ಕುಂದಾಪುರ: ಡಿಸೆಂಬರ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ “ಪರಂಪರಾ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಅವರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ಅದನ್ನು ಹಂಚುವಂತಹ ಕೆಲಸವೂ ಆಗಬೇಕು ಎಂದು ಕರೆ ನೀಡಿದರು.
ಶಂಕರನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕರಾದ ರಾಮ ಭಟ್ ಅವರು ಭಾರತೀಯ ಸಂಸ್ಕೃತಿಯ ಮಹತ್ವದ ಕುರಿತು ಮಾತನಾಡಿದರು.
ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಸ್ರೂರಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜ್ಯೋತಿ ಬಿ. ಮಾತನಾಡಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡದೆ ನಮ್ಮ ಹೆಮ್ಮೆಯ ಸಂಸ್ಕೃತಿಯ ಸಂಸ್ಕಾರ ಮತ್ತು ಮೌಲ್ಯಗಳನ್ನು ಅಳವಡಿಸಿಕೊಂಡು ಸಮುದಾಯಕ್ಕೂ ಅದನ್ನು ಹಂಚುವಂತಹ ಕೆಲಸವೂ ಆಗಬೇಕು ಎಂದು ಹೇಳಿದರು.
ಮತ್ತೋರ್ವ ಅತಿಥಿ ಕೋಟದ ವಿವೇಕ ಪ್ರೌಢಶಾಲೆಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟಿ ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥರಾದ ಯು.ಎಸ್.ಶೆಣೈ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸರೋಜ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಇಂಚರಾ ಕಾರ್ಯಕ್ರಮ ನಿರೂಪಿಸಿದರು. ಸಿ.ಪಿ.ಸಿಂಚನಾ ಸ್ವಾಗತಿಸಿದರು. ತೃಪ್ತಿ ವಂದಿಸಿದರು.
Day: December 15, 2023
ಕೋಲಾರ ರೈತ ಸಂಘ :ನಕಲಿ ಬಿತ್ತನೆ ಬೀಜ ಕೀಟನಾಶಕ ರಸಗೊಬ್ಬರ ನಿಯಂತ್ರಣಕ್ಕೆ ಪ್ರಬಲ ಕಾನೂನು ಜಾರಿ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ತಿರ್ಮಾನ
ಕೋಲಾರ,ಡಿ.15: ನಕಲಿ ಬಿತ್ತನೆ ಬೀಜ ಕೀಟನಾಶಕ ರಸಗೊಬ್ಬರ ನಿಯಂತ್ರಣಕ್ಕೆ ಪ್ರಬಲ ಕಾನೂನು ಜಾರಿ ಮಾಡಿ ನಕಲಿ ಕಂಪನಿಗಳ ಮಾರಾಟಗಾರರ ಜೊತೆ ಶಾಮೀಲಾಗಿರುವ ಗುಣಮಟ್ಟದ ಪರೀಶೀಲನಾ ಅಧಿಕಾರಿ ದನಂಜಯ್ರವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಕೆಲಸದಿಂದ ವಜಾ ಮಾಡಬೇಕೆಂದು ಡಿ.27 ರ ಬುದವಾರ ಆದಿಮಾ ಕ್ಕೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಶಾಂತಿಯುತವಾಗಿ ದಾಖಲೆಗಳ ಸಮೇತ ಮನವಿ ನೀಡಲು ಕುವೆಂಪು ಉದ್ಯಾನವನದಲ್ಲಿ ಕರೆದಿದ್ದ ಸಭೆಯಲ್ಲಿ ತಿರ್ಮಾನಿಸಲಾಯಿತು.
