ಕುಂದಾಪುರ(27.12.2023):ಕುಂದಾಪುರ ಎಜುಕೇನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲಾ ಮಾಧ್ಯಮ ಪ್ರಾಥಮಿಕ ಮತ್ತು ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಕ್ರಿಸ್ಮಸ್ನ ಸಂದೇಶವನ್ನು ಸಾರುವ ಗೀತ ಗಾಯನ ಮತ್ತು ನೃತ್ಯ ಗಮನಸೆಳೆಯಿತು. ಸಂಸ್ಥೆಯ ಅಕಾಡೆಮಿಕ್ ಕೋಆರ್ಡಿನೇಟರ್ ವಿಲ್ಮಾ ಡಿಸಿಲ್ವಾ ಕ್ರಿಸ್ಮಸ್ ನ ಮಹತ್ವವನ್ನು ವಿದ್ಯಾರ್ಥಿಗಳಿಗೆ ಅರುಹಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಮತ್ತು ವಿವಿಧವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶೈಲಾ ಶಾಲೆಟ್ ಮತು ದಿವ್ಯ ನಜರತ್ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಮೂಡಿಬಂತು. ವಿದ್ಯಾರ್ಥಿ ವಿನ್ಯಾಸ್ ಅಡಿಗ ಕಾರ್ಯಕ್ರಮ ನಿರೂಪಿಸಿದರು.
Day: December 27, 2023
ಭಾರತ ಸೇವಾದಳ ಶತಮಾನೋತ್ಸವ ಆಚರಣೆಗೆ ಸಿದ್ಧತೆ ಪ್ರತಿ ತಾಲ್ಲೂಕಿನಲ್ಲಿ ಮಕ್ಕಳ ನಾಯಕತ್ವ ಶಿಬಿರ ತೀರ್ಮಾನ
ಕೋಲಾರ: ಭಾರತ ಸೇವಾದಳವು ಶತಮಾನೋತ್ಸವ ಕಾರ್ಯಕ್ರಮವನ್ನು ಡಿ. 28 ರಂದು ಮಾಲೂರು ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಗುತ್ತಿದ್ದು, ಆನಂತರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಚರಿಸಲು ಭಾರತ ಸೇವಾದಳ ಜಿಲ್ಲಾ ಸಮಿತಿ ತೀರ್ಮಾನಿಸಿತು.
ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಅಧ್ಯಕ್ಷತೆಯಲ್ಲಿ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಮಾಲೂರು ಕಾರ್ಯಕ್ರಮದ ನಂತರ ಕೋಲಾರ ಜಿಲ್ಲಾ ಕೇಂದ್ರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸುಮಾರು 2 ಸಾವಿರ ಮಕ್ಕಳ ಸಮ್ಮುಖದಲ್ಲಿ ಭಾರತ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ ಆಚರಿಸಲು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಹಕಾರ ಕೋರಲು ಸಭೆ ನಿರ್ಣಯಿಸಿತು.
ಪ್ರತಿ ತಾಲೂಕಿನಲ್ಲಿ ಮಕ್ಕಳ ನಾಯಕತ್ವ ಶಿಬಿರ, ಜನವರಿ 26 ರ ಪೂರ್ವಭಾವಿಯಾಗಿ ತಾಲೂಕು ಮಟ್ಟದಲ್ಲಿ ಮತ್ತು ಶಾಲಾ ಹಂತದಲ್ಲಿ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಭಾರತ ಸೇವಾದಳ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಫೆ.15 ರಿಂದ ಪ್ರತಿ ತಾಲೂಕಿನಲ್ಲಿ ಸೇವಾದಳ ಪರೀಕ್ಷೆಗಳನ್ನು ನಡೆಸಲು ಸೂಚಿಸಿ, ಅಧ್ಯಕ್ಷರ ಅಪ್ಪಣೆ ಮೇರೆಗೆ ಸೇವಾದಳ ಕೇಂದ್ರ ಕಚೇರಿ ಇರುವ ಘಟಪ್ರಭಾಗೆ ಅಧ್ಯಯನ ಪ್ರವಾಸ ತೆರಳಲು ತೀರ್ಮಾನಿಸಲಾಯಿತು.
ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್ ಶ್ರೀನಾಥ್ ಮಾತನಾಡಿ, ಭಾರತ ಸೇವಾದಳ ಶತಮಾನೋತ್ಸವ ಕಾರ್ಯಕ್ರಮಗಳನ್ನು ಇಡೀ ವರ್ಷ ಜಿಲ್ಲೆಯಾದ್ಯಂತ ವಿವಿಧೆಡೆ ವೈವಿಧ್ಯಮಯ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಆಚರಿಸಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಭಾರತ ಸೇವಾದಳ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು 100 ವರ್ಷಗಳ ಹಿಂದೆ ಹುಟ್ಟಿದಾಗ ನಾವ್ಯಾರು ಹುಟ್ಟಿರಲಿಲ್ಲ, ಈಗ ಅದೇ ಸಂಸ್ಥೆ ಶತಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಸ್ಥೆಯ ಪದಾಕಾರಿಗಳಾಗಿ ಜವಾಬ್ದಾರಿ ಹೊತ್ತುಕೊಂಡಿರುವುದು ಸೌಭಾಗ್ಯದ ಹಿರಿಮೆಯ ವಿಷಯವಾಗಿದೆ, ಶತಮಾನೋತ್ಸವ ಕಾರ್ಯಕ್ರಮಗಳನ್ನು ಆಚರಿಸಲು ಎಲ್ಲಾ ಸದಸ್ಯರು ತಾಲೂಕು ಸಮಿತಿಗಳ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ಎಸ್.ಸುಧಾಕರ್, ಕೋಶಾಧ್ಯಕ್ಷ ಕೆ.ಎಂ.ನಾಗರಾಜ್, ಮಾಲೂರು ಜಿಲ್ಲಾ ಸಮಿತಿ ಸದಸ್ಯ ಬಹಾದ್ದೂರ್ ಸಾಬ್, ತಾಲೂಕು ಅಧ್ಯಕ್ಷ ಶ್ರೀರಾಮ್, ಸದಸ್ಯರಾದ ಮುನಿವೆಂಕಟಯಾದವ್, ಗೋಕುಲ ಚಲಪತಿ, ಚಾಂದ್ ಪಾಷಾ, ಕೆಜಿಎಫ್ ತಾಲೂಕು ಅಧ್ಯಕ್ಷೆ ಪ್ರಭಾದೇವಿ, ಬಂಗಾರಪೇಟೆ ಶಾಖಾ ನಾಯಕ ಯಲ್ಲಪ್ಪ, ಅಜೀವ ಸದಸ್ಯ ವಿಶ್ವ ಮತ್ತಿತರರು ಹಾಜರಿದ್ದರು .
ನಮ್ಮ ದೇಶದಲ್ಲಿ ಬಡುಕುಟುಂಬಗಳ ಏಳಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ:ಸಂಸದ ಎಸ್.ಮುನಿಸ್ವಾಮಿ
ಶ್ರೀನಿವಾಸಪುರ 1 : ನಮ್ಮ ದೇಶದಲ್ಲಿ ಬಡುಕುಟುಂಬಗಳ ಏಳಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ. ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರದರ್ಶಿಸುತ್ತಿದೆ. ದೇಶದಲ್ಲಿ ಎಲ್ಲರೂ ಸಹ ನನ್ನ ಕುಟುಂಬವೇ ಎನ್ನುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ರಾಯಲ್ಪಾಡಿನ ಗ್ರಾಮಪಂಚಾಯತಿ ಆವರಣದ ಮುಂಭಾಗ ಮಂಗಳವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ನರೇಂದ್ರ ಮೋದಿರವರು ಒಂದು ದಿನವೂ ಸಹ ರಜಾ ಹಾಕಿಲ್ಲ. ದೇಶವನ್ನು ಪ್ರಪಂಚದಲ್ಲಿಯೇ ನಂಬರ್ ಒನ್ ದೇಶವನ್ನ ಮಾಡಬೇಕೆನ್ನುವ ಉದ್ದೇಶದಿಂದ ಹಗಲಿರಲು ದುಡಿಯುತ್ತಿದ್ದು, ನಿಮ್ಮ ಆರ್ಶೀವಾದದೊಂದಿಗೆ ಮೂರನೇ ಭಾರಿಯೂ ನರೇಂದ್ರ ಮೋದಿರವರು ಪ್ರಧಾನ ಮಂತ್ರಿ ಆಗಲಿದ್ದಾರೆ
