ಶ್ರೀನಿವಾಸಪುರ : ಇಂದಿನ ನಾಗರೀಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಉದ್ಯೋಗ , ವ್ಯವಹಾರ , ಮತ್ತು ಹಣ ಸಂಪಾದನೆಗಾಗಿ ವಿನಿಯೋಗಿಸುತ್ತಿದ್ದಾರೆ . ದಿನಕ್ಕೊಂದಿಷ್ಟು ಸಮಯವನ್ನು ದೇವರ ದ್ಯಾನ, ಭಜನೆಯತ್ತಾ ವಿಯೋಗಿಸಿದರೆ ಮನಸ್ಸು ಉಲ್ಲಾಸವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ವರದಬಾಲಾಂಜನೇಯ ಸ್ವಾಮಿ ದೇವಾಲಯದಲ್ಲಿ ಸೋಮವಾರ ನಡೆದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶನಿವಾರ ಬ್ರಹ್ಮರಥೋತ್ಸವದ ಅಂಗವಾಗಿ ಅಂಕುರಾರ್ಪಣೆ, ದ್ವಜಾರೋಹಣ, ಶೇಷವಾಹನೋತ್ಸವ , ಕಲ್ಯಾಣೋತ್ಸವ , ಗರುಡೋತ್ಸವ, ಬ್ರಹ್ಮರಥೋತ್ಸವದ ಅಂಗವಾಗಿ ಹೆಸರು ಬೇಳೆ , ಪಾನಕವನ್ನ ವಿತರಿಸಲಾಯಿತು. ವರದ ಬಾಲಾಂಜನೇಯಸ್ವಾಮಿ ದೇವಾಲಯದ ಆಡಳಿತ ಮಂಡಲಿ ಅಧ್ಯಕ್ಷ ವೈ. ಆರ್ ಶಿವಪ್ರಕಾಶ್, ಕಾರ್ಯದರ್ಶಿ ಗೋಪಿನಾಥ್ರಾವ್ ಹಾಗೂ ಸದಸ್ಯರ ನೇತೃತ್ವದಲ್ಲಿ ಕಾರ್ಯಕ್ರಮವು ನಡೆಯಿತು.
Month: March 2024
ಖುಷಿಯಿಂದ ಪರೀಕ್ಷೆ ಬರೆದ ಮಕ್ಕಳು-ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಯಶಸ್ವಿಪ್ರಥಮ ಭಾಷೆಗೆ 171 ಮಂದಿ ಗೈರು-ಲೋಪಕ್ಕೆ ಎಡೆಯಿಲ್ಲ-ಡಿಡಿಪಿಐ ಕೃಷ್ಣಮೂರ್ತಿ
ಕೋಲಾರ:- ಜಿಲ್ಲೆಯ 65 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, 171 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
ನಗರದ ಚಿನ್ಮಯ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಹೂ ನೀಡಿ ಸ್ವಾಗತಿಸಿ, ಶುಭ ಕೋರಿದ ಅವರು, ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದರು.
ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 19743 ವಿದ್ಯಾರ್ಥಿಗಳ ಪೈಕಿ 19572 ಮಂದಿ ಹಾಜರಾಗಿದ್ದು, 171 ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆದಿದೆ ಎಂದು ತಿಳಿಸಿದರು.
ತಾಲ್ಲೂಕುವಾರು ಹಾಜರಿ ವಿವರ
ಬಂಗಾರಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ಪ್ರಥಮ ಭಾಷೆಗೆ 2610 ಮಂದಿ ನೊಂದಾಯಿಸಿದ್ದು, 2600 ಮಂದಿ ಹಾಜರಾಗಿ 10 ಮಂದಿ ಗೈರಾಗಿದ್ದಾರೆ, ಕೆಜಿಎಫ್ ತಾಲ್ಲೂಕಿನ 9 ಕೇಂದ್ರಗಳಲ್ಲಿ 3250 ಮಕ್ಕಳು ಹೆಸರು ನೊಂದಾಯಿಸಿದ್ದು, 3224 ಮಂದಿ ಹಾಜರಾಗಿ 26ಮಂದಿ ಗೈರಾಗಿದ್ದಾರೆ.
ಕೋಲಾರ ತಾಲ್ಲೂಕಿನ 18 ಕೇಂದ್ರಗಳಲ್ಲಿ 5062 ಮಂದಿ ಹೆಸರು ನೊಂದಾಯಿಸಿದ್ದು, 5031 ಮಂದಿ ಹಾಜರಾಗಿ ಕೇವಲ 31 ಮಂದಿ ಗೈರಾಗಿದ್ದಾರೆ. ಮಾಲೂರು ತಾಲ್ಲೂಕಿನ 8 ಕೇಂದ್ರಗಳಲ್ಲಿ 3239 ಮಂದಿ ಹೆಸರು ನೊಂದಾಯಿಸಿದ್ದು, 3196 ಮಂದಿ ಹಾಜರಾಗಿದ್ದು, 43 ಮಂದಿ ಗೈರಾಗಿದ್ದಾರೆ.
ಮುಳಬಾಗಿಲು ತಾಲ್ಲೂಕಿನ 12 ಕೇಂದ್ರಗಳಲ್ಲಿ 3078 ಮಂದಿ ನೊಂದಾಯಿಸಿದ್ದು, 3027 ಮಂದಿ ಹಾಜರಾಗಿದ್ದು, 51 ಮಂದಿ ಗೈರಾಗಿದ್ದಾರೆ, ಶ್ರೀನಿವಾಸಪುರ ತಾಲ್ಲೂಕಿನ 10 ಕೇಂದ್ರಗಳಲ್ಲಿ 2504 ಮಂದಿ ಹೆಸರು ನೊಂದಾಯಿಸಿದ್ದು, 2494 ಮಂದಿ ಹಾಜರಾಗಿದ್ದು, 10 ಮಂದಿ ಗೈರಾಗಿದ್ದಾರೆ.
