ಶ್ರೀನಿವಾಸಪುರ : ನಾವು ರೈತಪರವಾಗಿ ಎಂದು ಸಭೆಗಳಲ್ಲಿ ಮಾತನಾಡಿದ ಸರ್ಕಾರವು ಇಂದು ರೈತರನ್ನ ಬೀದಿಗೆ ತಳ್ಳಿದೆ ಎಂದು ರೈತ ಸಂಘದ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ ಹೇಳಿದರು.
ತಾಲೂಕಿನ ದಳಸನೂರು ಗ್ರಾಮದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆ ಮತದಾನ ಬಹಿμÁ್ಕರ ಮಾಡಲು ಗ್ರಾಮಸ್ಥರ ನಿರ್ಧಾರಿಸಿದ್ದು,
ನೂರಾರು ಎಕರೆ ಸಾಗುವಳಿ ಜಮೀನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ರೈತರ ಜಮೀನು ಕಳೆದುಕೊಂಡ್ರು.
ರೈತರ ನೆರವಿಗೆ ಬಾರದ ಸರ್ಕಾರದ ಕ್ರಮಕ್ಕೆ ಖಂಡಿಸಿದರು.
ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಸರ್ಕಾರಕ್ಕೆ ಒತ್ತಾಯಮಾಡುತ್ತಿದ್ದೇವೆ ಎಂದು ತಿಳಿಸಿದರು.
ಗ್ರಾಮದಲ್ಲಿ ಬ್ಯಾನರ್ ಅಳವಡಿಸಿ ಚುನಾವಣೆಯಲ್ಲಿ ಮತದಾನ ಬಹಿμÁ್ಕರಕ್ಕೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಇನ್ನು ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ಭೂಮಿಯನ್ನು ಕಳೆದುಕೊಂಡಿರುವ ರೈತರೊಂದಿಗೆ ಉಗ್ರಹೋರಾಟ ಮಾಡಿ ಚುನಾವಣೆಯನ್ನು ಬಹಿಸ್ಕರಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಮಯದಲ್ಲಿ ಗ್ರಾಮಸ್ಥರಾದ ರೈತ ಮುಖಂಡ ಡಿ.ವಿ.ವೀರಭದ್ರಗೌಡ , ಟಿ.ರಾಮಪ್ಪ, ವೆಂಕಟೇಶಪ್ಪ, ಪಾಳ್ಯ ಗೋಪಾಲರೆಡ್ಡಿ ಚಾನ್ಪಾಷ, ಕೃಷ್ಣಪ್ಪ, ವೆಂಕಟರಾಮಿರೆಡ್ಡಿ, ಡಿ.ಎಲ್.ವೀರಭದ್ರೇಗೌಡ, ಎಸ್.ರವೀಂದ್ರ, ರಾಜಶೇಖರ್, ಜಗದೀಶ್, ನಂದೀಶ್, ಷಫಿವುಲ್ಲಾ, ರಜಾಕ್, ಸಲೀಮ್, ಮುಜೀದ್ಪಾಷ ಇದ್ದರು.
Day: April 5, 2024
ಕುಂದಾಪುರ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಪ್ಯಾಟಿ ಮಕ್ಕಳ್ ಹಳ್ಳಿಟೂರ್ – ಬೇಸಿಗೆ ಶಿಬಿರ
ಕುಂದಾಪುರ (ಎ.5) : ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಒಂದು ವಿಭಿನ್ನ ಕಾರ್ಯಕ್ರಮ. ಮಕ್ಕಳಿಗೆ ಇಂದಿನ ದಿನಗಳಲ್ಲಿ ಮರೆಯಾಗುತ್ತಿರುವ ಹಳ್ಳಿಯ ವಿಚಾರಗಳ ಬಗ್ಗೆ ಇಂತಹ ಶಿಬಿರಗಳ ಮೂಲಕ ತಿಳಿದುಕೊಳ್ಳಲು ಸಾಧ್ಯ ಎಂದು ರಂಗಭೂಮಿ ತರಬೇತುದಾರ, ರಂಗ ನಿರ್ದೇಶಕರಾದ ಶ್ರೀ ವಾಸುದೇವ ಗಂಗೇರರವರು ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ಮೊದಲ ದಿನದ ಮಧ್ಯಾಹ್ನದ ಆವೃತ್ತಿಯಲ್ಲಿ ರಂಗಗೀತೆ ಮತ್ತು ಅಭಿನಯಗಳ ತರಬೇತಿ ನೀಡುತ್ತಾ ಮಾತನಾಡಿದರು. ಕಾರ್ಯಕ್ರಮವನ್ನು ಶಿಕ್ಷಕ ರವಿಚಂದ್ರ ನಿರೂಪಿಸಿ ವಂದಿಸಿದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಎಮ್.ಸಿ.ಸಿ. ಬ್ಯಾಂಕ್ 2023–24 ವಿತ್ತೀಯ ವರ್ಷದಲ್ಲಿ 13.12 ಕೋಟಿ ಲಾಭ, ಕರ್ನಾಟಕ ರಾಜ್ಯಕ್ಕೆ ಕಾರ್ಯ ಕ್ಷೇತ್ರ ವಿಸ್ತರಣೆ, ಶೀಘ್ರದಲ್ಲೇ ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಹೊಸ ಶಾಖೆಗಳು / M.C.C. Bank records INR 13.12 cr profit, Expands area of operation to Karnaaka state, 3 more new Branches at Kavoor, Belthangady and Shivamogga
ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2024 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ.
ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2023–2024ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿAದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿದ್ದು, ಪ್ರಸ್ತುತ ವರ್ಷ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕಿನಿAದ ಅನುಮತಿ ದೊರಕಿದ್ದು, ಇದೊಂದು ಮಹತ್ವದ ಸಾಧನೆಯಾಗಿರುತ್ತದೆ. ಈಗಾಗಲೇ ಬ್ರಹ್ಮಾವರದಲ್ಲಿ ಬ್ಯಾಂಕಿನ 17ನೇ ಶಾಖೆಯನ್ನು ತೆರೆದಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರರಿಗೆ (ಎನ್ಆರ್ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಆಗಿರುತ್ತದೆ. ಇಡೀ ಕರ್ನಾಟಕದಲ್ಲಿ ಹಂತ ಹಂತಗಳÀಲ್ಲಿ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕಿನ ವ್ಯವಹಾರವು ಡಿಸೆಂಬರ್ ಅಂತ್ಯಕ್ಕೆ ರೂ. 1000 ಕೋಟಿ ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿರುತ್ತದೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಅನಿಲ್ ಲೋಬೊ ನೇತ್ರತ್ವದ 14 ಸದಸ್ಯರು 2023-28 ವರ್ಷಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ದಿನಾಂಕ 28, ಅಗೊಸ್ತ್ 2023ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅನಿಲ್ ಲೋಬೊ ಅವರು ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಬ್ಯಾಂಕಿನ ಸದಸ್ಯರು ಬ್ಯಾಂಕಿನ ಮೇಲೆ ಹೊಂದಿರುವ ವಿಶ್ವಾಸವೇ ಇದಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 17 ಶಾಖೆಗಳನ್ನು ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್ 2023–24 ವಿತ್ತೀಯ ವರ್ಷದಲ್ಲಿ ದಾಖಲೆಯ ರೂ. 13.12 ಕೋಟಿ ವ್ಯವಹಾರಿಕ ಲಾಭವನ್ನು ಗಳಿಸಿದೆ. 2023–24 ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ (ಓeಣ Woಡಿಣh) ರೂ. 62.45 ಕೋಟಿಯಿಂದ ರೂ.76.35 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 1081 ಕೋಟಿ ದಾಟಿದ್ದು ಕಳೆದ ವರ್ಷಕ್ಕಿಂತ ಶೇಕಡಾ 16 ಏರಿಕೆಯಾಗಿದೆ.
ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತು ಅಧಿಕಾರಿವರ್ಗ ಹಾಗೂ ಸಿಬ್ಬಂದಿಯ ಶ್ರಮದಿಂದ ಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ.
: ಪತ್ರಿಕಾ ಗೋಷ್ಠಿಯಲ್ಲಿ ಹಾಜರಿರುವವರು :
ಅನಿಲ್ ಲೋಬೊ – ಅಧ್ಯಕ್ಷರು, ಜೆರಾಲ್ಡ್ ಜೂಡ್ ಡಿಸಿಲ್ವ – ಉಪಾಧ್ಯಕ್ಷರು, ನಿರ್ದೇಶಕರಾದ – ಆಂಡ್ರೂ÷್ಯ ಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೊಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.
M.C.C. Bank records INR 13.12 cr profit, Expands area of operation to Karnaaka state, 3 more new Branches at Kavoor, Belthangady and Shivamogga.