ದೇಶದಲ್ಲಿ 140 ಕೋಟಿ ಜನಸಂಖ್ಯೆಯನ್ನು ಹೊಂದಿದ್ದು, ದೇಶದಲ್ಲಿನ ಪ್ರತಿಯೊಂದು ಕುಟುಂಬವು ನನ್ನ ಕುಟುಂಬ. ಯಾರು ಹಸಿವಿನಿಂದ ಬಳಲಬಾರದೆಂಬ ಸದುದ್ದೇಶದಿಂದ ಪ್ರಧಾನ ಮಂತ್ರಿ ಕರೀಬ್ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕುಟುಂಬದ ಒಬ್ಬರಿಗೆ 10 ಕೆಜಿ ಪ್ರಕಾರವಾಗಿ 32 ತಿಂಗಳು ಉಚಿತವಾಗಿ ನೀಡಿದರು . ಇಂದು ನಮ್ಮ ರಾಜ್ಯದಲ್ಲಿ 5 ಕೆಜಿ ಅಕ್ಕಿ ನೀಡುತ್ತಿರುವುದು ಸಿದ್ದರಾಮಯ್ಯ ಅವರು ಅಲ್ಲ , ಕೇಂದ್ರ ಸರ್ಕಾರವೇ .
ಆಯುಷ್ ಮಾನ್ ಯೋಜನೆಗಳ ಮೂಲಕ ಅನೇಕ ರೋಗಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಆಯುಷ್ಮಾನ್ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ತಪಾಸಣೆ ಮಾಡಿಕೊಳ್ಳಲಿ ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಎಂದರು.
ಕೇಂದ್ರ ಸರ್ಕಾರವು ಪಕ್ಷತೀತವಾಗಿ ಗ್ರಾಮೀಣ ಭಾಗದಲ್ಲಿ ಗ್ರಾ.ಪಂ ಮೂಲಕ ಶೌಚಾಲಯಗಳನ್ನು , ಉಚಿತ ಗ್ಯಾಸ್ ಸಿಲೆಂಡರ್ಗಳನ್ನು ನೀಡಿದೆ . ದೇಶದ ಜನರಿಗೆ ಕೇಂದ್ರ ಸರ್ಕಾರ ವತಿಯಿಂದ ನೀಡಲಾದ ಅನೇಕ ಕೇಂದ್ರ ಸರ್ಕಾದ ಗ್ಯಾರಂಟಿ ಯೋಜನೆಗಳನ್ನ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದರು . ಹಳ್ಳಿಕಡೆ ರಥ ಯಾತ್ರೆಯು ಬಂದರೆ ಈ ರಥ ಯಾತ್ರೆಯನ್ನು ಮೋದಿ ಗ್ಯಾರಂಟಿ ರಥ ಯಾತ್ರೆ ಎಂದು ಕರೆಯುತ್ತಾರೆ ಎನ್ನುತ್ತಾರೆ ಗ್ರಾಮೀಣ ಭಾಗದ ಸಾರ್ವಜನಿಕರು.
ಕೇಂದ್ರ ಸರ್ಕಾರದ ಗ್ಯಾರಂಟಿಗಳು , .ರಾಜ್ಯ ಸರ್ಕಾರದ ಗ್ಯಾರಂಟಿ ತರ ಅಲ್ಲ ಕೇಂದ್ರ ಸರ್ಕಾರವು ಏನೇನು ದೇಶದ ಜನರಿಗೆ ಯೋಜನೆಗಳನ್ನ ಮಾಡಿದೆ ಎಂಬುದನ್ನ ತೋರಿಸುವದೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಇದೇ ಸಮಯದಲ್ಲಿ ಟಿವಿ ಪರದೆಯ ಮೇಲೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನ ಪ್ರದರ್ಶಿಸಲಾಯಿತು.
