ಶಾಲಾ ಕಾಲೇಜು ವಿದ್ಯಾರ್ಥಿಗಳ ಕ್ರಿಕೆಟ್ ಮುಖಾಮುಖಿಗೆ ಬೃಹತ್ ವೇದಿಕೆಯನ್ನು ಸಿದ್ಧಪಡಿಸುತ್ತಿರುವ ಟಿ.ಸಿ.ಎ ಉಡುಪಿ

ಉಡುಪಿ- ಶಾಲಾ,ಕಾಲೇಜು ವಿದ್ಯಾರ್ಥಿಗಳಿಗಾಗಿ ನವೆಂಬರ್ 06 ರಿಂದ ನವೆಂಬರ್ 12 ರ ವರೆಗೆ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲು ಉಡುಪಿ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸಜ್ಜಾಗುತ್ತಿದೆ.

ಪಂದ್ಯಾವಳಿಯು ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು,ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜಿನ ಒಟ್ಟು 64 ತಂಡಗಳು ನೋಂದಣಿ ಮಾಡಿಕೊಂಡಿದ್ದು,ಕುಂದಾಪುರ ಗಾಂಧಿ ಮೈದಾನದಲ್ಲಿ 700 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಸ್ಪರ್ಧಿಸುವುದನ್ನು ನೋಡಬಹುದಾಗಿದೆ.

“ಈ ಪಂದ್ಯಾವಳಿಯು ಶಾಲಾ- ಕಾಲೇಜು ಮಕ್ಕಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಮತ್ತು ಸಾಂಘಿಕ ಕೆಲಸವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.ನವೆಂಬರ್ 6 ಬೆಳಿಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಎ.ಕಿರಣ್ ಕೊಡ್ಗಿ ಮತ್ತು ಜನತಾ ಫಿಶ್ ಮಿಲ್ ನ ಪ್ರವರ್ತಕರಾದ ಶ್ರೀ ಪ್ರಶಾಂತ್ ಕುಂದರ್ ಇವರು ಉದ್ಘಾಟಿಸಲಿದ್ದು,
ಟಿ‌.ಸಿ.ಎ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಭಾಗವಹಿಸಲಿದ್ದಾರೆ”ಎಂದು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ತಿಳಿಸಿದ್ದಾರೆ.”

ಟಿ.ಸಿ.ಎ ಉಡುಪಿ ಸಂಸ್ಥೆ ಈ ಕ್ರಿಕೆಟ್ ಪಂದ್ಯಾಟವನ್ನು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದ್ದು,ಎರಡು ಪ್ರತ್ಯೇಕ ವಿಭಾಗಗಳಲ್ಲಿ ನಡೆಯಲಿದೆ. ಒಂದರಿಂದ 10ನೇ ತರಗತಿಯ ಮಕ್ಕಳಿಗೆ ಶಾಲಾ ಮಟ್ಟದಲ್ಲಿ ಹಾಗೂ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ಮಟ್ಟದಲ್ಲಿ ಹೀಗೆ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಪಂದ್ಯಾವಳಿಯ ನೇರ ಪ್ರಸಾರ Sportskannadatv ಯುಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.

ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ:ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿಲನೆ

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿದರು.
ಕಚೇರಿಯ ಬೇರೆ ಬೇರೆ ವಿಭಾಗಗಳಿಗೆ ಭೇಟಿ ನೀಡಿ, ಆಯಾ ವಿಭಾಗದಲ್ಲಿ ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲಿಸಿದರು. ಸಿಬ್ಬಂದಿಗೆ ಅಗತ್ಯವಾದ ಸಲಹೆ ಸೂಚನೆ ನೀಡಿದರು.
ಸಿಬ್ಬಂದಿಯೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆ ಸಿಬ್ಬಂದಿ ಸಾರ್ವಜನಿಕರ ಸಮಸ್ಯೆ ನಿವಾರಣೆಗೆ ಹೆಚ್ಚಿನ ಗಮನ ನೀಡಬೇಕು. ಕಚೇರಿಗೆ ಬರುವ ಅರ್ಜಿಗಳ ವಿಲೇವಾರಿ ನಿಗದಿತ ಕಾಲಮಿತಿಯೊಳಗೆ ನಡೆಯಬೇಕು. ರೈತರು ಮತ್ತು ಸಾರ್ವಜನಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಕಚೇರಿಗೆ ಅಲೆಯುವುದನ್ನು ತಪ್ಪಿಸಬೇಕು. ಸಮಸ್ಯೆ ಜಟಿಲವಾಗಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ವಿನೋದ್, ಶಂಕರರೆಡ್ಡಿ, ಹರಿ, ವಿಶ್ವನಾಥ್ ಇದ್ದರು.
ನಾಡಕಚೇರಿಗೆ ಭೇಟಿ: ಜಿಲ್ಲಾಧಿಕಾರಿ ಅಕ್ರಂ ಪಾಷ ತಾಲ್ಲೂಕಿನ ಗೌನಿಪಲ್ಲಿಯ ನಾಡಕಚೇರಿಗೆ ಭೇಟಿ ನೀಡಿ ಕಚೇರಿ ಕಾರ್ಯನಿರ್ವಹಣೆ ಪರಿಶೀಲಿಸಿದರು. ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹೊರ ಭಾಗದಲ್ಲಿ ನಾಡ ಕಚೇರಿ ಕಟ್ಟಡ ನಿರ್ಮಿಸಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಿದೆ ಸಾರ್ವಜನಿಕರು ದೂರಿದರು.

ಸಂತ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜ್ ನಲ್ಲಿ : ಅಂತರ್ ಶಾಲಾ ಮಟ್ಟದ ಸ್ಪರ್ಧೆ ‘ಅವಿನ್ಯಾ-2ಕೆ23’

ಕುಂದಾಪುರ,ನ.4: ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕವಾದ ಮನಸ್ಸುಗಳನ್ನು ಹುಟ್ಟು ಹಾಕುವುದರ ಮೂಲಕ ಅವರನ್ನು ಪ್ರಯೋಗಶೀಲತೆಗೆ ಒಳಪಡಿಸಬೇಕು ಎಂದು ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಹೇಳಿದರು.
ಅವರು ಶನಿವಾರ ಕುಂದಾಪುರ ಸಂತ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (ನ.4:
) ನಡೆದ ಅಂತರ್ ಶಾಲಾ ಮಟ್ಟದ ವಿಜ್ಞಾನ ಮಾದರಿ ಮತ್ತು ರಸ ಪ್ರಶ್ನೆ ಸ್ಪರ್ಧೆ ‘ಅವಿನ್ಯಾ-2ಕೆ23’ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದರು.
ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಬೆಳಕಿಗೆ ತರಲು ಕಷ್ಟಸಾಧ್ಯ. ಇಂತಹ ವೇದಿಕೆಯನ್ನು ಕಲ್ಪಿಸಿದಾಗ ಮಾತ್ರ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಬೆಳಗಿಸಲು ಸಾಧ್ಯವಾಗಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಚಾಲಕ ಅತೀ.ವಂ.ಫಾ.ಸ್ಟ್ಯಾನಿ ತಾವ್ರೋ ವಹಿಸಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಪಡುಬಿದ್ರಿ ವಿಭಾಗದ ಅಬಕಾರಿ ಇನ್‍ಸ್ಪೆಕ್ಟರ್ ಮಿಲ್ಲರ್ ಜಾನ್‍ಸನ್ ಡಿಸೋಜಾ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕುಂದಾಪುರ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರತಿ ಸುವಾರಿಸ್, ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಜಾ ಶಾಂತಿ, ಹೋಲಿ ರೋಜರಿ ಕಿಂಡರ್ ಗಾರ್ಟನ್ ಮುಖ್ಯ ಶಿಕ್ಷಕಿ ಶೈಲಾ ಲೂಯಿಸ್ ಉಪಸ್ಥಿತರಿದ್ದರು.

