ಕೋಲಾರ:- ಸತತ ಏಳು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿ ನನ್ನ ಬೆನ್ನಿಗೆ ನಿಂತ ಕೋಲಾರ ಜಿಲ್ಲೆಯ ಜನರ ಇಷ್ಟಾರ್ಥಗಳನ್ನು ರೇಣುಕಾ ಯಲ್ಲಮ್ಮ ತಾಯಿ ನೆರವೇರಿಸಲು ನನಗೆ ರಾಜಕೀಯ ಜನ್ಮ ನೀಡಿದ ಜಿಲ್ಲೆಯಲ್ಲಿ ಉತ್ತಮ ಮಳೆ,ಬೆಳೆಯಾಗಿ ಸಮೃದ್ದಿ ನೆಲಸಲಿ ಎಂದು ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರಾರ್ಥಿಸಿದರು.
ನಗರದ ಪಿಸಿ ಬಡಾವಣೆಯ ರೇಣುಕಾಯಲ್ಲಮ್ಮ ಹೂವಿನ ಕರಗಮಹೋತ್ಸವದ ಹಿನ್ನಲೆಯಲ್ಲಿ ಗುರುವಾರ ಸಂಜೆ ಪ್ರತಿವರ್ಷದಂತೆ ಈ ಬಾರಿಯೂ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ನಂತರ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು.
ಕೋಲಾರದಲ್ಲಿ ರೇಣುಕಾ ಯಲ್ಲಮ್ಮ ದೇವಿ ಕರಗ ಹೆಚ್ಚಿನ ಮನ್ನಣೆ ಗಳಿಸಿದೆ, ಈ ತಾಯಿಗೆ ಶಕ್ತಿ ಇದ್ದು, ಈ ಮಾತೆ ಜಿಲ್ಲೆಯನ್ನು ಚೆನ್ನಾಗಿ ಮುನ್ನಡೆಸುತ್ತಾಳೆ, ಆ ತಾಯಿಯ ಕೃಪೆ ಜಿಲ್ಲೆಗೆ ಇರಬೇಕು ಎಂದರು.
ಕೋಲಾರ ಜಿಲ್ಲೆಯ ಜನತೆ ನನ್ನನ್ನ ಏಳು ಬಾರಿ ಸಂಸದರನ್ನಾಗಿ ಆಯ್ಕೆ ಮಾಡಿದ್ದು, ಮತದಾರ ಬಂಧುಗಳನ್ನು ಪ್ರಾಣ ಇರುವ ತನಕ ನಾನು ಮರೆಯುವುದಿಲ್ಲ ನಾನು ಎಲ್ಲೇ ಇರಲಿ ಕೋಲಾರ ಜಿಲ್ಲೆಯ ಕಾರ್ಯಕರ್ತರನ್ನು ಮರೆಯುವುದಿಲ್ಲ ಯಾವುದೇ ರೀತಿಯ ಕಷ್ಟಗಳು ಇದ್ದರೂ ಕೂಡ ನನಗೆ ಕರೆ ಮಾಡಿ ನಾನು ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಬಡವರಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದೇವೆ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕತೆಯಲ್ಲಿ ಮುಂದೆ ಬರಬೇಕು ಜಿಲ್ಲೆಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದರೆ ಪಕ್ಷದಲ್ಲಿ ಮುಂದೆ ನಿಮಗೂ ಸಹ ಅಧಿಕಾರ ಸಿಗುತ್ತದೆ ಎಂದರು.
ಜನತೆ ಇಂತಹ ದೇವರ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಸೌಹಾರ್ದತೆಯ ವಾತಾವರಣ ನೆಲಸಲು ಸಾಧ್ಯವಾಗುತ್ತದೆ ಎಂದ ಅವರು, ಕೋಲಾರ ಜಿಲ್ಲೆಯ ಜನತೆಯ ಋಣ ತೀರಿಸಲು ಸದಾ ಸಿದ್ದವಾಗಿರುವೆ ಎಂದರು.