ಆಂದ್ರ ತಮಿಳುನಾಡಿನಲ್ಲಿ ಜಾರಿಯಾಗಿರುವ ಬೀಜ ಕಾಯ್ದೆಯಿಂದ ನಿಷೇದಿತವಾಗಿರುವ ಕಂಪನಿಗಳು ಕರ್ನಾಟಕದಲ್ಲಿ ರೈತರ ಜೀವ ಹಿಂಡುತ್ತಿದ್ದರೂ ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡಬೇಕಾಧ ಕೃಷಿ ಇಲಾಖೆ ಅಧಿಕಾರಿಗಳು ನಕಲಿ ಬಿತ್ತನೆ ಬೀಜ ಕೀಟನಾಶಕ ರಸಗೊಬ್ಬರ ದಂದೆಕೋರರ ಜೊತೆ ಶಾಮೀಲಾಗಿರುವುದು ದುರಾದೃಷ್ಟಕರ ಎಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ವಿಷಾದ ವ್ಯಕ್ತಪಡಿಸಿದರು.
ಸರ್ಕಾರ ವಕೀಲರ ಮೇಲೆ ವೈದ್ಯರ ಮೇಲೆ ಸರ್ಕಾರಿ ಅಧಿಕಾರಿಗಳ ಮೇಲೆ ಚಿಕ್ಕ ಸಮಸ್ಯೆ ಆದರೂ ಅವರ ರಕ್ಷಣೆಗೆ ತುರ್ತಾಗಿ ಕಾನೂನು ಜಾರಿ ಮಾಡುವ ಮಾನ್ಯ ಮುಖ್ಯಮಂತ್ರಿಗಳೇ ದೇಶದ 135 ಕೊಟಿ ಜನಸಂಖ್ಯೆಗೆ ಅನ್ನ ಹಾಕುವ ಅನ್ನದಾತನನ್ನು ವಂಚನೆ ಮಾಡುತ್ತಿರುವ ನಕಲಿ ಬಿತ್ತನೆ ಬೀಜ ಕೀಟನಾಶಕ ನಿಯಂತ್ರಣಕ್ಕೆ ಕಾನೂನು ಜಾರಿ ಮಾಡಲು ಹಿಂದೇಟು ಏಕೆ? ಬಹುರಾಷ್ಟ್ರೀಯ ಕಂಪನಿಗಳ ಜೊತೆ ಸರ್ಕಾರ ಶಾಮೀಲಾಗಿದ್ದಾರೆಯೇ ಎಂದು ಸಭೆಯಲ್ಲಿ ಪ್ರಶ್ನೆ ಮಾಡಿದರು.
ಕೃಷಿ ಇಲಾಖೆಯಿಂದ ಪರವಾನಗಿ ಪಡೆದು ಔಷದಿ ವ್ಯಾಪಾರ ಮಾಡುವ ಹಾಗೂ ಹೊರ ರಾಜ್ಯದ ಕಂಪನಿಗಳಿಂದ ವಿತರಣೆ ಆಗುವ ಔಷಧಿಗಳ ಸಂಪೂರ್ಣ ಮಾಹಿತಿಯನ್ನು ಹಾಗೂ ದಾಸ್ತಾನು ಮಾಡುವ ಮಳಿಗೆಗಳ ವಿವರವನ್ನು ಕೃಷಿ ಇಲಾಖೆಗೆ ಕೊಡಬೇಕಾದ ಪರವಾನಗಿದಾರರು ಯಾವುದೇ ಮಾಹಿತಿ ನೀಡದೆ ಕೃಷಿ ಇಲಾಖೆಯ ಅಧಿಕಾರಿಗಳ ಕಾಲಕಸದಂತೆ ಕಂಡು ತಮಗೆ ಇಷ್ಟ ಬಂದ ರೀತಿ ಔಷದಿಗಳನ್ನು ರಾತ್ರಿವೇಳೆ ಕಳ್ಳತನವಾಗಿ ಮಾರಾಟ ಮಾಡುವುದೇಕೆ? ಗುಣಮಟ್ಟವಿದ್ದರೆ ಸಾರ್ವಜನಿಕವಾಗಿ ಅಂಗಡಿಯನ್ನು ತೆರೆದು ರೈತರಿಗೆ ವಿತರಣೆ ಮಾಡಬಹುದಿತ್ತಲ್ಲವೇ ಎಂದರು.