ಸಂತ ಮೇರಿಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ರೇಷ್ಮಾ ಫೆರ್ನಾಂಡಿಸ್ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಮಂಜುಳ ನಾಯರ್ ವಂದಿಸಿದರು. ಉಪನ್ಯಾಸಕರಾದ ನಾಗರಾಜ ಶೆಟ್ಟಿ, ಶರ್ಮಿಳಾ ಮಿನೇಜಸ್ ಕಾರ್ಯಕ್ರಮ ನಿರೂಪಿಸಿದರು.

ಚಂದ್ರಯಾನದ ಉದ್ಘಾಟನೆ: ಖುಷಿಯ ಸಂಭ್ರಮ
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಶಾಲಾ ಮಟ್ಟದ ವಿಜ್ಞಾನ ಮಾದರಿ ಮತ್ತು ರಸ ಪ್ರಶ್ನೆ ಸ್ಪರ್ಧೆ ‘ಅವಿನ್ಯಾ-2ಕೆ23’ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ ಚಂದ್ರಯಾನ 3ರ ಮಾದರಿಯಲ್ಲಿ ರಾಕೇಟ್‍ನ್ನು ಸಿದ್ದಪಡಿಸಿ ಸ್ವಿಚ್ ಹಾಕಿದ ತಕ್ಷಣ ಅದು ಆಕಾಶಕ್ಕೆ ಚಿಮ್ಮಿದಾಗ ನೆರೆದ ವಿದ್ಯಾರ್ಥಿಗಳು ಮತ್ತು ಅತಿಥಿಗಳು ಖುಷಿಯಿಂದ ಸಂಭ್ರಮಿಸಿದರು.

