ಕೋಲಾರ ಮಾ-2, ಲಕ್ಷಾಂತರ ರೂಪಾಯಿ ಶುಲ್ಕ ಪಡೆದು ನೀಟ್, ಸಿ.ಇಟಿ ತರಬೇತಿ ನೀಡುತ್ತೇವೆಂದು ವಿದ್ಯಾರ್ಥಿಗಳನ್ನು ವಂಚನೆ ಮಾಡುತ್ತಿರುವ ಆಕಾಶ್ ಬೈಜುಸ್ ಸಂಸ್ಥೆ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ನೊಂದಿರುವ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತ ಸಂಘದಿಂದ ಶಿಕ್ಷಣ ಸಂಸ್ಥೆ ಮುಂದೆ ಹೋರಾಟ ಮಾಡಿ ಆರಕ್ಷಕ ಉಪನಿರೀಕ್ಷಕರಾದ ಸಹೀದ್ ಅಹಮದ್ ಮುಖಾಂತರ ಜಿಲ್ಲಾಧಿಕರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಹೋರಾಟದ ಸ್ಥಳಕ್ಕೆ ಬಂದ ಶಿಕ್ಷಣ ಸಂಸ್ಥೆಯ ರಾಕೇಶ್, ರಾಜಗೋಪಾಲ್, ನೊಂದ ಪೋಷಕರ ಮನವೊಲಿಸಿ, ನಿಮ್ಮ ಮಕ್ಕಳಿಗೆ ಬುಧವಾರದ ಒಳಗೆ ನ್ಯಾಯ ದೊರೆಕಿಸಿಕೊಟ್ಟು ತರಗತಿಗಳನ್ನು ಆರಂಭ ಮಾಡಿ ಉತ್ತಮ ಫಲಿತಾಂಶ ಕೊಡುವ ಭರವಸೆ ನೀಡಿದರು.
ಅಲ್ಲಿಗೂ ತಣ್ಣಗಾಗದ ಪೋಷಕರು ಆಕ್ರೋಶ ವ್ಯಕ್ತಪಡಿಸಿ ನಿಮ್ಮ ಸಮಯಾವಕಾಶ ಬೇಕಾಗಿಲ್ಲ. ನಮ್ಮ ಮಕ್ಕಳಿಗೆ ನ್ಯಾಯ ಕೊಡಿಸಿ ಎಂದು ತಿರುಗಿಬಿದ್ದಾಗ ಸ್ಥಳದಲ್ಲಿದ್ದ ಪೊಲೀಸರು ಮನವೊಲಿಸಿ ಶಾಂತಿಯುತ ಮಾತುಕತೆಗೆ ಅವಕಾಶ ಮಾಡಿಕೊಟ್ಟರು.
ಶಿಕ್ಷಣ ವ್ಯವಸ್ಥೆ ವ್ಯಾಪಾರದ ಕಾರ್ಪೊರೇಟ್ ಕಂಪನಿಗಳ ಕಪಿ ಮುಷ್ಟಿಯಲ್ಲಿ ಸಿಲುಕಿ ಕೋಟ್ಯಾಂತರ ಪೋಷಕರ ಕನಸು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟ ವಾಡುತ್ತಿದ್ದರು ಶಿಕ್ಷಣ ವ್ಯವಸ್ಥೆ ಹಾಗೂ ಕಾರ್ಪೋರೇಟ್ ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ತರಬೇತಿ ನೀಡುವ ಪರವಾನಿಗೆ ಇಲ್ಲದ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಶಿಕ್ಷಣ ಸಚಿವರು ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಶಾಲಾ ಕಾಲೇಜುಗಳು ಪ್ರಥಮ ಮತ್ತು ದ್ವಿತೀಯ ಪಿಯುಸಿ (ವಿಜ್ಞಾನ) ತರಗತಿಗಳಿಗೆ ಹಾಜರಾತಿ ದಾಖಲು ಮಾಡಿಕೊಳ್ಳುವಾಗ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಶಾಲೆಗೆ ಸೇರಿಸಿ ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕನಸನ್ನು ನನಸು ಮಾಡಲು ನೀಟ್, ಸಿಇಟಿ ವೃತ್ತಿಪರ ಕೋರ್ಸುಗಳಿಗೆ ಉಚಿತವಾಗಿ ತರಬೇತಿ ನೀಡುತ್ತೇವೆಂದು ದಾಖಲು ಮಾಡಿಕೊಂಡು ಆ ನಂತರ ಯಾವುದೇ ತರಬೇತಿ ಇಲ್ಲದೆ ವಂಚನೆ ಮಾಡುವ ಕಾಲೇಜುಗಳ ಹಗಲು ದರೋಡೆಗೆ ಕಡಿವಾಣ ಹಾಕುವಲ್ಲಿ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.