ಜಿಲ್ಲಾ ಕಾರ್ಯಾದ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ 5 ವರ್ಷಗಳಿಂದ ಟೊಮೊಟೊ ಸೇರಿದಂತೆ ಮತ್ತಿತರ ಬೆಳೆಗಳಿಗೆ ಬಾದಿಸುತ್ತಿರುವ ಬೀಕರ ರೋಗಗಳ ನಿಯಂತ್ರಣಕ್ಕೆ ಲಕ್ಷಾಂತರ ರೂಪಾಯಿ ಹಣ ನೀಡಿ ಖರೀದಿ ಮಾಡಿದ ಔಷದಿಗಳನ್ನು ಸಿಂಫರಣೆ ಮಾಡಿದರು ಗಿಡದ ಮೇಲಿರುವ ಸೊಳ್ಳೆ ಸಹ ಸಾಯುತ್ತಿಲ್ಲ ಅಷ್ಟರ ಮಟ್ಟಿಗೆ ನಕಲಿ ಔಷಧಿಗಳ ದರ್ಬಾರು ಜಿಲ್ಲೆಯಲ್ಲಿ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಕೃಷಿ ಅಧಿಕಾರಿಗಳು ನಾಪತ್ತೆ ಆಗಿ ದೂರು ನೀಡಿದರೆ ಕಂಪನಿಗಳ ಪರ ನಿಂತು ರೈತರನ್ನು ತಪ್ಪಿತಸ್ಥರೆಂಧು ವರದಿ ನೀಡುತ್ತಿದ್ದಾರೆಂದು ಆರೋಪ ಮಾಡಿದರು.
ಜಿಲ್ಲಾದ್ಯಂತ 3800 ನಕಲಿ ಕಂಪನಿಗಳು 2100 ವ್ಯಾಪಾರಾಸ್ಥರು 480 ಔಷದಿ ವಿತರಕರು ಇದ್ದು, ಗುಣಮಟ್ಟದ ಔಷಧಿ ಮಾತ್ರ ರೈತರಿಗೆ ಮರಿಚೀಕೆ ಆಗಿದೆ ಸಾವಿರಾರು ಕೋಟಿ ವ್ಯವಹಾರ ನಡೆಯುವ ಔಷದಿ ಕಂಪನಿಗಳ ನಿಯಂತ್ರಣ ಅಧಿಕಾರಿಗಳ ಹಿಡಿತದಲ್ಲಿಲ್ಲದೆ ಪ್ರತಿ ತಿಂಗಳು ಗುಣಮಟ್ಟ ಪರೀಶೀಲನೆ ಮಾಡಬೇಕಾದ ಜಾಗೃತಿ ಕೋಶದ ದನಂಜಯ್ರವರು ನಕಲಿ ಕಂಪನಿಗಳ ಜೊತೆ ಶಾಮೀಲಾಗಿ ಗುಣಮಟ್ಟ ಔಷಧಿ ಮಾರಾಟ ಮಾಡುವ ಅಂಗಡಿಗಳ ಮಾಲೀಕರ ದಿಕ್ಕುತಪ್ಪಿಸಿ ಕಳಪೆ ಔಷಧಿಗಳನ್ನು ಮಾರಾಟ ಮಾಡಿ ನಿಮ್ಮ ರಕ್ಷಣೆಗೆ ನಾನಿದ್ದೇನೆ ಎಂದು ಲಕ್ಷ ಲಕ್ಷ ಲೂಟಿ ಮಾಡುವ ಅಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದರೆ ಇಲಾಖೆಯ ಗೌರವ ರೈತರ ಶ್ರಮ ಉಳಿಯುತ್ತದೆ ಎಂದು ದೂರು ನೀಡಿದರು.
