ಸಾಲಿಗ್ರಾಮ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತ್ ನ ವಿರೋಧ ಪಕ್ಷದ ನಾಯಕರ ಶ್ರೀನಿವಾಸ್ ಅಮೀನ್ ರವರ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಸಭೆ ಕರೆಯಲಾಯಿತು, ಶ್ರೀನಿವಾಸ ಅಮಿನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕೋಟ ಕಾಂಗ್ರೆಸ್ ನ ಅಧ್ಯಕ್ಷರಾದ ಶಂಕರ್ ಎ ಕುಂದರ್ ರವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಂಡು 2008 & 2013ರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ಮತ್ತು 2023ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಎರಡು ಬಾರಿ ಟಿಕೆಟ್ ವಂಚಿತರಾಗಿರುತ್ತಾರೆ, ಹಾಗೆ ಅದರ ಮಧ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ, ಆ ಎಲ್ಲ ಸಂದರ್ಭದಲ್ಲಿ ಇವರಿಗೆ ಅವಕಾಶ ಸಿಗದೇ ಇದ್ದಾಗ ಇವರ ನಾಯಕರಾದ ಓಸ್ಕರ ಫೆರ್ನಾಂಡಿಸ್ ರವರ ಮನವಲಿಕೆಯಿಂದ ಇವರನ್ನು ಸಮಾಧಾನಪಡಿಸಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ಸ್ಥಾನವನ್ನು ನೀಡುವೆ ಎಂದು ಹಾಗೆ ಕರ್ನಾಟಕ ಸರ್ಕಾರದ ಕೆ.ಎಫ್. ಡಿ.ಸಿ ನಲ್ಲಿ ನಿಗಮದಲ್ಲಿ ಚೇರ್ಮನ್ ಹುದ್ದೆ ನೀಡುವ ಕುರಿತು ಸಮಾಧಾನಪಡಿಸಿದರು. 2013 ರ ಸಿದ್ದರಾಮಯ್ಯ ಸರ್ಕಾರದಲ್ಲಿ ನಿಗಮ ಮಂಡಳಿ ಸ್ಥಾನಕ್ಕೆ ಇವರು ಆಕಾಂಕ್ಷಿಯಾಗಿದ್ದು ಕೊನೆಗಳಿಗೆನಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿರುತ್ತದೆ. ಅಂದು ಪಕ್ಷದ ನಾಯಕರ ಮೇಲೆ ಬೇಸರಗೊಂಡಿದ್ದ ಶಂಕರ್ ಎ ಕುಂದರ್ ಅವರಿಗೆ ಇದುವರೆಗೂ ಪಕ್ಷದಲ್ಲಿ ಯಾವುದೇ ಉನ್ನತ ಹುದ್ದೆ ನೀಡುವಲ್ಲಿ ವಿಫಲವಾದರು ಎಂದು ಖಂಡಿಸಿದರು. ಹಾಗೆ ಹನೆಹಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ರಮಾನಂದ ಶೆಟ್ಟಿ ಬಾರಕೂರ್ ರವರು ಮಾತಾಡಿ ಉಡುಪಿ ಜಿಲ್ಲೆಯಲ್ಲಿ ಪಕ್ಷದ ಸ್ವಂತ ಬ್ಲಾಕ್ ಆಫೀಸಿದ್ರೆ ಅದು ಕೋಟ ಬ್ಲಾಕ್ ಕಾಂಗ್ರೆಸ್, ಇದರ ಸಂಪೂರ್ಣ ಜವಾಬ್ದಾರಿ ಹೊತ್ತು ಪಕ್ಷಕ್ಕಾಗಿ ಒಂದು ಸ್ವಂತ ಆಫೀಸ್ ಇರಬೇಕು ಎಂದು ಕನಸು ಹೊತ್ತು ಅದನ್ನು ಅನುಷ್ಠಾನಗೊಳಿಸಿ ಇಂದು ಪಕ್ಷದ ನಾಯಕರೆ ಇವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ದೊರಕಿಸಿಕೊಡದೆ ಇರುವುದು ತುಂಬಾ ಬೇಸರ ತಂದಿದೆ ಎಂದು ಹೇಳಿದರು.
