ಒಂದುರಕ್ತದಾನದಿಂದ ಮೂವರು ರೋಗಿಗಳಿಗೆ ಜೀವದಾನ ಮಾಡುವ ಅವಕಾಶ ಒದಗಿಬರುತ್ತದೆ.
ರಕ್ತದಾನ ಎನ್ನುವುದು ಬಹಳ ಪವಿತ್ರವಾದ ಕಾರ್ಯ. ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಲೇಬೇಕು.
ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ ಎಂದು ಭಾವಿಸಿ, ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ತರನ್ನು ಮತ್ತು ಗಾಯಗೊಂಡವರನ್ನು ಬದುಕಿಸುವುದು ಸಾಧ್ಯವಾಗುತ್ತದೆ. ಅನೇಕ ತುರ್ತುಸಂದರ್ಭಗಳಲ್ಲಿ ಜನರ ಜೀವ ಉಳಿಸಬೇಕಾದರೆ ರಕ್ತಪೂರೈಕೆ ಬೇಕೇ ಬೇಕು. ಇಷ್ಟು ಬೇಡಿಕೆ ಇರುವ ರಕ್ತಕ್ಕೆ ಬದಲಾಗಿ ಏನನ್ನೋ ಕೊಡಲು ಆಗುವುದಿಲ್ಲ.
ವೈಜ್ಞಾನಿಕವಾಗಿ ಸಾಕಷ್ಟು ಸಂಶೋಧನೆ ನಡೆದಿದ್ದರೂ ಕೃತಕವಾಗಿ ರಕ್ತವನ್ನು ತಯಾರಿಸಲು ಯಾವುದೇ ವಿಜ್ಞಾನಿಯಿಂದ ಸಾಧ್ಯವಾಗಿಲ್ಲ, ಅನಿವಾರ್ಯವಾಗಿ ರಕ್ತದಾನಿಗಳ ಮೇಲೆ ಅವಲಂಬಿಸಬೇಕಾಗಿದೆ. ಸ್ವಯಂ ಸ್ಪೂರ್ತಿಯಿಂದ ರಕ್ತದಾನ ಮಾಡುವ ಪದ್ಧತಿ ಇನ್ನೂ ಚುರುಕುಗೊಳ್ಳಬೇಕಾಗಿದೆ. ಪ್ರತಿಫಲದ ಅಪೇಕ್ಷೆ ಇಲ್ಲದೆ ಮಾನವೀಯತೆಯ ದೃಷ್ಟಿಯಿಂದ ಬೇರೆಯವರಿಗೆ ರಕ್ತ ನೀಡುವುದೇ ನಿಜವಾದ ರಕ್ತದಾನ ವಾಗಿದೆ.ಅಭಯಹಸ್ತ
Day: April 9, 2024
ಕುಂದಾಪುರ:ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಓರ್ವ ಮಹಿಳೆ ಸಾವು ಇಬ್ಬರ ಸ್ಥಿತಿ ಗಂಭೀರ
ಕುಂದಾಪುರ:ಎ.9: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ನಡೆದಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ.
ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫ್ಲೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡೆರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್ ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ ಸಂಪೂರ್ಣ ನುಚ್ಚು ನೂರಾಗಿರುವ ಇನ್ನೋವಾ ಕಾರಿನಲ್ಲಿದ್ದ ಮೂವರ ಪೈಕಿ ಓರ್ವ ಮಹಿಳೆ ಮೃತಪಟ್ಟಿರುತ್ತಾರೆ.
ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಸಂದರ್ಭ ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಸರ್ವಿಸ್ ರಸ್ತೆಯಲ್ಲಿ ಮಗುಚಿ ಬಿದ್ದ ಕಾರಿನಿಂದಾಗಿ ಸಂಚಾರ ಸಮಸ್ಯೆ ಉಂಟಾಗಿದ್ದು ಸ್ಥಳೀಯ ಸಾರ್ವಜನಿಕರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಟ್ಟರು.
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಚಾರ್ಯ ಶಾಲೆಗಳ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – 4ನೇ ದಿನ
ಕುಂದಾಪುರ (ಎ. 9) : ಕುಂದಾಪುರ ಎಜುಕೇಶನ್ ಸೊಸೈಟಿ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಸಮ್ಮರ್ ಕ್ಯಾಂಪ್ ʼಪ್ಯಾಟಿ ಮಕ್ಕಳ್ ಹಳ್ಳಿ ಟೂರ್ʼ 4ನೇ ದಿನವಾದ ಇಂದು ಶಿಬಿರಾರ್ಥಿಗಳು ವಾಣಿಜ್ಯ ಬೆಳೆಗಳ ಬಗ್ಗೆ ಅರಿಯಲು ಆಲೂರಿಗೆ ಭೇಟಿ ನೀಡಿದರು.
