ಕುಂದಾಪುರ, ದಿ 10-11-2023 ರಂದು ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು.
ವಾದ್ಯ ವೃಂದದೊಂದಿಗೆ ಪಥಸಂಚಲನ ನಡೆಯಿತು. ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷರಾದ ರೋ, ಜಗನ್ನಾಥ್ ಮೊಗೇರ ಇವರು ಕ್ರೀಡೋತ್ಸವ ಉದ್ಘಾಟಿಸಿ ಹಾಗೂ ಜ್ಯೋತಿಯನ್ನು ಬೆಳಗಿಸಿ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಳುಗಳು ಶಾಲಾ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ತಿಳಿದರು. ಮುಖ್ಯ ಅತಿಥಿಗಳಾದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಪ್ರೇಮಿಕ ಇವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಶಿಸ್ತು ಬೆಳೆಯಲು ಕ್ರೀಡೋತ್ಸವ ಸಹಾಯಮಾಡುತ್ತದೆ ಎಂದರು. ಅಧ್ಯಕ್ಷರಾದ ಶಾಲಾ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಸುಪ್ರಿಯ ಇವರು ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಕ್ರೀಡೆಯಿಂದಾಗಿ ವಿದ್ಯಾರ್ಥಿಗಳು ಹೆಚ್ಚಿನ ಶಕ್ತಿಯನ್ನು ಹೊಂದುತ್ತಾರೆ ಹಾಗೂ ಆರೋಗ್ಯಕರವಾಗಿರುತ್ತಾರೆ ಎಂದರು. ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಐವಿ ಇವರು ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ರವಿ ಪೂಜಾರಿ ಇವರು ಶುಭ ಹಾರೈಸಿದರು. ದೈಹಿಕ ಶಿಕ್ಷಕರಾದ ಮೈಕಲ್ ಇವರು ನಿರೂಪಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಸಹಕರಿಸಿದರು.
Day: November 12, 2023
ಯುವ ಪ್ರತಿಭೆಗಳಿಗೆ ಟಿ.ಸಿ.ಎ ವಿಪುಲ ಅವಕಾಶ ಸೃಷ್ಟಿಸಲಿದೆ-ಗೌತಮ್ ಶೆಟ್ಟಿ
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಶಾಲಾ-ಕಾಲೇಜು ಮಟ್ಟದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟ ನಡೆಯಿತು.
ಟಿ.ಸಿ.ಎ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಫಲಿತಾಂಶ
ಜಿ.ಪಿ.ಟಿ ಮಣಿಪಾಲ ಪ್ರಥಮ
ಎಮ್.ಎಸ್.ಆರ್.ಎಸ್ ಶಿರ್ವ-ದ್ವಿತೀಯ
ನವೆಂಬರ್ 6 ರಿಂದ 10 ರ ವರೆಗೆ ಸತತ 5 ದಿನಗಳ ಕಾಲ ನಡೆದ ಈ ಪಂದ್ಯಾಟದಲ್ಲಿ 64 ಹೈಸ್ಕೂಲ್ ಮತ್ತು ಕಾಲೇಜು ತಂಡಗಳು ಭಾಗವಹಿಸಿದ್ದರು.ಅಂತಿಮವಾಗಿ ಫೈನಲ್ ನಲ್ಲಿ ಜಿ.ಪಿ.ಟಿ ಮಣಿಪಾಲ-ಎಮ್.ಎಸ್.ಆರ್.ಎಸ್ ಶಿರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಲಕ್ಷ್ಮೀ ಸೋಮ ಬಂಗೇರ ಕಾಲೇಜು ಪಡುಕರೆ ಮತ್ತು ಎಸ್.ಕೆ.ವಿ.ಎಮ್. ಎಸ್ ಕೋಟೇಶ್ವರ ತೃತೀಯ ಸ್ಥಾನ ಪಡೆದರು. ಫೈನಲ್ ಪಂದ್ಯಶ್ರೇಷ್ಟ ಹರ್ಷಿತ್,ಬೆಸ್ಟ್ ಬ್ಯಾಟರ್ ಅಕ್ಷಯ್,ಬೆಸ್ಟ್ ಬೌಲರ್ ಮಹೇಶ್,ಸರಣಿ ಶ್ರೇಷ್ಠ ಪ್ರಶಸ್ತಿ ಪ್ರೀತೇಶ್ ಜಿ.ಪಿ.ಟಿ ಮಣಿಪಾಲ ಪಡೆದುಕೊಂಡರು.
ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ. ಅಂತರಾಷ್ಟ್ರೀಯ ಆಟಗಾರರು ಕೂಟ ಟೆನಿಸ್ಬಾಲ್ ಕ್ರಿಕೆಟ್ ನಿಂದಲೇ ಕ್ರಿಕೆಟ್ ಜೀವನ ಪ್ರಾರಂಭಿಸಿದ್ದಾರೆ. ಅಳಿವಿನಂಚಿನಲ್ಲಿರುವ ಈ ಟೆನಿಸ್ಬಾಲ್ ಕ್ರಿಕೆಟ್ ಉಳಿಸಬೇಕಾದರೆ ಯುವಕರು ಈಗಿನಿಂದಲೇ ಜಾಗೃತರಾಗಬೇಕಿದೆ.
ಆದ್ದರಿಂದ ಟಿ.ಸಿ.ಎ ಉಡುಪಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸಹಕಾರದೊಂದಿಗೆ ಶಾಲಾ-ಕಾಲೇಜು ಮಟ್ಟದ ಪಂದ್ಯಾಟ ಯಶಸ್ವಿಯಾಗಿದೆ.ಮುಂದಿನ ದಿನಗಳಲ್ಲಿ ಟಿ.ಸಿ.ಎ ಉಡುಪಿ ಪ್ರತಿಭಾವಂತ ಆಟಗಾರರಿಗೆ ಭವಿಷ್ಯದಲ್ಲಿ ಶಿಕ್ಷಣ,ಉದ್ಯೋಗ,ಕ್ರೀಡಾ ಜೀವನ ಕಟ್ಟಿಕೊಡಲು ಸಹಕಾರ ನೀಡಲಿದ್ದೇವೆ ಎಂದರು.”
ಈ ಸಂದರ್ಭ 2023 ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಕೆಟ್ ಪಟು ಪೃಥ್ವಿರಾಜ್ ಶೆಟ್ಟಿ ಹುಂಚನಿ,14 ರ ವಯೋಮಾನದ ಬಾಲಕಿಯರ ಕ್ರಿಕೆಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಚಿತಾ ಹತ್ವಾರ್ ಮತ್ತು ಪ್ರಾಚಿ,17 ಮತ್ತು 14 ರ ವಯೋಮಾನ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚಾರಿತ್ರ್ಯ ಮತ್ತು ತ್ರಿಶಾ.ಐ.ನಾಯಕ್ ಸನ್ಮಾನಿಸಲಾಯಿತು.
ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಪರಿಕಲ್ಪನೆಯನ್ನು ಕಂಡು ಯಶಸ್ವಿಯಾಗಿ ನಿರ್ವಹಿಸಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ ಇವರನ್ನು ಟಿ.ಸಿ.ಎ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಯುವ ಜನ ಸಬಲೀಕರಣ ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ, ಟಿ.ಸಿ.ಎ ಉಡುಪಿ ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ರಮೇಶ್ ಶೇರಿಗಾರ್,ಜಗದೀಶ್ ಕಾಮತ್ ಕಟಪಾಡಿ,ಸದಾನಂದ ಶಿರ್ವ,ಯಾದವ್ ನಾಯ್ಕ್ ಕೆಮ್ಮಣ್ಣು,ಅಮರನಾಥ್ ಭಟ್,ಶರತ್ ಶೆಟ್ಟಿ ಪಡುಬಿದ್ರಿ,ಆಸಿಫ್ ಕೆಮ್ಮಣ್ಣು,ನಿತ್ಯಾನಂದ ಮುನ್ನ,ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಬೈಲೂರು,ದಿನೇಶ್ ಗಾಣಿಗ ಬೈಂದೂರು,ನಾರಾಯಣ ಶೆಟ್ಟಿ ಮಾರ್ಕೋಡು,ಮನೋಜ್ ನಾಯರ್,ಕೆ.ಪಿ.ಸತೀಶ್,ಪ್ರವೀಣ್ ಪಿತ್ರೋಡಿ,ಕೋಟ ರಾಮಕೃಷ್ಣ ಆಚಾರ್,ಚೇತನ್ ಕುಮಾರ್ ದೇವಾಡಿಗ,ಅಶೋಕ್ ಹೆಗ್ಡೆ,ಸುಕೇಶ್ ಶೆಟ್ಟಿ,ನಾಗೇಶ್ ನಾವಡ,ಭಾಸ್ಕರ್ ಆಚಾರ್,ಮನೋಜ್,ಉಮೇಶ್ ಕುಂದಾಪುರ,ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು:ಡಾ. ಕೆ.ಎನ್.ವೇಣುಗೋಪಾಲ್