MCC Bank Ltd, fondly known as MCC Bank, is set to complete 112 years of devoted service this year, having accomplished noteworthy progress across all business metrics for the financial year ending 31st March 2024.
The Bank recorded an exceptional pre-audit operating Profit of INR 13.12 Crore for the fiscal year, consistently striving to reduce the Net NPA, and successfully decreasing it to 1.07% of the total advances for the first time in recent years. As of December 2023, the Bank reached a milestone of INR 1000 Crore in total business turnovers, further increasing to INR 1081 Crore by the close of 31st March 2024 showing a growth of 16%. Boasting an enhanced net worth of INR 76.35 Crore compared to the previous INR 62.45 Crore, the Bank continues to benefit from NRI support.
Initially serving only the twin districts of coastal Karnataka—Dakshina Kannada and Udupi—the Bank expanded its reach to adjacent districts like Uttara Kannada, Shivamogga, Chickmagaluru, Hassan, and Coorg, thanks to the diligent efforts of the management team headed by Anil Lobo. With approval granted by Reserve Bank of India to expand operations statewide during the past financial year, the Bank opened its 17th branch in Brahmavara following a 22-year lapse. Further expansion plans include opening three new branches in Kavoor, Belthangady, and Shivamogga throughout the ongoing financial year. The 2nd Urban Co. operative Bank in Karnataka having NRI facility.
Last fiscal year witnessed the uncontested election of a 14-member management team, led by Anil Lobo, for another 5-year term (2023-28). This overwhelming endorsement reflects the faith placed in the management by the Bank’s members. Unanimously chosen as Chairman of the Board of Directors, Anil Lobo expressed gratitude for the confidence bestowed upon him.
Achieving such impressive growth can be attributed primarily to the unwavering support from members, customer trust, and dedicated efforts of Bank employees. Looking ahead, the Bank aims to attain even greater success in the current financial year with continued backing from esteemed members and clients along with committed staff members.
Present in the meeting:
