ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಜರುಗಿತು.
ಪರಮಪ್ರಸಾದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ವಹಿಸಿ ಭಕ್ತಾದಿಗಳಿಗೆ ಸಂದೇಶ ನೀಡಿದರು.
ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ನಾವು ತೋರಿಸುವ ಪ್ರೀತಿ ಕೇವಲ ತೋರ್ಪಡಿಕೆಯ ಪ್ರೀತಿಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿ ಸೇವೆ ಕ್ರೈಸ್ತ ಧರ್ಮದ ಮೂಲ ತತ್ತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು. ಯೇಸು ಸ್ವಾಮಿ ಶಿಲುಬೆಗೇರಿ ನಮ್ಮೆಲ್ಲರ ಪಾಪಗಳನನ್ನು ಕ್ಷ ಮಿಸಿ ಮನುಕುಲಕ್ಕೆ ಮಾದರಿಯಾದರು. ಅದರಂತೆ ನಾವು ನಮ್ಮ ಜೀವನದಲ್ಲಿ ಕ್ಷಮೆ ಪ್ರೀತಿ, ಸೇವೆಯ ಮೂಲಕ ದೈವ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಪಣತೊಡುವಂತಾಗುವಂತೆ ಕರೆ ನೀಡಿದರು.
ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರು ವಂದನೀಯ ಸಿರಿಲ್ ಲೋಬೊ ಪರಮಪ್ರಸಾದ ಆರಾಧನೆಯನ್ನು ನೆರವೇರಿಸಿದರು. ಬಳಿಕ ಪರಮಪ್ರಸಾದವನ್ನು ವಿಶೇಷವಾಗಿ ಅಲಂಕರಿಸಲ್ಪಟ್ಟ ತೆರೆದ ವಾಹನದಲ್ಲಿ ರಾಜಬೀದಿಯಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು.
ಈ ವೇಳೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚಿನ ಸಹಾಯಕ ಧರ್ಮಗುರು ವಂ| ಲಿಯೊ ಪ್ರವೀಣ್ ಡಿ’ಸೋಜಾ ಪವಿತ್ರ ಬೈಬಲ್ ವಾಚನ ಮಾಡಿ ತಮ್ಮ ಪ್ರವಚನದಲ್ಲಿ ಪರಮ ಪ್ರಸಾದವು ಏಕತೆ, ತ್ಯಾಗ ಹಾಗೂ ಕ್ಷಮೆಯ ಸಂಕೇತವಾಗಿದ್ದು, ನಿಜವಾದ ಪ್ರೀತಿಯು ನಮ್ಮ ನೆರೆಹೊರೆಯವರಲ್ಲಿ ತೋರಿಸುವುದರಲ್ಲಿ ಅಡಗಿದ್ದು, ಯೇಸು ಸ್ವಾಮಿಯು ಶಿಲುಬೆಗೇರಿ ಅದನ್ನು ನಮಗೆ ತೋರಿಸಿಕೊಟ್ಟಿರುತ್ತಾರೆ ಎಂದರು.
ಉಡುಪಿ ಧರ್ಮಪ್ರಾಂತ್ಯವ್ಯಾಪ್ತಿಯ 51 ಚರ್ಚ್ಗಳಿಂದ ಸುಮಾರು 3000 ಕ್ಕೂ ಅಧಿಕ ಮಂದಿ ಭಕ್ತಾದಿಗಳು, 50ಕ್ಕೂ ಅಧಿಧಕ ಧರ್ಮಗುರುಗಳು, 100ಕ್ಕೂ ಅಧಿಕ ಧರ್ಮಭಗಿನಿಯರು ಭಾಗವಹಿಸಿದ್ದರು.
ಇದೇ ವೇಳೆ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕ್ರಿಸ್ತ ಜಯಂತಿ ಆಚರಣೆ -2025 ನೇ ವರ್ಷದ ಸಿದ್ದತೆಗೆ ವಿದ್ಯುಕ್ತವಾಗಿ ಲೋಗೊ ಅನಾವರಣಗೊಳಿಸುವ ಮೂಲಕ ಧರ್ಮಾಧ್ಯಕ್ಷರು ಚಾಲನೆ ನೀಡಿದರು.
ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೋರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಡಾ| ರೋಶನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಡೆನಿಸ್ ಡೆಸಾ, ಕಲ್ಯಾಣಪುರ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ವಂ| ವಲೇರಿಯನ್ ಮೆಂಡೊನ್ಸಾ, ವಂ|ಡಾ| ಲೆಸ್ಲಿ ಡಿಸೋಜಾ, ವಂ| ಪಾವ್ಲ್ ರೇಗೊ, ವಂ| ಚಾರ್ಲ್ಸ್ ಮಿನೇಜಸ್, ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ| ರೋಕ್ ಡೆಸಾ, ಧರ್ಮಪ್ರಾಂತ್ಯದ ಪಾಲನಾ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.
Day: November 27, 2023
ಉಡುಪಿ ಧರ್ಮಪ್ರಾಂತ್ಯದಲ್ಲಿ ‘ಕ್ರಿಸ್ತ ಜಯಂತಿ ಜುಬಿಲಿ 2025’ರ ಸಿದ್ಧತೆಗೆ ವಿಧ್ಯುಕ್ತ ಚಾಲನೆ
ಉಡುಪಿ: ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥವಾಗಿ ಕ್ರಿಸ್ತ ಜಯಂತಿ ಜುಬಿಲಿ 2025 ಸಂಭ್ರಮಾಚರಣೆಯ ಪೂರ್ವ ಸಿದ್ದತೆಗಳಿಗೆ ಚಾಲನೆ ನಡೆಯುತ್ತಿದ್ದು ಉಡುಪಿ ಕಥೊಲಿಕ ಧರ್ಮಕ್ಷೇತ್ರದಲ್ಲಿಯೂ ಎರಡು ವರ್ಷಗಳ ಪೂರ್ವ ತಯಾರಿಗಳಿಗಾಗಿ ಭಾನುವಾರ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಭರವಸೆಯ ಯಾತ್ರಿಕರು ಎಂಬ ಧ್ಯೇಯ ವಾಕ್ಯವನ್ನು ಒಳಗೊಂಡ ಲಾಂಛನ ಅನಾವರಣದೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಜಗದ್ಗುರು ಪೋಪ್ ಫ್ರಾನ್ಸಿಸ್ ರವರು ಕಲಿಕಾ ವರ್ಷದಲ್ಲಿ ಎರಡನೇ ವ್ಯಾಟಿಕನ್ ಕೌನ್ಸಿಲ್ನ ನಾಲ್ಕು ಸಂವಿಧಾನಗಳ ಅಧ್ಯಯನವನ್ನು ನಡೆಸಲುನಿರ್ದೇಶಿಸಿದ್ದಾರೆ. ಈ ಸಂವಿಧಾನಗಳ ಆಧ್ಯಯನದಿಂದ ನಮ್ಮ ವಿಶ್ವಾಸವನ್ನು ಆಳವಾಗಿ ಆರಿಯಲು ಮತ್ತು ಪ್ರಾರ್ಥನಾ ಸ್ಪೂರ್ತಿಯಿಂದ ಈ ಜಯಂತಿಯನ್ನು ಆಚರಿಸಲು ನಮಗೆ ಕರೆನೀಡಿದ್ದಾರೆ. ಈ ನಿಟ್ಟಿನಲ್ಲಿ ಧರ್ಮಪ್ರಾಂತ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಧರ್ಮಾಧ್ಯಕ್ಷರು ಜಯಂತ್ಯುತ್ಸವಕ್ಕೆ ಸಮರ್ಪಿತವಾದ ಪ್ರಾರ್ಥನೆಯನ್ನು, ಯಾಜಕರೊಂದಿಗೆ ಮತ್ತು ನೆರೆದ ವಿಶ್ವಾಸಿಗಳೊದಿಗೆ ಪಠಿಸಿದರು.