ಆಲೂರಿನಲ್ಲಿರುವ ಬಾಳೆಯ ತೋಟ ಹಾಗೂ ಅಡಿಕೆ ತೋಟಗಳನ್ನು ವೀಕ್ಷಿಸಿ ಅದರ ನಿರ್ವಹಣೆ ಅಲ್ಲದೇ ರಬ್ಬರ್ ತೋಟದಲ್ಲಿ ರಬ್ಬರ್ ಹಾಲಿನ ಸಂಗ್ರಹಣೆ, ನಿರ್ವಹಣೆ, ಮರದ ಬಾಳಿಕೆ ಹಾಗೂ ರಬ್ಬರ್ ನಿಂದ ತಯಾರಿಸುವ ವಿವಿಧ ಉಪಯೋಗಿ ವಸ್ತುಗಳ ಬಗ್ಗೆ ತೋಟದ ಮಾಲೀಕರಾದ ವಿ. ವಿ. ಥಾಮಸ್ ರವರಿಂದ ಹೆಚ್ಚಿನ ಮಾಹಿತಿಯನ್ನು ಪಡೆದರು.
ವಿದ್ಯಾರ್ಥಿಗಳು ತೋಟದಲ್ಲಿ ವಿವಿಧ ಆಟಗಳನ್ನು ಆಡಿ ಸಂಭ್ರಮಿಸಿದರು. ಸೌಪರ್ಣಿಕಾ ನದಿಯಲ್ಲಿನ ನೀರಾಟವು ವಿದ್ಯಾರ್ಥಿಗಳ ಖುಷಿಯನ್ನು ಇಮ್ಮಡಿಗೊಳಿಸಿತು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಕ್ತದಾನ : ಅಭಯಹಸ್ತ ಟ್ರಸ್ಟ್ ಉಡುಪಿ 200 ರ ಸಂಭ್ರಮ
ಉಡುಪಿ : ಅವಿಭಾಜ್ಯ ಜಿಲ್ಲೆಯ ಖ್ಯಾತ ರಕ್ತದಾನಿ ಸಂಸ್ಥೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ .ಉಡುಪಿ ಮತ್ತು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಇದರ ಸಹಕಾರದಲ್ಲಿ ರಕ್ತ ಕೇಂದ್ರ ಕೆಎಂಸಿ ಮಣಿಪಾಲದಲ್ಲಿ ನಡೆದ 200ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಎಚ್ ಅಶೋಕ್ ಉದ್ಘಾಟಿಸಿದರು. ನಂತರದಲ್ಲಿ ಮಾತನಾಡಿದ ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಕೇವಲ 4 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 200ನೇ ರಕ್ತದಾನ ಶಿಬಿರ ಆಯೋಜಿಸಿ ಉಡುಪಿ ಜಿಲ್ಲೆಯ ಹಿರಿಮೆ ಹೆಚ್ಚಿಸಿದೆ. ಪ್ರತಿ ವರ್ಷವು ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್, ಮೇ ತಿಂಗಳಲ್ಲಿ ಕೃತಕ ರಕ್ತದ ಕೊರತೆ ತಲೆತೋರುತ್ತಿದ್ದು, ಇದರ ಶಾಶ್ವತ ಪರಿಹಾರಕ್ಕೆ ಎಪ್ರಿಲ್, ಮೇ ತಿಂಗಳಲ್ಲಿ ಕಾಲೇಜ್ ಗಳಲ್ಲಿ ಹೆಚ್ಚು ಹೆಚ್ಚು ರಕ್ತದಾನ ಶಿಬಿರ ನಡೆಯುವಂತೆ ಪ್ರೇರಪಿಸಿದರೆ ಈ ಕೃತಕ ರಕ್ತದ ಅಭಾವದಿಂದ ಹೊರಬರಲು ಸಾಧ್ಯ ಎಂದರು.
ಡಾ. ಶಮಿ ಶಾಸ್ತ್ರೀ ಸಭೆಯ ಅಧ್ಯಕ್ಷತೆ ವಹಿಸಿದರು.