ಡಿ.27 ರ ಬುದವಾರ ಆದಿಮಾಕ್ಕೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳನ್ನು ಶಾಂತಿಯುತವಾಗಿ ಜಿಲ್ಲೆಯ ರೈತರ ರಕ್ತ ಹೀರುತ್ತಿರುವ ನಕಲಿ ಬಿತ್ತನೆ ಬೀಜ ಕೀಟ ನಾಶಕ ಕಂಪನಿಗಳ ವಿರುದ್ದ ದಾಖಲೆಗಳ ಸಮೇತ ದೂರು ನೀಡಿ ಸರ್ಕಾರದ ಸಂಬಳ ಪಡೆದು ನಕಲಿ ಕಂಪನಿಗಳ ಜೊತೆ ಶಾಮೀಲಾಗಿರುವ ಜಾಗೃತ ಕೋಶದ ಅಧಿಕಾರಿ ದನಂಜಯ್ರವರ ವಿರುದ್ದ ಕ್ರಮಕ್ಕಾಗಿ ಮನವಿ ನೀಡುವ ನಿರ್ದಾರವನ್ನು ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಭೆಯಲ್ಲಿ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಮೂರಾಂಡಹಳ್ಳಿ ಶಿವಾರೆಡ್ಡಿ, ಕದರಿನತ್ತ ಅಪ್ಪೋಜಿರಾವ್, ತಿಮ್ಮಣ್ಣ, ನರಸಿಂಹಯ್ಯ, ಶೈಲಜ, ರಾಧಮ್ಮ, ನಾಗರತ್ನ, ಶೋಭ , ಚೌಡಮ್ಮ ಮುಂತಾದವರಿದ್ದರು.
ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಆಶ್ರಯದಲ್ಲಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ
ಕುಂದಾಪುರ: ಡಿಸೆಂಬರ್ 13ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಶ್ರೀ ಸುರಸರಸ್ವತಿ ಸಭಾ, ಶೃಂಗೇರಿ ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪ್ರಥಮಾ, ದ್ವಿತೀಯಾ, ತೃತೀಯಾ, ತುರೀಯಾ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಬೆಳ್ಳಿ ಪದಕ ನೀಡಲಾಯಿತು. ಜೊತೆಗೆ ಜ್ಯೋತಿಷ್ಯ ಸರ್ಟಿಫಿಕೇಟ್ ಕೋರ್ಸನ್ನು ಪೂರೈಸಿದ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿಯವರು ” ಸಂಸ್ಕೃತ ದೇವ ಭಾಷೆಯಾಗಿದೆ, ಈ ಭಾಷೆ ತನ್ನದೇ ಆದ ಘನತೆ, ಗೌರವವನ್ನು ಹೊಂದಿದ್ದು ಎಲ್ಲಾ ಭಾಷೆಗಳ ಮಾತೃ ಭಾಷೆಯಾಗಿದೆ “ ಎಂದರು. ಹಾಗೂ ಇಂತಹ ಅರ್ಥಗರ್ಭಿತ ಕಾರ್ಯಕ್ರಮವನ್ನು ಮುಂದುವರೆಸಿಕೊಂಡು ಬಂದಿರುವುದಕ್ಕಾಗಿ ಸಂಸ್ಕೃತ ವಿಭಾಗದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಪ್ರೊ. ಸತ್ಯನಾರಾಯಣ ಹತ್ವಾರ್, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ. ಯಶವಂತಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕಿ ಗಾಯತ್ರಿ ಪ್ರಮಾಣಪತ್ರ ಪಡೆದ ವಿದ್ಯಾರ್ಥಿಗಳ ಹೆಸರನ್ನು ಓದಿದರು. ಗಣಿತ ವಿಭಾಗದ ಮುಖ್ಯಸ್ಥೆ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು ದ್ವಿತೀಯ ಬಿ.ಸಿ.ಎ. ವಿದ್ಯಾರ್ಥಿ ಶ್ರೀನಿಧಿ ಅಡಿಗ ಪ್ರಾರ್ಥನೆ ಮಾಡಿದರು. .