Anil Lobo – Chairman, Jerald Jude D’Silva – Vice Chairman, Andrew D’Souza, Dr Gerald Pinto, Anil Patrao, J.P. Rodrigues, David D’Souza, Elroy Kiran Crasto, Herald Monteiro, Roshan D’Souza, Melvyn Vas, Vincent Lasrado, C.G. Pinto, Sushanth Saldanha, Irene Rebello, Dr Freeda D’Souza, Alwyn Monteiro, Felix D’Cruz, Sharmila Menezes – Directors and Sunil Menezes – General Manager were present.
ಕೋಲಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 : 25 ನಾಮಪತ್ರಗಳ ಸಲ್ಲಿಕೆ-ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ
ಕರ್ನಾಟಕ ಸರ್ಕಾರ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಹಿರಿಯ ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣ, ಕೋಲಾರ-563101.
ದೂರವಾಣಿ: 08152-222077
E-Mail ID – vaarthailakhekolar@gmail.com
ದಿನಾಂಕ: 04-04-2024
ಪತ್ರಿಕಾ ಪ್ರಕಟಣೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 : 25 ನಾಮಪತ್ರಗಳ ಸಲ್ಲಿಕೆ
ಕೋಲಾರ, ಏಪ್ರಿಲ್ 04 (ಕರ್ನಾಟಕ ವಾರ್ತೆ): ನಂ.14-14
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ (04-04-2024) ಇಲ್ಲಿಯವರೆಗೆ 25 ಅಭ್ಯರ್ಥಿಗಳಿಂದ 33 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
28-ಕೋಲಾರ (ಪ.ಜಾ) ಲೋಕಸಭಾ ಕ್ಷೇತ್ರದಿಂದ 2024ರ ಸಾರ್ವತ್ರಿಕ ಚುನಾವಣೆಗೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೌತಮ್ ಕೆ.ವಿ. ಅವರು ಮೂರು ನಾಮಪತ್ರಗಳು ಹಾಗೂ ಜನತಾದಳ (ಜಾತ್ಯತೀತ) ಅಭ್ಯರ್ಥಿಯಾಗಿ ಎಂ. ಮಲ್ಲೇಶ ಬಾಬು ಅವರು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾಗಿ ಆರ್. ರಂಜಿತ್ ಕುಮಾರ್, ಎಂ. ವೆಂಕಟಸ್ವಾಮಿ, ಸುಮನ್ ಹೆಚ್.ಎನ್, ಬಿ.ಇ. ವಿಶ್ವನಾಥ್, ಕೆ.ಎಚ್. ಮಧುಸೂದನ್, ಎಂ. ಮುನಿಗಂಗಪ್ಪ, ಆರ್. ರಾಜೇಂದ್ರ, ಶ್ರೀನಿವಾಸ ಪಿ., ಎ.ಟಿ. ಕ್ರಿಷ್ಣನ್, ಎಸ್.ಎನ್ ನಾರಾಯಣಸ್ವಾಮಿ. ವಿ., ಕ್ರಿಷ್ಣಯ್ಯ ಎನ್., ಚಂದ್ರಶೇಖರ ಎಂ., ಜಿ. ಲಲಿತಾ ನಾಮಪತ್ರ ಸಲ್ಲಿಸಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ- ಮಹೇಶ್. ಎ.ವಿ, ಉತ್ತಮ ಪ್ರಜಾಕೀಯ ಪಾರ್ಟಿ- ದೇವರಾಜ. ಎ., ಸೊಷ್ಯಲಿಸ್ಟ್ ಪಾರ್ಟಿ (ಇಂಡಿಯಾ)- ಡಿ. ಗೋಪಾಲಕೃಷ್ಣ, ಬಹುಜನ ಸಮಾಜ ಪಾರ್ಟಿ-ಸುರೇಶ್. ಎಸ್.ಬಿ, ಎನ್.ಎಂ.ಕೆ ಪಕ್ಷದ ಅಭ್ಯರ್ಥಿ ಎಲ್. ಬಾಬು, ಆರ್.ಪಿ.ಐ ಪಕ್ಷ- ಎನ್.ಜೆ. ನರಸಿಂಹಮೂರ್ತಿ, ಲೋಕಶಕ್ತಿ ಪಕ್ಷ- ಎಂ.ಎಸ್. ಬದರಿನಾರಯಣ, ರಿಪಬ್ಲಿಕ್ ಪಾರ್ಟಿ ಆಪ್ ಇಂಡಿಯಾ- (ಕರ್ನಾಟಕ) ಪಕ್ಷದ ತಿಮ್ಮರಾಯಪ್ಪ, ದಿಲ್ಲಿ ಜನತಾ ಪಾರ್ಟಿ- ಕೆ.ಆರ್. ದೇವರಾಜ, ವಿ.ಸಿ.ಕೆ (ವಿಡುದಲೈ ಚಿರತೆಗಳ್ ಕಚ್ಚಿ)- ಎಂ. ವೇಣುಗೋಪಾಲ ವಿವಿಧ ಪಕ್ಷಗಳಿಂದ ನಾಮಪತ್ರ ಸಲ್ಲಿಕೆಯಾಗಿವೆ.
ಒಟ್ಟಾರೆ ಇದುವರೆಗೆ 25 ಅಭ್ಯರ್ಥಿಗಳಿಂದ 33 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ ವೆಬ್ಸೈಟ್ https://affidavit.eci.gov.in ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ ಮತ್ತು ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡವಿಟ್ನ್ನು ಪ್ರಚುರ ಪಡಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ. ನಾಮಪತ್ರ ಸ್ವೀಕರಿಸುವ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶಂಕರ ವಣಿಕ್ಯಾಳ ಅವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ರೋಡ್ ಶೋ