ಬಾಲ ಕಾರ್ಮಿಕತೆಯು ಮಕ್ಕಳ ಬೆಳವಣಿಗೆಯನ್ನು ಕಡಿತಗೊಳಿಸುತ್ತದೆ ; ನ್ಯಾ. ಸುನಿಲ ಎಸ್. ಹೊಸಮನಿ

ಕೋಲಾರ ನವಂಬರ್ 4 : ಬಾಲ ಕಾರ್ಮಿಕತೆಯು ಮಕ್ಕಳ ಬೆಳವಣಿಗೆಯನ್ನು ಕಡಿತಗೊಳಿಸುತ್ತದೆ ಮತ್ತು ಅವರ ಬಾಲ್ಯವನ್ನು ಕಸಿದುಕೊಳ್ಳುತ್ತದೆ. ವಿವಿಧ ಕಾರ್ಖಾನೆಗಳಲ್ಲಿ ಅವರಿಗೆ ವೈದ್ಯಕೀಯ ನೆರವು ನೀಡದ ಕಾರಣ ಅವರು ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಅವರು ಅನೈರ್ಮಲ್ಯ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ. ಅನಕ್ಷರತೆ ಅವರನ್ನು ಸಮಾಜದಲ್ಲಿ ಹಿಂದುಳಿದಂತೆ ಮಾಡುತ್ತದೆ. ಅವರು ಜೀವನದಲ್ಲಿ ಯಶಸ್ವಿಯಾಗಲು ಯಾವುದೇ ಅವಕಾಶವನ್ನು ಕಂಡುಕೊಳ್ಳುವುದಿಲ್ಲ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಸುನಿಲ ಎಸ್. ಹೊಸಮನಿ ತಿಳಿಸಿದರು.
ಕೋಲಾರ ತಾಲ್ಲೂಕು ಕೊಂಡರಾಜನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ, ಕಾರ್ಮಿಕ ಇಲಾಖೆ ಹಾಗೂ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೋಲಾರ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಹೆಚ್ಚು ಹೆಚ್ಚಾಗಿರುವ ಗ್ರಾಮಗಗಳಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಕ ಮಾಡಿದರೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ಇಪ್ಪತ್ತು ಸಾವಿರದಿಂದ ಐವತ್ತು ಸಾವಿರದವರೆಗೆ ದಂಡ ವಿಧಿಸಲಾಗುವುದು. ಹೆಣ್ಣಿಗೆ 18 ವರ್ಷ, ಗಂಡಿಗೆ 21 ವರ್ಷ ವಿವಾಹದ ವಯಸ್ಸು ಕಾನೂನು ನಿಗಧಿಪಡಿಸಿದ್ದು, 18 ವರ್ಷಕ್ಕೆ ಕಡಿಮೆ ಇರುವವರಿಗೆ ಮದುಮೆ ಮಾಡಿಸಿದರೆ ಶಿಕ್ಷೆಗೆ ಗುರಿಯಗುತ್ತಾರೆ ಎಂದು ಬಾಲ್ಯವಸ್ಥೆ ಮತ್ತು ಕಿಶೋರಾವಸ್ಥೆ ಹಾಗೂ ಬಾಲ್ಯ ವಿವಾಹದ ಬಗ್ಗೆ ಅರಿವುಮೂಡಿಸಿದರು.
ಮಕ್ಕಳು ಖಿನ್ನತೆಯಂತಹ ಮಾನಸಿಕ ಅಸ್ವಸ್ಥತೆಗಳಿಗೆ ಬಲಿಯಾಗುತ್ತಾರೆ. ಅಂತಿಮವಾಗಿ ಅವರು ಮಾದಕ ದ್ರವ್ಯಗಳನ್ನು ಬಳಸಲು ಪ್ರಾರಂಭಿಸುತ್ತಾರೆ. ಜೀವನದಲ್ಲಿ ಯಾವುದೇ ಭರವಸೆಯಿಲ್ಲದ ಅಪಾಯಕಾರಿ, ಬೆರೆಯುವ ಮತ್ತು ಕರುಣಾಜನಕ ಜೀವನ ಪರಿಸ್ಥಿತಿಗಳಲ್ಲಿ ಮಕ್ಕಳು ಬದುಕುತ್ತಾರೆ. ಇದು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲು ದೊಡ್ಡ ತಡೆಗೋಡೆಯಾಗಿದೆ.
ವಕೀಲ ದನರಾಜ್ ಮಾತನಾಡಿ ಬಾಲ್ಯವು ಪ್ರತಿಯೊಬ್ಬರ ಜೀವನದ ಶ್ರೇಷ್ಠ ಮತ್ತು ಸಂತೋಷದಾಯಕ ಅವಧಿಯಾಗಿದೆ, ಬಾಲ ಕಾರ್ಮಿಕರು ಮಾನಸಿಕವಾಗಿ, ದೈಹಿಕವಾಗಿ, ಸಾಮಾಜಿಕವಾಗಿ ಮತ್ತು ಬೌದ್ಧಿಕವಾಗಿ ಎಲ್ಲಾ ಅಂಶಗಳಲ್ಲಿ ಮಕ್ಕಳ ಸರಿಯಾದ ಬೆಳವಣಿಗೆ ಮತ್ತು ಬೆಳವಣಿಗೆಗೆ ಅಡ್ಡಿಪಡಿಸುತ್ತದೆ. ಬಾಲ್ಯವು ಪ್ರತಿಯೊಬ್ಬರ ಜನ್ಮಸಿದ್ಧ ಹಕ್ಕು, ಅದು ಅವನು ತನ್ನ ಹೆತ್ತವರ ಪ್ರೀತಿ ಮತ್ತು ಆರೈಕೆಯಲ್ಲಿ ಬದುಕಬೇಕು, ಆದರೆ ಈ ಕಾನೂನು ಬಾಹಿರ ಬಾಲಕಾರ್ಮಿಕ ಕೃತ್ಯವು ಮಗುವನ್ನು ದೊಡ್ಡವರಂತೆ ಬದುಕಲು ಒತ್ತಾಯಿಸುತ್ತದೆ. ಇದು ಮಗುವಿನ ಜೀವನದಲ್ಲಿ ಅಸಮರ್ಪಕ ದೈಹಿಕ ಬೆಳವಣಿಗೆ ಮತ್ತು ಬೆಳವಣಿಗೆ, ಮನಸ್ಸಿನ ಅಸಮರ್ಪಕ ಬೆಳವಣಿಗೆ, ಸಾಮಾಜಿಕವಾಗಿ ಮತ್ತು ಬೌದ್ಧಿಕವಾಗಿ ಅನಾರೋಗ್ಯಕರಂತಹ ಅನೇಕ ಪ್ರಮುಖ ವಿಷಯಗಳ ಕೊರತೆಯನ್ನು ಉಂಟುಮಾಡುತ್ತದೆ ಎಂದರು.
ಕಾರ್ಮಿಕ ಅಧಿಕಾರಿ ಶಬಾನಾ ಆಜ್ಮಿ ಮಾತನಾಡಿ ಬಾಲ ಕಾರ್ಮಿಕರು ಒಂಟಿ ಜೀವನಕ್ಕೆ ಬಲಿಯಾಗುತ್ತಾರೆ. ಈ ಮಕ್ಕಳು ತಮ್ಮ ಜೀವನದಲ್ಲಿ ಉತ್ಕøಷ್ಟತೆಗೆ ಮುಕ್ತ ವೇದಿಕೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದು ಮಕ್ಕಳ ಜೀವನದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬಿಡುತ್ತದೆ. ಇದು ಅಂತಿಮವಾಗಿ ಅವರನ್ನು ಜೀವನದ ಅನಿಶ್ಚಿತತೆಗೆ ಎಳೆಯುತ್ತದೆ. ಅವರು ಜೀವನದಲ್ಲಿ ಪ್ರಗತಿ ಮತ್ತು ಸುಧಾರಣೆಯ ಯಾವುದೇ ಸಾಧ್ಯತೆಯನ್ನು ಕಂಡುಕೊಳ್ಳುವುದಿಲ್ಲ. ಇದು ಅವರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ನಾಶಪಡಿಸುತ್ತದೆ ಎಂದರು.
ಕೋಲಾರ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹೆಚ್ಚಾಗಿ ವಾಸಿಸುವ ಸ್ಥಳಗಳಾದ ಕೋಲಾರ ತಾಲ್ಲೂಕು ಕೊಂಡರಾಜನಹಳ್ಳಿ, ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ, ಮುಳಬಾಗಿಲು ತಾಲ್ಲೂಕಿನ ಆವಣಿ, ಶ್ರೀನಿವಾಸಪುರ ತಾಲ್ಲೂಕಿನ ಎಸ್.ಟಿ.ಕಾಲೋನಿಯ ಪಾಳ್ಯದಲ್ಲಿ, ಬಂಗಾರಪೇಟೆ ತಾಲ್ಲೂಕಿನ ಚಿಕ್ಕ ಅಂಕಂಡಹಳ್ಳಿ, ಕೆಜಿಎಫ್ ತಾಲ್ಲೂಕಿನ ಬೇತಮಂಗಲದ ನ್ಯೂಟೌನ್ ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷೆ ನಾಗರತ್ನಮ್ಮ, ಸದಸ್ಯರಾದ ಶ್ರೀನಿವಾಸ್ ಯಾದವ್, ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ. ರಾಮಕೃಷ್ಣ, ಖಾದ್ರಿಪುರ ಬಾಬು, ಗಮನ ಮಹಿಳಾ ಸಮೂಹದ ಲಕ್ಷ್ಮಿ, ಈನೆಲ ಈನಲ ವೆಂಕಟಾಚಲಪತಿ ಗಾಯನದ ಮೂಲಕ ಅರಿವು ಮುಡಿಸಿದರು, ಕೊಂ
ಡರಾಜನಹಳ್ಳಿ ಮಂಜುಳ ನಿರೂಪಿಸಿ, ಶ್ರೀಕಾಂತ್ ವಂದಿಸಿದರು.

PRERANA-23 and 26th Annual National Homoeopathic Conference at Father Muller Homoeopathic Medical College, Deralakatte/ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ “ಪ್ರೇರಣಾ-23” ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ

The Inauguration of South Indian HomoeoFest – Prerana‘23 andthe 26thAnnual National Homoeopathic Conference was held on 4th November 2023at Father Muller Auditorium, Deralakatte.

Dr Saddam Navas, IAS, Additional District Magistrate was theChief Guestfor the programme. Rev.Fr Richard Aloysius Coelho, Director of Father Muller Charitable Institutions presided over programme and the occasion was also graced by Rev FrRoshanCrasta, Administrator, FMHMCH&HPD; Rev AshwinCrasta, Asst. Administrator, FMHMCH&HPD; Dr ESJPrabhuKiran, Principal, FMHMC; Dr VilmaMeeraD’souza, Vice Principal, FMHMC; Dr Rakhal P, Convener, Prerana-23 and Dr Amitha P Baliga, Organizing Secretary, 26th Annual National Homoeopathic Conference.