ರೇಣುಕಾ ಯಲ್ಲಮ್ಮ ದೇವಿಯ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆ ಮತ್ತು ಬೆಳೆ ಹಾಗೂ ರೈತರಿಗೆ ಉತ್ತಮ ಆರೋಗ್ಯವನ್ನು ಕೊಟ್ಟು ಕಾಪಾಡಲಿ ಎಂದು ತಾಯಿಯಲ್ಲಿ ಬೇಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಇದಕ್ಕೂ ಮೊದಲು ನಗರದ ಅಂಬೇಡ್ಕರ್ ನಗರದಲ್ಲಿ ನಡೆಯುತ್ತಿರುವ ಹೂವಿನ ಕರಗಮಹೋತ್ಸವದಲ್ಲೂ ಪಾಲ್ಗೊಂಡಿದ್ದ ಅವರು, ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿಘಟಕದ ಜಿಲ್ಲಾಧ್ಯಕ್ಷ ಜಯದೇವ್ ನಿವಾಸಕ್ಕೂ ಹೋಗಿ ಬಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಅಧ್ಯಕ್ಷ ಪ್ರಸಾದ್ಬಾಬು,ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್, ಮುಖಂಡರಾದ ಸೋಮಶೇಖರ್, ಯಲ್ಲಪ್ಪ, ಜಗನ್ನಾಥ್,ಮಾರ್ಜೇನಹಳ್ಳಿ ಬಾಬು, ನಾರಾಯಣಸ್ವಾಮಿ,ಮುನಿರಾಜು, ಹಾರೋಹಳ್ಳಿ ಶ್ರೀನಿವಾಸ್, ಕಾರ್ಗಿಲ್ ವೆಂಕಟೇಶ್, ದೇವಾಲಯ ಸಮಿತಿ ಅಧ್ಯಕ್ಷ ಕೆ.ಗಣೇಶ್, ಉಪಾಧ್ಯಕ್ಷ ಸಂಪತ್ಕುಮಾರ್, ಖಜಾಂಚಿ ಮಂಜುನಾಥ್, ನಿರ್ದೇಶಕರಾದ ರಮೇಶ್, ಕೆ.ಆರ್ಮುಗಂ, ಕಿಲಾರಿಪೇಟೆ ಮುನಿಕೃಷ್ಣ, ಶಬರಿ, ಅರ್ಚಕರಾದ ಸುರೇಶಾಚಾರ್ಯ ಮತ್ತಿತರರಿದ್ದರು.
Day: May 24, 2024
ಯುವ ಸಮುದಾಯವು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳತ್ತಾ , ಭಾರತೀಯ ಸಂಸ್ಕøತಿ, ಪರಂಪರೆಯನ್ನು ಅಧ್ಯಾಯನ ಮಾಡಲು ಆಸಕ್ತಿ ವಹಿಸಬೇಕು – ಶ್ರೀ ಮಂಗಳಾನಂದನಾಥಸ್ವಾಮಿ
ಶ್ರೀನಿವಾಸಪುರ : ಯುವ ಸಮುದಾಯವು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳತ್ತಾ , ಭಾರತೀಯ ಸಂಸ್ಕøತಿ, ಪರಂಪರೆಯನ್ನು ಅಧ್ಯಾಯನ ಮಾಡಲು ಆಸಕ್ತಿ ವಹಿಸಬೇಕು ಎಂದು ಚಿಕ್ಕಬಳ್ಳಾಪುರ ಶಾಖ ಮಠದ ಶ್ರೀ ಮಂಗಳಾನಂದನಾಥಸ್ವಾಮಿ ಹೇಳಿದರು.
ತಾಲೂಕಿನ ಬೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಗುರುವಾರ 10ಕೋಟಿ ವೆಚ್ಚದಲ್ಲಿ ಕಾಲೇಜುನ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಇಂದು ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಎಲೆ ಮರಿಕಾಯಿಯಂತೆ ತಮ್ಮಲ್ಲಿನ ವಿದ್ಯೆಯನ್ನು , ಕೌಶಲ್ಯ ತೋರಿಸುತ್ತಾ, ತಮ್ಮಲ್ಲಿನ ವಿದ್ಯೆಯನ್ನು ಕೌಶಲ್ಯ ಪ್ರೋತ್ಸಾಹಿಸುವವರು ಇಲ್ಲದೆ ಅರ್ಧಕ್ಕೆ ನಿಲ್ಲಿಸುವಂತಾಗಿದೆ ಈ ನಿಟ್ಟಿನಲ್ಲಿ ಬಿಜಿಎಸ್ ಶೈಕ್ಷಣಿಕ ಆಡಳಿತ ಮಂಡಲಿಯು ಗ್ರಾಮೀಣ ಮಕ್ಕಳ ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹತ್ತುಹಲವಾರು ಕಾರ್ಯಕ್ರಮಗಳ ಸಹ ಹಮ್ಮಿಕೊಂಡಿದೆ ಎಂದರು.
ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿ 10 ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು. ಬಿಜಿಎಸ್ ವತಿಯಿಂದ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ.ಎಂದು ಮಾಹಿತಿ ನೀಡಿದರು.
ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಈ ಭಾಗದಲ್ಲಿ ದೊಡ್ಡಮಟ್ಟದಲ್ಲಿ ಕಾಲೇಜುಗಳು ಇಲ್ಲ. ಬಿಜಿಎಸ್ ಶೈಕ್ಷಣಿಕ ಆಡಳಿತ ಮಂಡಲಿಯು ಕೋಟಿಗಟ್ಟಲೇ ಖರ್ಚು ಮಾಡುತ್ತಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಸದಾವಕಾಶ ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಬಿಜಿಎಸ್ ಶೈಕ್ಷಣಿಕ ಆಡಳಿತ ಮಂಡಲಿಯು ಶೈಕ್ಷಣಿಕ ಅಭಿವೃದ್ಧಿಗಾಗಿ ಬೇಕಾದ ಸಲಹೆ , ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಶಾಖೆಯ ಬೈರವೇಶ್ವರ ವಿದ್ಯಾನಿಕೇತದ ಶೈಕ್ಷಣಿಕ ಆಡಳಿತ ಮಂಡಲಿಯ ಆಡಳಿತಾಧಿಕಾರಿ ಎನ್. ಶಿವರಾಘವರೆಡ್ಡಿ , ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಬೈರವೇಶ್ವರ ವಿದ್ಯಾನಿಕೇತನ ನಿರ್ದೇಶಕ ಎ.ವೆಂಕಟರೆಡ್ಡಿ, ಪ್ರಾಂಶುಪಾಲರಾದ ಗಂಗಾಧರ್, ವೆಂಕಟರಮಣಾರೆಡ್ಡಿ, ಕೃಷ್ಣಮೂರ್ತಿ, , ಡಿಸಿಸಿ ಬ್ಯಾಂಕ್ ನಿದೇರ್ಶಕ ವೆಂಕಟರೆಡ್ಡಿ, ಮುಖಂಡರಾದ ಲಕ್ಷ್ಮಣೆಡ್ಡಿ , ಶಿವಪುರ ಗಣೇಶ್ , ಸುಬ್ಬಿರೆಡ್ಡಿ, ಇತರರು ಇದ್ದರು.
ಖಾಸಗಿ ಶಾಲೆಗಳ ದುಬಾರಿ ಶುಲ್ಕ ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಿ ಜಿಲ್ಲಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ-ರೈತಸಂಘ
ಕೋಲಾರ,ಮೇ.23: ಖಾಸಗಿ ಶಾಲೆಗಳ ದುಬಾರಿ ಶುಲ್ಕ ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಿ ಜಿಲ್ಲಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಮಾಡಿ ಖಾಲಿ ಇರುವ ಶಿಕ್ಷಕರ ನೇಮಕ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ರೈತಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
ನಗರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ದೇಶದ ಭವಿಷ್ಯ ರೂಪಿಸುವ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸದೇ ಹೋದರೆ ಮುಂದಿನ ದಿನಗಳಲ್ಲಿ ಶಿಕ್ಷಣಕ್ಕಾಗಿ ಯುವಕರು ರಾಜಕಾರಣಿಗಳ ವಿರುದ್ಧ ಕಂಡಕಂಡಲ್ಲಿ ಕಲ್ಲಿನಿಂದ ಹೊಡೆಯುವ ಕಾಲ ದೂರವಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇದ್ದರೆ ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿ ಜವಾನನಿಂದ ದಿವಾನನವರೆಗೂ ಭ್ರಷ್ಟಾಚಾರ ಹೆಚ್ಚಾಗುತ್ತದೆ ಎಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಖಾಸಗಿ ಶಾಲೆಗಳಲ್ಲಿ ಅನಧೀಕೃತ ಸಿ.ಬಿ.ಎಸ್.ಸಿ ಐ.ಸಿ ಎಸ್.ಸಿ ಹೆಸರಿನಲ್ಲಿ ಹಾಜರಾತಿ ಮಾಡಿಕೊಂಡು ವಂಚನೆ ಮಾಡುವ ಜೊತೆಗೆ ಮಕ್ಕಳಿಗೆ ಕಡ್ಡಾಯವಾಗಿ ಶಾಲೆಯಲ್ಲಿ ಪಠ್ಯಪುಸ್ತಕ ಸಮವಸ್ತ್ರ, ಶೂ,ಖರೀದಿ ಮಾಡಬೇಕೆಂಬ ನಿಯಮ ಜಾರಿ ಮಾಡಿ ಅಧಿಕಾರಿಗಳ ಕಣ್ಣುಮುಂದೆಯೇ ದಂದೆ ನಡೆಯುತ್ತಿದ್ದರೂ ಸಂಬಂಧಪಟ್ಟ ಶಿಕ್ಷಣ ಇಲಾಖೆಯವರು ಇದ್ದು ಇಲ್ಲದಂತಾಗಿದ್ದಾರೆಂದು ಕಿಡಿಕಾರಿದರು.