ಸುವರ್ಣ ಸೌಧದಲ್ಲಿ ಮಧ್ಯಪ್ರಿಯರ ಪ್ರತಿಭಟನೆ : ಬೇಡಿಕೆ ಕೇಳಿ ಸಚಿವ ಲಾಡ್ ಅಚ್ವರಿಗೊಳಗಾಗಿದ್ದಾರೆ/ Liquor lovers protest at Suvarna Soudha “Alcohol lovers not drunkards” many demands: Minister Lad surprise
ಬೆಳಗಾವಿ: ಒಂದೆಡೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ ಇನ್ನೊಂದೆಡೆ ಸುವರ್ಣಸೌಧದ ಬಳಿ ವಿವಿಧ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಮಧ್ಯಪ್ರಿಯರು ಕೂಡ ಪ್ರತಿಭಟನೆ ನಡೆಸಿದ್ದು ಹಲವು ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿದ್ದಾರೆ.ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟದ ಸಂಘದಿಂದ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಲಾಗಿದ್ದು,ಈ ವೇಳೆ ಮದ್ಯಪ್ರಿಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಧ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ವರಿಗೊಳಗಾಗಿದ್ದಾರೆ. ಜೊತೆಗೆ ಮುಗುಳ್ನಗೆ ನಕ್ಕಿದ್ದಾರೆ
ಮಧ್ಯಪ್ರಿಯರು ಮುಂದಿಟ್ಟ ಬೇಡಿಕೆಗಳು ಜನರಿಗೆ ಹೌದನೇಸಿಸುತ್ತದೆ, ಹಾಗಾದರೆ ಅವರು ಸಚಿವರ ಮುಂದೆ ಬೇಡಿಕೆಗಳು ಯಾವುವು!? ಬೇಡಿಕೆಗಳು ಕೆಳಗಿನಂತಿವೆ
- ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು
- ಮದ್ಯ ಮಾರಾಟದಿಂದ ಬರುವ ಆದಾಯದ ಶೇಕಡ 10 ರಷ್ಟು ಮೀಸಲಿಡಬೇಕು
- ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು
- ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು
- ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು
- ಬಾರ್ಗಳಲ್ಲಿ ಸ್ವಚ್ಛತೆ ಕಾಪಾಡಬೇಕು
- ಬಾರ್ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು
- ಮದ್ಯಪ್ರಿಯರ ಭವನ ಸ್ಥಾಪಿಸಬೇಕು
- ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು
- ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು
- ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು
ಹೀಗೆ ವಿವಿಧ ಬೇಡಿಕೆಗಳನ್ನು ಮದ್ಯ ಪ್ರಿಯರು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.
Liquor lovers protest at Suvarna Soudha “Alcohol lovers not drunkards” many demands: Minister Lad surprise
Belgaum: On the one hand, the Legislature session is going on in Belagavi Suvarnasoudha, on the other hand, various organizations have protested near Suvarnasoudha demanding the fulfillment of various demands. In the meantime, Madhyapriyas have also protested and demanded to meet many demands. Karnataka Liquor Lovers’ Struggle Association has protested near Suvarnasoudha, and Labor Minister Santosh Lad, who visited the place of protest of alcoholics, was shocked to hear the plea of Madhyapriyas. He also smiled
The demands put forward by Alcohol lovers are acceptable to the people, so what are their demands before the Minister!? The demands are as follows.