The dignitaries were welcomed with a traditionalPoornaKumbha. The formal inaugural programmecommenced by invoking the blessings of the almighty and lighting the lamp.Dr E S J PrabhuKiran, Principal, FMHMC welcomed the gathering and introduced the chief guest.

On this occasion, the Annual College Magazine “Pioneer 2023” was released by the Chief Guest. Staff Editor Dr Jolly D’Mellopresented the highlights of the magazine and also announced the prize winners of the cover design competition.

The Chief Guest,Dr Saddam Navas, IAS, in his inaugural addressexpressed his pleasure and contentment to be a part of Prerana-23, and said that technology cannot replace doctor so practically we have to reach out to the community to identify their needs. As a team we have to prepare ourselves for the future in terms of research and update knowledge.

Father Muller Homoeopathic Pharmaceutical Division is famous all over the world for its quality Homoeopathic products and medicines. Rev. FrRoshanCrasta, Administrator, FMHMC&H and FMHPD, launched a series of new products, along with the Director,FMCI.

Dr SrinathRao, former Principal and HOD of MateriaMedicadepartment was felicitated on the occasion by the Director and chief guest for 36 years of dedicated and valuable service rendered to the institution.

Rev. FrRoshanCrasta, Administrator, FMHMC&H and FMHPD addressed the gatheringand said that South Indian Homoeo Fest is an opportunity to exchange the expertise and knowledge. He also emphasized the student gathering to look beyond the horizon, to make the presence felt and known by the nation.

Rev. Fr Richard A. Coelho, Director, FMCI, presented memento to the Chief Guest as token of appreciation and gratitude. In his presidential address congratulated the team for hosting Prerana 23 and 26thconference. He wished the participants to give their best.

Prerana-23, the Mega Cultural event which brought many Homoeopathic colleges together which witnessed a prolific spectacular cultural and literary extravaganza.More than 525 Students participated from 16 different South Indian Homoeopathic Colleges and won prizes worth One Lakh.

Dr Rakhal P, Convener, South Indian Homoeo Fest proposed the Vote of thanks.

DrDeepaRebello and Dr Manish Tiwari compered the programme.

On 5th November 2023 there will be a 26th Annual National Homoeopathic Conference. Dr Sreekar Manu, Chairman, Managing Director & Founder of Dr Manu’s Homoeopathy and Dr RajatChattopadhyay, Principal & Administrator, The Calcutta Homoeopathic Medical College & Hospital will be the resource person for the day. Around 720 delegates will be attending the conference.

The valedictory programme will be held on 05.11.2023. Dr K. Narayanan, Distinguished Alumnus, Classical Carnatic Musician & Playback Singer will be the chief guest.

ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ “ಪ್ರೇರಣಾ-23” ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ

“ಪ್ರೇರಣಾ-23”, ದಕ್ಷಿಣ ಭಾರತದ ಹೋಮಿಯೋಪಥಿ ಫೆಸ್ಟ್ ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ನವಂಬರ್ 4 ರಂದು ಬೆಳಿಗ್ಗೆ 9.00 ಗಂಟೆಗೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಸಭಾಂಗಣದಲಿ ನಡೆಸಲಾಯಿತು.

ಪಶ್ಚಿಮ ಬಂಗಾಳದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಸದ್ದಮ್ ನವಾಸ್ IಂS ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ, ಕಂಕನಾಡಿ, ಮಂಗಳೂರು ಇದರ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಯೊ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದರು. ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ರೋಶನ್ ಕ್ರಾಸ್ತ, ಸಹಾಯಕ ಆಡಳಿತಾಧಿಕಾರಿ ವಂದನೀಯ ಅಶ್ವಿನ್ ಕ್ರಾಸ್ತ, ಕಾಲೇಜಿನ ಪ್ರಾಂಶುಪಾಲರಾದ ಡಾ. ಇ.ಎಸ್.ಜೆ ಪ್ರಭು ಕಿರಣ್, ಉಪಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿ’ಸೋಜ, “ಪ್ರೇರಣಾ 2023” ರ ಸಂಯೋಜಕರಾದ ಡಾ. ರಖಾಲ್ ಪಿ., “ಹೋಮಿಯೋಪಥಿ ಸಮ್ಮೇಳನ – 2023” ರ ಸಂಘಟನಾ ಕಾರ್ಯದರ್ಶಿಯಾದ ಡಾ. ಅಮಿತಾ ಬಾಳಿಗ ರವರು ವೇದಿಕೆಯಲ್ಲಿ ಉಪಸ್ತಿತರಿದ್ದರು.

ಕಾರ್ಯಕ್ರಮದ ಗಣ್ಯ ವ್ಯಕ್ತಿಗಳನ್ನು ಸಾಂಪ್ರದಾಯಿಕ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಔಪಚಾರಿಕ ಉದ್ಘಾಟನಾ ಕಾರ್ಯಕ್ರಮವು ಪರಮಾತ್ಮನ ಆಶೀರ್ವಾದ ಕೋರಿ, ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು. ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಇ.ಎಸ್.ಜೆ ಪ್ರಭು ಕಿರಣ್‍ರವರು ಸಭೆಯನ್ನು ಸ್ವಾಗತಿಸಿ, ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಮ್ಯಾಗಜಿûನ್ “ಪಯೋನಿಯರ್ 2023” ಮುಖ್ಯ ಅತಿಥಿಗಳು ಬಿಡುಗಡೆಗೊಳಿಸಿದರು. ಸ್ಟಾಫ್ ಎಡಿಟರ್ ಡಾ. ಜಾಲಿ ಡಿ’ಮೆಲ್ಲೊ ಪತ್ರಿಕೆಯ ಮುಖ್ಯಾಂಶಗಳನ್ನು ಪ್ರಸ್ತುತಪಡಿಸಿದರು ಮತ್ತು ಮುಖಪುಟ ವಿನ್ಯಾಸ ಸ್ಪರ್ಧೆಯ ಬಹುಮಾನ ವಿಜೇತರನ್ನು ಘೋಷಿಸಿದರು.