ಮೊದಲ ದಿನದ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ ಎಂದರು.
ಬೆಳಗ್ಗೆ 9-50ರಿಂದಲೇ ಕೇಂದ್ರಕ್ಕೆ ಪ್ರವೇಶ
ಮಕ್ಕಳಿಗೆ ಹೂ ನೀಡುವ ಮೂಲಕ ಬೆಳಗ್ಗೆ 9-50ಕ್ಕೆ ಪ್ರವೇಶ ನೀಡಲು ಆರಂಭಿಸಲಾಯಿತು. ಮೊದಲ ದಿನದ ಪರೀಕ್ಷೆ ಬರೆಯುವ ಆತಂಕ ಮತ್ತು ಇಲಾಖೆ ಇದೇ ಮೊದಲ ಬಾರಿಗೆ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್ ಮಾಡುತ್ತಿರುವ ಹಿನ್ನಲೆಯಲ್ಲಿ ಮಕ್ಕಳು ಭಯದಿಂದಲೇ ಕೇಂದ್ರದತ್ತ ಬಂದಿದ್ದು ಕಂಡು ಬಂತು.
ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಜಾಗೃತದಳ ತಂಡ ಸೇರಿದಂತೆ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.
ಅನೇಕ ಮಂದಿ ಪೋಷಕರು ಪದವಿ, ದ್ವಿತೀಯ ಪಿಯುಸಿಗಿಲ್ಲದ ವೆಬ್ಕಾಸ್ಟಿಂಗ್ ಎಸ್ಸೆಸ್ಸೆಲ್ಸಿಗೆ ಏಕೆ ಎಂದು ಮಾತನಾಡಿಕೊಳ್ಳುತ್ತಿದ್ದುದು ಕಂಡು ಬಂತು.
ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಕೃಷ್ಣಪ್ಪ, ಶಿಕ್ಷಣಾಧಿಕಾರಿಗಳಾದ ಸಗೀರಾ ಅಂಜುಂ,ಭಾಗ್ಯವತಮ್ಮ, ಡಿವೈಪಿಸಿಗಳಾದ ಚಂದ್ರಕಲಾ, ಗುರುಮೂರ್ತಿ, ಬಿಇಒಗಲಾದ ಕನ್ನಯ್ಯ, ಗಂಗರಾಮಯ್ಯ, ಮುನಿವೆಂಕಟರಾಮಾಚಾರಿ, ಚಂದ್ರಕಲಾ, ಸುಕನ್ಯಾ, ಮುನಿಲಕ್ಷ್ಮಯ್ಯ,ಎವೈಪಿಸಿ ಮೋಹನ್ಬಾಬು, ವಿಷಯ ಪರೀಕ್ಷಕರಾದ ಶಶಿವಧನ, ಗಾಯತ್ರಿ, ಶಂಕರೇಗೌಡ, ವೆಂಕಟೇಶಬಾಬು ಮತ್ತಿತರರೂ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದರಲ್ಲದೇ ಸಣ್ಣಪುಟ್ಟ ಲೋಪಗಳಿಗೂ ಅವಕಾಶವಿಲ್ಲದಂತೆ ಎಚ್ಚರವಹಿಸಿ ಮೆಚ್ಚುಗೆಗೆ ಪಾತ್ರವಾದರು.
ಎಲ್ಲಾ ಕೇಂದ್ರಗಳಲ್ಲೂ ಭದ್ರತೆಗಾಗಿ ಮಹಿಳಾ,ಪುರಷ ಪೊಲೀಸರನ್ನು ನಿಯೋಜಿಸಿದ್ದು, ಎಲ್ಲೂ ಸಮಸ್ಯೆಗಳು ಕಂಡು ಬರಲಿಲ್ಲ ಜತೆಗೆ ಎಲ್ಲಾ ಕೇಂದ್ರಗಳಿಗೂ ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸಾ ಸಾಧನದೊಂದಿಗೆ ಓರ್ವ ಆರೋಗ್ಯ ಸಿಬ್ಬಂದಿಯನ್ನು ಒದಗಿಸಲಾಗಿತ್ತು.
ಒಟ್ಟಾರೆ ಮೊದಲದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಐದು ವಿಷಯಗಳ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವ ಆತ್ಮಸ್ಥೈರ್ಯ ತಂದುಕೊಟ್ಟಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ಚಿನ್ಮಯ ವಿದ್ಯಾಲಯ ಕೇಂದ್ರದಲ್ಲಿ ಡಿಡಿಪಿಐ ಅವರೊಂದಿಗೆ ಮುಖ್ಯ ಅಧೀಕ್ಷಕಿ ತಾಹೇರಾ ನುಸ್ರತ್, ಪ್ರಶ್ನೆಪತ್ರಿಕೆ ಅಭಿರಕ್ಷಕಿ ಮಂಜುಳಾ, ಮೊಬೈಲ್ ಸ್ವಾಧೀನಾಧಿಕಾರಿ ವೆಂಕಟರಮಣಪ್ಪ, ಶಿಕ್ಷಕರಾದ ಭವಾನಿ, ಕೆ.ಲೀಲಾ, ಶ್ವೇತಾ,ಸುಗುಣಾ,ಫರೀದಾ,ಧನಲಕ್ಷ್ಮಿ, ಜ್ಞಾನಸಂಗೀತಾ, ಸುಮಿತ್ರಾ, ಜರೀನಾ ಅಂಜುಂ, ನಾಗವೇಣಿ, ರೇಖಾ ದೊಡ್ಡಮುನಿ,ರತ್ನಮ್ಮ, ಭಾಗ್ಯಲಕ್ಷ್ಮಿ, ಪದ್ಮಜ, ಸಲ್ಮಾಸುಲ್ತಾನಾ, ಸಹೆರಾ ಅಂಜುಂ, ಕೋಮಲಾ, ವಿನುತಾ, ಅನುಸೂಯಾ, ವಾಣಿ ಮತ್ತಿತರರಿದ್ದರು.
ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನಲ್ಲಿ ಗರಿಗಳ ಭಾನುವಾತ ಆಚರಿಸಲಾಯಿತು / Palm Sunday was celebrated at Infant Mary church, Bajjodi
ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನಲ್ಲಿ ಪಾಮ್ ಸಂಡೆಯನ್ನು ಆಧ್ಯಾತ್ಮಿಕ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಗ್ಗೆ 7.15ಕ್ಕೆ ಬಜ್ಜೋಡಿಯ ಓಎಸ್ಎಸ್ ಕಾನ್ವೆಂಟ್ನಲ್ಲಿ ಎಲ್ಲಾ ಧರ್ಮಸ್ಥರು ಜಮಾಯಿಸಿದರು. ಅಂಗೈಗಳು ಸಣ್ಣ ಪ್ರತಿಬಿಂಬದೊಂದಿಗೆ ಆಶೀರ್ವದಿಸಲ್ಪಟ್ಟವು. ಚರ್ಚ್ವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಚರ್ಚ್ನಲ್ಲಿ ಧರ್ಮಗುರುಗಳಾದ ಫಾದರ್ ಡೊಮಿನಿಕ್ ವಾಸ್, ಫಾದರ್ ಸಿರಿಲ್ ಮೆನೆಜಸ್ ಮತ್ತು ಪ್ರಣಾಮ್ ಫೆರ್ನಾಂಡಿಸ್ ಅವರು ಶ್ರದ್ಧಾಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮೋಪದೇಶದ ಸಮಯದಲ್ಲಿ ಫಾದರ್ ಡೊಮಿನಿಕ್ ವಾಸ್ ಅವರು ಯೇಸುವಿನ ಜೀವನದಲ್ಲಿ ಟ್ಯಾಬೋರ್ ಮತ್ತು ಕ್ಯಾಲ್ವರಿ ಪರ್ವತಗಳು ಇವೆ ಎಂದು ಪ್ರತಿಬಿಂಬಿಸಿದರು ಮತ್ತು ಅವರು ಹೊಸಾನ್ನಗಳನ್ನು ಹೊಂದಿದ್ದರು ಮತ್ತು ಅವರನ್ನು ಶಿಲುಬೆಗೇರಿಸಿದರು, ಹಾಗೆಯೇ ನಮ್ಮ ಜೀವನದಲ್ಲಿ ಸಿಹಿ ಮತ್ತು ಕಹಿ ಕ್ಷಣಗಳು, ಸಂತೋಷಗಳು ಮತ್ತು ದುಃಖಗಳು ಇರುತ್ತವೆ. ನಾವು ಅವರನ್ನು ಸ್ವೀಕರಿಸಿ ಯೇಸುವಿನಂತೆ ನಂಬಿಕೆ ಮತ್ತು ಭರವಸೆಯೊಂದಿಗೆ ಮುನ್ನಡೆಯಬೇಕು.
Palm Sunday was celebrated at Infant Mary church, Bajjodi
Palm Sunday was celebrated at Infant Mary church, Bajjodi, with a spiritual and liturgical solemnity. In the morning at 7.15 am all the parishioners gathered at OSS Convent, Bajjodi. The palms were blessed with a short reflection. A grand procession was taken to the church. In the church Fr Dominic vas, parish priest, along with Fr Cyril Menezes and Fr Pranam Fernandes celebrated the solemn mass. During the homily Fr Dominic vas reflected that as in the life of Jesus both Tabor and Calvary mountains were there and also he had hosannas and crucify him, likewise in our life there will be sweet and bitter moments, joys and sorrows. We have to accept them and walk forward with faith and hope like Jesus.
ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” 26,27,28 ಮಾರ್ಚ್ 2024ರಂದು ನಡೆಯಲಿದೆ
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” ವು 26,27,28 ಮಾರ್ಚ್ 2024ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 24ರಂದು “ಜಾನಪದ ಲೋಕ” ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ ಚಂದ್ಕಲಾ ಅವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಾರ್ಚ್ 27ರಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜು ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ಶಾಂತಾರಾಮ್.ಎ. ಭಂಡಾರ್ಕರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಎಸ್.ನಾಯಕ್, ಹಿರಿಯ ಪಾಲುದಾರರು, ಎಸ್.ಎಸ್.ನಾಯಕ್ ಮತ್ತು ಅಸೋಸಿಯೇಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್, ಬೆಂಗಳೂರು ಮತ್ತು ಮಂಗಳೂರು ಇವರು ಆಗಮಿಸಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ.
ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು “ಗುರುದಕ್ಷಿಣೆ” ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾರ್ಚ್ 28ರಂದು ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಎಸ್.ಶ್ರೀಹರಿ ಚಾತ್ರ,ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪೋಲೀಸ್ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಕೆ.ಆರ್. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿಗಳಾದ ಸಂದೇಶ್ ಶೆಟ್ಟಿ ಸಳ್ವಾಡಿ ಇವರು ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ .
ಕೋಲಾರ: ಜಿಲ್ಲಾದ್ಯಂತ 65 ಕೇಂದ್ರಗಳಲ್ಲಿ ಮಾ.25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ10589 ಬಾಲಕರು ,9890ಬಾಲಕಿಯರು ಸೇರಿ ಒಟ್ಟು 20479 ಮಂದಿ ನೋಂದಣಿ-ಕೃಷ್ಣಮೂರ್ತಿ
ಕೋಲಾರ:- ಜಿಲ್ಲಾದ್ಯಂತ ಮಾ.25 ರಿಂದ ಏ.6ರವರೆಗೂ 65 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 10589 ಮಂದಿ ಬಾಲಕರು,9890 ಮಂದಿ ಬಾಲಕಿಯರು ಸೇರಿದಂತೆ ಒಟ್ಟು 20479 ವಿದ್ಯಾರ್ಥಿಗಳು ಕುಳಿತಿದ್ದು,ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಶನಿವಾರವೇ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷರ ಅಧ್ಯಕ್ಷತೆಯಲ್ಲಿ ಆಯಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಕೊಠಡಿ ಮೇಲ್ವಿಚಾರಕರು ಮತ್ತು ಸಿಬ್ಬಂದಿಯ ಸಭೆಯನ್ನು ನಡೆಸಿ ಸುಗಮ ಪರೀಕ್ಷೆಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.
ಹೊಸದಾಗಿ ಪರೀಕ್ಷೆ ತೆಗೆದುಕೊಂಡಿರುವ ಶಾಲಾ ವಿದ್ಯಾರ್ಥಿಗಳು 19892 ಮಂದಿ, ಹೊಸ ಖಾಸಗಿ ಅಭ್ಯರ್ಥಿಗಳು 100, ಸಿಸಿಇ ಪುನರಾವರ್ತಿತ ಅಭ್ಯರ್ಥಿಗಳು 349, ಸಿಸಿಇ ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು 127, ಹೊಸ ಸ್ಕೀಂ ಪುನರಾವರ್ತಿತ ಅಭ್ಯರ್ಥಿಗಳು 10 ಹಾಗೂ ನ್ಯೂಸ್ಕೀಂ ಖಾಸಗಿ ಅಭ್ಯರ್ಥಿ ಒಬ್ಬರು ಮಾತ್ರ ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ತಾಲ್ಲೂಕುವಾರು ಕೇಂದ್ರಗಳ ವಿವರ
ಬಂಗಾರಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ಒಟ್ಟು 2717 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಕೆಜಿಎಫ್ ತಾಲ್ಲೂಕಿನ 9 ಕೇಂದ್ರಗಳಲ್ಲಿ 3423 ವಿದ್ಯಾರ್ಥಿಗಳು, ಕೋಲಾರದ 18 ಕೇಂದ್ರಗಳಲ್ಲಿ 5178 ಮಂದಿ, ಮಾಲೂರಿನ 8 ಕೇಂದ್ರಗಳಲ್ಲಿ3348 ಮಂದಿ, ಮುಳಬಾಗಿಲಿನ 12 ಕೇಂದ್ರಗಳಲ್ಲಿ 3234 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 10 ಕೇಂದ್ರಗಳಲ್ಲಿ 2579 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಅಗತ್ಯ ಸಿದ್ದತೆ ಮಾಡಲಾಗಿದೆ ಎಂದು ತಿಳಿಸಿ, ಜಿಲ್ಲೆಯ ಒಟ್ಟು 65 ಪರೀಕ್ಷಾ ಕೇಂದ್ರಗಳ ಪೈಕಿ ಗ್ರಾಮೀಣ ಕೇಂದ್ರಗಳು 35, ನಗರ ಕೇಂದ್ರಗಳು 30 ಇದೆ ಎಂದರು.
ಪರೀಕ್ಷಾ ಕಾರ್ಯಕ್ಕೆ 2250 ಮಂದಿ ನೇಮಕ
ಜಿಲ್ಲೆಯ ಆರು ಕ್ಷೇತ್ರ ವಲಯಗಳಿಗೆ ಸಂಬಂಧಿಸಿದಂತೆ ಎಲ್ಲಾ ತಾಲ್ಲೂಕಿನಲ್ಲಿ ಸುಗಮ ಪರೀಕ್ಷೆಗಾಗಿ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲೂ ಪರೀಕ್ಷೆ ಸುಗಮವಾಗಿನಡೆಯಲು 65 ಮಂದಿ ಮುಖ್ಯ ಅಧೀಕ್ಷಕರು, 65 ಮಂದಿ ಅಭಿರಕ್ಷರು,ಪ್ರತಿ ಕೇಂದ್ರಕ್ಕೆ ತಲಾ ಒಬ್ಬರು ಸ್ಥಾನಿಕ ಜಾಗೃದಳ ಸಿಬ್ಬಂದಿ, ಕೊಠಡಿ ಮೇಲ್ವಿಚಾರಕರು ಸೇರಿದಂತೆ 2250 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಶ್ನೆಪತ್ರಿಕೆಗಳನ್ನು ಕೇಂದ್ರಕ್ಕೆ ತಲುಪಿಸಲು ಹಾಗೂ ಪರೀಕ್ಷೆ ನಂತರ ಉತ್ತರ ಪತ್ರಿಕೆಗಳನ್ನು ಡಿಡಿಪಿಐ ಕಚೇರಿಗೆ ತಲುಪಿಸಲು 28 ಮಾರ್ಗಗಳಿಗೆ ತಂಡಗಳನ್ನು ನೇಮಿಸಿರುವುದಾಗಿ ತಿಳಿಸಿದರು.
