ಕುಂದಾಪುರದ ಹೊಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ರಾಜಸ್ಥಾನದ ಜೈಪುರದಲ್ಲಿ ನಡೆದ 67ನೇ ರಾಷ್ಟ್ರಮಟ್ಟದ 14ರ ವಯೋಮಾನದ “ಬಾಲಕಿಯರ ಯೋಗಾಸನ” ಸ್ಪರ್ಧೆಯಲ್ಲಿ ಟಾಪ್ 10 ರಲ್ಲಿ 7ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ. ಹಾಗೇ ರಾಷ್ಟ್ರಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕವು ಪ್ರಪ್ರಥಮ ಬಾರಿಗೆ 4 ಸ್ಥಾನ ಪಡೆದಿದ್ದು ಇದು ಕರ್ನಾಟಕ್ದವರಿಗೆ ಹೆಮ್ಮೆಯ ವಿಷಯವಾಗಿದೆ
ಇವಳ ಈ ಸಾಧನೆಗೆ ಸಂಸ್ಥೆಯ ಸಂಚಾಲಕರು,ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Day: February 5, 2024
ಕುಂದಾಪುರ : ರೋಜಾರಿಯುಮ್ ಪತ್ರಿಕೆಯಿಂದ ಚಿತ್ರಕಲಾ ಸ್ಪರ್ಧೆ
ಕುಂದಾಪುರ, ಜ.5: ಕುಂದಾಪುರ ರೋಜರಿ ಚರ್ಚಿನ ಪತ್ರಿಕೆಯಿಂದ ಚರ್ಚಿನ ಜನರಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಣ್ಣ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಏರ್ಪಡಿಸಲ್ಪಟ್ಟ ಈ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳು ಇದ್ದು, ಪ್ರತಿ ವಿಭಾಗಗಳಲ್ಲಿ, ವಿವಿಧ ಆಯ್ಕೆಯನ್ನು ಕೊಡಲಾಗಿತ್ತು. ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ “ನಮ್ಮಲ್ಲಿರುವ ಪ್ರತಿಭೆಗಳನ್ನು ಉರ್ಜಿತಗೊಳಿಸಬೇಕು” ಎಂದು ಸ್ಪರ್ಧಿಗಳಿಗೆ ಶುಭ ಕೋರಿದರು. ಗೌರವ ಸಂಪಾದಕರಾದ ಧರ್ಮಗುರು ವಂ| ಅಶ್ವಿನ್ ಆರಾನ್ನಾ, ಸಂಪಾದಕರಾದ ಬರ್ನಾಡ್ ಡಿಕೋಸ್ತಾ, ಸಹಸಂಪಾದಕರಾದ ಓಸ್ವಲ್ಡ್ ಕರ್ವಾಲ್ಲೊ, ಸಂಪಾದಕ ಮಂಡಳಿಯ ಸದಸ್ಯರಾದ ರೇಶ್ಮಾ ಫೆರ್ನಾಂಡಿಸ್, ಶೈಲಾ ಡಿಆಲ್ಮೇಡಾ ಮತ್ತು ಕಿರಣ್ ಪಾಯ್ಸ್ ಉಪಸ್ಥಿತರಿದ್ದರು. ಈ ಸ್ಪರ್ಧೆಯಲ್ಲಿ ಒಳ್ಳೆಯ ಪ್ರತಿಕ್ರಿಯೆ ದೊರೆತು 45 ಕ್ಕೂ ಹೆಚ್ಚು ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
‘ಅಪಘಾತ ರಹಿತ ಚಾಲಕ’ ಪ್ರಶಸ್ತಿ ಪುರಸ್ಕತ ಅಲೆಕ್ಸಾಂಡರ್ ಕುಲಾಸೊ ನಿಧನ
ಉದ್ಯಾವರ : ಪರ್ಕಳ – ಮಟ್ಟು ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಂಬರೀಶ್ ಬಸ್ ನಲ್ಲಿ 40ಕ್ಕೂ ಅಧಿಕ ವರ್ಷಗಳ ಕಾಲ ಚಾಲಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿ, ‘ಅಪಘಾತ ರಹಿತ ಚಾಲಕ ಪ್ರಶಸ್ತಿ’ ಪುರಸ್ಕತರಾಗಿದ್ದ ಉದ್ಯಾವರದ ಅಲೆಕ್ಸಾಂಡರ್ ಕುಲಾಸೊ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಫೆ. 4 ರoದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು, ಹಾಸ್ಯದ ಮಾತುಗಳ ಮೂಲಕವೇ ಎಲ್ಲರ ಮನ ಗೆಲ್ಲುತ್ತಿದ್ದರು. ಸಿಟಿ ಬಸ್ಸಿನ ಚಾಲಕರಾಗಿದ್ದ ಇವರು ಕೆಲವೇ ವರ್ಷಗಳ ಹಿಂದೆ ತನ್ನ ವೃತ್ತಿಗೆ ನಿವೃತ್ತಿ ಹೇಳಿದ್ದರು. ಬಳಿಕ ರಿಕ್ಷಾ ಚಾಲಕರಾಗಿಯೂ ಗುಡ್ಡೆಯಂಗಡಿ ಬಲಾಯ್ ಪಾದೆ ರಿಕ್ಷಾ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ್ದರು.