ಫಾದರ್ ಮುಲ್ಲರ್ ಹೋಮಿಯೋಪಥಿ ಫಾರ್ಮಾಸ್ಯುಟಿಕಲ್ ವಿಭಾಗವು ತನ್ನ ಗುಣಮಟ್ಟದ ಉತ್ಪನ್ನಗಳು ಔಷಧಿಗಳಿಗಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಫಾದರ್ ಮುಲ್ಲರ್ ಹೋಮಿಯೋಪಥಿ ಫಾರ್ಮಾಸ್ಯುಟಿಕಲ್ ವಿಭಾಗದ ಆಡಳಿತಾಧಿಕಾರಿ ವಂದನೀಯ ರೋಶನ್ ಕ್ರಾಸ್ತರವರು ಹೊಸ ಉತ್ಪನ್ನಗಳ ಸರಣಿಯನ್ನು ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾದ ಡಾ. ಸದ್ದಮ್ ನವಾಸ್ ತಮ್ಮ ಅತಿಥಿ ಭಾಷಣದಲ್ಲಿ ‘ಪ್ರೇರಣ – 2023’ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವನ್ನು ವ್ಯಕ್ತಪಡಿಸಿದರು ಮತ್ತು ತಂತ್ರಜ್ಞಾನವು ವೈದ್ಯರನ್ನು ಎಂದಿಗೂ ಬದಲಿಸಲು ಸಾಧ್ಯವಿಲ್ಲ ಆದ್ದರಿಂದ ನಾವು ಸಮುದಾಯದ ಅಗತ್ಯಗಳನ್ನು ಗುರುತಿಸುವಲ್ಲಿ ಪ್ರಾಯೋಗಿಕ ಪ್ರಯತ್ನ ಮಾಡಬೇಕು ಹಾಗೂ ಹೋಮಿಯೋಪಥಿ ವೈದ್ಯರೆಲ್ಲರೂ ಒಂದು ತಂಡವಾಗಿ ಸಂಶೋಧನೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ವಿಷಯದಲ್ಲಿ ಭವಿಷ್ಯಕ್ಕಾಗಿ ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಹೇಳಿದರು.

ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾಗಿ ಹಾಗೂ ಮೆಟಿರಿಯಾ ಮೆಡಿಕಾ ವಿಭಾಗದ ಮುಖ್ಯಸ್ಥರಾಗಿ ಒಟ್ಟು 36 ವರ್ಷಗಳ ಮೌಲ್ಯಭರಿತ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಪೆÇ್ರಫೆಸರ್ ಡಾ. ಶ್ರೀನಾಥ್ ರಾವ್ ಅವರನ್ನು ನಿರ್ದೇಶಕರು ಮತ್ತು ಮುಖ್ಯ ಅತಿಥಿಗಳು ಸನ್ಮಾನಿಸಿದರು.
ಆಡಳಿತಾಧಿಕಾರಿ ವಂದನೀಯ ರೋಶನ್ ಕ್ರಾಸ್ತರವರು ತಮ್ಮ ಸಂದೇಶದಲ್ಲಿ ದಕ್ಷಿಣ ಭಾರತದ ಹೋಮಿಯೋಪಥಿ ಫೆಸ್ಟ್ ಪರಿಣಿತಿ ಮತ್ತು ಜ್ಞಾನವನ್ನು ವಿನಿಮಯ ಮಾಡಿಕುಳ್ಳುವ ಅವಕಾಶವಾಗಿದೆ, ಇದರ ಪ್ರಯೋಜನವನ್ನು ಭಾಗವಹಿಸಿದ ವಿದ್ಯಾರ್ಥಿಗಳು ಪಡೆಯುವಂತೆ ಹುರಿದುಂಬಿಸಿದರು.

ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಯೊ ರವರು ತಮ್ಮ ಮೆಚ್ಚುಗೆ ಹಾಗೂ ಕ್ರತಜ್ಞತೆಯ ಸಂಕೇತವಾಗಿ ಸ್ಮರಣಿಕೆ ನೀಡಿ ಮುಖ್ಯ ಅತಿಥಿಗಳನ್ನು ಗೌರವಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಪ್ರೇರಣ 2023”, ಮತ್ತು “26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ”ವನ್ನು ಆಯೋಜಿಸಿದ ತಂಡವನ್ನು ಅಭಿನಂದಿಸಿದರು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸುವ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅನೇಕ ಹೋಮಿಯೋಪಥಿ ವೈದ್ಯಕೀಯ ಕಾಲೇಜುಗಳನ್ನು ಜೊತೆಗೂಡಿಸಿದ ಈ ‘ಪ್ರೇರಣಾ 2023’ ಕಾರ್ಯಕ್ರಮ ಸಮೃದ್ಧ, ಅದ್ಭುತ ಸಾಂಸ್ಕ್ರತಿಕ ಮತ್ತು ಸಾಹಿತ್ಯಿಕ ಸಂಭ್ರಮಕ್ಕೆ ಸಾಕ್ಷಿಯಾಯಿತು. 16 ವಿವಿಧ ಕಾಲೇಜುಗಳಿಂದ 525 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ವಿಜೇತರಿಗೆ ಸುಮಾರು ಒಂದು ಲಕ್ಷ ಮೌಲ್ಯದ ಬಹುಮಾನಗಳನ್ನು ಘೋಷಿಸಲಾಗಿದೆ.

ಕಾರ್ಯಕ್ರಮದ ಸಂಯೋಜಕರಾದ ಡಾ. ರಖಾಲ್ ಪಿ. ಯವರು ಧನ್ಯವಾದಾರ್ಪಣೆ ಮಾಡಿದರು.

ಡಾ. ದೀಪಾ ರೆಬೆಲ್ಲೊ ಹಾಗೂ ಡಾ. ಮನಿಶ್ ತಿವಾರಿ ಯವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇದರ ನಂತರ 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವು ನವಂಬರ್ 5 ರಂದು ನಡೆಯುವುದು. ಡಾ. ಮನು’ಸ್ ಹೋಮಿಯೋಪಥಿಯ ಸಂಸ್ಥಾಪಕರು, ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ. ಶ್ರೀಕರ್ ಮನು ಹಾಗೂ ಕಲ್ಕತ್ತಾ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರು ಮತ್ತು ಆಡಳಿತಾಧಿಕಾರಿಗಳಾದ ಡಾ. ರಜತ್ ಚಟ್ಟೋಪಾದ್ಯಾಯರು ಸಂಪನ್ಮೂಲ ವ್ಯಕ್ತಿಗಳಾಗಿರುವ ಈ ಸಮ್ಮೇಳನದಲ್ಲಿ ಸುಮಾರು 720 ಪ್ರತಿನಿಧಿಗಳು ಭಾಗವಹಿಸಲಿರುವರು.

ಸಮ್ಮೇಳನದ ಸಮಾರೋಪ ಕಾರ್ಯಕ್ರಮವು ಅದೇ ದಿನ ಸಂಜೆ 4 ಗಂಟೆಗೆ ನಡೆಯಲಿದ್ದು ಶಾಸ್ತ್ರೀಯ ಕರ್ನಾಟಕ ಸಂಗೀತಗಾರ ಮತ್ತು ಹಿನ್ನೆಲೆ ಗಾಯಕರಾಗಿರುವ ಪ್ರತಿಷ್ಟಿತ ಹಳೆಯ ವಿದ್ಯಾರ್ಥಿ ಡಾ. ಕೆ. ನಾರಾಯಣನ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಮ್ಮೇಳನದ ಸ್ಮರಣಿಕೆ ಬಿಡುಗಡೆ ಮಾಡಲಿರುವರು.

