಕಾರ್ಡ್ ದಾರ ಫಲಾನುಭವಿಗಳ ಬ್ಯಾಂಕ್ ಖಾತೆಯ ಕಟ್ಟ ಕಡೆಯ ವ್ಯಕ್ತಿಗೂ ತಲುಪಲಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಸೂಚಿಸಿದರು. 

ಇಂದು ಮುಳಬಾಗಿಲು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ನೀಡಲಾಗುತ್ತಿದ್ದು , ಎಲ್ಲಾ ಬಡವರು , ಮಾಧ್ಯಮ ವರ್ಗದವರು , ಕುಟುಂಬಗಳ ಖಾತೆಗೆ ಹಣ ತಲುಪಬೇಕು.

ಇನ್ನೂ ಖಾತೆಗೆ ಹಣ ಹೋಗದೆ ಇರುವಂತಹ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸಿ ತಿಂಗಳ ಅಂತ್ಯದೊಳಗೆ ವರದಿಯನ್ನು ಸಲ್ಲಿಸಬೇಕೆಂದು ಆಹಾರ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿರುವ ಎಲ್ಲಾ ಅಕ್ಕಿ ಉಗ್ರಾಣಗಳಿಗೂ ತಿಂಗಳಿಗೆ ಎರಡು ಬಾರಿ ಭೇಟಿ ನೀಡಿ , ಅಕ್ಕಿ ಏನಾದರೂ ಉಳಿಕೆ ಇದೆಯೇ ಹಾಗೂ ಅಕ್ಕಿ ಗುಣ ಮಟ್ಟವನ್ನು ಸೂಕ್ತವಾಗಿ ಪರಿಶೀಲಿಸಬೇಕು ಎಂದು ಹೇಳಿದರು. 

ಇನ್ನು ಜಿಲ್ಲೆಯಲ್ಲಿ ಆರೋಗ್ಯ ಸಮಸ್ಯೆಯಲ್ಲಿ ಸಿಲುಕಿದ್ದು , ಯಾರಾದರೂ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿಯನ್ನು ತಿಳಿದುಕೊಂಡರು. ಆಹಾರ ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಯೊಬ್ಬರು ಮಾತನಾಡಿ ಜಿಲ್ಲೆಯಲ್ಲಿ ಬಹುತೇಕ ಜನರು ಅಕ್ಕಿಯೇ ಬೇಕು ಹಣ ಬೇಡ ಎಂದು ಹೇಳುತ್ತಿದ್ದಾರೆ ಎಂದು ಸಚಿವರಿಗೆ ಮನವಿ ಮಾಡಿದರು. 

ತೂಕ ಮತ್ತು ಕಾನೂನು ಮಾಪನ ಇಲಾಖೆ ಸಂಬಂಧಪಟ್ಟ ಅಧಿಕಾರಿ ಜೊತೆ ಮಾತನಾಡಿ ಜಿಲ್ಲೆಯಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಹಾಗೂ ಗ್ರಾಹಕ ಕೇಂದ್ರಗಳಲ್ಲಿ ಸರಿಯಾದ ರೀತಿ ತೂಕ ಅಳತೆ ಮಾಡುತ್ತಿದ್ದಾರೆಯೇ ಎಂಬುದನ್ನು ಮಾಹಿತಿ ಪಡೆದು ಶೀಘ್ರವಾಗಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು. 