ಶ್ರೀನಿವಾಸಪುರ: ವಿದ್ಯಾರ್ಥಿಗಳು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಪೋಷಕರು ಮನೆಗಳಲ್ಲಿ ಕನ್ನಡ ಮಾತನಾಡಲು ಅಗತ್ಯವಾದ ಪ್ರೋತ್ಸಾಹ ನೀಡಬೇಕು ಎಂದು ವಿಐಪಿ ಶಾಲಾಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ಪಟ್ಟಣದ ಹೊರವಲಯದ ಯಚ್ಚನಹಳ್ಳಿ ಸಮೀಪದ ವಿಷನ್ ಇಂಡಿಯಾ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮಕ್ಕೆ ಕೊರತೆಯಿಲ್ಲ. ಆದರೆ ಕನ್ನಡ ಮಾತನಾಡಲು ಮಡಿವಂತಿಕೆ ತೋರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಕನ್ನಡ ಕರ್ನಾಟಕದ ಹೆಮ್ಮೆ. ಕನ್ನಡಿಗರ ಹೃದಯ ಸಿಂಹಾಸನದ ಮೇಲೆ ಕನ್ನಡ ರಾರಾಜಿಸಬೇಕು. ಸಮೃದ್ಧ ಸಾಹಿತ್ಯಕ್ಕೆ ಕನ್ನಡ ಭಾಷೆ ಹೆಸರಾಗಿದೆ. ದೇಶದಲ್ಲಿ 8 ಜ್ಞಾನಪೀಠ ಪ್ರಶಸ್ತಿ ಪಡೆಯುವುದರ ಮೂಲಕ, ದೇಶ ಭಾಷೆಗಳಲ್ಲಿ ಮಕುಟ ಮಣಿಯಂತೆ ಕಂಗೊಳಿಸುತ್ತಿದೆ. ಅಂಥ ಪರಂಪರೆಗೆ ಸೇರಿದವರೆಂದು ಹೇಳಿಕೊಳ್ಳಲು ಹೆಮ್ಮೆಪಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ನಾಡು ನುಡಿಗೆ ಸಂಬಂಧಿಸಿದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕನ್ನಡ ಗೀತೆಗಳ ಗಾಯನ, ವೇಷ ಭೂಷಣ ಗಮನ ಸೆಳೆಯಿತು. ಪೋಷಕರಿಗೆ ಕನ್ನಡ ಭಾಷಾ ಜ್ಞಾನ ಕುರಿತು ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿಐಪಿ ಶಾಲೆ ಕಾರ್ಯದರ್ಶಿ ಡಾ. ಎಂ.ಎಸ್.ಕವಿತಾ, ಪ್ರಾಂಶುಪಾಲೆ ಮಂಜೀತ್ ಕೌರ್, ಶಿಕ್ಷಕಿಯರಾದ ಶ್ವೇತ, ಸುಮತಿ, ಸಮೀನಾ, ಸಿರೀಶ, ಯಶೋಧ, ಮಜತ್, ಲಿಲ್ಲಿ, ಸುನಿತಾ ಇದ್ದರು.
ಕೋಲಾರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳು ಚದುರಂಗ ಸ್ಪರ್ಧೆಯಲ್ಲಿ ಮಹಿಮಾಮಲ್ಯಗೆ ಪ್ರಥಮ ಸ್ಥಾನ
ಶ್ರೀನಿವಾಸಪುರ : ಕೋಲಾರದ ಬಿಜಿಎಸ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಶುಕ್ರವಾರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳು ಚದುರಂಗ ಸ್ಪರ್ಧೆಯಲ್ಲಿ ಶ್ರೀನಿವಾಸಪುರ ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಹಿಮಾಮಲ್ಯ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಲಿ ಕಾರ್ಯದರ್ಶಿ ಅಮರನಾಥ್ ವಿದ್ಯಾರ್ಥಿಯನ್ನು ಅಭಿನಂದಿಸಿದರು.