ಹಾಗೆ ಕೋಟ ಬ್ಲಾಕ್ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ವಡ್ಡರ್ಸೆ ರವರು ಮಾತನಾಡಿ ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕಾಂಗ್ರೆಸ್ ನಾಯಕರು ಇಲ್ಲದಿರುವ ಸಂದರ್ಭದಲ್ಲಿ ನಮ್ಮಂತ ತಳಮಟ್ಟದ ಕಾರ್ಯಕರ್ತರುಗಳಿಗೆ ಹೆಗಲುಕೊಟ್ಟು ನಿಂತಂತ ವ್ಯಕ್ತಿ ಶಂಕರ್ ಎ ಕುಂದರವರು, ಪಕ್ಷ ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕೈಗೆ ನೇರವಾಗಿ ಸಿಗುವ ವ್ಯಕ್ತಿ ಶಂಕರ್ ಎ ಕುಂದರ್ ರವರು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ನಾಯಕತ್ವದ ಕೊರತೆಯಿಂದ ಇವತ್ತು ಉಡುಪಿ ಜಿಲ್ಲೆಗೆ ಯಾವುದೇ ಸ್ಥಾನಮಾನ ಸಿಗದಿರುವುದು ಬೇಸರ ತಂದಿದೆ. ಈ ಬಾರಿ ಲೋಕಸಭಾ ಚುನಾವಣೆ ಒಳಗೆ ಕಾಂಗ್ರೆಸ್ ಪಕ್ಷದಲ್ಲಿ ಶಂಕರ್ ಎ ಕುಂದರವರಿಗೆ ಉನ್ನತ ಸ್ಥಾನಮಾನ ದೊರಕದೆ ಇದ್ದ ಸಂದರ್ಭದಲ್ಲಿ ನಾವೆಲ್ಲರೂ ಸಾಮೂಹಿಕ ರಾಜೀನಾಮೆ ನೀಡಲಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ ಅಧ್ಯಕ್ಷರಾದ ದಿನೇಶ್ ಬಂಗೇರ ಗುಂಡ್ಮಿ ಅವರು ಮಾತನಾಡಿ ಶಂಕರ ಎ ಕುಂದರ್ ರವರು 2008 ರಿಂದ ಸತತವಾಗಿ ಜಿಲ್ಲಾ ಪಂಚಾಯತ್ ವಿಧಾನಸಭೆ, ವಿಧಾನ ಪರಿಷತ್ ಹಾಗೂ ನಿಗಮ ಮಂಡಳಿಗೆ ಆಕಾಂಕ್ಷಿಯಾಗಿದ್ದರು, ಪ್ರತಿ ಬಾರಿಯೂ ಅವಕಾಶ ತಪ್ಪಿದರೂ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು, ಮೊನ್ನೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು. ಪ್ರಭಾವಿ ಆಕಾಂಕ್ಷಿಗಳಲ್ಲಿ ಅತಿ ಹಿರಿಯ ಮುಖಂಡರು ಇವರಾಗಿದ್ದು ಪಕ್ಷ ಕೊನೆಗಳಿಗೆಯಲ್ಲಿ ಪ್ರಸಾದ್ ರಾಜ್ ಕಾಂಚನ ಅವರಿಗೆ ಟಿಕೆಟ್ ನೀಡಿದಾಗ ಸೌಜನ್ಯಕ್ಕೂ ಕೂಡ ಪ್ರಸಾದ್ ರಾಜ್ ಕಾಂಚನ ರಾಗಲಿ, ಜಿಲ್ಲಾ ಮಟ್ಟದ ಪ್ರಮುಖ ನಾಯಕರಾಗಲಿ ದೂರವಾಣಿಯಲ್ಲಿ ಕೂಡ ಸಂಪರ್ಕಿಸದೆ ಇವರನ್ನು ಕಡೆಗಣಿಸಿದ್ದರಿಂದ ಅಂದೆ ರಾಜೀನಾಮೆ ನಿರ್ಧಾರವನ್ನು ಕೈಗೊಂಡಿದ್ದರು, ಆದರೆ ನನ್ನ ರಾಜೀನಾಮೆಯಿಂದ ಕುಂದಾಪುರ ಕ್ಷೇತ್ರಕ್ಕೆ ಮೊದಲು ಟಿಕೆಟ್ ಖಚಿತ ಪಡಿಸಿ ಕೊಂಡಿರುವ ದಿನೇಶ್ ಹೆಗಡೆಯವರ ಗೆಲುವಿಗೆ ತೊಂದರೆ ಆಗಬಾರದು ಅನ್ನೋ ದೃಷ್ಟಿಯಿಂದ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡರು, ಈ ಬಾರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ಮತ್ತೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಜಿಲ್ಲಾ ಮಟ್ಟದ ಎಲ್ಲಾ ನಾಯಕರ ಶಿಫಾರಸು ಪತ್ರದೊಂದಿಗೆ ತನ್ನ ವೈಯಕ್ತಿಕ ಮನವಿಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರಿಗೆ ಸಲ್ಲಿಸಿದರು, ಆದರೆ ಪಕ್ಷದ ಜಿಲ್ಲಾ ಮಟ್ಟದ ನಾಯಕರು ವೈಯಕ್ತಿಕವಾಗಿ ಇವರ ಜೊತೆಗೆ ತೆರಳಿ ಇವರ ಹಿರಿತನವನ್ನು