ಶಿಕ್ಷಣ ಇಲಾಖೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ , ಕುಡಿಯುವ ನೀರು , ಶೌಚಾಲಯ , ಆಟದ ಮೈದಾನ ಹಾಗೂ ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಪ್ರಮಾಣ ಕಡಿಮೆಯಾಗುತ್ತಿದೆಯೇ ಎಂಬುದನ್ನು ಅದರ ಬಗ್ಗೆ ವಿವರಗಳನ್ನು ಪಡೆದುಕೊಂಡರು. ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಯೊಬ್ಬರು ಮಾತನಾಡಿ , ಜಿಲ್ಲೆಯಲ್ಲಿ ಕೆಲವು ಕಡೆ ಶಿಕ್ಷಕರ ಸಮಸ್ಯೆ ಇದೆ ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ನರಸಾಪುರ , ಮಾಲೂರು , ವೇಮಗಲ್ , ಕೈಗಾರಿಕೆಗಳು ಹೆಚ್ಚು ಇರುವುದರಿಂದ ಸಿಎಸ್‌ಆರ್ ಅನುದಾನದಲ್ಲಿ ಹೆಚ್ಚು ಶಿಕ್ಷಣ ಇಲಾಖೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುಂದಿನ ದಿನಗಳಲ್ಲಿ ಸಭೆಯನ್ನು ನಡೆಸಿ , ಸಿಎಸ್‌ಆರ್ ಅನುದಾನವನ್ನು ಶಿಕ್ಷಣಕ್ಕಾಗಿ ಹೊತ್ತು ನೀಡಬೇಕು ಹೇಳುತ್ತಾರೆ. ಮುಳಬಾಗಿಲು ತಾಲ್ಲೂಕಿನ ಇಒ ಸರ್ವೇಶ್ ಅವರು ಮಾತನಾಡಿ , ತಾಲೂಕಿನಲ್ಲಿ ಬಹುತೇಕ ಕಾಮಗಾರಿಗಳು ನರೇಗಾ ಯೋಜನೆ ಅಡಿ ಶಾಲೆಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದು ಹೇಳಿದರು. 

ಸಭೆಗೆ ಮುನ್ನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ಆಹಾರ ಸಚಿವ ಕೆ ಹೆಚ್. ಮುನಿಯಪ್ಪ ಭೇಟಿ ಮುಳಬಾಗಿಲು ಸೆಪ್ಟೆಂಬರ್ 19 ಸುಪ್ರಸಿದ್ಧವಾಗಿರುವ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಎಂದಿನಂತೆ ಪ್ರತಿ ವರ್ಷ ಗಣಪತಿ ಹಬ್ಬದಲ್ಲಿ ಗಣಪತಿ ಉತ್ಸವಗಳು ಹಾಗೂ ರಥೋತ್ಸವಗಳು ಜರುಗುತ್ತಿದ್ದು , ಭಕ್ತರ ಜೊತೆಗೆ ಮಾನ್ಯ ಆಹಾರ 

 ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ . ಮುನಿಯಪ್ಪ ದಂಪತಿ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ಸಚಿವರು ಪೂಜೆಯನ್ನು ಸಲ್ಲಿಸಿ ನಾಡಿನ ಜನತೆಗೆ ಉತ್ತಮವಾದ ಮಳೆಯಾಗಿ ನಾಡಿನ ಸುಭೀಕ್ಷವಾಗಿರಬೇಕೆಂದು ಹಾಗೂ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಮುಳಬಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಜರತ್ ಹಾಗೂ ಸೈಯದನ ಬಾಬಾ ಹೈದರ್ – ಇ – ಖಲಂದರ್ ಪುಸೇನಿ ಸೆಹೆರ್ ವರ್ದಿ ದರ್ಗಾ ಮಹಲ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 

ಮುಳಬಾಗಿಲು ಶಾಸಕರಾದ ಸಮೃದ್ಧಿ ಮಂಜುನಾಥ , ರಾಮಪ್ರಸಾದ್ , ಊರಬಾಗಿಲು ಶ್ರೀನಿವಾಸ , ರಾಮಪ್ರಸಾದ್ , ರಾಮಲಿಂಗಾರೆಡ್ಡಿ , ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು. ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಖಾ , ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ || ಎಚ್ ನಟರಾಜ್ , ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜನತಾ ದರ್ಶನ ಜಾರಿ ಕುರಿತು ಪೂರ್ವಭಾವಿ ಸಭೆ : ಜಿಲ್ಲಾಧಿಕಾರಿ ಅಕ್ರಂ ಪಾಷ 

ಕೋಲಾರ : ಸಾರ್ವಜನಿಕರ ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ನೇರವಾಗಿ ನೀಡುವ ಜನತಾ ದರ್ಶನದ ಮುಂದುವರೆದ ಭಾಗವಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಿದೆ . 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರು , ಕಾರ್ಯದರ್ಶಿಗಳು , ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಾರೆ. ಅಂತೆಯೇ ತಾಲ್ಲೂಕು ಮಟ್ಟದಲ್ಲಿ ಶಾಸಕರು , ತಹಶೀಲ್ದಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಾರೆ.