ಡಾ. ಟೋಮ್ ದೇವಸ್ಯ ಹೃದ್ರೋಗ ತಜ್ಞರು ಕೆಎಂಸಿ ಮಣಿಪಾಲ, ಡಾ. ವಿಜಯ ಕುಮಾರ್, ಮಕ್ಳಳ ಶಸ್ತ್ರಚಿಕಿತ್ಸೆ ತಜ್ಞ ವೈದ್ಯರು ಕೆಎಂಸಿ ಮಣಿಪಾಲ, ಡಾ. ದೇವಿಪ್ರಸಾದ್ ಹೆಜಮಾಡಿ ಪ್ರೊ. ಕೆಎಂಸಿ ಮಂಗಳೂರು, ಡಾ.ಅದರ್ಶ್ ಹೆಬ್ಬಾರ್, ವೈದ್ಯಕೀಯ ನಿರ್ದೇಶಕರು ಆದರ್ಶ ಆಸ್ಪತ್ರೆ ಕುಂದಾಪುರ, ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ಅಧ್ಯಕ್ಷರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಡಾ. ಹರಿಣಾಕ್ಷಿ ಕರ್ಕೇರಾ ಅಧ್ಯಕ್ಷರು, ಜೆಸಿಐ ಉಡುಪಿ ಸಿಟಿ, ದೇವದಾಸ್ ಪಾಟ್ಕರ್, ರಾಘವೇಂದ್ರ ಪ್ರಭು ಕರ್ವಾಲು, ಶರತ್ ಕಾಂಚನ್ ಆನಗಳ್ಳಿ, ಉದಯ ನಾಯ್ಕ್ ಉಪಸ್ಥಿತರಿದ್ದರು.
ಡಾ. ಬಾಲಕೃಷ್ಣ ಮದ್ದೋಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಡಾ ದಿನೇಶ್ ಹೆಗ್ಡೆ ಆತ್ರಾಡಿ ಧನ್ಯವಾದ ಅರ್ಪಿಸಿದರು. ಈ ಯಶಸ್ವಿ ರಕ್ತದಾನ ಶಿಬಿರಕ್ಕೆ ರೋಟರಿ ಪರ್ಕಳ, ಜಿಸಿಐ ಉಡುಪಿ ಸಿಟಿ ಹಾಗೂ ಎನ್ ಎಸ್ ಎಸ್ ಘಟಕ ಎಂಐಟಿ ಮಣಿಪಾಲ ಸಹಕಾರ ನೀಡಿದ್ದು, ಒಟ್ಟು 56 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಜಿಲ್ಲಾಧಿಕಾರಿ ಅಕ್ರಂಪಾಷರವರು ತಹಶೀಲ್ದಾರರ ಜೊತೆ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 5 ಕೊಠಡಿಗಳ ಸ್ಟ್ರಾಂಗ್ ರೂಂಗಳ ಬಗ್ಗೆ ಪರಿಶೀಲನೆ
ಶ್ರೀನಿವಾಸಪುರ : ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 5 ಕೊಠಡಿಗಳ ಸ್ಟ್ರಾಂಗ್ ರೂಂಗಳ ಬಗ್ಗೆ ಜಿಲ್ಲಾಧಿಕಾರಿ ಅಕ್ರಂಪಾಷ ರವರು ತಹಶೀಲ್ದಾರರ ಜೊತೆ ಪರಿಶೀಲನೆ ನಡೆಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರು ತಾಲೂಕು ಕಚೇರಿಗೆ ಭೇಟಿ ನೀಡಿ, ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
ಪುರಸಭೆಯಲ್ಲಿ ನಡೆಯುತ್ತಿದ್ಧಮತಗಟ್ಟೆ ಅಧಿಕಾರಿಗಳ ತರಬೇತಿಯಲ್ಲಿ ಭಾಗವಹಿಸಿ ಕೆಲವು ಸಲಹೆ ಸೂಚನೆ ನೀಡಿದರು.
