ಉಡುಪಿ, ಡಿ. 14 : ಇಂದು ಮತ್ತು ನಾಳೆ ಆಗಸದಲ್ಲಿ ಉಲ್ಕೆಗಳ ವರ್ಷಧಾರೆ ಡಿಸೆಂಬರ್ 14 ಮತ್ತು 15 ರಾತ್ರಿ ಸಂಭವಿಸುತ್ತೆ ಖಗೋಳ ಕೌತುಕ ಪ್ರತೀ ವರ್ಷ ಡಿಸೆಂಬರ್ ಮಧ್ಯದಲ್ಲಿ ಕಾಣುವ ಅಪರೂದ ಉಲ್ಕಾಪಾತ ಮಿಥುನ ರಾಶಿಯಿಂದ ಚಿಮ್ಮುವ ಜೆಮಿನಿಡ್ ಉಲ್ಕಾಪಾತ ವರ್ಷದಲ್ಲಿ ಸುಮಾರು 22 ಉಲ್ಕಾಪಾತ ಸಂಭವಿಸುತ್ತೆ ಆದರೆ ಎಲ್ಲವೂ ಚೆನ್ನಾಗಿರುವುದಿಲ್ಲ ಉಲ್ಕೆಗಳ ಸಂಖ್ಯೆ ಹೆಚ್ಚೇನೂ ಇರುವುದಿಲ್ಲ ಆದರೆ ಇಂದು ಸುಮಾರು ಗಂಟೆಗೆ ನೂರಕ್ಕಿಂತಲೂ ಉಲ್ಕೆಗಳ ದರ್ಶನ ಬಣ್ಣ ಬಣ್ಣದ ಉಲ್ಕೆಗಳನ್ನು ನೋಡಿ ಆನಂದಿಸುವ ಅವಕಾಶ ಉಲ್ಕೆಗಳು ಹೆಚ್ಚಾಗಿ ಸೂರ್ಯನ ಸುತ್ತುವ ಧೂಮಕೇತುಗಳ ಧೂಳು ಆದರೆ ಇಂದಿನ ಜೆಮಿನಿಡ್ ಹಾಗಲ್ಲ, ದೀರ್ಘ ವೃತ್ತಾಕಾರದಲ್ಲಿ ಸೂರ್ಯನನ್ನು ಸುತ್ತುವ ಅಪರೂಪ ವಿದ್ಯಮಾನ 6 ಕಿಮೀ ಗಾತ್ರದ ಕಲ್ಲುಂಡೆಯ 3200 ಪೇಥಾನ್ ಆಸ್ಟೆರೈೂಯ್ಡ್ ನ ಧೂಳು. ಗುರುವಾರ ರಾತ್ರಿ ಸುಮಾರು 1 ಗಂಟೆಗೆ ಕಾಣಲವೆ ಉಲ್ಕೆಗಳು ನಡು ನೆತ್ತಿಗೆ ಬರುವ ಮಿಥುನ ರಾಶಿಯಿಂದ ಗಂಟೆಗೆ 120 ಉಲ್ಕೆಗಳು ಬೇರೆಲ್ಲಾ ಉಲ್ಕಾಪಾತಗಳಿಗಿಂತ ಇದು ವಿಭಿನ್ನ ಇಂದು ಎಲ್ಲಾ ಬಣ್ಣಗಳ ಉಲ್ಕೆಗಳನ್ನೂ ನೋಡಬಹುದು ಬಿಳಿ , ಕೆಂಪು , ಹಳದಿ , ಹಸಿರು ಹಾಗೂ ನೀಲಿ ಬಣ್ಣದ ಉಲ್ಕೆಗಳು ಭೂ ವಾತಾವರಣದಿಂದಾಗಿ ಸುಮಾರು 60 – 70 ಕಿಮಿ ಎತ್ತರದ ಆಕಾಶದಲ್ಲಿ ನಡೆಯುವ ವಿದ್ಯಮಾನ
ಈ ಧೂಳಿನ ಕಣಗಳು ಘರ್ಷಣೆಯಿಂದ ಉರಿದು ಹೋಗುತ್ತವೆ.