ಜಿಲ್ಲಾ ಮಟ್ಟದಲ್ಲಿ ಪ್ರತಿ ಮಾಹೆ ಒಂದರಂತೆ ಹಾಗೂ ಪ್ರತಿ 15 ದಿನಗಳಿಗೊಮ್ಮೆ ಆಯ್ದ ಒಂದು ತಾಲ್ಲೂಕಾ ಕೇಂದ್ರದಲ್ಲಿ ಜನತಾ ದರ್ಶನ ಏರ್ಪಡಿಸಲು ಸಿದ್ಧತೆ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು. 

ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ , ಜನತಾ ದರ್ಶನ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ,  ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಹಿಂದೆ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದ್ದು , ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕುಂದು ಕೊರತೆಗಳು ಹಾಗೂ ಅಹವಾಲುಗಳನ್ನು ಪತ್ರಮುಖೇನ  ಮುಖ್ಯಮಂತ್ರಿಗಳಿಗೆ ನೀಡುತ್ತಿದ್ದರು. 

ಪ್ರಸ್ತುತ ಈ ವಿನೂತನ ಕಾರ್ಯಕ್ರಮದಿಂದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಕೊಡ ಬೇಕಾಗಿರುವ ಅಹವಾಲುಗಳನ್ನು ಸ್ಥಳೀಯವಾಗಿಯೇ ಸಂಬಂಧಿತ ಶಾಸಕರು ಅಥವಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಬಹುದಾಗಿದೆ. 

ಇದರಿಂದ ಸಾರ್ವಜನಿಕರು  ಮುಖ್ಯಮಂತ್ರಿಗಳಿಗೆ ಅಹವಾಲುಗಳನ್ನು ನೀಡಲು ಭೇಟಿ ಮಾಡುವುದನ್ನು ತಪ್ಪಿಸಬಹುದಾಗಿದೆ ಹಾಗೂ ತಮ್ಮ ಸಮಸ್ಯೆಗಳನ್ನು ಹಾಗೂ ಕುಂದು ಕೊರತೆಗಳನ್ನು ಸ್ಥಳೀಯವಾಗಿ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಈ ಉದ್ದೇಶದಿಂದ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸೆ .25 ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ . ಈ ಕಾರ್ಯಕ್ರಮದ ನಂತರ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲೆಯ ಯಾವುದಾದರೊಂದು ತಾಲ್ಲೂಕು ಕೇಂದ್ರದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು . 

ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಇ – ಆಫೀಸ್ ತಂತ್ರಾಂಶವನ್ನು ಅನುಷ್ಠಾನ ಮಾಡಬೇಕಾಗಿರುತ್ತದೆ. ಇದರಿಂದ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಇರುತ್ತದೆ.

ಇ – ಆಫೀಸ್ ಅನುಷ್ಠಾನ ಮಾಡಲು ಬೇಕಾದ ಮೂಲಭೂತ ಸೌಕರ್ಯಗಳನ್ನು ಎಲ್ಲಾ ಇಲಾಖೆಗಳು ಸಿದ್ಧಪಡಿಸಿಕೊಳ್ಳಬೇಕು ಜಿಲ್ಲಾಡಳಿತದ ವತಿಯಿಂದ ಇ – ಆಫೀಸ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗುವುದು. ತರಬೇತಿ ಅಗತ್ಯವಿರುವ ಸಿಬ್ಬಂದಿಯವರು ಕಾರ್ಯಗಾರದ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು. 