ಚೈತ್ರಾ ಸಹಿತ 7 ಮಂದಿಗಳ ವಿರುದ್ಧ ಮುಂದಿನ ವಾರ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ

ಬೆಂಗಳೂರು: ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್‌ಶೀಟ್‌ ಸಲ್ಲಿಸಲಿದ್ದಾರೆ. ಪ್ರಕರಣದ ಸಂಬಂಧ 68 ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, 68 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳಿಂದ ನಗದು, ಕಾರುಗಳು, ಚಿನ್ನಾಭರಣ ಸಹಿತ 5 ಕೋಟಿ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್‌, ಗಗನ್‌ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್‌ ಸಹಿತ 7 ಮಂದಿಗಳ ವಿರುದ್ಧ ಮುಂದಿನ ವಾರ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ.

ದೂರುದಾರ ಗೋವಿಂದ ಬಾಬು ಪೂಜಾರಿ ಅವರಲ್ಲಿದ್ದ, ಆರೋಪಿಗಳಿಗೆ ಸಂಬಂಧಿಸಿದ ಎಲ್ಲ ಆಡಿಯೋ ಮತ್ತು ವೀಡಿಯೋಗಳನ್ನು ಸ್ವಾಧೀನ ಪಡೆದುಕೊಳ್ಳಲಾಗಿದೆ. ಇವುಗಳ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗುತ್ತದೆ. ಆರೋಪಿಗಳ ಮೊಬೈಲ್‌ ಗಳ ಡೇಟಾ ರಿಟ್ರೈವ್‌ ವರದಿಯನ್ನೂ ಕೂಡ ಉಲ್ಲೇಖಿಸಲಾಗುವುದು.

ಕಳೆದ ಸೆ. 8ರಂದು ಬಂಡೇಪಾಳ್ಯ ಠಾಣೆಯಲ್ಲಿ ಗೋವಿಂದ ಬಾಬು ಪೂಜಾರಿ ಕುಂದಾಪುರದ ಚೈತ್ರಾ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಸಿಸಿಬಿಗೆ ಪ್ರಕರಣ ವರ್ಗಾವಣೆ ಮಾಡಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ತಿಲಕ್ ರಸ್ತೆಯು ಒಂದು ರೀತಿಯಲ್ಲಿ ಸ್ಲಂ ಏರಿಯಾದಂತೆ ಆಗಿದೆ

ಶ್ರೀನಿವಾಸಪುರ : ಪಟ್ಟಣದ ತಿಲಕ್ ರಸ್ತೆಯು ಒಂದು ರೀತಿಯಲ್ಲಿ ಸ್ಲಂ ಏರಿಯಾದಂತೆ ಇದ್ದು, ತಿಲಕ್‍ರಸ್ತೆ ಹಾಗು ಆಜಾದ್‍ರಸ್ತೆಗಳಲ್ಲಿ ಚರಂಡಿಗಳು ಸಂಪೂರ್ಣ ಕಸ ಕಡ್ಡಿಗಳಿಂದ ತುಂಬಿದ್ದು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ನಿಂತಲ್ಲೇ ಚರಂಡಿ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ.
ಪುರಸಭೆಯ ಪಟ್ಟಣದ ವಾರ್ಡ್ ನಂಬರ್ 4 ರ ತಿಲಕ್ ರಸ್ತೆ . ವಾರ್ಡ್ ನಂಬರ್ 12 ರ ಆಜಾದ್‍ರಸ್ತೆಗಳಲ್ಲಿ ಚರಂಡಿಗಳ ಸ್ವಚ್ಚತೆ ಇಲ್ಲದೆ ಸೊಳ್ಳೆಗಳ ಕಾಟವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಭಾಗದ ಸಾರ್ವಜನಿಕರು ಜ್ವರ, ಡೆಂಗ್ಯು ಇತರೆ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ವಾಸಿಸುತ್ತಿರುವುದಾಗಿ ಜನಪ್ರತಿ ನಿದಿಗಳ ಹಾಗೂ ಪುರಸಭೆಯ ಮೇಲೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪುಟ್ಟ ಪುಟ್ಟ ಮಕ್ಕಳು ಆಟವಾಡಲು ಹೋದಾಗ ಪೋಷಕರು ಭಯಭೀತರಾಗುತ್ತಿದ್ದಾರೆ. ಚರಂಡಿ ಅವ್ಯವಸ್ಥೆ ಬಗ್ಗೆ ಹಲವಾರು ಬಾರಿ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸ್ವಚ್ಚತೆ ಮಾಡುತ್ತಿಲ್ಲವೆಂದು ಸ್ಥಳೀಯ ಆರೋಪವಾಗಿದೆ ತಕ್ಷಣ ಇದಕ್ಕೆ ಸಂಬಂದಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳೀಯ ಸಮಸ್ಯೆಯನ್ನು ಬಗಹರಿಸಬೇಕಿದೆ ಎಂದು ಸಾರ್ವಜನಿಕರ ಅಹವಾಲು.
ನೋಟ್ 1 : ನಮ್ಮದು ವಾರ್ಡ್ ನಂ. 4 ತಿಲಕ್‍ರಸ್ತೆಯಲ್ಲಿ ವಾಸಿಸುತ್ತಿದ್ದು, ಪುರಸಭೆ ಕಛೇರಿಗೆ ಅನೇಕ ಭಾರಿ ಮನವಿ ಸಲ್ಲಿದ್ದರೂ ಸಹ ಚರಂಡಿಗಳ ಸ್ವಚ್ಚತೆ ಹಾಗೂ ಇತರೆ ಮೂಲ ಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿ ನಿರ್ಲಕ್ಷಿಸುತ್ತಿದ್ದಾರೆ . ಆನೇಕ ಬಾರಿ ಮನವಿ ಸಲ್ಲಿಸಿದರೂ ಬರುತ್ತಿಲ್ಲ ಎಂದು ಆರೋಪಿಸಿ, ಬಂದರೂ ಸಹ ನಮ್ಮ ಏರಿಯಾದ ಕಡೆ ಬರುತ್ತಿಲ್ಲ. ಬಂದು ಚರಂಡಿಯಿಂದ ಮೇಲೆ ಗಲೀಜು ಎತ್ತಿ ಹಾಕಿ ಹೋಗುತ್ತಾರೆ . ಪುನಃ ಅದನ್ನ ಸ್ವಚ್ಚತೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಈ ಬೀಡಿಯಲ್ಲಿ ಅನೇಕ ಮಕ್ಕಳು ಜ್ವರಗಳಿಂದ ಭಾದಿಸುತ್ತಿದ್ದು ಪುರಸಭೆ ಹಾಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗಹರಿಸುವಂತೆ ಮನವಿ ಮಾಡಿದರು.
ಪಟ್ಟಾ ಕಿರಣ್ . ತಿಲಕ್ ರಸ್ತೆ. ಸ್ಥಳೀಯ ನಿವಾಸಿ .
ನೋಟ್ 2 : ಕಾಲುವೆಗಳು ತುಂಬಿ ಹುಳಗಳು ಆಚೆ ಬರುತ್ತಿದೆ. ಅಲ್ಲದೆ ಹಾವುಗಳ ಕಾಟುವು ಹೆಚ್ಚಾಗಿದೆ. ಸೊಳ್ಳೆಕಾಟವು ಹೆಚ್ಚಾಗಿದ್ದು, ಒಂದು ಕಡೆ ಸೊಳ್ಳಗಳ ಕಾಟ, ಇನ್ನೋಂದಡೆ ಹಾವುಗಳ ಕಾಟವು ಹೆಚ್ಚಾಗಿದೆ. ಮಕ್ಕಳ ಸಂಖ್ಯೆ ಈ ಬೀದಿಯಲ್ಲಿ ಜಾಸ್ತಿ ಇದ್ದು ಇದರಿಂದ ಮಕ್ಕಳ ಪೋಷಕರು ರೋಗಗಳ ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ನನ್ನ ತಮ್ಮನಿಗೂ ಡೆಂಘ್ಯು ಜ್ವರದಿಂದ ಭಾದಿಸುತ್ತಿದ್ದೇನೆ ಈ ಗಾಗಲೇ 10 ಸಾವಿರ ಮೇಲ್ಪಟ್ಟು ಆಸ್ಪತ್ರೆ ಖರ್ಚು ಆಗಿದೆ. ಗುರುವಾರವೂ ಸಹ ಪುರಸಭೆ ಕಛೇರಿಗೆ ಮನವಿ ಸಲ್ಲಿಸಲಾಯಿತು . ಆದರೂ ಇನ್ನು ಬಂದಿಲ್ಲ ಎಂದು ಅಳಲನ್ನು ಪತ್ರಿಕೆಯೊಂದಿಗೆ ತೋಡಿಕೊಂಡರು.
ಸಲೀಮ್ , ತಿಲಕ್ ರಸ್ತೆ . ಸ್ಥಳೀಯ ನಿವಾಸಿ