ಲಕ್ಷಾಂತರ ರೂಪಾಯಿ ಡೊಣೇಷನ್ ನೀಡಿ ಹಾಜರಾತಿ ಮಾಡಿದ ನಂತರ ಮಕ್ಕಳ ಕನಸು ನನಸು ಮಾಡಲು ಉತ್ತಮ ತರಬೇತಿ ಪಡೆಯಲು ಮತ್ತೆ ಆಕಾಶ್ ಬೈಜುನ್ ಮತ್ತಿತರ ನೂರೊಂದು ಪರವಾನಿಗೆ ಇಲ್ಲದ ನಾಯಿಕೊಡೆಗಳಂತೆ ತೆಲೆ ಎತ್ತಿ ನಮ್ಮ ಸಂಸ್ಥೆ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಅತಿ ಬುದ್ದಿವಂತ ಶಿಕ್ಷಕರಿಂದ ನೀಟ್ ಹಾಗೂ ಸಿ.ಇಟಿಗೆ ತರಬೇತಿ ನೀಡಿ ಉಚಿತವಾಗಿ ಡಾಕ್ಟರ್ ಇಂಜಿನಿಯರ್, ಕೋರ್ಸುಗಳನ್ನು ಪಡೆಯಬಹುದೆ ಎಂದು ಆಸೆ ಹುಟ್ಟಿಸಿ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡಿ ತಮ್ಮ ನಿರೀಕ್ಷೆಗೆ ತಕ್ಕ ಹಾಜರಾತಿ ಆಗಿಲ್ಲವೆಂಬ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳಿಗೆ ತರಬೇತಿ ನೀಡದೆ ವಂಚನೆ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ಕೂಲಿ ಮಾಡುವ ಪೋಷಕರು ಸಾಲ ಮಾಡಿ ಪಾವತಿಸಿರುವ ಶುಲ್ಕಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.
ನೊಂದ ಪೋಷಕರಾದ ಮಹೇಶ್, ಹಾಗೂ ವೆಂಕಟೇಶಪ್ಪ ಮಾತನಾಡಿ ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕಾಲೇಜಿನ ಆಡಳಿತ ಮಂಡಳಿಯ ಮಾತು ಕೇಳಿ ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆಗೆ ನೀಟ್ ಹಾಗೂ ಸಿ.ಇಟಿ ತರಬೇತಿ ಪಡೆಯಲು ದಾಖಲು ಮಾಡಿ ಲಕ್ಷ ರೂಪಾಯಿ ಶುಲ್ಕ ಪಾವತಿಸಿ 6 ತಿಂಗಳ ಕೆಳೆದರು ಇದುವರೆವಿಗೂ ಯಾವುದೇ ತರಗತಿ ಪ್ರಾರಂಭ ಮಾಡದೆ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟ ವಾಡುತ್ತಿದ್ದಾರೆ. ಕೇಳಿದರೆ ದೌರ್ಜನ್ಯ ಮಾಡುವ ಜೊತೆಗೆ ನಿಮ್ಮ ಮಕ್ಕಳನ್ನು ನಮ್ಮ ಸಂಸ್ಥೆಗೆ ಸೇರಿಸಿ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿಲ್ಲ. ನೀವು ನಿಮ್ಮ ಕಾಲೇಜಿನ ಆಡಳಿತ ಮಂಡಳಿಯನ್ನು ಕೇಳಿಕೊಳ್ಳಿ ಎಂದು ದಬ್ಬಾಳಿಕೆ ಮಾಡುತ್ತಾರೆಂದು ಅಳಲು ತೋಡಿಕೊಂಡರು.
ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯನ್ನು ಕೇಳಿದರೆ ನಮಗೆ ನಿರೀಕ್ಷಿತ ಮಟ್ಟದಲ್ಲಿ ಹಾಜರಾತಿಯಾಗಿಲ್ಲ ಇರುವ 50 ಜನರಿಗೆ ಲಕ್ಷಾಂತರ ರೂಪಾಯಿ ಬಾಡಿಗೆ ಕೊಟ್ಟು ತರಗತಿ ನಡೆಸಲು ಸಾಧ್ಯವಿಲ್ಲ. ನಿಮ್ಮ ಮಕ್ಕಳಿಗೆ ತರಬೇತಿ ಬೇಕಾದರೆ ಬೆಂಗಳೂರಿಗೆ ಕಳುಹಿಸಿಕೊಡಿ ಎಂದು ಹೇಳುತ್ತಾರೆ. ಒಂದು ಕಡೆ ಹಣವು ಇಲ್ಲ ಮತ್ತೊಂದು ಕಡೆ ಮಕ್ಕಳಿಗೆ ತರಬೇತಿ ಇಲ್ಲದೆ, ಪರದಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತ ಮುಂದೆ ಬಂದು ನೊಂದ ರೈತ ಕೂಲಿ ಕಾರ್ಮಿಕರ ಮಕ್ಕಳಿಗೆ ನ್ಯಾಯ ಕೊಡಿಸಬೇಕು. ಇಲ್ಲವಾದರೆ ಭವಿಷ್ಯ ರೂಪಿಸಿಕೊಳ್ಳದ ನೂರಾರು ವಿದ್ಯಾರ್ಥಿಗಳು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುವ ನೋವಿನಲ್ಲಿ ಆತ್ಮಹತ್ಯೆಗಳು ನಡೆದುಹೋಗುವ ಮೊದಲು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಕ್ರಮ ವಹಿಸಿ ಒಂದು ವೇಳೆ ವಿದ್ಯಾರ್ಥಿಗಳಿಗೆ ತರಬೇತಿ ನೀಡದೇ ಇದ್ದರೆ, ಆಕಾಶ್ ಬೈಜುನ್ ಶಿಕ್ಷಣ ಸಂಸ್ಥೆ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡುವ ಭರವಸೆಯನ್ನು ನೀಡಿದರು.
ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಮುದುವಾಡಿ ಚಂದ್ರಪ್ಪ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ನೂರಾರು ಪೋಷಕರು, ವಿದ್ಯಾರ್ಥಿಗಳು, ಹಾಜರಿದ್ದರು.
Month: March 2024
Sad Demise – Mr.Johnson DAlmeida Herikudru, St Sebastian ward,Kundapur
Mr.Johnson DAlmeida Herikudru, St Sebastian ward
H/O Shanthi Dalmeida
S/o Late Philiph and Gracy Dalmeida
F/o Jeneecia and Jerald Roshan
passed away (2-3-2024)
Funeral rites will take place tomorrow on March 4- Monday at 3:30 p.m. at his residence and thereafter mass at 4:00 p.m. at Holy Rosary Church, Kundapur.
Contact no: 7624860972
ಶ್ರೀನಿವಾಸಪುರದಲ್ಲಿ ಸಂವಿಧಾನ ಜಾಥಾ
ಕೋಲಾರ / 01 ಮಾರ್ಚ್ : ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳನ್ನು ನೀಡಿದೆ. ಜಾತಿ, ಧರ್ಮಕ್ಕೆ ಸೀಮಿತವಾಗಿರದೆ ಭಾರತದ ಪ್ರಜೆಗಳಾದ ನಾವು ಯಾವುದೇ ವರ್ಣಬೇದ ಇಲ್ಲದೆ ಸಮಾನ ಹಕ್ಕುಗಳನ್ನು ನೀಡಿದೆ. ದೇಶದ ಮೊದಲ ಪ್ರಜೆ ರಾಷ್ಟ್ರಪತಿಗಳಿಂದ ಹಿಡಿದು ಸಾಮಾನ್ಯ ಪ್ರಜೆಗೂ ಸಮಾನ ಅವಕಾಶಗಳನ್ನು ಸಂವಿಧಾನವು ಕಲ್ಪಿಸಿಕೊಟ್ಟಿದೆ ಎಂದು ಶ್ರೀನಿವಾಸಪುರ ಶಾಸಕರಾದ ವೆಂಕಟಶಿವಾರೆಡ್ಡಿ ರವರು ತಿಳಿಸಿದರು.
ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆÉ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶ್ರೀನಿವಾಸಪುರ ನಗರದ ಪ್ರಮುಖ ಬೀದಿಗಳಲ್ಲಿ ಸ್ತಬ್ಧ ಚಿತ್ರದ ಮೆರವಣಿಗೆ ನಡೆಯಿತು. ಮೆರವಣಿಗೆಯ ಜೊತೆಗೆ ಕಲಾವಿದರು ಸಂವಿಧಾ£ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಜಾಗೃತಿ ಗೀತೆಗಳನ್ನು ಹಾಡುವ ಮೂಲಕ ಹಾಡುಗಳಲ್ಲಿ ಜಾಗೃತಿ ಮೂಡಿಸಿದರು.
ಕಲಾವಿದರಾದ ಈನೆಲ ಈಜಲ ವೆಂಕಟಾಚಲಪತಿ, ಜನಪದ ಗಾಯಕಿ ಜ್ಯೋತಿ, ಮೂರಂಡಹಳ್ಳಿ ಚಿಕ್ಕರೆಡ್ಡೆಪ್ಪ, ಬಂಗಾರಪೇಟೆ ಬಸಪ್ಪ ಹಾಜರಿದ್ದರು.
ನಾವೆಲ್ಲರೂ ಸೇರಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಶೈಕಣಿಕವಾಗಿ ಬಲಗೊಳಿಸಬೇಕು : ತಹಶೀಲ್ದಾರ್ ಜಿ.ಎನ್. ಸುದೀಂದ್ರ ಶಿಕ್ಷಕರಿಗೆ ಕರೆ
ಶ್ರೀನಿವಾಸಪುರ : ನಾವೆಲ್ಲರೂ ಸೇರಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಶೈಕಣಿಕವಾಗಿ ಬಲಗೊಳಿಸಬೇಕು ಎಂದು ತಹಶೀಲ್ದಾರ್ ಜಿ.ಎನ್. ಸುದೀಂದ್ರ ಶಿಕ್ಷಕರಿಗೆ ಕರೆ ನೀಡಿದರು.
ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವದ ಕಾರ್ಯಕ್ರಮವನ್ನು ಸಂಜೆ ಉದ್ಗಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಹಾಗು ಶಿಕ್ಷಕ ಒಂದೇ ನಾಣ್ಯದ ಎರಡು ಮುಖಗಳಂತೆ , ವಿದ್ಯಾರ್ಥಿಗೆ ಕಲಿಯುವ ಆಸಕ್ತಿ ಇರಬೇಕು .
ಶಿಕ್ಷಕನಿಕೆ ಕಲಿಸುವ ಆಸಕ್ತಿ ಇರಬೇಕು ಗುರು ಶಿಷ್ಯರ ಭಾಂದವ್ಯ ಉತ್ತಮವಾಗಿದರೆ, ಏನು ಬೇಕಾದರೂ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ಶ್ರಮಪಟ್ಟು ವಿದ್ಯಾಭ್ಯಾಸ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಇಒ ಎಸ್.ಶಿವಕುಮಾರಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳಿಸುವುದು ಕಷ್ಟ . ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ನಿರ್ಧಿಷ್ಟ ಗುರಿಯೊಂದಿಗೆ ಶ್ರದ್ಧೆಯಿಂದ ಶಿಕ್ಷಕರು ಭೋದಿಸುಂತಹ ಪಾಠಪ್ರವಚನಗಳನ್ನು ಆಲಿಸಿ ಜೀವನದ ಗುರಿಯನ್ನ ಸಾಧಿಸಿ ಎಂದು ಸಲಹೆ ನೀಡಿದರು.
ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಮುನಿಲಕ್ಷ್ಮಿಯ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇದ್ದು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸಿ ಸರ್ಕಾರವು ನೀಡುವಂತಹ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಉರ್ದು ಶಿಕ್ಷಕರ ಸಂಘ ಮಾಜಿ ಅಧ್ಯಕ್ಷ ಶೇಕ್ ಫಯಾಜ್ಉದ್ದೀನ್ ಮಾತನಾಡಿದರು.
ಎಪಿಜಿ ಅಬ್ದುಲ್ಕಲಾಂ ಟ್ರಸ್ಟ್ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು .
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗುಂಡ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು. ಬಿಆರ್ಸಿ ಕೆಸಿ ವಸಂತ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನಾ, ಇಸಿಒ ಸಿರಾಜ್, ಪುರಸಭೆ ಸದಸ್ಯ ತಜಮುಲ್, ಸಿಆರ್ಪಿಗಳಾದ ಆರೀಫ್, ಅಸ್ಮದ್ಖಾನ್, ಎಪಿಜಿ ಅಬ್ದುಲ್ಕಲಾಂ ಟ್ರಸ್ಟ್ನ ಅಧ್ಯಕ್ಷ ಅಬ್ದುಲ್ ಮಜೀದ್, ಉಪಾಧ್ಯಕ್ಷ ಇಲಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಖಜಾಂಚಿ ಇದಾಯಿತ್ ಅಹಮ್ಮದ್, ಸಂಘನಾಕಾರ್ಯದರ್ಶಿ ಇಂತೀಯಾಜ್, ಸದಸ್ಯ ಅಲ್ಲಾಬಕಾಶ್, ಎಸ್ಡಿಎಂಸಿ ಅಧ್ಯಕ್ಷ ಇದಾಯಿತ್ಉಲ್ಲಾಖಾನ್, ಮುಖ್ಯ ಶಿಕ್ಷಕ ಸಾದಿಕ್ಪಾಷ, ಶಿಕ್ಷಕರಾದ ರೀಯಾಜಾ ಖಾನಂ, ನೂರುನ್ನಿಸಾ, ಅಸ್ಮತ್ಸುಲ್ತಾನ್, ಭಾರತಮ್ಮ, ಅಮ್ಮಜಾನ್ ಇದ್ದರು.
ಈ ಸಂದರ್ಭದಲ್ಲಿ ಎ.ಪಿ.ಜೆ. ಅಬ್ದುಲ್ ಕಲಾಂ ಟ್ರಸ್ಟ್ ನ ಪ್ರಧಾಧಿಕಾರಿಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಎಚ್. ಎಮ್.ಎಮ್ , ವಿ.ಕೆ.ಆರ್ ಶಾಲೆಗಳಲ್ಲಿ ನೇತ್ರ ತಪಾಸಣಾ ಶಿಬಿರ
ಕುಂದಾಪುರ ( ಮಾ 1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ , ವಿ.ಕೆ.ಆರ್ ಶಾಲೆಗಳಲ್ಲಿ ನೇತ್ರಶಾಸ್ತ್ರ ವಿಭಾಗ ಕೆ ಎಂ ಸಿ, ಮಣಿಪಾಲ ವತಿಯಿಂದ ಮಾರ್ಚ್ 1 ರಂದು ಶಾಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗಾಗಿ ಒಂದು ದಿನದ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಣ್ಣಿನ ರಕ್ಷಣೆಯ ಕುರಿತಾಗಿ ಮಾತನಾಡಿದರು. ಕೆ ಎಂ ಸಿ ಮಣಿಪಾಲ ನೇತ್ರತಜ್ಞೆ ಡಾ. ಶ್ರುತಿ ಅವರು ಕಣ್ಣಿನ ಆರೋಗ್ಯದ ಮಹತ್ವವನ್ನು ವಿವರಿಸಿದರು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಲ್ಲಾ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಅಕಾಡೆಮಿಕ್ ಕೋ ಆರ್ಡಿನೇಟರ್ ಉಪಸ್ಥಿತರಿದ್ದರು. ಕಚೇರಿ ಸಿಬ್ಬಂದಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.