ಜನತಾ ದರ್ಶನ ಕಾರ್ಯಕ್ರಮದಂದು ಅಯಾ ಇಲಾಖೆಗಳು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಹವಾಲುಗಳ ಸ್ವೀಕೃತಿ ಹಾಗೂ ವಿಲೇವಾರಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಅಯಾ ಇಲಾಖೆಗಳ ಕೌಂಟರ್ ಗಳಲ್ಲಿ ಇಲಾಖೆಯ ವೆಬ್ ಸೈಟ್ , ಹೆಲ್ತ್‌ಲೈನ್ ಅಥವಾ ಕಂಟ್ರೋಲ್ ರೂಂಗಳ ಹಾಗೂ ಅಯಾ ಇಲಾಖೆಗಳ ಯೋಜನೆಗಳ ಬಗ್ಗೆ ವಿವರಗಳನ್ನು ಮುದ್ರಿಸಿ ಹಾಕಿರಬೇಕು. ಸಕಾಲ ತಂತ್ರಾಂಶವನ್ನು ಈ ಯೋಜನೆಗಾಗಿ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಅಥವಾ ಅಂತಹ ಯಾವುದೇ ಆನ್ ಲೈನ್ ಸೇವೆಗಳಿದ್ದಲ್ಲಿ , ಅವುಗಳನ್ನು ಈ ಯೋಜನೆಗೆ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಪದ್ಮ ಬಸವಂತಪ್ಪ ರವರು ಮಾತನಾಡಿ , ಜಿಲ್ಲೆಯಲ್ಲಿ ಪ್ರತಿ 2 ನೇ ಶನಿವಾರದಂದು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಸಭೆಗಳನ್ನು ಏರ್ಪಡಿಸಲಾಗುತ್ತಿದ್ದು , ಈ ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ತಿಳಿಸಿದರು.

ಇದರಿಂದ ಗ್ರಾಮಗಳ ಮಟ್ಟದಲ್ಲಿ ಕುಂದು ಕೊರತೆಗಳನ್ನು ಸ್ಥಳೀಯವಾಗಿ ಬಗೆಹರಿಸಲು ಮತ್ತು ಜನತಾ ದರ್ಶದಲ್ಲಿ ಅಹವಾಲುಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಅದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಕೆಡಿಪಿ ಸಭೆಗಳಿಗೂ ಸಹ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಿದರು. ಸಾರ್ವಜನಿಕ ಕುಂದು ಕೊರತೆಗಳನ್ನು ಐ.ಪಿ.ಜಿ.ಆರ್.ಎಸ್ ಮೂಲಕ ನೋಂದಾಯಿಸಿ ಆನ್ ಲೈನ್ ಮೂಲಕ ಶೀಘ್ರವಾಗಿ ಪರಿಹರಿಸುವಂತೆ ಸೂಚಿಸಿದರು.

ಸಭೆಯಲ್ಲಿ ಕೆ.ಜಿ.ಎಫ್ ವರಿಷ್ಠಾಧಿಕಾರಿಗಳಾದ ಶಾಂತರಾಜು , ಹೆಚ್ಚುವರಿ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳಾದ ಬಾಸ್ಕರ್ , ಎಲ್ಲಾ ತಾಲ್ಲೂಕಿನ ತಹಶಿಲ್ದಾರರ ಗಳು , ಕೃಷಿ ಜಂಟಿ ನಿರ್ದೇಶಕರಾದ ರೂಪದೇವಿ , ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್.ಎಂ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ || ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು .

55 ವರ್ಷ ಪ್ರಾಯದಲ್ಲಿ ಬೈಕ್ ಮೂಲಕ ವಿಶ್ವದ ಅತಿ ಎತ್ತರದ ಮೋಟಾರು ಪಾಸ್ ತಲುಪಿದ ವಿಲ್ಮಾ ಕುಂದಾಪುರ – ಇಂತಹ ಸಾಧನೆ ಮಾಡಿದ ಭಾರತೀಯ ಮೊದಲ ಮಹಿಳೆ / Vilma Kundapura reached the world’s highest motorable pass by bike at the age of 55 – the first Indian woman to achieve such a feat

ಕುಂದಾಪುರ, ಸೆ.21: ಬೆಂಗಳೂರಿನಿಂದ ತಾಯಿ ಮಗಳ ಜೋಡಿ ಮೂಲತಹ ಕುಂದಾಪುರವರಾದ ೫೫ ವರ್ಷ ಪ್ರಾಯದ ವಿಲ್ಮಾ ಕರ್ವಾಲೋ ಬೈಕ್ ಮೂಲಕ ವಿಶ್ವದ ಅತಿ ಎತ್ತರದ ಮೋಟಾರಬಲ್ ಪಾಸ್ ತಲುಪಿ ವಿಸೇಷವಾದ ಸಾಧನೆ ಮಾಡಿ  ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ   ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕಾರ್ಪೊರೇಟ್ ತರಬೇತುದಾರರಾದ 2022 ಆಕೆಯ ಪ್ರಯಾಣದ ನಂತರ ಎರಡನೇ ಅತಿ ಎತ್ತರದ ಮೋಟಾರು ರಸ್ತೆ – ಖರ್ದುಂಗ್ಲಾ ಪಾಸ್ ಆಗಿದ್ದು, ಕಳೆದ ವರ್ಷದ ಸಾಧನೆಯನ್ನು ಮಾಡಿದ ನಂತರ ಅವಳು ಸ್ವಲ್ಪ ಹೆಚ್ಚು ದೃಢ ನಿಶ್ಚಯದಿಂದ ತಲುಪಬಹುದು ಎಂದು ಅರಿತುಕೊಂಡಳು.