ಕೇಂದ್ರ ಪ್ರವೇಶಿಸಲು ಗುರುತಿನ ಚೀಟಿ ಕಡ್ಡಾಯ
ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ವಾಟರ್ಬಾಯ್ಯಿಂದ ಮುಖ್ಯ ಅಧೀಕ್ಷಕರವರೆಗೂ ಎಲ್ಲರಿಗೂ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೇ ಗುರುತಿನ ಚೀಟಿ ಮುದ್ರಿಸಿ ಕಳುಹಿಸಿದೆ, ಗುರುತಿನ ಚೀಟಿ ಎಲ್ಲದೇ ಯಾರಿಗೂ ಒಳಗೆ ಪ್ರವೇಶ ನೀಡಬಾರದು ಎಂದು ತಿಳಿಸಲಾಗಿದೆ ಎಂದರು.
ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆಂದು ತಿಳಿಸಿದರು.
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಈ 200 ಮೀ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ ಎಂದು ವಿವರ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲೂ ಕೊಠಡಿ, ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳ ಕುರಿತು ನಿಗಾ ವಹಿಸಿದ್ದು, ಯಾವುದೇ ಸಮಸ್ಯೆಗಳಿಗೆ ಅವಕಾಶವಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪರೀಕ್ಷಾಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಸೌಲಭ್ಯ
ಜಿಲ್ಲೆಯ ಎಲ್ಲಾ 65 ಪರೀಕ್ಷಾ ಕೇಂದ್ರಗಳಲ್ಲಿಯೂ ಪರೀಕ್ಷೆ ನಡೆಯುವ ಮಾ.25 ರಿಂದ ಏ.6 ರವರೆಗೂ ಒಬ್ಬೊಬ್ಬ ಶುಶ್ರೂಷಕಿಯನ್ನು ನೇಮಿಸಿ ಪ್ರಥಮ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದ್ದು, ಈ ಕಾರ್ಯಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದರು.
ಇದರ ಜತೆಗೆ ಪ್ರತಿ ಕೇಂದ್ರಕ್ಕೂ ಪರೀಕ್ಷೆ ನಡೆಯುವಾಗ ಭದ್ರತೆಗಾಗಿ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಒದಗಿಸಲು ಜಿಲ್ಲಾಧಿಕಾರಿಗಳ ಸೂಚನೆಯಂತೆ ಕ್ರಮವಹಿಸಲಾಗಿದೆ ಎಂದರು.
ಮೊಬೈಲ್ ನಿಷಿದ್ದ ಸ್ವಾಧೀನಾಧಿಕಾರಿ ನೇಮಕ
ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಉಳಿದೆಲ್ಲಾ ಸಿಬ್ಬಂದಿ ಮೊಬೈಲ್ ಬಳಸದಿರುವಂತೆ ಕಟ್ಟಪ್ಪಣೆ ವಿಧಿಸಲಾಗಿದೆ. ಮುಖ್ಯ ಅಧೀಕ್ಷಕರು ಕೊಠಡಿ ಮೇಲ್ವಿಚಾರಕರು ಮೊಬೈಲ್ ತಂದಿದ್ದರೆ ಸ್ವಿಚ್ ಆಫ್ ಮಾಡಿಸಿ ವಶಕ್ಕೆ ಪಡೆಯಲು ಸೂಚಿಸಿದ್ದು, ಪ್ರತಿಕೇಂದ್ರಕ್ಕೂ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ವಿದ್ಯಾರ್ಥಿಗಳೂ ಸಹಾ ಮೊಬೈಲ್, ಎಲೆಕ್ಟ್ರಾನಿಕ್ ಗಡಿಯಾರ, ಉಪಕರಣಗಳನ್ನು ಕೇಂದ್ರದೊಳಕ್ಕೆ ತರಬಾರದು, ಕೇಂದ್ರದ ಮುಖ್ಯ ದ್ವಾರದಲ್ಲೇ ಈ ಸಂಬಂಧ ಪರಿಶೀಲಿಸಿ ಒಳ ಬಿಡುವಂತೆ ಪರೀಕ್ಷಾ ಮಂಡಳಿ ಸೂಚಿಸಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿ ಸಮುದಾಯ ವದಂತಿಗಳಿಗೆ ಕಿವಿಗೊಡದೇ, ಖಿನ್ನರಾಗದೇ ವಿಚಲಿತರಾಗದೇ ಪರೀಕ್ಷೆ ಬರೆದು ಗುಣಾತ್ಮಕ ಫಲಿತಾಂಶದ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ತರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಪರವಾಗಿ ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಕೃಷ್ಣಪ್ಪ, ಶಿಕ್ಷಣಾಧಿಕಾರಿಗಳಾದ ಸಗೀರಾ ಅಂಜುಂ,ಭಾಗ್ಯವತಮ್ಮ, ಡಿವೈಪಿಸಿಗಳಾದ ಚಂದ್ರಕಲಾ, ಗುರುಮೂರ್ತಿ, ಬಿಇಒಗಲಾದ ಕನ್ನಯ್ಯ, ಗಂಗರಾಮಯ್ಯ, ಮುನಿವೆಂಕಟರಾಮಾಚಾರಿ, ಚಂದ್ರಕಲಾ, ಸುಕನ್ಯಾ, ಮುನಿಲಕ್ಷ್ಮಯ್ಯ,ಎವೈಪಿಸಿ ಮೋಹನ್ಬಾಬು, ವಿಷಯ ಪರೀಕ್ಷಕರಾದ ಶಶಿವಧನ, ಗಾಯತ್ರಿ, ಶಂಕರೇಗೌಡ, ವೆಂಕಟೇಶಬಾಬು, ಪತ್ರಾಂಕಿತ ಸಹಾಯಕ ಪ್ರಸಾದ್ಬಾಬು ಮತ್ತಿತರರು ಶುಭ ಹಾರೈಸಿದ್ದಾರೆ.