ಉಡುಪಿ ಧರ್ಮಪ್ರಾಂತ್ಯದಾದ್ಯAತ ಎಲ್ಲಾ ಚರ್ಚುಗಳಲ್ಲಿ ಏಕಕಾಲದಲ್ಲಿ ಈ ಉದ್ಘಾಟನಾ ಸಮಾರಂಭವನ್ನು ನಡೆಸಿ ಜುಬಿಲಿ ಲಾಂಛನವನ್ನು ಅನಾವರಣಗೊಳಿಸಲಾಯಿತು, ಸಮರ್ಪಿತ ಪ್ರಾರ್ಥನೆಗಳನ್ನು ಪಠಿಸಿ, ಪ್ರತೀ ಚರ್ಚುಗಳಲ್ಲಿ ಯಾಜಕರು ಲಾಂಛನದ ಮಹತ್ವವನ್ನು ಮತ್ತು ಅದರ ಸAಕೇತವನ್ನು ಸಭೆಗೆ ವಿವರಿಸಿದರು.
ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೋರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಡಾ| ರೋಶನ್ ಡಿಸೋಜಾ, ಕಲ್ಯಾಣಪುರ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ವಂ| ವಲೇರಿಯನ್ ಮೆಂಡೊನ್ಸಾ, ವಂ|ಡಾ| ಲೆಸ್ಲಿ ಡಿಸೋಜಾ, ವಂ| ಪಾವ್ಲ್ ರೇಗೊ, ವಂ| ಚಾರ್ಲ್ಸ್ ಮಿನೇಜಸ್, ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ| ರೋಕ್ ಡೆಸಾ, ಧರ್ಮಪ್ರಾಂತ್ಯದ ಪಾಲನಾ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.
ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು : ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ
ಶ್ರೀನಿವಾಸಪುರ: ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ ಹೇಳಿದರು.
ಪಟ್ಟಣದ ಜಗದ್ಗುರು ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.
ಬ್ರಾಹ್ಮಣ ಸಮುದಾಯ ತಮ್ಮೊಳಗೆ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಹ ಬದಿಗೊತ್ತಿ ಒಗ್ಗೂಡಬೇಕು. ಸಮಾಜದ ಎಲ್ಲ ರಂಗಗಳಲ್ಲೂ ಮುಂದೆ ಬರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಸಾಂಸ್ಕøತಿಕ ಪರಂಪರೆಗೆ ಬೆಲೆ ನೀಡಬೇಕು. ಮಾನವೀಯ ನೆಲೆಯಲ್ಲಿ ಬದುಕು ಸಾಗಿಸಬೇಕು ಎಂದು ಹೇಳಿದರು.
ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿ ಅಧ್ಯಕ್ಷ ಗೋಪಿನಾಥರಾವ್ ಮಾತನಾಡಿ, ಬ್ರಾಹ್ಮಣ ಸಮುದಾಯ ಯಾಜ್ಞವಲ್ಕ್ಯ ಮಹರ್ಷಿ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ನಡೆ, ನುಡಿ, ಆಚಾರ, ವಿಚಾರ ದಲ್ಲಿ ಎಚ್ಚರ ವಹಿಸಬೇಕು. ಸ್ವಂತಿಕೆ ಉಳಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ತಾಲ್ಲೂಕು ಬ್ರಾಹ್ಮಣರ ಸಂಘದ ಅಧ್ಯಕ್ಷ ಕೆ.ದಿವಾಕರ್ ಮಾತನಾಡಿ, ಬ್ರಾಹ್ಮಣ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಸನಾತನ ಸಂಸ್ಕøತಿ ಬಗ್ಗೆ ಅಭಿಮಾನ ತಳೆಯಬೇಕು. ವೈದಿಕ ಆಚರಣೆಗಳಿಗೆ ಒತ್ತುನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿದ್ದ ಸಮುದಾಯದ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಸನ್ಮಾನಿಸಲಾಯಿತು.