ತಾಲೂಕು ಕಚೇರಿಯ ಮೇಲು ಅಂತಸ್ತಿನಲ್ಲಿ ಕಚೇರಿ ಕೆಲಸಕ್ಕೆ ಉಪಯೋಗವಾಗಲು ಕಟ್ಟುತ್ತಿರುವ ಕೊಠಡಿಗಳ ಜೊತೆ ಇನ್ನಷ್ಟು ಜಾಗ ಅಗಲೀಕರಿಸಿಕೊಂಡು ನಿರ್ವಹಣೆ ಮಾಡಲು ತಿಳಿಸಿದರು. ಹಾಗೆಯೇ, ಲೋಕಸಭಾ ಚುನಾವಣೆ ಕರ್ತವ್ಯದಲ್ಲಿ ಅಧಿಕಾರಿಗಳು ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ವೀಕ್ಷಿಸಲು
ಇದೇ ಸಮಯದಲ್ಲಿ ಪುರಸಭೆ ಮುಂಭಾಗದಲ್ಲಿ ಅಂಟಿಸಿರುವ ಮತದಾರರ ಜಾಗೃತಿ ಸಹಿ ಅಭಿಯಾನಕ್ಕೆ ಸಹಿ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್.ಸುಧೀಂದ್ರ, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎ.ಜೋಸೆಫ್, ಪುರಸಭೆಯ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಕಸಬಾ ರಾಜಸ್ವ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಕಚೇರಿ ಸಿಬ್ಬಂದಿ ಇತರರು ಹಾಜರಿದ್ದರು.
ಕುಂದಾಪುರದಲ್ಲಿ ಉಚಿತ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆ
ಕುಂದಾಪುರ : ಗೆಳೆಯರ ಸ್ವಾವಲಂಬನ (ರಿ.) ಕುಂದಾಪುರ-ಮುಂಬೈ ಇವರ ಆಶ್ರಯದಲ್ಲಿ ಕುಂದಾಪುರದ ರಾಮ ಮಂದಿರ ಮಾರ್ಗದಲ್ಲಿ ವಿಜಯ ಟೆಕ್ಸ್ಟೈಲ್ಸ್ ಎದುರಿನ ಕಚೇರಿಯಲ್ಲಿ ಉಚಿತ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆಯು ಮಾರ್ಚ್ 25 ರಂದು ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಪ್ರಸಿದ್ಧ ವಸ್ತ್ರ (ಡ್ರೆಸ್) ವಿನ್ಯಾಸಕಿ ಶ್ರೀಮತಿ ಪ್ರಮೀಳಾ ಅವರು ಕುಂದಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಹಿಳೆಯರು ಇದರ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಹೊಲಿಗೆ ಶಿಬಿರಕ್ಕೆ ಶುಭ ಹಾರೈಸಿದರು.
ಕೇಂದ್ರದ ಅಧ್ಯಕ್ಷರಾದ ವೆಂಕಟೇಶ ಪೈ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಗೆಳೆಯರ ಸ್ವಾವಲಂಬನವು ಕಳೆದ 12 ವರ್ಷಗಳಿಂದ ಕುಂದಾಪುರ-ಮುಂಬೈಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಟ್ಟೆ ಚೀಲ ಹೊಲಿಯುವುದರೊಂದಿಗೆ “ಪ್ಲಾಸ್ಟಿಕ್ ತ್ಯಜಿಸಿ, ಬಟ್ಟೆ ಚೀಲ ಬಳಸಿ, ಪರಿಸರ ರಕ್ಷಿಸಿ” ಎಂಬ ತತ್ವದೊಂದಿಗೆ ಸಮಾಜ ಸೇವೆಗೈಯುತ್ತಿದೆ. 200ಕ್ಕೂ ಮಿಕ್ಕಿ ಪುರುಷ, ಮಹಿಳೆಯರು ಕೇಂದ್ರದಲ್ಲಿ ಚೀಲ ಹೊಲಿಯುತ್ತಿದ್ದಾರೆ.
ಈಗ ಕುಂದಾಪುರದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಾಥಮಿಕ ಹೊಲಿಗೆ, ಇಲೆಕ್ಟ್ರಿಕ್ ಮೋಟರ್ ಅಳವಡಿಸಿ ಹೊಲಿಗೆ, ಆಲ್ಟ್ರೇಷನ್, ಫಿಟ್ಟಿಂಗ್, ಬಟ್ಟೆ ಚೀಲಗಳ ಹೊಲಿಗೆ, ಹೊಲಿಗೆ ಯಂತ್ರದ ಸಣ್ಣ ಪುಟ್ಟ ರಿಪೇರಿ ಇತ್ಯಾದಿಗಳನ್ನು ಕಲಿಸಲಾಗುವುದು. ಸಮಯ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರ ತನಕ, ವಯೋಮಿತಿ ಇಲ್ಲ ಎಂದರು.
ಹೊಲಿಗೆ ಶಿಬಿರದ ಶಿಕ್ಷಕಿ ಶ್ರೀಮತಿ ನಾಗಮಣಿ ಅವರು ಎಲ್ಲರಿಗೂ ವಂದಿಸಿದರು.