ಕೋಲಾರ: ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರುವಾರ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಬಳಿಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಗರದಲ್ಲಿ ರೋಡ್ ಶೋ ನಡೆಸಿದರು
ಈ ಸಂದರ್ಭದಲ್ಲಿ ಅವರೊಂದಿಗೆ ಅಭ್ಯರ್ಥಿ, ಸಚಿವರು, ಶಾಸಕರು, ಮುಖಂಡರು ಜೊತೆ ಡಿ.ಕೆ.ಶಿವಕುಮಾರ್ ನಗರದ ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತೆರೆದ ವಾಹನದಲ್ಲಿ ಮುಖಂಡರು ಕೆ.ವಿ.ಗೌತಮ್ ಅವರಿಗೆ ಮತಯಾಚಿಸಿದರು. ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಬಂಗಾರಪೇಟೆ ವೃತ್ತದಿಂದ ಎಸ್ಎನ್ಆರ್ ಜಿಲ್ಲಾಸ್ಪತ್ರೆ ಮಾರ್ಗವಾಗಿ ಗಾಂಧಿವನಕ್ಕೆ ವಾಹನ ಸಾಗಿತು. ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಡಿ.ಕೆ.ಶಿವಕುಮಾರ್ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಕೋಲಾರ ಜಿಲ್ಲೆಯ ಜನರು ಒಂದು ಕಾಲದಲ್ಲಿ ಚಿನ್ನ ಕೊಟ್ಟಿದ್ದೀರಿ. ಈಗ ತರಕಾರಿ, ಹಾಲು ಕೊಡುತ್ತಿದ್ದೀರಿ. ಈ ಬಾರಿ ನನ್ನ ಮನವಿ ಎಂದರೆ ನಮ್ಮ ಹೊಸ ಅಭ್ಯರ್ಥಿಯನ್ನು ಸಂಸದರನ್ನಾಗಿ ಆಯ್ಕೆ ಮಾಡಿ. ನಾನು ಹಾಗೂ ಮುಖ್ಯಮಂತ್ರಿ, ಕೆ.ಎಚ್.ಮುನಿಯಪ್ಪ, ಜಿಲ್ಲೆಯ ಶಾಸಕರೊಂದಿಗೆ ಮಾತನಾಡಿ ಗೌತಮ್ ಅವರನ್ನು ಕಣಕ್ಕಿಳಿಸಿದ್ದೇವೆ ಎಂದರು.
ರಾಜ್ಯದ ಐದು ಪರಿಶಿಷ್ಟ ಜಾತಿ ಕ್ಷೇತ್ರಗಳಲ್ಲಿ ಮೂವರು ಬಲಗೈ ಅಭ್ಯರ್ಥಿಗಳನ್ನು ಹಾಗೂ ಇಬ್ಬರು ಎಡಗೈ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಈ ಮೂಲಕ ಸಾಮಾಜಿಕ ನ್ಯಾಯದ ಸಮತೋಲನ ಕಾಯ್ದುಕೊಂಡಿದ್ದೇವೆ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಹಾಗೂ ಸರ್ವಾಧಿಕಾರ ತೊಲಗಿಸಲು ಕಾಂಗ್ರೆಸ್ ಪಕ್ಷಕ್ಕೆ ವೋಟು ಹಾಕಿ ಎಂದು ಮನವಿ ಮಾಡಿದರು.
ಕೋವಿಡ್ ಕಾಲದಲ್ಲಿ ಜನರ ನೆರವಿಗೆ ನಿಂತಿದ್ದ ಕಾಂಗ್ರೆಸ್. ನಾನು ಮಾಲೂರಿಗೆ ಬಂದು ತರಕಾರಿ ಖರೀದಿಸಿ ರೈತರಿಗೆ ನೆರವಾದೆ. ಕೋವಿಡ್ನಿಂದ ಮೃತರಾದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಹೆಣವನ್ನು ದೆಹಲಿಯಿಂದ ತರಲೂ ಸಾಧ್ಯವಾಗಲಿಲ್ಲ. ನನ್ನ ತಮ್ಮ ಡಿ.ಕೆ.ಸುರೇಶ್ ತನ್ನ ಜೀವ ಲೆಕ್ಕಿಸದೆ ಕೋವಿಡ್ನಿಂದ ಮೃತರಾದವರನ್ನು ಹೊತ್ತುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸಲು ನೆರವಾದ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ವೇಳೆ ನೀಡಿದ್ದ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ನಾವು ಪೂರೈಸಿದ್ದೇವೆ. ಈ ಭಾಗದ ಜನರಿಗೆ ಕುಡಿಯುವ ನೀರು ಪೂರೈಸಲು ಎತ್ತಿನಹೊಳೆ ಯೋಜನೆ ಜಾರಿ ಮಾಡುತ್ತಿದ್ದೇವೆ. ಈಗಾಗಲೇ 15 ಸಾವಿರ ಕೋಟಿ ಖರ್ಚಾಗಿದೆ. ಕೆ.ಸಿ.ವ್ಯಾಲಿ ಮೂಲಕ ಅಂತರ್ಜಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ. ಬಿಜೆಪಿಯಿಂದ ಏನಾದರೂ ಲಾಭವಾಗಿದೆಯೇ ತಮ್ಮ ಆದಾಯ ದ್ವಿಗುಣಗೊಂಡಿದೆಯಾ ನಿಮ್ಮ ಖಾತೆಗೆ ಹಣ ಬಂತಾ ಮೋದಿ ಗಾಳಿ ಇದೆಯಾ’ ಎಂದು ಅವರು ಪ್ರಶ್ನಿಸಿದರು.