- A welfare fund for alcoholics should be established
- 10 percent of the income from the sale of liquor should be earmarked
- People suffering from liver problems should be treated
- The word ‘drunkard’ should be banned and it should be called alcohol lovers
- One quarter should be allotted to one
- Bars should be kept clean
- Ambulance should be arranged near the bars
- A house for alcoholics should be established
- Dec 31 should be declared as Alcohol Lover’s Day
- A compensation of 10 lakh rupees should be announced in case of death due to alcohol consumption
- Two lakh rupees if married in a family of alcoholics. Encouragement should be given
ಪ್ರಯಾಣಿಕರ ಗಮನಕ್ಕೆ ಡಿ. 14ರಿಂದ 18 ರವರೆಗೆ 2 ಗಂಟೆಯಿಂದ ರಾತ್ರಿ 8ರ ಸಮಯದಲ್ಲಿ ಓಡಾಡುವ ಬೆಂಗಳೂರು-ಮಂಗಳೂರು ರೈಲು ಸೇರಿದಂತೆ ಕೆಲವು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು
ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ.
ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ ಅನುಕೂಲವಾಗುವಂತೆ ಡಿ. 14ರಿಂದ 18 ರವರೆಗೆ ಇಂಟರ್ ಲಾಕಿಂಗ್ ಹಾಗೂ ಡಿ. 19 ರಿಂದ 22 ರವರೆಗೆ ಪುನರ್ ನಿರ್ಮಾಣ ಕಾಮಗಾರಿಯನ್ನು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಂಡಿದ್ದು, ಹಾಗಾಗಿ ಈ ಸಮಯದಲ್ಲಿ ಓಡಾಡುವ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟನೆ ತಿಳಿಸಿದೆ. ಬೆಂಗಳೂರು-ಕಣ್ಣೂರು-ಬೆಂಗಳೂರು ಪಂಚಗಂಗಾ ಎಕ್ಸ್ ಪ್ರೆಸ್ ಮತ್ತು ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್ ಪ್ರೆಸ್ ರೈಲನ್ನು ಡಿ. 16 ರಿಂದ 20 ರ ವರೆಗೆ, ಯಶವಂತಪುರ- ಮಂಗಳೂರು ಜಂಕ್ಷನ್ ಗೋಮಟೇಶ್ವರ ತ್ರಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲನ್ನು ಡಿ.14, 17, 19 ಮತ್ತು 21 ರಂದು ರದ್ದು ಪಡಿಸಲಾಗಿದೆ. ಹಾಗೆಯೇ ಯಶವಂತಪುರ-ಕಾರವಾರ ತ್ರಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲನ್ನು ಡಿ.15, 18, 20 ಮತ್ತು 22 ರಂದು, ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲನ್ನು ಡಿ.16 ರಂದು, ಮಂಗಳೂರು ಜಂಕ್ಷನ್- ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ಸ್ ರೈಲನ್ನು ಡಿ.17 ರಂದು ರದ್ದು ಮಾಡಲಾಗಿದೆ. ಈ ಅವಧಿಯಲ್ಲಿ ಬೆಂಗಳೂರು- ಮಂಗಳೂರು ಸಂಪರ್ಕಿಸುವ ಏಕೈಕ ರೈಲು ಸಂಖ್ಯೆ 16585/16586 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್- ಬೆಂಗಳೂರು- ಮುರುಡೇಶ್ವರ ರೈಲು ಡಿ.14 ರಿಂದ 16 ರವರೆಗೆ ಯಶವಂತಪುರ ಬೈಪಾಸ್, ನೆಲಮಂಗಲ, ಶ್ರವಣಬೆಳಗೊಳ ಮತ್ತು ಹಾಸನ ಮೂಲಕ ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಮೂಲಕ ಚಲಿಸಲಿದೆ. ಡಿ.17 ರಿಂದ 22 ರವರೆಗೆ ಮೈಸೂರು ಮಾರ್ಗವನ್ನು ಹೊರತುಪಡಿಸಿ ಯಶವಂತಪುರ ಬೈಪಾಸ್, ತುಮಕೂರು, ಅರಸೀಕೆರೆ ಮತ್ತು ಹಾಸನ ಮೂಲಕ ರೈಲು ಸಂಚಾರ ನಡೆಸಲಿದೆ ಎಂದು ಪ್ರಕಟನೆ ವಿವರಿಸಿದೆ.
ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ವಿರುದ್ಧ ಕ್ರಮಕ್ಕೆ ಪೋಲಿಸ್ ದೂರು
ಕೋಲಾರ,ಡಿ.14: ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಬೋಟು ಅವರು ನನಗೆ ಪ್ರಾಣ ಬೆದರಿಕೆ ಹಾಕಿರುವುದರಿಂದ ತನಗೆ ಮತ್ತು ತನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸೈಯದ್ ಇಬ್ರಾಹಿಂ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಷಹೀನ್ ಷಾ ನಗರದ ನಿವಾಸಿಯಾದ ರುಕ್ಸಾರ್ ತಾಜ್ ಕೋಂ.ಮೆಹಬುಬ್ ಬೇಗ್ ರವರ ಮೇಲೆ ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಬೋಟು ಮತ್ತು ಇವರ ಕುಟುಂಬದವರು ಕ್ಷುಲ್ಲಕ ವಿಚಾರಕ್ಕೆ ಇವರ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ರುಕ್ಸಾರ್ ತಾಜ್ ರವರು ತಮಗೆ ಆದ ದೌರ್ಜನ್ಯದ ಬಗ್ಗೆ ಪೋಲಿಸ್ ಠಾಣೆಯಲ್ಲಿ ದೂರು ನೀಡಲು ಹಾಗು ಹಲ್ಲೆ ಮಾಡಿರುವುದನ್ನು ಯೂಟ್ಯೂಬ್ನಲ್ಲಿ ಅಪ್ ಲೋಡ್ ಮಾಡುವ ಬಗ್ಗೆ ಯಾರಾದರು ಪರಿಚಯ ಇರುವವರನ್ನು ತಿಳಿಸಿ ಎಂದು ನನಗೆ ಕೋರಿದ್ದು, ಅದರಂತೆ ಇವರಿಗೆ ಅನುಕೂಲವಾಗಲೆಂದು ನಾನು ಯೂಟ್ಯೂಬ್ ಅಪಲೋಡ್ ಮಾಡುವ ವ್ಯಕ್ತಿಯನ್ನು ರುಕ್ಸಾರ್ ತಾಜ್ ಅವರಿಗೆ ಪರಿಚಯಿಸಿಕೊಟ್ಟಿರುವೆ.
ನಂತರ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಚೋಟು ರವರು ಮೇಲ್ಕಂಡವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಯೂ ಟ್ಯೂಬ್ನಲ್ಲಿ ಅಪಲೋಡ್ ಆಗಿದ್ದು, ಇದರಿಂದ ಕೆರಳಿದ ಎಸ್.ಡಿ.ಪಿ.ಐ. ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಚೋಟುರವರು ನನ್ನ ಮನೆಯ ಬಳಿ ನನ್ನ ಮೇಲೆ ಹಲ್ಲೆ ನಡೆಸಲು ಬಂದಿದ್ದು, ನಾನು ಮನೆಯಲ್ಲಿ ಇಲ್ಲದೇ ಇದ್ದು, ಈ ವ್ಯಕ್ತಿಯು ನನ್ನ ಮೊಬೈಲ್ಗೆ ಬೇರೆ ಬೇರೆ ನಂಬರ್ಗಳಿಂದ ಕರೆ ಮಾಡಿ ನೀನು ನನ್ನ ಕೈಗೆ ಸಿಕ್ಕಿದ ಕೂಡಲೇ ನಿನ್ನನ್ನು ಮುಗಿಸಿ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುತ್ತಾನೆ ಹಾಗೂ ನೀನು ಕೂಡಲೇ ರುಕ್ಸಾರ್ ತಾಜ್ ರವರು ಇವರ ವಿರುದ್ಧ ನೀಡಿರುವ ದೂರನ್ನು ವಾಪಸ್ಸು ತೆಗೆದುಕೊಳ್ಳುವಂತೆ ಮಾಡಬೇಕು ಇಲ್ಲವಾದಲ್ಲಿ ನೀನು ಈ ಏರಿಯಾದಲ್ಲಿ ಹೇಗೆ ಓಡಾಡುತ್ತೀಯ ನೋಡುತ್ತೇನೆ ಎಂದು ಪ್ರಾಣ ಬೆದರಿಕೆ ಒಡ್ಡಿರುತ್ತಾನೆ.
