ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಮಾಡುವ ಕುಂದಾಪುರದ ಶಾಸಕರು. ಕುಂದಾಪುರದ ಶಾಸಕರ ಹುಟ್ಟೂರಾದ ಅಮಾವಾಸ್ಯೆಬೈಲಿನ ಅಭಿವೃದ್ಧಿಯಲ್ಲಿ ಸುದೀರ್ಘ ಅವಧಿಯ ರಾಜಕಾರಣಿ ಹಾಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಕೊಡುಗೆ ಶೂನ್ಯ ಆದರೆ ಈಗ ಪ್ರಸಕ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರುಗಳ ವಿಶೇಷ ಮುತುವರ್ಜಿಯಿಂದ ಸಿ ಎಸ್ ಆರ್ ಅನುದಾನದಡಿ ಅಮವಾಸ್ಯೆಬೈಲು ಗ್ರಾಮ ಪಂಚಾಯತ್ ಗೆ ಸುಮಾರು 25 ಲಕ್ಷ ಅನುದಾನ ಮಂಜೂರಾಗಿದ್ದು, ಕರಾವಳಿಯ ಆರಾಧ್ಯ ದೈವಿ ಪುರುಷರಾದ ಕೋಟಿ ಚನ್ನಯ್ಯರ ಗರಡಿಗೆ ಈ ಅನುದಾನದಡಿ ಐದು ಲಕ್ಷ ರೂಪಾಯಿ ಮಂಜೂರಾಗಿದ್ದು ಈ ಅನುದಾನದ ವಿನಿಯೋಗಕ್ಕೆ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ತಂದು ಅನುದಾನದ ಮಂಜೂರಾತಿಗೆ ತಡೆಯನ್ನು ಓಡುತ್ತಿದ್ದಾರೆ. ಯಾವತ್ತೂ ಅಭಿವೃದ್ಧಿಯ ವಿರೋಧಿ ಮನಸ್ಥಿತಿಯ ಶಾಸಕರು ಇನ್ನಾದರೂ ತನ್ನ ಮನಸ್ಥಿತಿಯನ್ನು ಬದಲಾಯಿಸಿ ಅಭಿವೃದ್ಧಿಯ ಪರ ನಿಲ್ಲಲು ಸಾಧ್ಯವಾಗದೆ ಇದ್ದರೂ ತನ್ನೂರಿನ, ತನ್ನ ಕ್ಷೇತ್ರದ ಅಭಿವೃದ್ಧಿಗೆ ತಡೆಯೋಡ್ದುವ ಕಾರ್ಯವನ್ನು ನಿಲ್ಲಿಸಲಿ, ಇಲ್ಲದೆ ಇದ್ದಲ್ಲಿ ಶಾಸಕರ ಅಭಿವೃದ್ಧಿ ವಿರೋಧಿ ಮನಸ್ಥಿತಿಯ ವಿರುದ್ಧ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.
Day: November 28, 2023
ನಂಜನಗೂಡು ತಾಲೂಕಿನ ಮಹಿಳೆಯೊಬ್ಬರನ್ನು ಬಲಿ ಪಡೆದ ಸೆರೆ-ಕಾರ್ಯಾಚರಣೆಗೆ 200 ಸಿಬ್ಬಂದಿ, 3 ಆನೆ, ಡ್ರೋನ್ ಕ್ಯಾಮೆರಾ ಬಳಕೆ
ಹುಲಿ ದಾಳಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ ಅರಣ್ಯಾಧಿಕಾರಿಗಳು ಮಿಡ್ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಸುಮಾರು 10 ವರ್ಷ ವಯಸ್ಸಿನ ಹುಲಿಯನ್ನು ರಾತ್ರಿ ಕಾರ್ಯಾಚರಣೆ ಮೂಲಕ ಸೆರೆಹಿಡಿದಿದ್ದಾರೆ.
ಈ ಹುಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ ಬಳಿ ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ರಾತ್ರಿ 2 ಗಂಟೆ ಸಮಯದಲ್ಲಿ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದಾರೆ. ಜಾನುವಾರು ಮಾಂಸ ತಿನ್ನಲು ಕಳೆದ ಎರಡು ದಿನದಿಂದ ಜಾನುವಾರು ಸತ್ತ ಸ್ಥಳದ ಬಳಿ ಹುಲಿಯ ಚಲನವಲನ ಪತ್ತೆಯಾಗಿತ್ತು. ಕ್ಯಾಮೆರಾ ಟ್ರ್ಯಾಪ್ನಲ್ಲೂ ಹುಲಿಯ ಚಲನವಲನ ಪತ್ತೆಯಾಗಿತ್ತು. ರಾತ್ರಿ ಬೋನಿನೊಳಗೆ ಸಿಬ್ಬಂದಿ ಇರಿಸಿ, ಮರೆಮಾಚಿ ನೈಟ್ ಆಪರೇಷನ್ ಮಾಡಲಾಗಿದೆ. ಪಶುವೈದ್ಯ ವಾಸೀಂ ಮಿರ್ಜಾ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಬೋನಿನೊಳಗೆ ಇರಿಸಿದ್ದರು. ರಾತ್ರಿ ಜಾನುವಾರು ಕೊಂದ ಸ್ಥಳಕ್ಕೆ ಮಾಂಸ ತಿನ್ನಲು ಹುಲಿ ಬಂದ ವೇಳೆ ವೈದ್ಯರು ಬೋನಿನಲ್ಲೇ ಕುಳಿತು ಅರವಳಿಕೆ ಚುಚ್ಚುಮದ್ದು ಕೊಟ್ಟಿದ್ದಾರೆ.
ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಹುಲಿ ಸೆರೆಗೆ 200 ಸಿಬ್ಬಂದಿ, 3 ಆನೆ, ಕ್ಯಾಮೆರಾ ಟ್ರ್ಯಾಪ್, ಡ್ರೋನ್ ಬಳಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಹುಲಿಯನ್ನು ಅಧಿಕಾರಿಗಳು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ.
ಶಾಸಕ ಸುನೀಲ್ ಕುಮಾರ್ ಜಿಲ್ಲಾ ಎಸ್ಪಿ ಮೇಲೆ ಕ್ಷುಲ್ಲಕ ಕಾರಣಹೊರಿಸಿ ಹರಿಹಾಯ್ದ ಅಸಾಂವಿಧಾನಿಕ ನಡೆಯ ಹಿಂದೆ ಪೂರ್ವನಿಯೋಜಿತ ಸಂಚು ಅಡಗಿದೆ:ಅಶೋಕ್ ಕುಮಾರ್ ಕೊಡವೂರು
ಉಡುಪಿ;ಜಿಲ್ಲಾ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ರವರ ಸಮ್ಮುಖದಲ್ಲಿ ಶಾಸಕ ಸುನೀಲ್ ಕುಮಾರ್ ರವರು ಜಿಲ್ಲಾ ಎಸ್ಪಿಯವರ ಮೇಲೆ ಕ್ಷುಲ್ಲಕ ಕಾರಣಹೊರಿಸಿ ಹರಿಹಾಯ್ದ ಅಸಾಂವಿಧಾನಿಕ ನಡೆಯ ಹಿಂದೆ ಪೂರ್ವನಿಯೋಜಿತ ಸಂಚು ಅಡಗಿದೆ. ಇದನ್ನು ತಿಳಿದೇ ಸಚಿವೆಯವರು ಎಸ್ಪಿಯವರನ್ನು ಸುಮ್ಮನಿರಲು ಹೇಳಿದ್ದಾರೆ. ಇದರ ಹಿಂದೆ ಕೆಸರಿನೊಂದಿಗೆ ಹೊಡೆದಾಟ ಸಲ್ಲ ಎಂಬ ಸೂಕ್ಷ್ಮ ಸಂದೇಶ ಅಡಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಅನ್ಯತಾ ಅರ್ಥವಿಸಲಾಗದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಇಲಾಖಾ ಮಾರ್ಗಸೂಚಿ ನಿಯಮವನ್ನು ಮೀರಿದ ಮತ್ತು ಇಲಾಖೆಯ ಕಾನೂನಾತ್ಮಕ ನಿಯಮಾನುಸಾರದಡಿಯಲ್ಲಿ ಅನಗತ್ಯವೆಂದು ಪರಿಗಣಿಸಲ್ಪಟ್ಟ ಪ್ರತಿಭಟನೆಗಳನ್ನು ಇಲಾಖಾ ಹದ್ದು ಬಸ್ತಿನೊಳಪಡಿಸುವುದು ಇಲಾಖಾಧಿಕಾರಿಗಳ ಆಧ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಭಿವೃದ್ದಿಯ ಮೌಲ್ಯ ಮಾಪನ ಮಾಡಬೇಕಾದ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಅಧಿಕಾರಿಯೊಬ್ಬರ ಮೌಲ್ಯ ಮಾಪನಕ್ಕಿಳಿದ ಸುನೀಲ್ ಕುಮಾರ್ ರವರದ್ದು ಅಪ್ರಜಾಸತ್ತಾತ್ಮಕ ನಿಲುವಾಗಿದೆ. ಬಹುಶ ತನ್ನ ಅಧಿಕಾರಾವಧಿಯಲ್ಲಿ ಕಾನೂನನ್ನು ಕೈಗೆತ್ತಿ ಬಾಲಬಿಚ್ಚಿ ಮೆರೆಯುತ್ತಿದ್ದ ತನ್ನ ಹಿಂಬಾಲಕರ ಬಾಲವನ್ನು ಈಗಿನ ಸರಕಾರದ ಅಧಿಕಾರಿಗಳು ಕಾನೂನಿನ ಕುಣಿಕೆಯಡಿಯಲ್ಲಿ ಬಿಗಿದು ಬಂದಿಸುತ್ತಿರುವುದನ್ನು ಕಂಡು ಸುನೀಲ್ ಕುಮಾರ್ ಹತಾಶರಾಗಿದ್ದಾರೆ. ಪ್ರಕೃತಿಯನ್ನೆ ದೋಚಲು ಹೊರಟು ತಮ್ಮ ಠಂಕಸಾಲೆಯನ್ನು ಭದ್ರಪಡಿಸಿ ಹೊಂಕರಿಸ ಹೊರಟವರಿಗೆ ಪರೋಕ್ಷ ಮುಖಭಂಗವಾಗಿದೆ. ಒಬ್ಬ ಉನ್ನತ ಶ್ರೇಣಿಯ ಅಧಿಕಾರಿಯಾಗಿ ಸಭೆಯಲ್ಲಿ ವಾಸ್ತವ ವಿಷಯದ ವಿವರಣೆಯನ್ನಷ್ಟೆ ಕೊಟ್ಟು ಸಚಿವರ ಆದೇಶವನ್ನು ಪಾಲಿಸಿ ಸುಮ್ಮನಾಗಿ ಎಸ್ಪಿ ಯವರು ತನ್ನ ಹುದ್ದೆಯ ಗೌರವವನ್ನು ಎತ್ತಿ ಹಿಡಿದಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.