ಕರ್ನಾಟಕ ಪ್ರಿಂಟರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರಾಗಿ ಅಬ್ಬಣಿ ಶಂಕರ್, ಉಪಾಧ್ಯಕ್ಷರಾಗಿ ಶಿವರಾಮ್ ಆಯ್ಕೆ
ಕೋಲಾರ,ಮಾ.23: ದಿ.ಕರ್ನಾಟಕ ಪ್ರಿಂಟರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಬೆಂಗಳೂರು ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಹಿರಿಯ ಸಹಕಾರಿ ಅಬ್ಬಣಿ ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಬೆಂಗಳೂರಿನ ಎಸ್.ಶಿವರಾಮ್ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಬ್ಬಣಿ ಶಂಕರ್ ಮತ್ತು ಶಿವರಾಮ್ ವಿರುದ್ಧ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಘೋಷಿಸಲಾಯಿತು.
ಅಬ್ಬಣಿ ಶಂಕರ್ ರವರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದ್ದೋದ್ಧೇಶ ಸಹಕಾರ ಸಂಘದ ಉಪಾಧ್ಯಕ್ಷರಾಗಿ, ಜಿಲ್ಲಾ ಸರಬರಾಜು ಮತ್ತು ಮಾರಾಟ ಸಂಘದ ನಿರ್ದೇಶಕರಾಗಿ ಮತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಉಳಿದಂತೆ ಸಂಘದ ನಿರ್ದೇಶಕ ಸ್ಥಾನಗಳಿಗೆ ಮರಿಯಪ್ಪ, ಎಲ್.ಮುರಳಿಕೃಷ್ಣ, ಜೆ.ಎಸ್.ವೀರಣ್ಣ, ಕೆ.ಶಂಕರ್, ಎಸ್.ಶಿವರಾಮ್, ಬಿ.ಸುನಿಲ್, ಮಂಜುಳಾ ಶಂಕರ್, ಅಬ್ಬಣಿ ಶಂಕರ್, ಶಂಕರಾಚಾರಿ, ಪಿ.ಸುಧಾಕರ್ ಹಾಗೂ ಪಿ.ಶ್ರೀನಿವಾಸಲು ಆಯ್ಕೆಯಾಗಿದ್ದರು.
ಮುಂದಿನ 5 ವರ್ಷಗಳ ಅವಧಿಗೆ ಈ ಆಯ್ಕೆ ನಡೆದಿದ್ದು, ಚುನಾವಣಾಧಿಕಾರಿಗಳಾಗಿ ಸಹಕಾರ ಸಂಘಗಳ ನಿಬಂಧಕರ ಕಚೇರಿಯ ಅಧಿಕಾರಿ ಕೆ.ಸವಿತಾ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ನೂತನ ಅಧ್ಯಕ್ಷ ಅಬ್ಬಣಿ ಶಂಕರ್, ಎಲ್ಲ ನಿರ್ದೇಶಕರ ಸಹಕಾರ ಪಡೆದು ಸಂಘವನ್ನು ಆರ್ಥಿಕವಾಗಿ ಬಲಗೊಳಿಸುವುದರ ಜೊತೆಗೆ ಸದಸ್ಯರ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ನೆರವು ಒದಗಿಸುವ ಶಕ್ತಿಯನ್ನು ಗಳಿಸಿಕೊಳ್ಳಲು ತಾವೆಲ್ಲಾ ಪ್ರಯತ್ನ ಹಾಕಲಿದ್ದು ಅದಕ್ಕೆ ಸಂಘದ ಎಲ್ಲ ನಿರ್ದೇಶಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಸಹಕಾರ ಸಂಘಗಳು ಪಾರದರ್ಶಕ ಆಡಳಿತದಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ, ಈ ನಿಟ್ಟಿನಲ್ಲಿ ಸಂಘದಲ್ಲಿ ನಡೆಯುವ ಎಲ್ಲಾ ಆರ್ಥಿಕ ಚಟುವಟಿಕೆಗಳನ್ನು ಎಲ್ಲಾ ನಿರ್ದೇಶಕರ ಗಮನಕ್ಕೆ ತಂದು ಸಹಕಾರ ಪಡೆದು ನಡೆಸುವ ಮೂಲಕ ಸಂಘದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನುಸುಳದಂತೆ ಎಚ್ಚರವಹಿಸುವುದಾಗಿ ಭರವಸೆ ನೀಡಿದರು.
ಸೊಸೈಟಿಗೆ ಸಾಲ ವಿತರಣೆ ಜೊತೆಗೆ ಠೇವಣಿ ಹೆಚ್ಚಿಸುವ ಮೂಲಕ ಮತ್ತಷ್ಟು ಸದಸ್ಯರಿಗೆ ನೆರವಾಗಲು ಅವಕಾಶವಿದ್ದು, ಎಲ್ಲಾ ನಿರ್ದೇಶಕರು ಈ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಎಲ್ಲ ನಿರ್ದೇಶಕರು, ಪ್ರಭಾರ ಕಾರ್ಯದರ್ಶಿ ಜಿ.ವಿಜಯ, ಕಚೇರಿ ಸಹಾಯಕ ನವೀನ್ ಉಪಸ್ಥಿತರಿದ್ದರು.