ಉಮ್ಲಿಂಗ್ ಲಾ, ವಿಶ್ವದ ಅತಿ ಎತ್ತರದ ಮೋಟಾರು ಪಾಸ್.

ಉಮ್ಲಿಂಗ್ ಲಾ ಪಾಸ್ ಲೇಹ್ ನಗರದಿಂದ ಸುಮಾರು 350 ಕಿಮೀ ದೂರದಲ್ಲಿದೆ ಮತ್ತು ಇದು ಇಂಡೋ ಚೀನಾ ಗಡಿಯ ಸಮೀಪದಲ್ಲಿದೆ.ಈ ಪ್ರಸಿದ್ಧ ಪಾಸ್ ಸಮುದ್ರ ಮಟ್ಟದಿಂದ 19024 ಅಡಿ ಎತ್ತರದಲ್ಲಿದೆ, ಇದು ಅತ್ಯುನ್ನತ ಮೋಟಾರು ಸಾಮರ್ಥ್ಯದ ಪಾಸ್ ಆಗಿದೆ ಜಗತ್ತಿನಲ್ಲಿ. ಇದನ್ನು ಬಾರ್ಡರ್ ರೋಡ್ ಆರ್ಗನೈಸೇಶನ್ (BRO) ಯೋಜನೆಯ HIMANK ನ ಭಾಗವಾಗಿ ನಿರ್ಮಿಸಲಾಗಿದೆ. 2017 ರ ವೇಳೆಗೆ ಕಾಮಗಾರಿ ಪೂರ್ಣಗೊಂಡಿದ್ದರೂ, 2021 ರ ಅಂತ್ಯದ ವೇಳೆಗೆ ಮಾತ್ರ ಸಾರ್ವಜನಿಕರಿಗೆ ತೆರೆಯಲಾಯಿತು. ಲಡಾಖ್‌ನಲ್ಲಿರುವ ಭೂಪ್ರದೇಶವು ಸವಾರರಿಗೆ ಸಾಕಷ್ಟು ಕಠಿಣವಾಗಿದೆ, ಆದರೆ ಹಳ್ಳಿಯಿಂದ ಹಾನ್ಲೆಗೆ ಪ್ರಯಾಣಉಮ್ಲಿಂಗ್ ಲಾ ಆಫ್ ರೋಡಿಂಗ್ ವಿಭಾಗಗಳು, ಮರಳು ದಿಬ್ಬಗಳು ಮತ್ತು ಮರಳಿನ ಪರ್ವತ ರಸ್ತೆಗಳಿಂದ ನಿರೂಪಿಸಲ್ಪಟ್ಟಿದೆ, ಇದು ಎಲ್ಲಾ ಸವಾರರಿಗೆ ಅತ್ಯಂತ ಸವಾಲಿನದಾಗಿದೆ.

[ಹನ್ಲೆ ಭಾರತದ ಅತಿ ಎತ್ತರದ ಗ್ರಾಮ, ಅಲ್ಲಿ ನಾವು ಭಾರತೀಯ ಖಗೋಳ ವೀಕ್ಷಣಾಲಯವನ್ನು ಕಾಣುತ್ತೇವೆ]