ಆದ ಕಾರಣ ತಾವುಗಳು ದಯಮಾಡಿ ಎಸ್.ಡಿ.ಪಿ.ಐ. ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಚೋಟು ಮತ್ತು ಇವರ ಕುಟುಂಬದವರು ಹಾಗೂ ಅಪ್ಸರ್ ಮೊಬೈಲ್ ನಂ 9738401678, 8553983724 ರವರನ್ನು ಠಾಣೆಗೆ ಕರೆಯಿಸಿ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನನಗೆ ಇವರಿಂದ ರಕ್ಷಣೆ ಕೊಡಿಸಿಕೊಡಬೇಕೆಂದು ಕೋರಿದ್ದಾರೆ.
ಶ್ರೀನಿವಾಸಪುರ:ವಿಧ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ಪ್ರಬಂಧ
ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಪ ವಿಭಾಗದಿಂದ ವಿಧ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಬೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯುತ್ ಸುರಕ್ಷತೆ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ವಿದ್ಯುತ್ ಸುರಕ್ಷತೆ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ, ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರತಿ ವಿಭಾಗದಲ್ಲೂ 3 ಬಹುಮಾನ ನೀಡಲಾಗುವುದು ಎಂದು ಹೇಳಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ವಿದ್ಯುತ್ ಅವಘಡ ತಪ್ಪಿಸಲು ಬೆಸ್ಕಾಂನೊಂದಿಗೆ ಸಹಕರಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲೇ ಆದರೂ ವಿದ್ಯುತ್ ತಂತಿಗಳು ಅಥವಾ ಕಂಬಗಳು ಅಪಾಯದ ಪರಿಸ್ಥಿತಿಯಲ್ಲಿ ಕಂಡುಬಂದರೆ ಪರಿಸ್ಥಿತಿಯಲ್ಲಿ ಕಂಡುಬಂದರೆ ವಿದ್ಯುತ್ ಇಲಾಖೆ ಗಮನಕ್ಕೆ ತರಬೇಕು. ತುಂಡಾಗಿ ನೆಲದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದರೆ ಅದರಿಂದ ದೂರವಿದ್ದು, ಅದನ್ನು ಜನರು ತುಳಿಯದಂತೆ ಹೇಳಬೇಕು ಎಂದು ಹೇಳಿದರು.
ಜೆ ಇಇ ನಂಜುಂಡೇಶ್ವರ ಮಾತನಾಡಿ, ಈಗಾಗಲೆ ಚಿತ್ರಕಲಾ ಸ್ಪರ್ಧೆ ನಡೆಸಲಾಗಿದೆ. ಡಿ.22 ರಂದು ಮಧ್ಯಾಹ್ನ 12 ಗಂಟೆಗೆ ವಿದ್ಯುತ್ ಸುರಕ್ಷತೆ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಹೇಳಿದರು.
ಬಿಆರ್ಸಿ ವಸಂತ, ಉಪ ಪ್ರಾಂಶುಪಾಲ ಶ್ರೀಧರ್, ಬೆಸ್ಕಾಂ ಇನ್ಸ್ಪೆಕ್ಟರ್ ಸುದರ್ಶನ್, ಸಿಆರ್ಪಿ ನಟರಾಜ್, ಚನ್ನಪ್ಪ ಇದ್ದರು.