ವಿದ್ಯೆಯನ್ನು ಯಾರು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯೆಯನ್ನು ಕಲಿಯುತ್ತಾರೊ ಅವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ : ಎಂ.ಬಿ.ಗೊರವನಕೊಳ್ಳ
ಶ್ರೀನಿವಾಸಪುರ : ವಿದ್ಯೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ, ವಿದ್ಯೆಯನ್ನು ಯಾರು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯೆಯನ್ನು ಕಲಿಯುತ್ತಾರೊ ಅವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ ಪಟ್ಟಣದ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿಗೆ ಶನಿವಾರ ಬೇಟಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಾಲಹರಣ ಮಾಡದೆ ಓದಿನ ಕಡೆ ಲಕ್ಷ್ಯವಹಿಸಬೇಕು. ಪೋಷಕರ ಭರವಸೆ ನೆರವೇರಿಸಬೇಕು. ಹಿರಿಯರ ಅನುಕರಣೆ ಮಾಡಬೇಕು ಅವಕಾಶಗಳನ್ನು ಬಳಸಿಕೊಂಡು ಚೆನ್ನಾಗಿ ಓದಬೇಕು ಎಂದರು.
ಇದೇ ಸಮಯದಲ್ಲಿ ಲೋಕಸಭಾ ಚುನಾವಣೆಗೆ ಕಾಲೇಜು ಆವರಣದಲ್ಲಿರುವ ಮತಯಂತ್ರಗಳನ್ನು ಇಡುವ ಭದ್ರತಾಕೊಠಡಿಗಳನ್ನು ಪರಿಶೀಲಿಸಿದರು ಹಾಗೂ ವಿದ್ಯಾರ್ಥಿನಿಯರಿಗೆ ಸಿಹಿ ಹಂಚಿದರು. ಬಿಸಿಯೂಟದ ಕೋಣೆಗೆ ಬೇಟಿ ನೀಡಿ ವಿದ್ಯಾರ್ಥಿಗಳಿಗೆ ಸುಚಿಯಾದ, ರುಚಿಯಾದ ಊಟವನ್ನು ನೀಡುವಂತೆ ಅಡಿಗೆ ಸಿಬ್ಬಂದಿಗೆ ಹೇಳಿ , ಸ್ವಚ್ಚತೆಯನ್ನು ಕಾಪಾಡುವಂತೆ ಸಲಹೆ ನೀಡಿದರು.
ಎಎಸ್ಐ ಪಿ.ವಿ.ವೆಂಕಟರಮಣಪ್ಪ, ಅಡಿಗೆ ಸಹಾಯಕಿ ಚೌಡಮ್ಮ ಇದ್ದರು.
ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ – ಶೆವೊಟ್ ಪ್ರತಿಷ್ಟಾನ್ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ
ಕುಂದಾಪುರ, ಮಾ.26: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ (ರಿ) ಮತ್ತು ಶೆವೊಟ್ ಪ್ರತಿಷ್ಟಾನ್ (ರಿ)ಇವರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮಾ.25 ರಂದು ಸಂಜೆ ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಪ್ರಧಾನ ಧರ್ಮಗುರು, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಫಾ|ಸ್ಟ್ಯಾನಿ ತಾವ್ರೊ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳಿಗೆ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂದು ಗೌರವಿಸಿದರೆ, ಅವರಿಗೆ ಅದೊಂದು ಉತ್ತಮ ಪ್ರೇರಣೆ ದೊರಕುತ್ತದೆ, ಅವರು ಮುಂದಿನ ವರ್ಷವೂ ತಮಗೆ ಈ ಪುರಸ್ಕಾರ ದೊರಕಬೇಕೆಂದು ಪ್ರಯತ್ನ ಪಡುತ್ತಾರೆ ಮತ್ತು ಹಾಗೇ ಅವರ ಪ್ರಯತ್ನ ಸುಫಲವಾದರೆ, ಅವರು ಬಹಳ ಸಂತೋಷಗೊಳ್ಳುತ್ತಾರೆ, ಈ ರೀತಿ ನಡೆದಾಗ ಗೌರವಿಸಲ್ಪಟ್ಟ ಸಂಸ್ಥೆಯ ಕಾರ್ಯಕ್ರಮ ಯಶ್ವಸಿಯಾದ ಫಲ ಸಂತ್ರಪ್ತಿ ದೊರಕುತ್ತದೆ, ನಮ್ಮ ಕಥೊಲಿಕ್ ಸಭಾ ಸಂಘಟನೆಯು ಈ ಥರಹಾ ಒಳ್ಳೆಯ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ, ಹಾಗಾಗಿ ಅವರಿಗೆ ಮತ್ತು ಇಂದು ಗೌರವ ಪಡೆದುಕೊಂಡವರಿಗೆಲ್ಲಾ ಅಭಿನಂದಗಳು’ ಎಂದು ಅವರ ಸಂದೇಶದಲ್ಲಿ ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಆಗಮಿಸಿದ ಕುಂದಾಪುರ ಸರಕಾರಿ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರ ಚಿಕಿತ್ಸಕ ಡಾ.