ಸಾವಿರಾರು ಬಡ ರೈತ ಕೂಲಿ ಕಾರ್ಮಿಕರ ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನೇ ಅವಲಂಭಿಸಿದ್ದಾರೆ. ನಮ್ಮನ್ನಾಳುವ ಸರ್ಕಾರಗಳು ದೇಶದ ಭವಿಷ್ಯ ರೂಪಿಸುವ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ಕೊಡುವ ಬದಲು ಕೆಲಸಕ್ಕೆ ಬಾರದ ವಿಚಾರಗಳನ್ನು ಚರ್ಚೆ ಮಾಡಿ ಶೈಕ್ಷಣಿಕ ಶಾಲೆಗಳ ಡೋನೇಷನ್ ಹಾವಳಿ ಮರೆತು ಶಿಕ್ಷಣದಲ್ಲೂ ರಾಜಕೀಯ ಮಾಡುವ ಮುಖಾಂತರ ಖಾಸಗಿ ಶಾಲೆಗಳ ಕಾವಲುಗಾರರಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.
ಪ್ರತಿ ಬಾರಿಯೂ ಶೈಕ್ಷಣಿಕ ವರ್ಷ ಪ್ರಾರಂಭವಾದಾಗ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಜೊತೆಗೆ ಹಾಳು ಬಿದ್ದಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣ ಕೊಡಬೇಕಾದ ಸರ್ಕಾರ ಅನುದಾನದ ಕೊರತೆ ನೆಪದಲ್ಲಿ ಖಾಸಗಿ ಶಾಲೆಗಳಿಗೆ ಹಿಂಬಾಗಿಲಿನಿಂದ ಕುಮ್ಮಕ್ಕು ನೀಡುವ ಮುಖಾಂತರ ಬಡವರ ಶಿಕ್ಷಣವನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಅನವಶ್ಯಕವಾಗಿ ಕೆಲಸಕ್ಕೆ ಬಾರದ ಕಾಮಗಾರಿಗಳಿಗೆ ಸಾವಿರಾರು ಕೋಟಿ ಬಿಡುಗಡೆ ಮಾಡುವ ಸರ್ಕಾರ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಹಿಂದೇಟು ಹಾಕುತ್ತಿರುವುದು ಏಕೆ ? ಭೀಕರವಾದ ಮಳೆ ಸುರಿಯುವಾಗ ಸರ್ಕಾರಿ ಶಾಲೆಗಳು ಒಂದಲ್ಲಾ ಒಂದು ಸಮಸ್ಯೆ ಎದುರಿಸುತ್ತಿದೆ.
