ಕುಂದಾಪುರ: ದಿ. 11-01-2024 ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪವಿಭಾಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಮಾತೃತ್ವ ಅಭಿಯಾನ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡುವದರ ಮೂಲಕವಾಗಿ HIV, Syphilis, Hepatitis B ಕುರಿತು ಜಾಗೃತಿ ಮೂಡಿಸಿ ಗರ್ಭಿಣಿಯರಿಗೆ ಎಲ್ಲ ರೀತಿಯ ಆರೋಗ್ಯ ತಪಾಸಣೆ & ಪರೀಕ್ಷೆಗಳನ್ನು ಮಾಡಲಾಯಿತು. ಈ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರ ಚಿಕಿತ್ಸಕರಾದ ಡಾ. ರಾಬರ್ಟ್ ರೆಬೆಲ್ಲೋ, ತಾಲೂಕು ಆರೋಗ್ಯಾಧಿಕಾರಿಯವರಾದ ಡಾ. ಪ್ರೇಮಾನಂದ್, ಆಸ್ಪತ್ರೆಯ (ಪ್ರಭಾರ)ಶುಶ್ರುಷ ಅಧಿಕ್ಷಕರಾದ ಶ್ರೀಮತಿ ಅನ್ನಪೂರ್ಣ ಟಿ.ಆರ್ ಮತ್ತು ಆಸ್ಪತ್ರೆಯ ಇತರೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಜರಾಗಿದ್ದರು. ಶ್ರೀಮತಿ ನಳಿನಾಕ್ಷಿ ಐಸಿಟಿಸಿ ಆಪ್ತಸಮಾಲೋಚಕರು ಮತ್ತು ಶ್ರೀಮತಿ ಪ್ರತಿಮಾ ಐಸಿಟಿಸಿ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ಆಸ್ಪತ್ರೆ ಎಲ್ಲಾ ಸಿಬ್ಬಂದಿಯವರು ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಕಾರ್ಯಕ್ರಮದಲ್ಲಿ 45 ಗರ್ಭಿಣಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
Day: January 11, 2024
ಕಣ್ಣಿನ ಆರೋಗ್ಯವನ್ನು ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು : ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು
ಶ್ರೀನಿವಾಸಪುರ : ನಮ್ಮ ದೇಹದ ಪಂಚೇಂದ್ರಿಯಗಳಲ್ಲಿ ಕಣ್ಣುಗಳು ಒಂದು ಅಂಗವಾಗಿದ್ದು, ಕಣ್ಣಿನ ಆರೋಗ್ಯವನ್ನು ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಹೇಳಿದರು.
ಪಟ್ಟಣದ ನ್ಯಾಯಾಲಯ ಸಭಾಂಗಣದ ಕಛೇರಿಯಲ್ಲಿ ಮಂಗಳವಾರ ಕಾನೂನು ಸೇವ ಪ್ರಾಧಿಕಾರ ಸಹಯೋಗದೊಂದಿಗೆ ಶ್ರೀನಿವಾಸಪುರ ರೋಟರಿ ಕ್ಲಬ್ವತಿಯಿಂದ ನಡೆದ ಕೋಲಾರದ ವಾಸನ್ ಕಣ್ಣಿನ ಆಸ್ಪತ್ರೆ ವತಿಯಿಂದ ನಡೆದ ಉಚಿತ ಕಣ್ಣಿನ ತಪಾಸಣ ಶಿಬಿರ ಹಾಗು ಯುವದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ನಡೆದ ದಾರಿಯು ಒಳ್ಳೇಯ ದಾರಿಯಾಗಿದ್ದು, ಇಂದಿನ ಪೀಳಿಗೆಯು ಸ್ವಾಮಿ ವಿವೇಕಾನಂದರರ ಆಶಯಗಳನ್ನು ಯುವಕರು ತಮ್ಮ ಜೀವನಕ್ಕೆ ಆಳಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಸ್ವಾಮಿವಿವೇಕಾನಂದರು ನಮ್ಮ ದೇಶದ ಸಂಸ್ಕøತಿಯನ್ನು ವಿದೇಶಗಳಲ್ಲಿ ನಮ್ಮ ದೇಶದ ಸಂಸ್ಕøತಿ ಆಚಾರ ವಿಚಾರಗಳನ್ನು ಎತ್ತಿ ಹಾಡಿಹೊಗಳಿದ್ದಾರೆ. ಅವರಲ್ಲಿದ್ದ ದೇಶದ ಪ್ರೇಮನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.