Day: December 14, 2023
ಅನುದಾನ ವ್ಯರ್ಥವಾಗದಂತೆ ನಿಗದಿತ ಗುರಿಯನ್ನು ಸಾಧಿಸಿ – ಜಿಲ್ಲಾಧಿಕಾರಿ ಅಕ್ರಂ ಪಾಷ
ಕೋಲಾರ : ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುಧಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಿಗಧಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗಧಿತ ಸಮುಧಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಸರ್ಕಾರದ ನಿರೀಕ್ಷೆಗಳಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಇಲಾಖೆಯ ಮುಖ್ಯಸ್ತರು ನಿಗಧಿಪಡಿಸಿರುವ ಗುರಿಯನ್ನು ಸಾಧಿಸಲು ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಪ್ರಸ್ತುತ 2023ನೇ ಸಾಲಿನ ನವೆಂಬರ್ ಅಂತ್ಯದ ವೇಳೆಗೆ ವಿವಿಧ ಇಲಾಖೆಗಳಿಂದ ನಿಗಧಿಪಡಿಸಿರುವ ಗುರಿಗಳಿಗೆ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಗೆ ಒಟ್ಟು 16739.33 ಲಕ್ಷಗಳು ಹಂಚಿಕೆಯಾಗಿದ್ದು, ಒಟ್ಟು 811.89 ಲಕ್ಷಗಳು ಬಿಡುಗಡೆಯಾಗಿರುತ್ತದೆ.
ಗಿರಿಜನ ಉಪ ಯೋಜನೆಯಡಿಯಲ್ಲಿ ಒಟ್ಟು 5018.94 ಲಕ್ಷಗಳು ಹಂಚಿಕೆಯಾಗಿದ್ದು, ಒಟ್ಟು 1553.51 ಲಕ್ಷಗಳು ಬಿಡುಗಡೆಯಾಗಿರುತ್ತದೆ. ಈ ಪೈಕಿ 2023 ನವೆಂಬರ್ ಅಂತ್ಯದ ವೇಳೆಗೆ ವಿಶೇಷ ಘಟಕ ಯೋಜನೆಯಡಿ ಶೇ.71 ಹಾಗೂ ಗಿರಿಜನ ಉಪಯೋಜನೆಯಡಿ ಶೇ.68 ಮೊತ್ತದ ಅನುದಾನ ವೆಚ್ಚ ಮಾಡಲಾಗಿದೆ. ಪ್ರಸ್ತುತ 3ನೇ ತ್ರೈಮಾಸಿಕದ ಅನುದಾನದ ಬಿಡುಗಡೆಯಾಗಿದ್ದು, ಶೀಘ್ರವಾಗಿ ಶೇ.100 ರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಮೂಲಕ ರಾಜ್ಯದ ಪ್ರಗತಿಯಲ್ಲಿ ಜಿಲ್ಲೆಯ ಸಾಧನೆಯು ಉನ್ನತ ಮಟ್ಟ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಕೃಷಿ ಜಂಟಿ ನಿರ್ದೇಶಕಿ ಸುಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಸೌಮ್ಯ ವರ್ಣಿಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ತೋಟಗಾರಿಕ ಉಪನಿರ್ದೇಶಕರಾದ ಕುಮಾರಸ್ವಾಮಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕೋಲಾರ: ಜಿಲ್ಲಾಧಿಕಾರಿಗಳು ಕೋಲಾರ ನಗರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಪ್ರಗತಿ ಪರಿಶೀಲನೆ
ಕೋಲಾರ: ಜಿಲ್ಲಾಧಿಕಾರಿಗಳು ಕೋಲಾರ ನಗರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕ್ರೀಡಾ ಇಲಾಖಾಧಿಕಾರಿಗಳಾದ ಗೀತಾ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ಮುನಿಯಪ್ಪ ಪ್ರದಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ,ಹಿರಿಯ ಕ್ರೀಡಾ ಪಟು ಹೆಚ್. ಜಗನ್ನಾಥನ್,ಕಾರ್ಯದರ್ಶಿ ರಾಜೇಶ್ ಬಾಬು,ಕೋಚ್ ಎಂ.ವೆಂಕಟೇಶ್ ಅವರು ಜಿಲ್ಲಾಧಿಕಾರಿಗಳಿಗೆ ಸ್ಟೇಡಿಯಂ ಬಗ್ಗೆ ಮಾಹಿತಿ ನೀಡಿ ಶೀಘ್ರವೇ ಕಾಮಗಾರಿಗಳನ್ನು ಪೂರ್ಣ ಗೊಳಿಸಿ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಇಲಾಖಾ ಮುಖ್ಯಸ್ತರು ನೀಡಿರುವ ಗುರಿಯನ್ನು ನಿಗಧಿತ ಅವಧಿಯೊಳಗೆ ಸಾಧಿಸಬೇಕು: ಜಿಲ್ಲಾಧಿಕಾರಿ ಅಕ್ರಂ ಪಾಷ
ಕೋಲಾರ: ಕಾರ್ಯ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಇಲಾಖಾ ಮುಖ್ಯಸ್ತರು ನೀಡಿರುವ ಗುರಿಯನ್ನು ನಿಗಧಿತ ಅವಧಿಯೊಳಗೆ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ನ್ಯಾಯಾಂಗ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಸರ್ಕಾರವು ವಿವಿಧ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೋಲಾರ ಜಿಲ್ಲೆಯಲ್ಲಿ ಒಟ್ಟು 229492 ಅಲ್ಪಸಂಖ್ಯಾತರಿದ್ದು, ಜನಗಣತಿಯ ಆಧಾರದ ಮೇಲೆ ಶೇ. 14.93 ರಷ್ಟು ವಾಸವಿರುತ್ತಾರೆ.