ಹಾಗೂ ಇವರ ಪಕ್ಷ ನಿಷ್ಠೆಯ ಬಗ್ಗೆ ರಾಜ್ಯಮಟ್ಟದ ನಾಯಕರ ಬಳಿ ತಿಳಿಸಿ ಇವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ದೊರಕಿಸಿ ಕೊಡುವಲ್ಲಿ ಮನಸ್ಸು ಮಾಡಲಿಲ್ಲ, ಹಾಗೆಯೇ ಸರ್ಕಾರ ರಚನೆಯಾದ ತಕ್ಷಣ ಜಿಲ್ಲಾ ಕಾಂಗ್ರೆಸ್ ಆದೇಶದಂತೆ ಮಾನ್ಯ ಪ್ರತಾಪ್ ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಬ್ಲಾಕ್ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ, ಸರಕಾರಿ ಆಸ್ಪತ್ರೆ, ಭೂ ನ್ಯಾಯ ಮಂಡಳಿ ಹೀಗೆ ಹಲವಾರು ಸಮಿತಿಗಳಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ನೆಲೆಯಲ್ಲಿ ಹಿರಿಯರನ್ನು ಗುರುತಿಸಿ ನೇಮಕ ಮಾಡಲಾಗಿದೆ. ಈ ಪಟ್ಟಿಯನ್ನು ಪರಾಜಿತ ಅಭ್ಯರ್ಥಿಯವರು ಪದೇ ಪದೇ ಬದಲಿಸಿ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿರುವುದನ್ನು ಖಂಡಿಸಿ ಬೇಸರದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿರುತ್ತಾರೆ, ಇವರ ನಿರ್ಧಾರವನ್ನು ಬೆಂಬಲಿಸಿ ನಾವು ಇಂದು ಎಲ್ಲಾ ಗ್ರಾಮೀಣ ಸಮಿತಿಯ ಘಟಕ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.
ಕೋಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಬಂಗೇರವರು ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರನ್ನ ಗುರುತಿಸಿ ಅವರಿಗೆ ಹುದ್ದೆಯನ್ನು ನೀಡದೇ ಇದೊಂದು ಘೋರ ದುರಂತ, ನಮ್ಮ ನಾಯಕರಾದ ಶಂಕರ್ ಎ ಕುಂದರ್ ರವರಿಗೆ ಯಾವುದೇ ಸ್ಥಾನಮಾನವನ್ನ ನೀಡದೇ ಇದ್ದಲ್ಲಿ ಇನ್ನೂ ಒಂದು ವಾರದಲ್ಲಿ ಶಂಕರ್ ಕುಂದರವರು ಕರೆಯಲಿರುವ ಬೃಹತ್ ಬೆಂಬಲಿಗರ ಸಮಾವೇಶದಲ್ಲಿ ಅವರನ್ನು ಬೆಂಬಲಿಸಿ, ಅವರ ಜೊತೆಗೂಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾವ್ಯಾರು ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸುವುದಿಲ್ಲ ಹಾಗೆ ಶಂಕರ್ ಎ ಕುಂದರ್ ರವರ ಎಲ್ಲ ಅಭಿಮಾನಿ ಬಳಗದವರು ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಿ ತಟಸ್ಥ ನಿಲುವನ್ನು ತೋರಪಡಿಸಲಿದ್ದೇವೆ ಎಂದು ಹೇಳಿದರು.
ಇಂದಿನ ಶಂಕರ್ ಎ ಕುಂದರ್ ರವರ ಬೆಂಬಲಿಗರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ಬಸವ ಪೂಜಾರಿ ಗುಂಡ್ಮಿ, ಕೋಟ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ರೇಖಾ ಪಿ ಸುವರ್ಣ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ರವಿ ಕಾಮತ್ ಗುಂಡ್ಮಿ ಪುನೀತ್ ಪೂಜಾರಿ ಪಾರಂಪಳ್ಳಿ ಹಾಗೂ ಗಣೇಶ್ ಬಡಹೋಳಿ, ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ರವಿ ಪೂಜಾರಿ ಕೋಟ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನಿಲ್ ಮಡಿವಾಳ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ನಜಿರ್ ಬಾರ್ಕೂರು, ಸೋಶಿಯಲ್ ಮೀಡಿಯಾ ಘಟಕದ ಅಧ್ಯಕ್ಷರಾದ ಶ್ರೀಕಾಂತ್ ಆಚಾರ್ಯ, ಪ್ರಚಾರ ಸಮಿತಿ ಘಟಕದ ಅಧ್ಯಕ್ಷರಾದ ವಾಸು ಕೋಟ್ಯಾನ್, ಪಾಂಡೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ವೈ ಬಿ ರಾಘವೇಂದ್ರ, ಪಾಂಡೇಶ್ವರ ಗ್ರಾಮೀಣ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ರಮೇಶ್ ಆಚಾರ್ ಪಾಂಡೇಶ್ವರ, ಕಿಶನ್ ಘಟಕದ ಅಧ್ಯಕ್ಷರಾದ ಸುಧಾಕರ್ ಪೂಜಾರಿ ಐರೋಡಿ, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿಗಾರ್ ಗುಂಡ್ಮಿ, ಕೋಟತಟ್ಟು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಪೂಜಾರಿ ಕೆಚ್ಗೆರೆ, ಬಾರ್ಕುರ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ನಾರಾಯಣ ರಾವ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ಮಾಜಿ ಸದಸ್ಯರಾದ ಮಹಾಬಲ ಮಡಿವಾಳ, ಪಾಂಡೇಶ್ವರ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರ ವಿಠಲ ಪೂಜಾರಿ ಸಾಸ್ತಾನ, ಕೋಟ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರ ಆಚಾರ್ ಕೋಟ, ಇಂಟಕ್ ಘಟಕದ ಅಧ್ಯಕ್ಷರಾದ ದೇವೇಂದ್ರ ಗಾಣಿಗ ಕೋಟ, ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ವಿಜಯ ಪೂಜಾರಿ ಸಾಸ್ತಾನ, ಪಾಂಡೇಶ್ವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅವಿನಾಶ್ ಪೂಜಾರಿ, ವಡ್ದರ್ಸೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರ ಶೆಟ್ಟಿ, ಬಿಲ್ಲಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಕುಲಾಲ್,
ಕಾಂಗ್ರೆಸ್ ಮುಖಂಡರಾದ ಸುರೇಶ್ ಶೆಟ್ಟಿ ಕಾವಡಿ, ಸೂರ್ಯಕಾಂತ್ ಶೆಟ್ಟಿ ಚಿತ್ರಪಾಡಿ, ಮಂಜುನಾಥ್ ಪೂಜಾರಿ ಗೋಳಿಬೆಟ್ಟು,ಸಾಸ್ತಾನ ವ್ಯವಸಾಯಕ ಸಹಕಾರಿ ಬ್ಯಾಂಕ್ ನ ಸದಸ್ಯರಾದ ಆನಂದ ಗಾಣಿಗ ಐರೋಡಿ, ಕಾರ್ಕಡ ತೆಂಕೋಳಿ ಬೂತ್ ಅಧ್ಯಕ್ಷರಾದ ಸುರೇಶ್ ನೆಲ್ಲಿಬೆಟ್ಟು,
ಕಾಂಗ್ರೆಸ್ ಮುಖಂಡರಾದ ರತ್ನಾಕರ್ ಪೂಜಾರಿ ಪಾರಂಪಳ್ಳಿ, ಶಂಕರ್ ಪೂಜಾರಿ ಪಾರಂಪಲ್ಲಿ, ರಘು ಭಂಡಾರಿ ಸಾಲಿಗ್ರಾಮ,
ಪ್ರತಾಪ್ ಪೂಜಾರಿ ಪಾರಂಪಳ್ಳಿ, ಗಣೇಶ್ ಪೂಜಾರಿ ಕೋಟ, ಚಂದ್ರ ಪೂಜಾರಿ ಕೋಟ, ರತ್ನಾಕರ್ ಶ್ರೀಯಾನ್ ಪಡುಕೆರೆ, ಪ್ರತಾಪ್ ಪೂಜಾರಿ ಪಾರಂಪಳ್ಳಿ, ರಾಜು ಗುಂಡ್ಮಿ, ಮಂಜುನಾಥ್ ಪೂಜಾರಿ ಗುಂಡ್ಮಿ, ನಾಗೇಂದ್ರ ಪುತ್ರನ್ ಕೋಟ, ಭದ್ರ ಗೆಂಡೆಕೆರೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು, ಗಣೇಶ್ ಕೆ ನೆಲ್ಲಿಬೆಟ್ಟು ಸ್ವಾಗತಿಸಿ ಧನ್ಯವಾದಿಸಿದರು.
Day: March 8, 2024
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವತಿಯಿಂದ ಪ್ರಾರಂಭಗೊಂಡ ಸಮುದಾಯ ಬಾನುಲಿ ರೇಡಿಯೋ ಮಾರ್ಚ್ 13ರಿಂದ ಆರಂಭ
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವತಿಯಿಂದ ಪ್ರಾರಂಭಗೊಂಡ ಸಮುದಾಯ ಬಾನುಲಿ ರೇಡಿಯೋ ಕುಂದಾಪ್ರ 89.6 ಎಫ್.ಎಮ್. ನಿರಂತರ ಪ್ರಸಾರ ಮಾರ್ಚ್ 13ರಿಂದ ಆರಂಭಗೊಳ್ಳಲಿದೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಅವರು ಗುರುವಾರ ಕಾಲೇಜಿನಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ರೇಡಿಯೋ ಕುಂದಾಪುರ ಇದು ಲಾಭರಹಿತ ಸಮುದಾಯ ಬಾನುಲಿ ಕೇಂದ್ರವಾಗಿದ್ದು ಸ್ಥಳೀಯ ಜನರ ಜೀವನದ ಪ್ರಗತಿ ಸುಧಾರಿಸುವ ಗುರಿಯನ್ನು ಹೊಂದಿದೆ. ಕೃಷಿ, ಮೀನುಗಾರಿಕೆ, ಗೃಹಿಣಿಯರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವಿಶೇಷ ಕಾರ್ಯಕ್ರಮಗಳ ಪ್ರಸಾರ ಇದರ ಧ್ಯೇಯೋದ್ದೇಶವಾಗಿದೆ. ಆರೋಗ್ಯ, ಪೋಷಣೆ, ಶಿಕ್ಷಣ, ಕೃಷಿ ವಿಷಯಗಳ ಕುರಿತು ಸ್ಥಳೀಯರ ಅನುಭವಗಳನ್ನು ಮತ್ತು ಅವರ ವಿಚಾರಗಳನ್ನು ಹಂಚಿಕೊಳ್ಳಲು ಚರ್ಚಿಸಲು ಸಮುದಾಯದ ಸದಸ್ಯರಿಗೆ ಇದೊಂದು ವೇದಿಕೆಯಾಗಿದೆ ಎಂದು ಹೇಳಿದರು.
ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಯು.ಎಸ್ ಶೆಣೈ ಮಾತನಾಡಿ, ರೇಡಿಯೋ ಕುಂದಾಪುರ 89.6 ಎಫ್.ಎಮ್ ಸಮುದಾಯ ಬಾನುಲಿ ಕೇಂದ್ರ ಸ್ಥಳೀಯ ಕನ್ನಡ ಭಾಷೆಯಲ್ಲಿಯೇ ಹೆಚ್ಚು ಪ್ರಸಾರವಾಗುವುದರಿಂದ ಜನರನ್ನು ಅದು ಸುಲಭವಾಗಿ ತಲುಪುತ್ತದೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಉತ್ತಮ ಸಂವಹನ ಮಾಧ್ಯಮವಾಗಿದೆ. ಗ್ರಾಮೀಣ ಭಾಗದ ಜನರ ಸಮಸ್ಯೆ, ಸವಾಲುಗಳು ಮತ್ತು ಅಗತ್ಯತೆಗಳನ್ನು ರೇಡಿಯೋ ಕುಂದಾಪುರದ ಮೂಲಕ ಸುಲಭವಾಗಿ ಹಂಚಿಕೊಳ್ಳಬಹುದಾಗಿದೆ. ಇದು ಸಮುದಾಯದವರೇ ನಿರ್ವಹಿಸುವ ಸಮುದಾಯ ಬಾನುಲಿ. ಜನಸಾಮಾನ್ಯರ ಹವ್ಯಾಸ, ಆಸಕ್ತಿಯ ವಿಷಯಗಳ ಕುರಿತಂತೆ ಮೌಲಿಕ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತದೆ. ಸಮುದಾಯದ ವಿವಿಧ ಜನ ಜೀವನದ ಆಚರಣೆಗಳ, ವೈಯಕ್ತಿಕ ವೃತ್ತಿಗಳ ಸೃಜನಶೀಲತೆ ಮತ್ತು ಸ್ವಯಂ ಸಬಲೀಕರಣಕ್ಕೆ ಪೂರಕವಾದ ಮನರಂಜನಾ ವಿಷಯಗಳ ಕುರಿತಂತೆ ಕಾರ್ಯಕ್ರಮಗಳನ್ನು ರೇಡಿಯೋ ಕುಂದಾಪುರ 89.6 ಎಫ್. ಎಮ್. ಸಮುದಾಯ ಬಾನುಲಿ ಕೇಂದ್ರವು ಪ್ರಸಾರ ಮಾಡುತ್ತದೆ.
ರೇಡಿಯೋ ಕುಂದಾಪ್ರ ಕಾರ್ಯಕ್ರಮಗಳಲ್ಲಿ ಕೃಷಿ ಸಮಾಚಾರ, ಕಡಲ ಒಡಲು, ಯುವ ಸ್ಪಂದನ, ಕೇಳೇ ಸಖಿ, ಮುಂತಾದ ವಿಭಾಗಗಳು ಇರುತ್ತದೆ ಎಂದರು.
ಇದರಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳ ಭಾಗವಹಿಸುವಿಕೆ ವಿಶೇಷವಾಗಿದೆ. ಉತ್ಸಾಹಿ ವಿದ್ಯಾರ್ಥಿಗಳು ಬಹಳಷ್ಟು ರೇಡಿಯೋ ಕಾರ್ಯಕ್ರಮಗಳ ಜೊತೆಗೆ ಸುಂದರ ಶೀರ್ಷಿಕೆ ಗೀತೆ ಒದಗಿಸಿದ್ದಾರೆ. ವಾರಕ್ಕೊಮ್ಮೆ ಪ್ರಸಾರಗೊಳ್ಳುವ ರೇಡಿಯೋ ನಾಟಕಕ್ಕೆ ಮುನ್ನುಡಿ ಬರೆದಿದ್ದಾರೆ ಎಂದರು.
ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಶುಭಕರಾಚಾರಿ, ಮಾ.13 ಬೆಳಿಗ್ಗೆ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲದ ಅಧ್ಯಕ್ಷ ಡಾ. ಎಚ್.ಎಸ್.ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ವರದರಾಯ ಪೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಭಂಡಾರ್ಕರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ 89.6 ಎಫ್.ಎಮ್ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ, ಕಾಲೇಜಿನ ಪತ್ರಿಕೋದ್ಯಮ ಮುಖ್ಯಸ್ಥೆ ಸುಮಲತಾ ಉಪಸ್ಥಿತರಿದ್ದರು.
ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ, ಅರ್ಚನೆ ನಿಲ್ಲಿಸಿ- ಬದಲಿಗೆ ‘ಸಂವಿಧಾನಕ್ಕೆ ತಲೆಬಾಗಿ’: ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಭಯ್ ಎಸ್. ಓಕಾ
ನವದೆಹಲಿ: ’ನ್ಯಾಯಾಲಯ-ಸಂಬಂಧಿತ ಕಾರ್ಯಕ್ರಮಗಳಲ್ಲಿ ಪೂಜಾ ಅರ್ಚನೆಗಳನ್ನು (ಹಿಂದೂ ಧಾರ್ಮಿಕ ಆಚರಣೆಗಳು) ನಿಲ್ಲಿಸಬೇಕ” ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಭಯ್ ಎಸ್. ಓಕಾ ಸಲಹೆ ನೀಡಿದರು. ಕಾರ್ಯಕ್ರಮಗಳನ್ನು ಪ್ರಾರಂಭಿಸುವ ಮೊದಲು ಸಂವಿಧಾನದ ಮುನ್ನುಡಿಯ ನಕಲಿಗೆ ನಮಸ್ಕರಿಸುವ ಮೂಲಕ ಜಾತ್ಯತೀತತೆಯನ್ನು ಉತ್ತೇಜಿಸಬೇಕು’ ಎಂದು ಸಲಹೆ ನೀಡಿರುವ ಕುರಿತು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
“ಕೆಲವೊಮ್ಮೆ ನ್ಯಾಯಾಧೀಶರು ಅಹಿತಕರ ವಿಷಯಗಳನ್ನು ಹೇಳಬೇಕಾಗುತ್ತದೆ. ನಾನು ಸ್ವಲ್ಪ ಅಹಿತಕರವಾದದ್ದನ್ನು ಹೇಳಲು ಹೊರಟಿದ್ದೇನೆ. ನ್ಯಾಯಾಲಯಗಳಲ್ಲಿನ ಕಾರ್ಯಕ್ರಮಗಳ ಸಮಯದಲ್ಲಿ ನಾವು ಪೂಜೆ-ಅರ್ಚನವನ್ನು ನಿಲ್ಲಿಸಬೇಕು ಎಂದು ನಾನು ಭಾವಿಸುತ್ತೇನೆ. ಬದಲಾಗಿ, ನಾವು ಸಂವಿಧಾನದ ಪೀಠಿಕೆಯ ಚಿತ್ರವನ್ನು ಇಟ್ಟುಕೊಳ್ಳಬೇಕು ಮತ್ತು ಕಾರ್ಯಕ್ರಮವನ್ನು ಪ್ರಾರಂಭಿಸಲು ಅದಕ್ಕೆ ತಲೆಬಾಗಬೇಕು ”ಎಂದು ನ್ಯಾಯಮೂರ್ತಿ ಓಕಾ ಅವರು ಮಾರ್ಚ್ 3 ರಂದು ಪುಣೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ ಅವರು ಮಾಡಿದ ಪ್ರಯತ್ನಗಳನ್ನು ಒತ್ತಿಹೇಳಿದ ನ್ಯಾಯಮೂರ್ತಿ ಓಕಾ ಅವರು, “ನಾನು ಕರ್ನಾಟಕದಲ್ಲಿದ್ದಾಗ, ನಾನು ಅಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಕಡಿಮೆ ಮಾಡಲು ಹಲವು ಬಾರಿ ಪ್ರಯತ್ನಿಸಿದೆ ಆದರೆ ಅವುಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ನನಗೆ ಸಾಧ್ಯವಾಗಲಿಲ್ಲ. ಆದರೆ 75 ವರ್ಷಗಳನ್ನು ಪೂರ್ಣಗೊಳಿಸಿರುವ ಈ ಸಂದರ್ಭದಲ್ಲಿ ಜಾತ್ಯತೀತತೆಯನ್ನು ಮುನ್ನಡೆಸಲು ನಮಗೆ ಇದು ಉತ್ತಮ ಸಂದರ್ಭವಾಗಿದೆ ಎಂದಿದ್ದಾರೆ.
ದೇಶವನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದು ನೀರಿನ ಸಮಸ್ಯೆ:ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ
ಶ್ರೀನಿವಾಸಪುರ : ದೇಶವನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದು ನೀರಿನ ಸಮಸ್ಯೆ . ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹಲವು ಕಡೆ ಶುದ್ಧವಾದ ಕುಡಿಯುವ ನೀರನ್ನು ಪಡೆಯುವದಕ್ಕೆ ಪರದಾಡುವಂತಹ ಪರಿಸ್ಥಿತಿ ಇದೆ. ಇಂತಹ ಸಮಸ್ಯೆಯಿಂದ ಜನರನ್ನು ಹೊರ ತರುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷೆಯ ಯೋಜನೆಯೇ ಜಲ ಜೀವನ್ ಮಿಷನ್ ಯೋಜನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲೂಕಿನ ಯಲ್ದೂರು ಗ್ರಾಮದಲ್ಲಿ 264 ಲಕ್ಷ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಕಾರ್ಯಕ್ರಮವನ್ನು ಗುರುವಾರ ಚಾಲನೆ ನೀಡಿ ಮಾತನಾಡಿದರು.
ನೀರಿನ ಮಾಲಿನ್ಯವನ್ನು ತಡೆಗಟ್ಟುವ ಕಡೆ ನಾವೆಲ್ಲರೂ ಗಮನಹರಿಸಬೇಕು. ಇಲ್ಲದಿದ್ದರೆ ಭೂಮಿಯ ಮೇಲೆ ಜೀವಿಗಳು ಬದುಕುಳಿಯುವುದು ಅಸಾಧ್ಯವಾಗುತ್ತದೆ. ನೀರಿನ ಅಭಾವವನ್ನು ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ನೀರಿನ ಸಂರಕ್ಷಣೆ. ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ , ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ ನೀರಿನ ಸಂರಕ್ಷಣೆ ಆದ್ದರಿಂದ ನಾವೆಲ್ಲರೂ ಸೇರಿ ನೀರ ಮೂಲಗಳನ್ನು ಸಂರಕ್ಷಣೆ ಮಾಡಬೇಕು ಎಂದರು.
ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ವೇಗವಾಗಿ ಕೆಲಸ ಮಾಡಿ ಎಂದು ಗುತ್ತಿಗೆದಾರರಿಗೆ ಹಾಗು ಇದಕ್ಕೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಜಲ ಜೀವನ್ ಮಿಷನ್ ಯೋಜನೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದೇ ಸಮಯದಲ್ಲಿ ತಾಲೂಕಿನ ನಂಬಿಹಳ್ಳಿ 111 .25 ಲಕ್ಷ, ಚಲ್ದಿಗಾನಹಳ್ಳಿ 124.50 ಲಕ್ಷ , ಗಾಂಡ್ಲಹಳ್ಳಿ 108 ಲಕ್ಷ, ಲಕ್ಷ್ಮೀಸಾಗರ 133ಲಕ್ಷ, ನಾರಾಯಣಪುರ 55.53 ಲಕ್ಷ ಜಲ ಜೀವನ್ ಮಿಷನ್ ಕಾಮಗಾರಿಗೆ ಚಾಲನೆ ನೀಡಿದರು.
ಜಿ.ಪಂ. ಮಾಜಿ ಸದಸ್ಯ ಇಂದಿರಾ ಭವನ್ ರಾಜಣ್ಣ, ತಾ.ಪಂ.ಮಾಜಿಸದಸ್ಯ ಗೊಟ್ಟಿಕುಂಟೆ ಕೃಷ್ಣಾರೆಡ್ಡಿ, ಮುಖಂಡರಾದ ಶೇಷಾಪುರ ಗೋಪಾಲ್, ಕಾಡುದೇವಂಡಹಳ್ಳಿ ರಾಮಂದ್ರೇಗೌಡ, ರಘು, ಷಾವಲ್ಲಿ, ಯಲ್ದೂರು ಮಣಿ, ಮಂಜುಲ ನಗರ ರಘು, ಆರ್ಐ ಜರ್ನಾಧನ್, ಪಿಡಿಒ ಮಂಜುನಾಥಸ್ವಾಮಿ, ಗುತ್ತಿಗೆದಾರರಾದ ಮೋಹನ್, ರವಿಕುಮಾರ್, ಇಂಜಿನೀಯರ್ ಶಿವಕುಮಾರ್ ಇದ್ದರು.