ಸಮುದಾಯದ ಮುಖಂಡರಾದ ಜಿ.ಆರ್.ವಲ್ಲಬಣ್ಣ, ಶ್ರೀಧರ್, ಎಚ್.ಆರ್.ವೆಂಕಟೇಶ್, ರಮೇಶ್ ಬಾಬು, ಎಸ್.ಎನ್.ಗೋಪಾಲ್, ಕೆ.ಎಸ್.ರಾಘವೇಂದ್ರ, ಎಚ್.ಎಸ್.ಸುನಿಲ್, ಎಸ್.ಸುಬ್ರಮಣಿ, ಎಚ್.ಆರ್.ರಾಘವೇಂದ್ರ, ವೆಂಕಟೇಶಬಾಬು, ವೆಂಕಟಕೌಶಿಕ್, ಎಸ್.ಪಿ.ಕೃಷ್ಣಮೂರ್ತಿ, ಪಿ.ಎಸ್.ವೆಂಕಟರಾಘವೇಂದ್ರ ಇದ್ದರು.
ಮೆರವಣಿಗೆ: ಪಟ್ಟಣದಲ್ಲಿ ಯಾಜ್ಞವಲ್ಕ್ಯ ಮಹರ್ಷಿ ಭಾವಚಿತ್ರ ಮೆರವಣಿಗೆ ಏರ್ಪಡಿಸಲಾಗಿತ್ತು.
ವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ : ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು
ಶ್ರೀನಿವಾಸಪುರ: ವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಂವಿಧಾನ ಮಾನವತಾವಾದಿ ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಫಲವಾಗಿದೆ. ಪ್ರಜೆಗಳು ಸಂವಿಧಾನ ನೀಡಿರುವ ಹಕ್ಕುಗಳನ್ನು ಅನುಭವಿಸುವುರ ಜತೆಗೆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.
ಸಂವಿಧಾನ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ದೇಶದ ಜನರ ಬದುಕಿಗೆ ಮಾರ್ಗದರ್ಶನ ಮಾಡುತ್ತದೆ. ಪ್ರತಿಯೊಬ್ಬರೂ ಸಂವಿಧಾನ ತತ್ವ ಪಾಲಿಸುವ ಬಗ್ಗೆ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.
ಶಿಕ್ಷಕ ರಾಮಾಜನೇಯಪ್ಪ ಸಾಂವಿಧಾನದ ಮಹತ್ವ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಭಾಗ್ಯಲಕ್ಷ್ಮಿ, ಉಪ ಪ್ರಾಂಶುಪಾಲ ಎನ್.ಶ್ರೀಧರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಜಯರಾಮೇಗೌಡ, ತಾಲ್ಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ತಾಲ್ಲೂಕು ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ವೆಂಕಟಸ್ವಾಮಿ, ಮುನಿವೆಂಕಟರೆಡ್ಡಿ, ಶಾರದಮ್ಮ ಇದ್ದರು.
ಕುಂದಾಪುರ ತೆರಾಲಿ ಪೂರ್ವಭಾವಿ ಭ್ರಾತತ್ವ ಬಾಂಧವ್ಯ ದಿನ – ಪರಮ ಪ್ರಸಾದದ ಭವ್ಯ ಮೆರವಣಿಗೆ ಆರಾಧನೆ – ಕ್ರಿಸ್ತರಾಜನ ಹಬ್ಬ
ಕುಂದಾಪುರ,ನ.27: ಉಡುಪಿ ಧರ್ಮ ಪ್ರಾಂತ್ಯದಲ್ಲೆ ಅಂತ್ಯಂತ ಪುರಾತನವಾದ ಕುಂದಾಪುರದ “ಪವಿತ್ರ ರೋಜರಿ ಮಾತಾ” ಇಗರ್ಜಿಯಲ್ಲಿ ಕ್ರಿಸ್ತ ರಾಜನ ಹಬ್ಬದಂದು, ತೆರಾಲಿ ಹಬ್ಬದ ಅಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ನೆಡೆಯುವ “ಕೊಂಪ್ರಿ ಆಯ್ತಾರ್” ಭ್ರಾತತ್ವ ಬಾಂಧವ್ಯ ದಿನವನ್ನು “ಪ್ರಭು ಯೇಸುವಿನ ದಯೆ ನಮಗೆಲ್ಲರಿಗೂ ಪ್ರೇರಣೆ” ಎಂಬ ಧ್ಯೇಯದೊಂದಿಗೆ, ಪವಿತ್ರ ಬಲಿದಾನ ಮತ್ತು ಪರಮ ಪ್ರಸಾದದ ಆರಾಧನೆ ನ.26 ರಂದು ನೆಡೆಯಿತು.