ಜಿಲ್ಲೆಯಲ್ಲಿ ಗಾಜಲದಿನ್ನೆ ಮತ್ತು ಬಾಲಸಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 2 ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಒಟ್ಟು 493 ವಿದ್ಯಾರ್ಥಿಗಳು, ಮೌಲನಾ ಅಜಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 582 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಒಟ್ಟು ಜಿಲ್ಲೆಯಲ್ಲಿ 6 ಅಲ್ಪಸಂಖ್ಯಾತರ ಮೇಟ್ರಿಕ್ ನಂತರ ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಒಟ್ಟು 219 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಅಲ್ಪಸಂಖ್ಯಾತರ ಮಾದರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 2 ವಸತಿ ಶಾಲೆಗಳು ಕೆ.ಜಿ.ಎಫ್, ಶ್ರೀನಿವಾಸಪುರ 1 ವಸತಿ ಶಾಲೆಯಲ್ಲಿ ಶೇ.100 ರಷ್ಟು ಮುಳಬಾಗಿಲು ಹಾಗೂ ಬಂಗಾರಪೇಟೆ ವಸತಿ ಶಾಲೆಗಳು 96.86 ಶೇ ಪಲಿತಾಂಶವನ್ನು ಪಡೆದಿರುತ್ತಾರೆ. ಈ ವಿಷಯವು ಜಿಲ್ಲೆಗೆ ಹೆಮ್ಮೆ ತರುವಂತ ವಿಷಯವಾಗಿದೆ. ಗ್ರಾಮೀಣ ಭಾಗದಲ್ಲಿ ವಸತಿ ನಿಲಯಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿ ಹೆಚ್ಚು ಪಲಿತಾಂಶಗಳನ್ನು ಪಡೆಯುವಲ್ಲಿ ಶ್ರಮವಹಿಸಬೇಕು ಎಂದರು.
ಮೇಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿಗಳ ಕೆ.ಜಿ.ಎಫ್, ಶ್ರೀನಿವಾಸಪುರ, ಮಾಲೂರು ಹಾಗೂ ಬಂಗಾರಪೇಟೆ ತಾಲ್ಲೂಕುಗಳಲ್ಲಿ ಒಟ್ಟು 5 ವಿದ್ಯಾರ್ಥಿ ನಿಲಯಗಳು ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ಅಗತ್ಯ ನಿವೇಶನ ನೀಡುವುದಾಗಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ನಗರಸಭೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ, ರೇಷ್ಮೆ ಇಲಾಖೆ, ಪಶು ಪಾಲನ ಇಲಾಖೆ, ಮೀನುಗಾರಿಕೆ ಇಲಾಖೆ, ಎಲ್ಲಾ ತಾಲ್ಲೂಕು ಪಂಚಾಯಿತಿಗಳಲ್ಲಿ ಅಲ್ಪಸಂಖ್ಯಾತರ ಯೋಜನೆಯಡಿ ಬರುವ ಎಲ್ಲಾ ಇಲಾಖೆಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿ ಆಯಾ ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಗಮನಹರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಮುರಳಿ, ಕೃಷಿ ಜಂಟಿ ನಿರ್ದೇಶಕಿ ಸುಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ತೋಟಗಾರಿಕ ಉಪನಿರ್ದೇಶಕರಾದ ಕುಮಾರಸ್ವಾಮಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.