ಮಣೇಲಾ ಕ್ರೈಸ್ಟ್ ಕಿಂಗ್ ಧರ್ಮಕೇಂದ್ರದ ವ್ಯಾಪ್ತಿಯಲ್ಲಿ ವ್ರದ್ದ ದಂಪತಿಗಳ ಮೇಲೆ ಹಲ್ಲೆ ನೆಡೆಸಿದ ಧರ್ಮಗುರುವನ್ನು ವಜಾ ಮಾಡಲಾಗಿದೆ
ಮಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಮಣೆಲ, ಪೆರಿಯಾಲ್ತಡ್ಕ. ಕ್ರೈಸ್ಟ್ ಕಿಂಗ್ ಧರ್ಮಕೇಂದ್ರದ ವ್ಯಾಪ್ತಿಯಲ್ಲಿ ನಡೆದ ಒರ್ವ ಧರ್ಮಗುರು ವ್ರದ್ದ ದಂಪತಿಗಳ ಮೇಲೆ ನೆಡೆಸಿದ ಹಲ್ಲೆಯಿಂದ ಮಂಗಳೂರು ಧರ್ಮಪ್ರಾಂತ್ಯವು ತೀವ್ರ ದುಃಖಿತವಾಗಿದೆ. ಅದಕ್ಕಾಗಿ ನಾವು ಪ್ರಮಾಣಿಕವಾಗಿ ವಿಷಾದಿಸುತ್ತೇವೆ
29ನೇ ಫೆಬ್ರವರಿ 2024 ರಂದು ಸಂಭವಿಸಿದೆ, ಇದು ಒಳಗೊಂಡಿರುವವರಿಗೆ ಮತ್ತು ದೊಡ್ಡ ಪ್ರಮಾಣದಲ್ಲಿ ಜನರಿಗೆ ನೋವುಂಟು ಮಾಡಿದೆ.
ದೇಶದ ಕಾನೂನು ಮತ್ತು ಸುವ್ಯವಸ್ಥೆಯ ವ್ಯಾಪ್ತಿಗೆ ಒಳಪಟ್ಟಂತೆ, ಡಯಾಸಿಸ್ ಕಾನೂನು ಜಾರಿಗೊಳಿಸುವ ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸಿ. ಆರಂಭಿಸಿದ ವಿಚಾರಣೆಯ ಹೊರತಾಗಿ ಸರ್ಕಾರಿ ಇಲಾಖೆಗಳು, ಡಯಾಸಿಸ್ ಸಹ ಸ್ಥಾಪಿಸಲು ಅಂಗೀಕೃತ ವಿಚಾರಣೆಗಳನ್ನು ಪ್ರಾರಂಭಿಸುತ್ತದೆ ನ್ಯಾಯಯುತ ಮತ್ತು ನ್ಯಾಯಯುತವಾಗಿ ಸಾಕಷ್ಟು ಭವಿಷ್ಯದ ಕ್ರಮವನ್ನು ತೆಗೆದುಕೊಳ್ಳಲು ಸತ್ಯಗಳ ಸತ್ಯ
ರೀತಿಯಲ್ಲಿ. ತಕ್ಷಣದ ಪ್ರತಿಕ್ರಿಯೆಯಾಗಿ, ಸಂಬಂಧಪಟ್ಟ, ಧರ್ಮಗುರುವನ್ನು, ಅವರ ಯಾಜಕತ್ವದಿಂದ ಧಾರ್ಮಿಕತೆಯಿಂದ ತೆಗೆದುಹಾಕಲಾಗುತ್ತದೆ, ಕ್ರೈಸ್ಟ್ ದಿ ಕಿಂಗ್ ಚರ್ಚ್, ಮಣೆಲ, ಪೆರಿಯಾಲ್ತಡ್ಕ ಮತ್ತು ಬೇರೆಯವರಲ್ಲಿ ಸೇವೆ ಜನರ ಆಧ್ಯಾತ್ಮಿಕ ಅಗತ್ಯಗಳನ್ನು ಪೂರೈಸಲು ಇತರ ಧರ್ಮಗುರುವನ್ನು ನಿಯೋಜಿಸಲಾಗಿದೆ್’ ಎಂದು ಮಂಗಳೂರು ಧರ್ಮಪ್ರಾಂತ್ಯದ ಪಿ.ಅರ್.ಒ. ಫಾ|ಜೆ.ಬಿಸಲ್ಡಾನ್ಹಾ ಮತ್ತು ರೊನಾಲ್ಡ್ ಕಾಸ್ತೇಲಿನೊ ಮಾದ್ಯಮಕ್ಕೆ ತಿಳಿಸಿದ್ದಾರೆ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಇಂಟೆಲಿಜೆನ್ಸ್ ತಂಡ ವಶ
ಬೆಂಗಳೂರು: ಕುಂದಲಹಳ್ಳ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಇಂಟೆಲಿಜೆನ್ಸ್ ತಂಡ ವಶಕ್ಕೆ
ಪಡೆದಿದೆ. ಈ ಶಂಕಿತ ಸೇರಿ ಇನ್ನು ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ದೃಶ್ಯದಲ್ಲಿ ಸೆರೆಯಾದಂತೆ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಟೋಪಿ ಹಾಕಿ ಕೊಂಡಿದ್ದ ವ್ಯಕ್ತಿಯೇ ಶಂಕಿತನೆಂದು ಪತ್ತೆ ಹಚ್ಚಲಾಗಿದೆ. ಘಟನೆಗೆ
ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಇಂಟೆಲಿಜೆನ್ಸ್ ತಂಡ ವಶಕ್ಕೆ ಪಡೆದುಕೊಂಡಿದೆ. ಶಂಕಿತ ಆರೋಪಿಗಳು ಇದನ್ನೆಲ್ಲ ಏಕೆ ಮಾಡಿದ್ದಾರೆ ಎಂದು. ವಿಚಾರಣೆ ನಂತರ ತಿಳಿದು ಬರಲಿದೆ.