‘ಕೋಲಾರದಲ್ಲಿ ತಮ್ಮ ಅಭ್ಯರ್ಥಿ ಗೌತಮ್ ಅಲ್ಲ. ಸಿದ್ದರಾಮಯ್ಯ, ನಾನು, ಖರ್ಗೆ ಅಭ್ಯರ್ಥಿ ಎಂದು ಭಾವಿಸಿ. ಇಲ್ಲಿನ ಜನರ ಸ್ವಾಭಿಮಾನವನ್ನು ಉಳಿಸಬೇಕು ಎಂದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಕೋಲಾರ ಕಾಂಗ್ರೆಸ್ನ ಭದ್ರಕೋಟೆ. 1952ರಿಂದ ಗೆಲ್ಲುತ್ತಾ ಬಂದಿದ್ದೇವೆ. ಕಳೆದ ಬಾರಿ ವ್ಯತ್ಯಾಸದಿಂದಾಗಿ ಸೋಲಾಯಿತು ಎಂದರು.
ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ನಾವೆಲ್ಲಾ ಸೇರಿ ಗೌತಮ್ ಅವರನ್ನು ಗೆಲ್ಲಿಸಲು ಶಪಥ ಮಾಡಿದ್ದೇವೆ. ಬಿಸಿಲು ಇದ್ದರೂ ಜನ ಬಹಳ ಸಂಖ್ಯೆಯಲ್ಲಿ ಬಂದಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ’ ಎಂದು ಹೇಳಿದರು.
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ‘ಮಲ್ಲೇಶ್ ಬಾಬು ವಿರುದ್ಧ ಬಂಗಾರಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ನಾನು ಎರಡು ಬಾರಿ ಗೆದ್ದಿದ್ದೇನೆ. ನೀವೆಲ್ಲಾ ಸೇರಿ ಮೂರನೇ ಬಾರಿ ಸೋಲಿಸಿ. ಶ್ರೀಮಂತ ಮಲ್ಲೇಶ್ ಬಾಬು ಬೇಕೋ, ಬಡವ ಗೌತಮ್ ಬೇಕೋ ನಿರ್ಧರಿಸಿ
ಕ್ಷೇತ್ರದಲ್ಲಿ ಬಲಗೈ ಸಮುದಾಯದ ಮತಗಳು ಹೆಚ್ಚು ಇದೆ. ಹೀಗಾಗಿಯೇ, ಅಭ್ಯರ್ಥಿ ಕೊಡಿ ಎಂದು ಕೋರಿದ್ದೆವು. ಆದರೆ, ಸಾಮಾಜಿಕ ನ್ಯಾಯದ ಪ್ರಕಾರ ಈಗ ಟಿಕೆಟ್ ಹಂಚಲಾಗಿದೆ ಎಂದರು.
ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಕಳೆದ ಬಾರಿ ನಾವು ಜೆಡಿಎಸ್ ಜೊತೆ ಸೇರಿ ಯಾಮಾರಿದೆವು. ಕೇವಲ 1 ಸ್ಥಾನ ಪಡೆದೆವು. ಇದೇ ಗತಿ ಈ ಬಾರಿ ಬಿಜೆಪಿಗೆ ಬರಲಿದೆ ಎಂದು ನುಡಿದರು
ಬಳಿಕ ಡಿ.ಕೆ.ಶಿವಕುಮಾರ್ ಅವರು ಪ್ರಜಾಧ್ವನಿ ಬಸ್ ಏರಿ ಕಾಲೇಜು ವೃತ್ತ ತಲುಪಿದರು ವಾಲ್ಮೀಕಿಗೆ ಮಾಲಾರ್ಪಣೆ ಮಾಡಿ ಅಲ್ಲಿ ಯಾತ್ರೆ ಕೊನೆಗೊಂಡಿತು ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಶಿಡ್ಲಘಟ್ಟ ರಾಜೀವ್ ಗೌಡ, ಪುಟ್ಟು ಅಂಜಿನಪ್ಪ, ಕಾಂಗ್ರೆಸ್ ಮುಖಂಡರಾದ ಊರುಬಾಗಿಲು ಶ್ರೀನಿವಾಸ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕೆ.ಜಯದೇವ್, ಆದಿನಾರಾಯಣ ಇದ್ದರು.