ವಿಕಸಿತ ಭಾರತ್ ಸಂಕಲ್ಪಯಾತ್ರೆಯು ಮುದಿಮಡುಗು ಗ್ರಾಮಪಂಚಾಯಿತಿ ಬಳಿ ನಡೆಯಿತು. ಸಂಸದ ಎಸ್.ಮುನಿಸ್ವಾಮಿ, ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ|| ಕೆ.ಎನ್.ವೇಣುಗೋಪಾಲರೆಡ್ಡಿ, ಗ್ರಾ.ಪಂ ಉಪಾಧ್ಯಕ್ಷ ಕನ್ನಯ್ಯ, ಪಿಡಿಒ ಎನ್.ನರೇಂದ್ರಬಾಬು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಕೆ.ಸಂತೋಷ್, ಪಶುವೈದ್ಯಾಧಿಕಾರಿ ವೆಂಕಟಶಿವಾರೆಡ್ಡಿ, ಅಂಚೆ ಇಲಾಖಾಧಿಕಾರಿ ಸಾಯಿ ಹೇಂಂತ್, ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಸಂದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ನವೀನ್ಕುಮಾರ್, ಆರ್ಥಿಕ ಸಾಕ್ಷರತಾ ಕೇಂದ್ರ ತಾಲ್ಲೂಕು ಸಂಯೋಜಕರಾದ ಜಿ.ವೆಂಕಟೇಶ್, ಪಿ.ರಾಮಚಂದ್ರ, ಮುಖಂಡರಾದ ರೋಣೂರು ಚಂದ್ರಶೇಖರ್, ನರಸಿಂಹನಾಯಕ್, ಶಶಿಧರರೆಡ್ಡಿ, ರಾಜು, ಜಯಮ್ಮ, ಶಿಕ್ಷಕರಾದ ಮಂಜೇಶ್, ಬಾಬು ಇದ್ದರು.
ಶ್ರೀನಿವಾಸಪುರ: ಹಿರಿಯ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು : ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಮಹಮದ್ ಗೊರವನಕೊಳ್ಳ
ಶ್ರೀನಿವಾಸಪುರ: ಹಿರಿಯ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಮಹಮದ್ ಗೊರವನಕೊಳ್ಳ ಹೇಳಿದರು.
ಪಟ್ಟಣದ ವೃದ್ಧಾಶ್ರಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ವೃದ್ಧಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ವೃದ್ಧರನ್ನು ಕಡೆಗಣಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು.
ತಂದೆ ತಾಯಿ ತಮ್ಮ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುತ್ತಾರೆ. ತಮ್ಮ ಸಮಸ್ಯೆಗಳನ್ನು ಬದಿಗಿಟ್ಟು ಮಕ್ಕಳ ಪಾಲನೆ ಮಾಡುತ್ತಾರೆ. ಅವರ ಉತ್ತಮ ಭವಿಷ್ಯದ ಬಗ್ಗೆ ಕನಸು ಕಾಣುತ್ತಾರೆ. ಆದರೆ ಮಕ್ಕಳು ಮುದಿ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಮಕ್ಕಳಿಂದ ತಿರಸ್ಕರಿಸಲ್ಪಟ್ಟ ಹಿರಿಯರು ಅನಾಥಾಶ್ರಮದಲ್ಲಿ ಜೀವನ ಕಳೆಯುತ್ತಿದ್ದಾರೆ. ಅದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದರು.
ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ದಾನಿಗಳ ನೆರವಿನ ಅಗತ್ಯವಿದೆ. ಬೇರೆ ಬೇರೆ ಕಾರಾಣಗಳಿಂದ ಒಬ್ಬಂಟಿಯಾದ ಹಿರಿಯ ಜೀವಗಳಿಗೆ ಗೌರವಯುತ ಜೀವನ ಕಟ್ಟಿಕೊಡಬೇಕು. ಅದಕ್ಕೆ ಸಮಾಜ ಸೇವಾ ಸಂಸ್ಥೆಗಳು ಮತ್ತು ಸಮಾಜ ಮುಖಿ ವ್ಯಕ್ತಿಗಳು ನೆರವಿನ ಹಸ್ತ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ನಾಗರಾಜ್, ನಾರಾಯಣಸ್ವಾಮಿ, ಶಿವಕುಮಾರ್, ಸತೀಶ್ ಇದ್ದರು.