ದೂರುದಾರ ರಾಜೇಶ್ ಅವರು ಕೆಫೆಯ ಬೆಸಿನ್ ಬಳಿ ಆರೋಪಿ. ಬ್ಯಾಗ್ ಇಡೋದನ್ನ ಗಮನಿಸಿದ್ದರು. ಹೋಟೆಲ್ಗೆ ಬಂದವನೇ ಆತುರ ಆತುರವಾಗಿ 1130ಗೆ ರವೆ ಇಡ್ಲಿ ತಿಂದು ಬ್ಯಾಗ್ ಇಟ್ಟು ಹೋಗಿದ್ದಾನೆ. ಹೀಗಾಗಿ ರಾಜೇಶ್ ಅವರೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಐಪಿಸಿ.ಸೆಕ್ಷನ್ 324 ಪ್ರಕಾರ ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯವನ್ನು ಉಂಟುಮಾಡುವುದು. 307 ಕೊಲೆ ಯತ್ನ,1208 ಕ್ರಿಮಿನಲ್ ಪಿತೂರಿಯಡಿ ಕೇಸ್ ದಾಖಲಾಗಿದೆ.
ಮಕ್ಕಳು ಬಾಲ ನಟ, ನಟಿಯಾಗಿ ನಟಿಸಲು ಅನುಮತಿ ಕಡ್ಡಾಯ – ಜಿಲ್ಲಾಧಿಕಾರಿ ಅಕ್ರಂ ಪಾಷ
ಕೋಲಾರ : ಕೋಲಾರ ಜಿಲ್ಲೆಯ ವ್ಯಾಪ್ತಿಗೆ ಸಂಬಂಧಿಸಿದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ/ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಇಚ್ಚಿಸಿದ್ದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕಾಗಿರುತ್ತದೆ.
ಬಾಲ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ/ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರಿಗೆ 06 ತಿಂಗಳಿಂದ 02 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.20,000/- ರಿಂದ ರೂ.50,000/-ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 01 ವರ್ಷದಿಂದ 03 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.
ಬಾಲ ಹಾಗೂ ಕಿಶೋರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (01) ಕಲಂ 3ರ ನಿಬಂಧನೆಗಳನ್ವಯ ಈ ಕೆಳಗಿನ ಪರಿಸ್ಥಿತಿಗಳಿಗೆ/ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಲು ಅನುಮತಿಸಬಹುದು.
ಬಾಲ ನಟ/ನಟಿಯಾಗಿ ನಟನಾ ಕೆಲಸ ಮಾಡಲು ಇರುವ ಕಾನೂನಾತ್ಮಕ ಅಂಶಗಳು- ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.
ಶ್ರವಣ ಮತ್ತು ದೃಶ್ಯ ಮಾದ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಢಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಈ ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ ‘ಸಿ’ ಯಲ್ಲಿ ಜಿಲ್ಲಾದಂಡಾಧಿಕಾರಿಗೆ ಮುಚ್ಚಳಿಗೆ ಪತ್ರ ಸಲ್ಲಿಸುವುದು ಮತ್ತು ಭಾಗವಹಿಸುವ ಮಕ್ಕಳ ಪಟ್ಟಿ ಪೋಷಕರ ಅಥವಾ ಪಾಲಕರ ಒಪ್ಪಿಗೆ ಪತ್ರ ಸಲ್ಲಿಸುವುದು.