ಅಪರ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ , ಸರ್ಕಾರ ಅಭಿಯೋಜಕ ಮುಕುಂದ, ಕಾರ್ಯದರ್ಶಿ ಪಿ.ಸಿ.ನಾರಾಯಣಸ್ವಾಮಿ, ವಕೀಲರಾದ ಶ್ರೀನಿವಾಸಗೌಡ, ರಾಧಕೃಷ್ಣ, ವಿನಯ್ಕುಮಾರ್, ಸೌಭಾಗ್ಯ, ವೆಂಕಟರಮಣಪ್ಪ, ನಾರಾಯಣಸ್ವಾಮಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ರೋಟರಿ ಅಧ್ಯಕ್ಷ ಮಂಜುನಾಥರೆಡ್ಡಿ, ಕಾರ್ಯದರ್ಶಿ ಶಿವಮೂರ್ತಿ, ಪತ್ರಿಕಾ ಕಾರ್ಯದರ್ಶಿ ಕೃಷ್ಣಮೂರ್ತಿ , ವಾಸನ್ ಕಣ್ಣಿನ ಆಸ್ಪತ್ರೆ ಮಾರುಕಟ್ಟೆ ವ್ಯವಸ್ಥಾಪಕ ಚರಣ್ಕುಮಾರ್ ಇದ್ದರು.
10, ಎಸ್ವಿಪುರ್ : ಪಟ್ಟಣದ ನ್ಯಾಯಾಲಯ ಸಭಾಂಗಣದ ಕಛೇರಿಯಲ್ಲಿ ಕಾನೂನು ಸೇವ ಸಮಿತಿವತಿ ಸಹಯೋಗದಿಂದ ಶ್ರೀನಿವಾಸಪುರ ರೋಟರಿ ಕ್ಲಬ್ವತಿಯಿಂದ ನಡೆದ ಕೋಲಾರದ ವಾಸನ್ ಕಣ್ಣಿನ ಆಸ್ಪತ್ರೆ ವತಿಯಿಂದ ನಡೆದ ಉಚಿತ ಕಣ್ಣಿನ ತಪಾಸಣ ಶಿಬಿರಕ್ಕೆ ಬಿ.ಕೆ.ಮನು ಚಾಲನೆ ನೀಡಿ ಮಾತನಾಡಿದರು.
ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ: ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆ
ಇಂಫಾಲ : ಮಣಿಪುರದಲ್ಲಿ ಮತ್ತೊಮ್ಮೆ ಹಿಂಸೆಚಾರ ಭುಗಿಲೆದ್ದಿದ್ದು, ಜನರು ಭಯಭೀತಗೊಂಡಿದ್ದಾರೆ. ಬಿಷ್ಟುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆದ ಪ್ರದೇಶದ ಬಳಿ ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ನಾಪತ್ತೆಯಾದವರನ್ನು ಓಯಿನಮ್ ರೊಮೆನ್ ಮೈತೆ (45), ಅಹಾಂತೇಮ್ ದಾರಾ ಮೈತೆ (56), ತೌಡಮ್ ಇಬೊಮ್ಮಾ ಮೈತೆ (53) ಮತ್ತು ತೌದಮ್ ಆನಂದ್ಮೈತೆ (27) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿಗೂ ಮೊದಲು ಮಾರ್ಟರ್ ಫೈರಿಂಗ್ ನಡೆದಿದ್ದು, ಘಟನೆ ಕುರಿತು ಕುಂಬಿ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ನಾಲ್ವರು ಬಂಡುಕೋರರ ವಶದಲ್ಲಿರುವ ಸಾಧ್ಯತೆ ಇದ್ದು, ಶೋಧ ಕಾರ್ಯಾಚರಣೆಗಾಗಿ ಕೇಂದ್ರ ಸರ್ಕಾರದ ಸಹಾಯವನ್ನು ಕೋರಲಾಗಿದೆ ಎನ್ನಲಾಗಿದೆ.