ಪವಿತ್ರ ರೋಜರಿ ಮಾತಾ ದೇವಾಲಯಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿದ ತರುವಾಯ ಅಪಾರ ಭಕ್ತಾದಿ ಜನ ಮತ್ತು ಅನೇಕ ಧರ್ಮ ಭಗಿನಿಯರೊಡನೆ ಬೆಳೆಗಿಸಿದ ಬಣ್ಣದ ಮೇಣದ ಬತ್ತಿಗಳನ್ನು ಹಿಡಿದುಕೊಂಡು ಭಕ್ತಿ ಗಾಯನ, ಸಂಗೀತ, ಬ್ಯಾಂಡು, ಬಣ್ಣ ಬಣ್ಣದ ಕೊಡೆಗಳ ಜೊತೆ, ಗಾಯನ ಮಂಡಳಿಯೊಡನೆ ವಿದ್ಯುತ್ ದೀಪಗಳ ಅಲಕ್ರಂತದೊಂದಿಗೆ ಪರಮ ಪ್ರಸಾದದ ಪುರ ಮೆರವಣಿಗೆಯನ್ನು ಕುಂದಾಪುರದ ಮುಖ್ಯ ರಸ್ತೆಗಳಲ್ಲಿ ವೈಭವದ ಜೊತೆ ಭಕ್ತಿ ಮತ್ತು ಶಿಸ್ತಿನಿಂದ ನೆಡೆಸಲಾಯಿತು.
ನಂತರ ಸಂತ ಮೇರಿಸ್ ವಿಧ್ಯಾ ಸಂಸ್ಥೆಯ ಮೈದಾನದಲ್ಲಿ ಪರಮಪ್ರಸಾದದ ಆರಾಧನೆ ಕನ್ನಡದಲ್ಲಿ ನೆಡೆಯಿತು. ಈ ಧಾರ್ಮಿಕ ವಿಧಿಯನ್ನು ಕಂಡ್ಲೂರು ಚರ್ಚಿನ ಧರ್ಮಗುರು ವಂ|ಕೆನ್ಯೂಟ್ ಬಾರ್ಬೊಜಾ ನಡೆಸಿಕೊಟ್ಟು “ಇವತ್ತಿನ ದೇವರ ವಾಕ್ಯದಲ್ಲಿ ಹೀಗೆ ಹೇಳಿದೆ. ಹಸಿದವನಿಗೆ ಉಣ್ಣಲು ಕೊಟ್ಟರೆ, ನಿರ್ಗತಿಕನಿಗೆ ಆಶ್ರಯ ನೀಡಿದರೆ, ಬಟ್ಟೆ ಇಲ್ಲದವನಿಗೆ ಬಟ್ಟೆ ನೀಡಿದರೆ, ಬಾಯಾರಿದವರಿಗೆ ಕುಡಿಯಲು ಕೊಟ್ಟರೆ, ಇದನ್ನು ನನಗೆ, ಅಂದರೆ ದೇವರಿಗೆನೇ ಮಾಡಿದ ಹಾಗೆ. ಅದರ ಪ್ರತಿಫಲ ನಿಮಗೆ ಸ್ವರ್ಗರಾಜ್ಯದಲ್ಲಿ ಯೆಚೆಥ್ಥವಾಗಿ ಸಿಗುವುದೆಂದು” ಹೇಳಿದ್ದಾರೆ. ಹಾಗೇ ನಾವು ಸತ್ಯದಲ್ಲಿ ಬದುಕಬೇಕು, ಜೀವನವಿಡಿ ಸತ್ಯದ ಜೀವನ ನಡೆಸಬೇಕು, ಸತ್ಯತೇಯ ಜೀವನ ಅಂದರೆ ಸ್ವರ್ಗಿಯ ಸೌಭಾಗ್ಯ, ಸತ್ಯವನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ವಾತವರಣ ಉಂಟಾಗುತ್ತದೆ. ಸತ್ಯವನ್ನು ಆಯ್ಕೆ ಮಾಡಿಕೊಂಡವರಿಗೆ, ನೋವು ಕಶ್ಟದ ಜೀವನ ಅದು ಒಂದು ರೀತಿಯ ದೇವರ ಆಳವಾದ ಅನುಭವದ ಸಂಭ್ರಮ. ಸತ್ಯ ನುಡಿವರಿಗೆ ಭಯವೇ ಇರುವುದಿಲ್ಲ. ಸುಳ್ಳು ಇದ್ದ ಕಡೆ ಜಗಳ, ಮೋಸ, ವಂಚನೆ ಕೊಲೆ ಹಿಂಸಾಚಾರ, ಯುದ್ದಗಳು ನಡೆಯುತ್ತವೆ, ಇವುಗಳಿಗೆಲ್ಲ ಸೋಲು ಉಂಟಾಗುತ್ತದೆ. ಸತ್ಯದಲ್ಲಿ ನಡೆಯುವರಿಗೆ ಸ್ವರ್ಗಿಯ ಜೀವನ ಲಭಿಸುವುದು. ಯೇಸು ಸ್ವಾಮಿ ಹೇಳಿದ್ದಾರೆ ಸತ್ಯಕ್ಕೆ ಸಾವಿಲ್ಲ, ನಾನೇ ಸತ್ಯ ನನ್ನನ್ನು ಹಿಂಬಾಲಿಸಿರಿ ಎಂದು, ನಾವು ಅದರಂತೆ ನಡೆಯೋಣ”ಎಂದು ಸಂದೇಶ ನೀಡಿದ ಅವರು ಪರಮ ಪ್ರಸಾದದ ಮೂಲಕ ಆಶಿರ್ವಾದವನ್ನು ನೀಡಿದರು.
ಈ ಧಾರ್ಮಿಕ ವಿಧಿಯು ಕುಂದಾಪುರ ರೋಜರಿ ಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ಅ|ವ|ಸ್ಟ್ಯಾನಿ ತಾವ್ರೊ ಮಾರ್ಗದರ್ಶನದಲ್ಲಿ ನಡೆದಿದ್ದು ಅವರು ಎಲ್ಲರನ್ನು ವಂದಿಸಿದರು. ಕಾರ್ಯಕ್ರಮಗಳ ಸಹ ಉಸ್ತುವಾರಿಯನ್ನು ವಹಿಸಿಕೊಂಡ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಇವರ ಜನ್ಮದಿನದ ಪ್ರಯುಕ್ತ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯ್ತು. ವೇದಿಕೆ ಕಾರ್ಯಕ್ರಮದ ಮಹತ್ವವನ್ನು ಭಗಿನಿ ಪ್ರೇಮಿಕಾ ತಿಳಿಸಿದರು.ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ಸುಪ್ರಿಯಾ, ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಅಶಾ ಕರ್ವಾಲ್ಲೊ, ಆಯೋಗಗಳ ಸಂಚಾಲಕಿ ಪ್ರೇಮಾ ಡಿಕುನ್ಹಾ, ಧರ್ಮಭಗಿನಿಯರು, ವಾಳೆಯ ಗುರಿಕಾರರು ಪಾಲನ ಮಂಡಳಿ ಸದಸ್ಯರು, ಇಗರ್ಜಿಯ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಹಾಗೂ ಸಹಸ್ರಾರು ಭಕ್ತರು ಪಾಲ್ಗೊಂಡರು.