ಒಂದು ದಿನ ಗೋಡೆ ಬಿದ್ದರೆ ಮತ್ತೊಂದು ದಿನ ಕಾಂಪೌಂಡ್ ಆನಂತರ ಛಾವಣಿ ಕುಸಿಯುತ್ತಿರುವುದರಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಪೋಷಕರು ಹಿಂದೇಟು ಹಾಕಿ ಸಾಲ ಮಾಡಿಯಾದರೂ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಕಾಲಕ್ಕೆ ಪೂರೈಕೆಯಾಗದ ಸಮವಸ್ತ್ರ, ಪಠ್ಯ ಪುಸ್ತಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ನೂರೊಂದು ಭಾಗ್ಯಗಳನ್ನು ನೀಡುವ ಮುಖಾಂತರ ಬಡವರ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿಯಾಗುತ್ತಿದೆ. ಪ್ರತಿವರ್ಷ ಶಾಲೆ ಆರಂಭಕ್ಕೆ ಮುನ್ನ ಮಕ್ಕಳಿಗೆ ಬೇಕಾಗುವ ಸಮವಸ್ತ್ರ, ಪಠ್ಯ ಪುಸ್ತಕ ವಿತರಣೆ ಮಾಡಬೇಕಾದ ಸರ್ಕಾರ ಜಾಣ ನಿದ್ರೆಯಲ್ಲಿದ್ದು, ಶಾಲೆ ಪ್ರಾರಂಭವಾದ ನಂತರ ಸರ್ಕಾರದಿಂದ ಅನುಮತಿಯಿಲ್ಲ. ಟೆಂಡರ್ ಕರೆದಿಲ್ಲ ಎಂದು ಬೇಜವಾಬ್ದಾರಿಯಿಂದ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ನೂರಾರು ಶಾಲೆಗಳು ಮಕ್ಕಳ ಹಾಜರಾತಿ ಇಲ್ಲದೆ ಮುಚ್ಚಿದ್ದರೂ ಅಲ್ಲಿನ ಶಿಕ್ಷಕರು ಹೆಚ್ಚಿನ ಹಾಜರಾತಿ ಇರುವ ಶಾಲೆಗಳಿಗೆ ನಿಯೋಜನೆ ಮಾಡುವಲ್ಲಿ ಶಿಕ್ಷಣ ಇಲಾಖೆ ವಿಫಲವಾಗಿದೆ. ಇನ್ನು ಖಾಲಿ ಇರುವ ಶಿಕ್ಷಕರು ನಿಯೋಜನೆಗೊಂಡಿರುವ ಶಾಲೆಗಳಿಗೆ ಹೋಗದೆ ರಾಜಕೀಯ ಒತ್ತಡ ತಂದು ಬಡ್ಡಿ, ರಿಯಲ್ ಎಸ್ಟೇಟ್, ರಾಜಕೀಯದಲ್ಲಿ ತೊಡಗಿಕೊಳ್ಳುವ ಮುಖಾಂತರ ಗುರುಕುಲಕ್ಕೆ ಅಪಮಾನ ಮಾಡುತ್ತಿದ್ದಾರೆ.
ಅಲ್ಲದೆ ಲಕ್ಷ ಲಕ್ಷ ಸಂಬಳ ಪಡೆದು ಶಾಲೆಗೆ ಹೋಗದೆ ನೂರೊಂದು ನೆಪ ಹೇಳುತ್ತಿರುವ ಶಿಕ್ಷಕರು ಶಾಲೆಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದು, ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸುವ ಮೂಲಕ ಶಿಕ್ಷಕರ ಅವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ಪತ್ರಿಕಾ ಹೇಳಿಕೆ ನೀಡುವ ಸಂದರ್ಭದಲಿ ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನಾರಾಯಣಗೌಡ, ಗೀರೀಶ್, ಪುತ್ತೇರಿ ರಾಜು, ಮುಂತಾದವರಿದ್ದರು.
Passed Away : Mrs.Cecilia D’Souza ( 89) Kundapur. The funeral will be held on 25 th May Morning
Mrs.Cecilia D’Souza ( 89) Kundapur.
W/o Late Camil D’Souza
M/o Gracy/Joe, Jossy/ Janet, Treeza/ Late Charles, Wincy / Gilbert, Monica/ Solomon, Leena/ Cramer, Oswald/ Celine, Grandmother of Diana, Sabrina, Noel, Janice, Jovita, Charlotte, Glenita, Gloria, Glanice, Susanna, Joanna, Delicia, Daniya, Sohan, Great grand M/0 Ryan, Leroy, Asher.
Passed away on 23 th May 2024.
Funeral Cortege leaves Residence “ASHIRWAD ” Behind Church on Saturday 25 th May 2024. 9.30 a.m followed by Mass at 10 a.m & Burial at Holy Rosary Church , Kundapur .
Sorrowing Family.
Contact : 9448574022