ಅಗಲಿದ ಹಿರಿಯ ಚೇತನಗಳಿಗೆ ಕೆಯುಡಬ್ಲ್ಯೂಜೆ ನುಡಿ ನಮನ

ಬೆಂಗಳೂರು: ಸುದ್ದಿ ಮನೆಯಲ್ಲಿ ಸುದೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್, ಗುಡಿಬಂಡೆ ನರಸಿಂಹಮೂರ್ತಿ, ಟಿ.ಎಸ್.ರಾಜಾರಾವ್ ಅವರುಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನುಡಿ ನಮನ ಸಲ್ಲಿಸಿ, ಅವರೆಲ್ಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಚೇತನಗಳ ಸ್ಮರಣಾರ್ಥ ಎರಡು ನಿಮಿಷ ಮೌನ ಪ್ರಾರ್ಥನೆ ನಡೆಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನುಡಿನಮನ ಕಾರ್ಯಕ್ರಮಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಅಗಲಿದ ಹಿರಿಯ ಪತ್ರಕರ್ತರುಗಳು ಕೆಯುಡಬ್ಲ್ಯೂಜೆ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು ಹಾಕಿದರು.

ಜಿನ್ನಾರ್ ಪತ್ರಿಕೋದ್ಯಮದಲ್ಲಿ ಶಿಸ್ತಿನ ಸಿಪಾಯಿ: ಬಿ.ಕೆ.ರವಿ
ಹಿರಿಯ ಪತ್ರಕರ್ತ ಜಿ.ಎನ್.ರಂಗನಾಥ್ ರಾವ್ ಅವರ ಬಗ್ಗೆ ಮಾತಾಡಿದ ಕೊಪ್ಪಳ ವಿ.ವಿ ಕುಲಪತಿ ಪೆÇ್ರ.ಬಿ.ಕೆ.ರವಿ, ಕನ್ನಡ ಭಾಷಾ ಬೆಳವಣಿಗೆಯಲ್ಲಿ ಜಿ.ಎನ್.ರಂಗನಾಥ್ ರಾವ್ ಅವರ ಕೊಡುಗೆ ಅನನ್ಯ. ಪ್ರಜಾವಾಣಿ ಪತ್ರಿಕೆಯಲ್ಲಿ ಸಾಹಿತ್ಯ ಸಾಪ್ತಾಹಿಕವನ್ನು ಅವರು ವಿಭಿನ್ನವಾಗಿ ರೂಪಿಸಿದರಲ್ಲದೆ, ಪತ್ರಿಕೋದ್ಯಮದಲ್ಲಿ ಅವರು ಶಿಸ್ತಿನ ಸಿಪಾಯಿಯಾಗಿಯೂ ಜನಪ್ರಿಯರಾದರು ಎಂದು ತಮಗೆ ಮಾರ್ಗದರ್ಶನ ನೀಡಿದ ನೆನಪನ್ನು ಮೆಲುಕು ಹಾಕಿದರು. ಅಗಲಿದ ಹಿರಿಯರ ನೆನಪಿನಲ್ಲಿ ಕೆಯುಡಬ್ಲ್ಯೂಜೆ ಕಾರ್ಯಕ್ರಮ ರೂಪಿಸಿ ಮಾದರಿ ಹೆಜ್ಜೆ ಇಟ್ಟಿದೆ ಎಂದು ಶ್ಲಾಘಿಸಿದರು. ಸಚ್ಚಿದಾನಂದಮೂರ್ತಿ ಅವರು ದೆಹಲಿಯಲ್ಲಿ ಮೂರು ದಶಕಗಳ ಕಾಲ ಪತ್ರಕರ್ತನಾಗಿ ಉತ್ತಮ ಸೇವೆ ಸಲ್ಲಿಸಿದರು ಎಂದರು.

ಸಚ್ಚಿ ಅವರ ಪ್ರತಿಭೆ ಅನನ್ಯ: ಎಚ್.ಬಿ.ದಿನೇಶ್:

ದೆಹಲಿ ಪತ್ರಿಕೋದ್ಯಮದಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಚ್ಚಿದಾನಂದ ಮೂರ್ತಿ ಸದಾ ಸ್ನೇಹಪರರಾಗಿದ್ದರು. ರಾಜ್ಯದ ಅಭಿವೃದ್ಧಿ ಯೋಜನೆಗೆ ದೆಹಲಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದರು ಎಂದು ವಾರ್ತಾ ಇಲಾಖೆಯ ನಿವೃತ್ತ ಹಿರಿಯ ಜಂಟಿ ನಿರ್ದೇಶಕ ಎಚ್.ಬಿ. ದಿನೇಶ್ ಹೇಳಿದರು.
ಸಿ.ಆರ್.ಕೆ. ಚಳುವಳಿಗಳ ನೇತಾರ: ಸಿದ್ಧನಗೌಡ ಪಾಟೀಲ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿ ಹುದ್ದೆ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಸಿ.ಆರ್.ಕೃಷ್ಣರಾವ್ ಅವರು ಚಳುವಳಿಗಳ ನೇತಾರ ಆಗಿದ್ದರು ಎಂದು ನವಕರ್ನಾಟಕ ಪಬ್ಲಿಕೇಶನ್ಸ್ ನ “ಹೊಸತು” ಮಾಸಿಕದ ಸಂಪಾದಕ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಪಟ್ಟರು. ಸಿ.ಆರ್.ಕೆ. ರಾವ್ ಅವರು ಪತ್ರಕರ್ತರ ಮತ್ತು ಪತ್ರಿಕಾ ಸಂಸ್ಥೆಗಳ ಕೊಂಡಿಯಾಗಿ ಪ್ರಧಾನ ಪಾತ್ರ ವಹಿಸಿಕೊಂಡಿದ್ದರು ಎಂದೂ ಗುಣಗಾನ ಮಾಡಿದರು.
ಮಣೂರ ಅವರ ಪತ್ರಿಕಾ ರಂಗದ ಸೇವೆ ಅನನ್ಯ: ಬಿ.ವಿ.ಮಲ್ಲಿಕಾರ್ಜುನಯ್ಯ
ಹಿರಿಯ ಪತ್ರಕರ್ತರಾಗಿದ್ದ ಪಿ.ಎಂ.ಮಣೂರ ಅವರು ಬಹಳಷ್ಟು ಪತ್ರಕರ್ತರನ್ನು ಬೆಳೆಸುವ ಮೂಲಕ, ಪತ್ರಿಕೋದ್ಯಮದಲ್ಲಿ ಅಜಾತಶತ್ರುವಾಗಿದ್ದರು ಎಂದು ಐ.ಎಫ್.ಡಬ್ಲ್ಯೂ.ಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಹೇಳಿದರು.
ವಿವಿಧ ವಿಷಯಗಳಲ್ಲಿ ಪ್ರಭುತ್ವ ಹೊಂದಿದ್ದ ಮಣೂರರವರ ಪತ್ರಿಕಾ ಸೇವೆ ನಿಜಕ್ಕೂ ಸ್ಮರಣೀಯ ಎಂದರು.
ಕೆ.ಪ್ರಹ್ಲಾದರಾವ್ ಉತ್ತಮ ಸಂಘಟಕರಾಗಿದ್ದರು: ಪಿ.ಶೇಷಚಂದ್ರಿಕಾ
ಕೋಲಾರವು ಹಿರಿಯ ಪತ್ರಕರ್ತರಾಗಿದ್ದ ಕೆ.ಪ್ರಹ್ಲಾದರಾವ್ ಅವರ ಕರ್ಮಭೂಮಿ ಆಗಿದ್ದರೂ, ಜಿಲ್ಲಾ ಮಟ್ಟದ ಪತ್ರಕರ್ತರ ಕಷ್ಟಗಳನ್ನು ಪರಿಹರಿಸುವಲ್ಲಿ ಅವರು ಸರ್ಕಾರ ಅಧಿಕಾರಿಗಳ ಬಳಿಗೆ ಹೋಗುವ ಮೂಲಕ ಉತ್ತಮ ಸಂಘಟಕರೂ ಆಗಿದ್ದರು ಎಂದು ಹಿರಿಯ ಪತ್ರಕರ್ತ ಪಿ.ಶೇಷಚಂದ್ರಿಕಾ ನುಡಿದರು.
ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ ಅವರು ಮಾತನಾಡಿ, ತಾವು ಬೆಂಗಳೂರು ಬಂದ ಸಂದರ್ಭದಲ್ಲಿ ಇವರೆಲ್ಲರ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು ಹಾಕಿದರು.
ಹಿರಿಯ ಪತ್ರಕರ್ತರಾದ ಕಂ.ಕ.ಮೂರ್ತಿ, ಧಾರವಾಡ ಕರ್ನಾಟಕ ವಿವಿ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರೋ. ಜೆ.ಎಂ.ಚಂದುನವರ, ಸಾಗ್ಗರೆ ರಾಮಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗಲಿದ ಚೇತನಗಳ ಗುಣಗಾನ ಮಾಡಿದರು.

ವಿತರಕರಿಬ್ಬರ ಸಾವಿಗೆ ಸಂತಾಪ:

ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಾದ ಕುಮಾರ್ ಮತ್ತು ಮನೋಜ್ ಅವರಿಗೆ ಸಭೆಯಲ್ಲಿ ಸಂತಾಪ ವ್ಯಕ್ತಪಡಿಸಲಾಯಿತು. ಅವರುಗಳ ಬಗ್ಗೆ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೆ.ಯೂ.ಡಬ್ಲ್ಯೂ.ಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಉಪಾಧ್ಯಕ್ಷ ಕೆ.ಎಂ.ಜಿಕ್ರಿಯಾ, ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ್ ಸೇರಿದಂತೆ ಸಂಘದ ಹಲವಾರು ಸದಸ್ಯರು ನುಡಿನಮನ ಕಾರ್ಯಕ್ರಮದಲ್ಲಿ ಹಾಜರಿದ್ದರು .
ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಸಂಘದ ಖಜಾಂಚಿ ವಾಸುದೇವಹೊಳ್ಳ ಅವರು ವಂದನಾರ್ಪಣೆ ಮಾಡಿದರು.

ಕೆಯುಡಬ್ಲ್ಯೂಜೆಗೆ 1 ಲಕ್ಷ ರೂ ದತ್ತಿನಿಧಿ ಪ್ರತಿಷ್ಟಾಪಿಸಿದ ಕೆಪಿಎಸ್ ಪ್ರಮೋದ್

ಕೋಲಾರ,ನ.3: ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಅಮೋಘ ನ್ಯೂಸ್‍ನ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರೂ ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿವಿ ಕುಲಪತಿ ಪೆÇ್ರ.ಬಿ.ಕೆ.ರವಿ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ ಹಾಜರಿದ್ದರು.
ಮಂಡ್ಯ ಜಿಲ್ಲೆಯ ಪೌರವಾಣಿ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಕೆ.ಪ್ರಹ್ಲಾದರಾವ್ ಅವರು ಉದಯ ಟಿವಿ ಜಿಲ್ಲಾ ವರದಿಗಾರರಾಗಿ, ಪಿಟಿಐ ವರದಿಗಾರರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಇವರ ಸ್ಮರಣಾರ್ಥವಾಗಿ ಪ್ರಶಸ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಪ್ರತಿವರ್ಷ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತ ಕೆ.ಪ್ರಹ್ಲಾದರಾವ್ ಹೆಸರಿನಲ್ಲಿ ಒಬ್ಬರು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರಶಸ್ತಿಗೆ ತಂದೆಯ ಹೆಸರಿನಲ್ಲಿ ದೇಣಿಗೆ ನೀಡಿದ ಕೆಪಿಎಸ್ ಪ್ರಮೋದ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ ಸಲ್ಲಿಸಿದೆ.