ರಾಬರ್ಟ್ ರೆಬೆಲ್ಲೊ ಪ್ರತಿಭಾವಂತರಿಗೆ ಗೌರವಿಸಿ “ಇಂತಹ ಒಂದು ಪ್ರತಿಭಾವಂತರಿಗೆ ಗೌರವಿಸುವ ಉತ್ತಮ ಕಾರ್ಯಕ್ರಮ. ಇದನ್ನು ನಡೆಸಿಕೊಂಡು ಹೋಗುತ್ತಿರುವ ಕಥೊಲಿಕ್ ಸಭಾದವರಿಗೆ ಅಭಿನಂದನೆಗಳನ್ನು ಸಲ್ಲಿಸುತೇನೆ, ನಮ್ಮ ಸಮಾಜದ ತರುಣರು ವಿಧ್ಯಾಬಾಸವನ್ನು ಮೊಟಕುಗೊಳಿಸದೆ, ಹೆಚ್ಚಿನ ವಿಧ್ಯಾವಾಸವನ್ನು ಪಡೆದುಕೊಳ್ಳಬೇಕು, ಕನಿಷ್ಟ ಯಾವುದಾದರು ಒಂದು ಪದವಿಯನ್ನು ಗಳಿಸಬೇಕು, ಸಾಧ್ಯವಾದರೆ ಹೆಚ್ಚಿನ ವಿಧ್ಯಾಬಾಸವನ್ನು ಗಳಿಸಬೇಕು, ಮನಸು ಮಾಡಿದರೆ ದೊಡ್ಡ ಮಟ್ಟದ ಪದವಿಗಳನ್ನು ಬಡವರು ಪಡೆದುಕೊಳ್ಳಬಹುದು, ಅದಕ್ಕಾಗಿ ನಮ್ಮ ಸರಕಾರಗಳಿಂದ ಯೋಜನೆಗಳಿವೆ, ಅದನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶೆವೊಟ್ ಪ್ರತಿಷ್ಟಾನ್ (ರಿ) ಅವರಿಂದ ಅಸಕ್ತರಿಗೆ ಕೊಡಮಾಡುವ ಧನಸಹಾಯವನ್ನು ಸಂಸ್ಥೆಯ ಅಧ್ಯಕ್ಷ ವಿನೋದ್ ಕ್ರಾಸ್ಟೊ ವಿತರಿಸಿದರು, ಹಾಗೇಯೆ ವಿಕ್ರಮ್ ಸುನೀತಾ ಹೆಸರಿನಲ್ಲಿ ಕೊಡಮಾಡುವ ವಿದ್ಯಾರ್ಥಿ ವೇತನವನ್ನು ಅವರು ವಿತರಿಸಿ “ಕಥೊಲಿಕ್ ಸಭಾ ಮಾಡು ಕಾರ್ಯವಿಧಾನಗಳನ್ನು ವಿವರಿಸಿ, ಕಥೊಲಿಕ್ ಸಭಾ ನಮ್ಮ ಸಮಾಜದಲ್ಲಿ ಜಾಗ್ರತಿ ಮೂಡಿಸುವ, ಸಮಾಜಕ್ಕೆ ಒಳಿತನ್ನುಂಟು ಮಾಡಲು ಹಲವಾರು ರೀತಿಯಲ್ಲಿ ಶ್ರಮಿಸುತ್ತದೆ’ ಎಂದು ತಿಳಿಸಿದರು.
ವ.ಕಥೊಲಿಕ್ ಸಭಾದ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಅಧ್ಯಕ್ಷ್ತೆಯನ್ನು ವಹಿಸಿಕೊಂಡ ವಿಲ್ಸನ್ ಡಿಆಲ್ಮೇಡಾ ‘ವಿದ್ಯಾರ್ಥಿಗಳು ಸರಕಾರದಿಂದ ಸಿಗುವ ವಿಧ್ಯಾರ್ಥಿ ವೇತನ ಇನ್ನಿತರ ಸವಲತ್ತುಗಳು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಕನ್ನಡ ಕೊಂಕಣಿ ಭಾಷಣ ಸ್ಪರ್ಧೆಗಳಲ್ಲಿ ವೀಜೆತರಾದವರಿಗೆ, ಕಲಿಕೆಯಲ್ಲಿ ವಲಯ ಮಟ್ಟದಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ, ಸಿ.ಎ. ಮಾಡಿದ ಸಿ.ಎ ವಿನಾರ್ಡ್ ಡಿಕೋಸ್ತಾ, ವೈದ್ಯ ವ್ರತ್ತಿ ಉತಿರ್ಣೆಯಾದ ಡಾ.ನಿಶಾಲ್ ಡಿಸೋಜಾ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿಯ ನಿಕಟಪೂರ್ವ ಅಧ್ಯಕ್ಷೆ ಶಾಂತಿ ಪಿರೇರಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ರೋಶನ್ ಲೋಬೊ ಸ್ವಾಗತಿಸಿದರು. ಖಜಾಂಚಿ ಶೈಲಾ ಡಿಆಲ್ಮೇಡಾ ವಿಜೇತರ ಹೆಸರುಗಳನ್ನು ವಾಚಿಸಿದರು, ಪದಾಧಿಕಾರಿ ವಿನಯ್ ಡಿಆಲ್ಮೇಡಾ ಅತಿಥಿಗಳ, ಪದಾಧಿಕಾರಿ ಪ್ರೇಮಾ ಡಿಕುನ್ನಾ ಮತ್ತು ಅಲೆಕ್ಸಾಂಡರ್ ಲುವಿಸ್ ಸನ್ಮಾನಿತರ ಪರಿಚಯನ್ನು ನೀಡಿದರು. ಕಥೊಲಿಕ್ ಸಭಾ ಕಾರ್ಯದರ್ಶಿ ಗ್ರೆವೀನ್ ಪಸನ್ನಾ ವಂದಿಸಿದರು.