ಮಗುವಿನ ಸಂರಕ್ಷತೆಗೆ ಸಂಬಂಧಿಸಿದಂತೆ, ನಿರ್ಮಾಪಕರ ಅಥವಾ ಸಮಾರಂಭದ ಆಯೋಜಕರ ಹೆಸರುಗಳನ್ನು ಒದಗಿಸುವುದು. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿರಬೇಕೆಂದು ಚಲನಚಿತ್ರಗಳ ಅಥವಾ ದೂರದರ್ಶನದ ಪ್ರದರ್ಶನದ ಹಕ್ಕು ನಿರಾಕರಣೆಗೆ ಒಳಪಟ್ಟಿದೆ ಎಂಬುದನ್ನು ನಿರ್ಮಾಪಕರಿಗೆ ಖಚಿತ ಪಡಿಸುವುದು.
ಮಕ್ಕಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಇಂಥದೊಂದು ನಿರ್ಧಾರ ಮಾಡಿದ್ದು, ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊರ್ಳಳಲು ಇಚ್ಚಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಜಿಲ್ಲಾಧಿಕಾರಿಗಳಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯ. ಮುಂದಿನ ದಿನಗಳಲ್ಲಿ ಮಕ್ಕಳನ್ನು ಚಿತ್ರಕತೆಗೆ ಜಿಲ್ಲಾಧಿಕಾರಿ ಅನುಮತಿ ಇಲ್ಲದೆ ಬಳಸಿಕೊಂಡಿದ್ದೇ ಆದಲ್ಲಿ ಕಾನೂನು ಉಲ್ಲಂಘನೆಯಾಗುತ್ತದೆ. ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರಾವಾಹಿ ಜವಾಬ್ದಾರಿ ಹೊತ್ತ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಶೇ 90 ರಷ್ಟು ಶಾಲೆಗಳು ಸೋರುತ್ತಿದೆ ಅದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರಣ ನಮ್ಮ ಕೆಲಸವೆಂದು ಸಾರ್ವಜನಿಕರು ಚಿನ್ನಾಗಿ ಕೆಲಸ ಮಾಡಿಸಿಕೊಳ್ಳಬೇಕು-ಜಿ.ಕೆ.ವೆಂಕಟಶಿವಾರೆಡ್ಡಿ
ಶ್ರೀನಿವಾಸಪುರ : ಜಿಲ್ಲೆಯಲ್ಲಿ 100 ಕ್ಕೆ ಶೇ 90 ರಷ್ಟು ಶಾಲೆಗಳು ಸೋರುತ್ತಿದೆ. ಅದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರಣ. ಗುಣಮಟ್ಟ ಕಾಯ್ದುಕೊಳ್ಳಲು ಗಮಹರಿಸದೆ ಇರುವುದೇ ಮುಖ್ಯಕಾರಣ. ಸರ್ಕಾರದ ಹಣ ಎಂದು ನಿರ್ಲಕ್ಷ್ಯ ವಹಿಸುತ್ತಿವೆ .ಹೀಗಾಗಿ ಗುಣಮಟ್ಟ ಕಾಯ್ದುಕೊಳ್ಳಲು ಪ್ರಯತ್ನಿಸಬೇಕು. ನಮ್ಮ ಕೆಲಸವೆಂದು ಸಾರ್ವಜನಿಕರು ಚಿನ್ನಾಗಿ ಕೆಲಸ ಮಾಡಿಸಿಕೊಳ್ಳಬೇಕು . ಸರ್ಕಾರಿ ಶಾಲೆಗಳ ಅಭಿವೃದ್ಧಿ ನಮ್ಮೆಲರ ಕರ್ತವ್ಯ ಇಲ್ಲದಿದ್ದರೆ ನಮ್ಮ ಮಕ್ಕಳಿಗೇ ತೊಂದರೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲೂಕಿನ ಚಿರುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ದಿ||ಶ್ರೀಮತಿ ಮುನಿಲಕ್ಷಮ್ಮ ಮತ್ತು ದಿ|| ತಾಚೇಗೌಡ ಜ್ಞಾಪಕಾರ್ತವಾಗಿ ದಾನಿಗಳಿಂದ ನಿರ್ಮಿಸಲಾದ ನೂತನ ಎರಡು ಶಾಲಾ ಕೊಠಡಿಗಳನ್ನು ಉದ್ಗಾಟಿಸಿ ಮಾತನಾಡಿದರು.
ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದೇನೆ. ಮುಳಬಾಗಿಲು ರಸ್ತೆಯಲ್ಲಿ ಹಾಗೂ ಮದನಪಲ್ಲಿ ರಸ್ತೆಯಲ್ಲಿ ಐದಾರು ಸಾವಿರ ಎಕರೆಯಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಿದ್ದು , ಮುಂದಿನ ಎರಡು ಮೂರು ವರ್ಷಗಳಲ್ಲಿ ಈ ಯೋಜನೆಯು ಕಾರ್ಯಗತವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ಐದಾರು ಸಾವಿರ ಎಕರೆಯಷ್ಟು ಕೈಗಾರಿಕ ವಲಯವನ್ನು ಸ್ಥಾಪಿಸಿ ನಿರುದ್ಯೋಗಸ್ಥರಿಗೆ ಉದ್ಯೋಗವನ್ನು ಕಲ್ಪಿಸುವ ಕನಸನ್ನು ಕಂಡಿದ್ದೇನೆ ಎಂದರು.
ನನ್ನನ್ನು ಐದು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದೀರಾ, ನಾನು ನಿಮ್ಮ ಸೇವಕನಾಗಿ ಹಗಲಿರಲು ದುಡಿಯಲು ಸಿದ್ದನಿದ್ದೇನೆ ನನ್ನ ಬಳಿ ಬಂದು ಕೆಲಸ ಮಾಡಿಸಿಕೊಳ್ಳಿ ಎಂದರು.
ದಾನಿ ನಿವೃತ್ತ ಮುಖ್ಯ ಅಭಿಯಂತರ ಟಿ.ಬಿಸ್ಸೇಗೌಡ ನಾನು ಇದೇ ಶಾಲೆಯಲ್ಲಿ 1965 ರಿಂದ 1969 ರ ವರೆಗೆ ಓದಿದ್ದೆ , ನನಗೆ ಸರ್ಕಾರಿ ನೌಕರಿ ಸಿಗಲು ಕಾರಣ ನನ್ನ ಊರು, ನನ್ನ ಶಾಲೆ ಎಂದರು. ಈ ಹಿಂದೆ ಜಿಲ್ಲೆಯಿಂದ ಕೆಎಎಸ್, ಐಎಎಸ್ ನಲ್ಲಿ ಹೆಚ್ಚು ಅಧಿಕಾರಿಗಳು ಇರುತ್ತಿದ್ದರು. ಆದರೆ ಈಗ ಕಡಿಮೆ ಆಗಿದೆ. ಇಂದು ಎಲ್ಲಾ ಸಾಮಾನ್ಯವಾಗಿ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಕಾನ್ವೆಂಟ್ಗೆ ಸೇರಿಸುತ್ತಿದ್ದಾರೆ ಆದರೆ ಸರ್ಕಾರಿ ಶಾಲೆಗಳಲ್ಲಿ ಸಿಗುವಷ್ಟು ಗುಣಮಟ್ಟದ ಶಿಕ್ಷಣ ಖಾಸಗಿ ಶಾಲೆಗಳಲ್ಲಿ ಸಿಗುವುದಿಲ್ಲ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಾಲತಿ ಮಾಡಲು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ, ಮಾವು ಮಂಡಲಿ ಮಾಜಿ ಅಧ್ಯಕ್ಷ ದಳಸನೂರು ಗೋಪಾಲಕೃಷ್ಣ ಮಾತನಾಡಿದರು. ಅಪರ ಜಿಲ್ಲಾ ವರಿಷ್ಟಾಧಿಕಾರಿ ಎಸ್.ಎಲ್.ಶಿವಶಂಕರ್, ತಹಶೀಲ್ದಾರ್ ಜಿ.ಎನ್.ಸುದೀಂದ್ರ, ವಸಂತಬಿಸ್ಸೇಗೌಡ, ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ, ಜಿ.ಪಂ.ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ಸುಲೋಚನ, ಕಟ್ಟಡ ನಿರ್ಮಾಣ ಮೇಲ್ವಿಚಾರಕ ಸಿ.ಜಗದೀಶ್, ನಂಬಿಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಪದ್ಮಾವತಮ್ಮ, ಗ್ರಾ.ಪಂ. ಸದಸ್ಯೆ ಮಂಜುಳಮ್ಮ , ನಿವೃತ್ತ ಶಿಕ್ಷಕ ನಾರಾಯಣಸ್ವಾಮಿ, ಮುಖ್ಯ ಶಿಕ್ಷಕ ಡಿ.ಆರ್.ಶ್ರೀನಿವಾಸರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶಿವಣ್ಣ, ಎಸ್ಡಿಎಂಸಿ ಅಧ್ಯಕ್ಷ ಜಿ. ಉಮೇಶ್, ಮುಖಂಡರಾದ ಶಂಕರೇಗೌಡ, ಶಿವಾನಂದಗೌಡ, ಸತ್ಯನಾರಾಯಣ, ಶಿಕ್ಷಕರಾದ ರಮೇಶ್, ಶಿವಮೂರ್ತಿ, ತಾಜ್ಪಾಷ, ಇದ್ದರು.