ಕುಂದಾಪುರದಲ್ಲಿ ‘ಕ್ರಿಸ್ತ ಜಯಂತಿ ಜುಬಿಲಿ 2025’ರ ಸಿದ್ಧತೆಗೆ ವಿಧ್ಯುಕ್ತ ಚಾಲನೆ
ಕುಂದಾಪುರ,ನ.27: ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥವಾಗಿ ಕ್ರಿಸ್ತ ಜಯಂತಿ ಜುಬಿಲಿ 2025 ಸಂಭ್ರಮಾಚರಣೆಯ ಪೂರ್ವ ಸಿದ್ದತೆಗಳಿಗೆ ಚಾಲನೆ ನಡೆಯುತ್ತಿದ್ದು ಉಡುಪಿ ಕಥೊಲಿಕ ಧರ್ಮಕ್ಷೇತ್ರದಲ್ಲಿಯೂ ಎರಡು ವರ್ಷಗಳ ಪೂರ್ವ ತಯಾರಿಗಳಿಗಾಗಿ ಕುಂದಾಪುರದ ರೋಜರಿ ಮಾತಾ ಚರ್ಚಿನಲ್ಲಿ ಭರವಸೆಯ ಯಾತ್ರಿಕರು ಎಂಬ ಧ್ಯೇಯ ವಾಕ್ಯವನ್ನು ಒಳಗೊಂಡ ಲಾಂಛನ ನವೆಂಬರ್ 26 ರಂದು ಅನಾವರಣದೊಂದಿಗೆ ಚರ್ಚಿನ ಪ್ರಧಾದ ಧರ್ಮಗುರ್ ಅ|ವಂ|ಸ್ಟಾನಿ ತಾವ್ರೊ, ಮುಖ್ಯ ಅತಿಥಿಗಳಾದ ಕಂಡ್ಲೂರು ಚರ್ಚಿನ ಧರ್ಮಗುರು ವಂ| ಕೆನ್ಯೂಟ್ ಬಾರ್ಬೊಜಾ ವಿದ್ಯುಕ್ತವಾಗಿ ಚಾಲನೆ ನೀಡಿದರು
ಜಗದ್ಗುರು ಪೋಪ್ ಫ್ರಾನ್ಸಿಸ್ ರವರು ಕಲಿಕಾ ವರ್ಷದಲ್ಲಿ ಎರಡನೇ ವ್ಯಾಟಿಕನ್ ಕೌನ್ಸಿಲ್ನ ನಾಲ್ಕು ಸಂವಿಧಾನಗಳ ಅಧ್ಯಯನವನ್ನು ನಡೆಸಲುನಿರ್ದೇಶಿಸಿದ್ದಾರೆ. ಈ ಸಂವಿಧಾನಗಳ ಆಧ್ಯಯನದಿಂದ ನಮ್ಮ ವಿಶ್ವಾಸವನ್ನು ಆಳವಾಗಿ ಆರಿಯಲು ಮತ್ತು ಪ್ರಾರ್ಥನಾ ಸ್ಪೂರ್ತಿಯಿಂದ ಈ ಜಯಂತಿಯನ್ನು ಆಚರಿಸಲು ನಮಗೆ ಕರೆನೀಡಿದ್ದಾರೆ. ಈ ನಿಟ್ಟಿನಲ್ಲಿ ಧರ್ಮಪ್ರಾಂತ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ಸುಪ್ರಿಯಾ, ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಅಶಾ ಕರ್ವಾಲ್ಲೊ, ಆಯೋಗಗಳ ಸಂಚಾಲಕಿ ಪ್ರೇಮಾ ಡಿಕುನ್ಹಾ, ಧರ್ಮಭಗಿನಿಯರು, ವಾಳೆಯ ಗುರಿಕಾರರು ಪಾಲನ ಮಂಡಳಿ ಸದಸ್ಯರು, ಇಗರ್ಜಿಯ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಹಾಗೂ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.