ಶ್ರೀನಿವಾಸಪುರ: ವಿವಿಧ ಕನ್ನಡ ಪರ ಸಂಘನೆಗಳಿಂದ 60% ಕನ್ನಡ ಭಾಷೆ ನಾಮಫಲಕಗಳ ಕಡ್ಡಾಯವಾಗಿ ಜಾರಿಗೊಳಿಸುವಂತೆ ಆದೇಶಿಸಲು ತಹಶೀಲ್ದಾರ್ ಜಿ.ಎಸ್.ಸುದೀಂದ್ರ ರವರಿಗೆ ಮನವಿ
ಶ್ರೀನಿವಾಸಪುರ 1 : ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಗುರುವಾರ ವಿವಿಧ ಕನ್ನಡ ಪರ ಸಂಘನೆಗಳಿಂದ 60% ಕನ್ನಡ ಭಾಷೆ ನಾಮಫಲಕಗಳ ಕಡ್ಡಾಯವಾಗಿ ಜಾರಿಗೊಳಿಸುವಂತೆ ಆದೇಶಿಸಲು ತಹಶೀಲ್ದಾರ್ ಜಿ.ಎಸ್.ಸುದೀಂದ್ರ ರವರಿಗೆ ಮನವಿ ಪತ್ರ ನೀಡಿದರು.
ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಸ್. ಜಗದೀಶ್ ಮಾತನಾಡಿ ರಾಜ್ಯ ಗಡಿ ತಾಲೂಕು ಆದ ಶ್ರೀನಿವಾಸಪುರ ತಾಲೂಕೆಗೆ ಸಂಬಂದಿಸಿದಂತೆ ಹಲವಾರು ಖಾಸಗಿ ಸಂಸ್ಥೆಗಳು ಹಾಗು ವಾಣಿಜ್ಯ ಮಳಿಗೆಗಳು ಇದ್ದು ಅವುಗಳ ಮೇಲೆ ಕನ್ನಡ ಭಾಷೆ ಬಿಟ್ಟು ಇತರೆ ಭಾಷೆಗಳಲ್ಲಿ ನಾಮಫಲಕಗಳು ಇದ್ದು, ಸರ್ಕಾರದ ಆದೇಶದಂತೆ ಮಾತೃ ಭಾಷೆ ಕನ್ನಡ 60% ಕಡ್ಡಾಯವಾಗಿ ಬಳಸುವಂತೆ ಆದೇಶ ಮಾಡಿದರು, ಸಹ ಇದುವರೆಗೂ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ನವ ಕರ್ನಾಟಕ ಸ್ವಾಭಿಮಾನ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾದಿಕ್ಅಹಮ್ಮದ್ ಮಾತನಾಡಿ ತಹಶೀಲ್ದಾರ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ, ಪುರಸೆಭೆ ಮುಖ್ಯಾಧಿಕಾರಿ ಕನ್ನಡ ಭಾಷೆ ನಾಮಫಲಕಗಳ 60% ಕಡ್ಡಾಯವಾಗಿ ಜಾರಿಗೊಳಿಸುವಂತೆ ಖಾಸಗಿ ಸಂಸ್ಥೆಗಳಿಗೆ ಹಾಗು ವಾಣಿಜ್ಯ ಮಳಿಗೆಗಳಿಗೆ ಆದೇಶ ನೀಡಬೇಕು. ಇಲ್ಲದ ಪಕ್ಷದಲ್ಲಿ ಕನ್ನಡ ಪರ ಸಂಘನೆಗಳು ಸೇರಿ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಇದಕ್ಕೆ ಅಧಿಕಾರಿಗಳೇ ಆಗುವ ಅನಾಹುತಗಳಿಗೆ ನೇರೆ ಹೊಣೆಗಾರರು ಎಂದು ಎಚ್ಚರಿಸಿದರು.
ಇದೇ ಸಮಯದಲ್ಲಿ ಪುರಸಭೆ ಕಛೇರಿ ಮುಂಭಾಗದಲ್ಲಿ ಪುರಸಭೆ ಮುಖ್ಯಾಧಿಕಾರಿರವರಿಗೂ 60% ಕನ್ನಡ ಭಾಷೆ ನಾಮಫಲಕಗಳನ್ನು ಕಡ್ಡಾಯಗೊಳಿಸುವಂತೆ ಮನವಿ ಪತ್ರ ನೀಡಿದರು.
ಕಸ್ತೂರಿ ಕನ್ನಡ ವೇದಿಕೆ ಯುವ ಘಟಕದ ರಾಜ್ಯಾಧ್ಯಕ್ಷ ವಿ.ಸುಬ್ರಮಣಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ವಿ.ಸುಗ್ರೀವ, ಸಿ.ನಾಗರಾರ್ಜುನರೆಡ್ಡಿ, ವಿ.ಅನಂದ, ಜಿ.ಶ್ರೀನಿವಾಸಪ್ಪ, ಕೃಷ್ಣಪ್ಪ, ವೆಂಕಟೇಶ್, ರಾಜೇಶ್, ಕೆ.ನಾಗರಾಜ್, ವಿ.ಶ್ರೀನಿವಾರೆಡ್ಡಿ, ಎಚ್.ಎಂ.ಅರುಣ್ಕುಮಾರ್, ವಿ.ರಾಮಾಂಜಿ ಇದ್ದರು.