ವಿಲ್ಮಾ ತನ್ನ ಮಗಳು ಚೆರಿಶ್ ಜೊತೆಗೆ ಕೇರಳದ 3 ಸವಾರರ ತಂಡ ಮತ್ತು ಪ್ರಯಾಣವನ್ನು ಪ್ರಾರಂಭಿಸಿದರು ಲೇಹ್‌ನ ಬೆಂಬಲ ತಂಡ. ಎಲ್ಲಾ 5 ಸವಾರರು ಭೂಪ್ರದೇಶಕ್ಕೆ ಆದ್ಯತೆಯ ಬೈಕು RE ಹಿಮಾಲಯನ್‌ನಲ್ಲಿ ಸವಾರಿ ಮಾಡಿದರು. ಈ ಪಾಸ್ ಲೇಹ್ ನಗರದಿಂದ ದೂರ ಇರುವುದರಿಂದ, ರಸ್ತೆಗಳು ಇನ್ನೂ ಅಭಿವೃದ್ಧಿ ಹಂತದಲ್ಲಿದೆ, ಇದರಿಂದಾಗಿ ಕಡಿಮೆಯಾಗಿದೆ ಸವಾರರು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಒಟ್ಟಾರೆಯಾಗಿ, ಲೇಹ್ ಟು ಲೇಹ್ ಪ್ರವಾಸವು 5 ದಿನಗಳ ಕಾಲ ನಡೆಯಿತು ಮತ್ತು ಒಟ್ಟು ಅಂದಾಜು 900 ಕಿ.ಮೀ. ವಿಲ್ಮಾ, ಪ್ರವಾಸದ ಉದ್ದಕ್ಕೂ ತನ್ನ ಮಗಳನ್ನು ಬೆಂಬಲಿಸಲು ಮತ್ತು ಪ್ರೋತ್ಸಾಹಿಸಿದ್ದಕ್ಕಾಗಿ ಮಗಳನ್ನು ಧನ್ಯವಾದಗಳನ್ನು ನೀಡುತ್ತಾಳೆ, ಇಲ್ಲದಿದ್ದರೆ 55 ವರ್ಷದ ಮಹಿಳೆಗೆ ಅಸಾಧ್ಯವಾದ ಸಾಧನೆಯಾಗಿರುತಿತ್ತು ಎಂದು ತಿಳಿಸುತ್ತಾಳೆ.

“ನಾವು ಅನೇಕ ಸವಾಲುಗಳನ್ನು ಎದುರಿಸಿದ್ದೇವೆ” ಎಂದು ವಿಲ್ಮಾ ಹೇಳುತ್ತಾರೆ, “ಮೂಳೆ ಕಚ್ಚುವ ಚಳಿ, ಕಡಿಮೆ ಆಮ್ಲಜನಕದ ಮಟ್ಟಗಳು, ಜಾರು ರಸ್ತೆಗಳು ಉತ್ತಮ ಜಲ್ಲಿಕಲ್ಲು, ಆಫ್ ರೋಡಿಂಗ್ ವಿಭಾಗಗಳು, ಶೀತಲಮಯ ನೀರಿನ ದಾಟುವಿಕೆಗಳು ಮತ್ತು ಮರಳು ದಿಬ್ಬಗಳು ಸವಾಲಾಗಿದ್ದವು. ಆದರೆ ನಮ್ಮ ಧ್ರಡತೆ ಎಲ್ಲಾ ಸವಾಲುಗಳನ್ನು, ಮೆಟ್ಟಿ, ಪ್ರಪಂಚದ ಅಗ್ರಸ್ಥಾನವನ್ನು ತಲುಪಿ ಜಯ ಸಾಧಿಸಿದೇವು ಇದೊಂದ ವಿಶೇಷವಾದ ಸಾಧನೆಯಾಗಿದೆ. ನಾವು 11ನೇ ಸೆಪ್ಟೆಂಬರ್ 2023 ರಂದು ಉಮ್ಲಿಂಗ್ಲಾ ಪಾಸ್‌ನ ಮೇಲ್ಭಾಗವನ್ನು ತಲುಪಿದ್ದಾಗಿದೆ ಎಂದು ತಮ್ಮ ಬರಹದ ಮೂಲಕವೇ ವಿಲ್ಮಾ ಹೇಳುತ್ತಾಳೆ

ಅದು ತೃಪ್ತಿಕರ ಮತ್ತು ವಿವರಿಸಲಾಗದ ಕ್ಷಣವಾಗಿದ್ದು, ಇದು ನನ್ನ ಬಹಳ ದಿನದ ಕನಸಾಗಿತ್ತು ಎಂದು ಆನಂದದಿಂದ ವಿಲ್ಮಾ ಹೇಳಿಕೊಳ್ಳುತ್ತಾಳೆ.