ಸ್ನೇಹಜೀವಿಯಾಗಿದ್ದ ಮೃತರು, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯಂದಿರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಶ್ರೀನಿವಾಸಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡ ಮುದ್ದುಗಂಗಾದರ್ ಬೇಟಿ ನೀಡಿ ದೇವರ ದರ್ಶನವನ್ನು ಪಡೆದರು
ಶ್ರೀನಿವಾಸಪುರ : ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡ ಮುದ್ದುಗಂಗಾದರ್ ಶನಿವಾರ ಬೇಟಿ ನೀಡಿ ದೇವರ ದರ್ಶನವನ್ನು ಪಡೆದು ಮಾತನಾಡಿದರು.
ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯು ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಹೈಕೆಮಾಂಡ್ ನನಗೆ ಲೋಕಸಭೆ ಚುನವಾಣೆ ಅಭ್ಯರ್ಥಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಅದರಂತೆ ಕ್ಷೇತ್ರದ ಮಾಜಿ ಶಾಸಕರಾದ ರಮೇಶ್ಕುಮಾರ್ ರವರ ಆರ್ಶೀವಾದ ಪಡೆದು ಕ್ಷೇತ್ರ ಪರ್ಯಟನೆ ಮಾಡುವುದಾಗಿ ಅವರ ಬಳಿ ಮನವಿ ಮಾಡುತ್ತೇನೆ . ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಆಕಾಂಕ್ಷಿಗಳು ಇದ್ದಾರೆ, ಅದರಲ್ಲಿ ನಾನು ಒಬ್ಬ , ನೀವೆಲ್ಲರೂ ನನಗೆ ಅವಕಾಶ ಮಾಡಿಕೊಡುವಂತೆ ಕ್ಷೇತ್ರದ ಜನತೆಗೆ ಮನವಿ ಮಾಡಿದರು.
ಈಗಾಗಲೇ ಕಾಂಗ್ರೆಸ್ ಪಕ್ಷವು ಈ ಹಿಂದೆ ಮುಳಬಾಗಿಲು ವಿಧಾನಸಭೆ ಚುನವಾಣೆಗೆ ಬಿಫಾರಂ ನೀಡಿದ್ದರು. ಹೈಕಮಾಂಡ್ ಆದೇಶವನ್ನ ಪಾಲಿಸಿ ಇನ್ನೊಬ್ಬರಿಗೆ ನನಗೆ ಬಂದಿರುವ ಬಿಫಾರಂವನನು ಹೈಕಮಾಂಡ್ಗೆ ಹಿಂತಿರುಗಿಸಿದೆ ಎಂದರು.
ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಮಾತಿನಂತೆ ನಿನಗೆ ಲೋಕಸಭೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು ಅದರಂತೆ. ನನಗೆ ಲೋಕಸಭೆ ಚುನಾವಣೆಯ ಅಭ್ಯರ್ಥಿ ನಿರ್ಧಾರ ಮಾಡುವುದು ಹೈಕಮಾಂಡ್ .ರಾಜ್ಯ ಹೈಕಮಾಂಡ್ ನುಡಿದಂತೆ ನಡೆಯುವಂತಹುದು ಕಾದು ನೋಡಬೇಕಾಗಿದೆ.
ಕ್ಷೇತ್ರಕ್ಕೆ ಸಂಬಂದಿಸಿದ ಭೂತ್ ಮಟ್ಟದಿಂದ ಹಿಡಿದು , ತಾಲೂಕು , ಜಿಲ್ಲಾ ಮಟ್ಟದ ವರೆಗೂ ಎಲ್ಲಾ ಚಿತ್ರಣವೂ ನನ್ನಲ್ಲಿ ಇದೆ ಅದರಂತೆ ಭೂತ್ಮಟ್ಟದಿಂದ ಹಿಡಿದು ಎಲ್ಲಾ ನಾಯಕರ ಬೆಂಬಲವನ್ನು ಕೋರುತ್ತೇನೆ ಎಂದರು.