      ವಿಲ್ಮಾ ಕುಂದಾಪುರದ ರಾಜಕೀಯ ಮುತ್ಸದಿ, ಕುಂದಾಪುರದ ಪುರಸಭೆಯ ಮಾಜಿ ಅಧ್ಯಕ್ಷ ದಿ. ಎಡ್ವಿನ್ ಕ್ರಾಸ್ಟೊ ಮತ್ತು , ಕುಂದಾಪುರದ ಪುರಸಭೆಯ ಮಾಜಿ ಉಪಾಧ್ಯಕ್ಷೆ ಲಿಯೋನಿಲ್ಲಾ ಕ್ರಾಸ್ಟೊ ಇವರ ಮಗಳು, ಇವಳಿಗೆ ಮೊದಲಿನಿಂದಲೂ ಆಟ ಕ್ರೀಡೆಗಳಲ್ಲಿ ಆಸಕ್ತಿಯಿದ್ದು, ಲೆಸ್ಲಿ ಕರ್ವಾಲ್ಲೊರ ಜೊತೆ ವಿವಾಹವಾಗಿ ಬೆಂಗಳೂರಿನಲ್ಲಿ ನೆಲಸುತ್ತಾರೆ.

ಇದು ತೃಪ್ತಿಕರ ಮತ್ತು ವಿವರಿಸಲಾಗದ ಕ್ಷಣವಾಗಿದ್ದು, ಇದು ನನ್ನ ಬಹಳ ದಿನದ ಕನಸಾಗಿತ್ತು ಎಂದು ಆನಂದದಿಂದ ವಿಲ್ಮಾ ಹೇಳಿಕೊಳ್ಳುತ್ತಾಳೆ. ವಿಲ್ಮಾ ೫೫ ವರ್ಷದ ಪ್ರಾಯದಲ್ಲಿ ಇಂತಹ ಅಪರೂಪದ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆಯಗಿರುವು ವಿಶೇಶವಾಗಿದೆ

A 55-year-old woman from Kundapur, Wilma, has achieved the distinction of reaching the world’s highest motorable pass by bike

55 year old woman reaches the highest motorable Pass in the world by bike or Mother daughter duo from Bangalore to reach the highest motorable Pass in the world by bike

Vilma Carvalho, a Corporate Trainer from Kundapura, currently living in Bangalore, made the news in 2022 after her journey to second highest motorable road – Khardungla Pass. After accomplishing last year’s feat she realized that with a little more determination she can reach.

 Umling La, the world’s highest motorable Pass.

Umling La Pass is located around 350 Km from Leh city and it is situated close to Indo China border. This famous Pass is located at 19024 feet above the sea level, making it the highest motor able pass in the world. It was constructed as part of Project HIMANK by the Border Road Organization (BRO). Though, the work was completed by 2017, it opened for public only towards the end of 2021. The terrain in Ladakh is quite tough for riders as it is, however the journey from the village Hanle to Umling La is characterized with off roading sections, sand dunes and sandy mountain roads making it extremely challenging for all riders.

[Hanle is the highest village in India]

where we find Indian Astronomical Observatory] Vilma embarked on the journey along with her daughter Cherish, a team of 3 riders from Kerala and the support team from Leh. All 5 riders rode RE Himalayans, a preferred bike for the terrain. As this pass is situated away from Leh city, the roads are still under development leading to fewer riders venturing this route. Altogether, the Leh to Leh tour lasted for 5 days and was total of approximate of 900 Kms. Vilma, gives credit to her daughter for supporting and encouraging her throughout the tour, an otherwise impossible feat for a woman of 55. “We faced many challenges” says Vilma, “like bone biting cold, low oxygen levels, slippery roads due to fine gravel, off roading sections, chilled water crossings and sand dunes. But the feeling of overcoming all the challenges and reaching what felt like the top of the world is an accomplishment that is satisfying and unexplainable” We reached on top of the Umlingla Pass on 11th Septemter 2023

It was a satisfying and indescribable moment, a dream of mine for a long time,” says Wilma happily.

       Vilma is a political leader of Kundapur, the former president of Kundapur municipality. Daughter of Edwin Crasto and Leonilla Crasto, former vice president of Kundapur Municipality, she had an early interest in sports and settled in Bangalore after marrying Leslie Carvalho.

It was a satisfying and indescribable moment, a dream of mine for a long time,” says Wilma happily. Wilma is the first Indian woman to achieve such a rare feat at the age of 55