ಉಡುಪಿ: ನಾಯಕನಾದವನು ಸವಾಲುಗಳನ್ನು ಎದುರಿಸಿದಾಗ ಮಾತ್ರ ಪ್ರಗತಿಶೀಲನಾಗಿ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಹೇಳಿದರು.
ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24ನೇ ಸಾಲಿನ ವಾರ್ಷಿಕ ಮಹಾ ಸಭೆ ಹಾಗೂ ಸಹಮಿಲನವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾರ್ತಕ ಜಗತ್ತಿನಲ್ಲಿ ನಾಯಕನ ಆಲೋಚನೆಗಳು ಸಮಾಜದಲ್ಲಿ ಬದಲಾವಣೆಯನ್ನು ಬಯಸುವಂತದ್ದಾಗಿರಬೇಕಾಗಿದ್ದು ಹೊಸ ಹೊಸ ಪ್ರಯೋಗಗಳು ಮತ್ತು ಆಲೋಚನೆಗಳೊಂದಿಗೆ ಸಂಘಟನೆಯನ್ನು ಮುನ್ನಡೆಸಬೇಕಾಗಿದೆ ಈ ವೇಳೆ ಬರುವ ಟೀಕೆಗಳನ್ನು ಧನಾತ್ಮಕವಾಗಿ ಸ್ವೀಕರಿಸಿದಾಗ ಉತ್ತಮ ನಾಯಕತ್ವ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಣ್ಯ ಸಂರಕ್ಷಾಣಾಧಿಕಾರಿ ಕ್ಲಿಫರ್ಡ್ ಲೋಬೊ ಮಾತನಾಡಿ ಕ್ರೈಸ್ತ ಸಮುದಾಯ ಸೇವೆ ಪ್ರಥಮಸ್ಥಾನದಲ್ಲಿದ್ದು ಕೇವಲ ಸೇವೆ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಯುವಕರು ಸರಕಾರಿ ಸೇವೆಗಳತ್ತ ಗಮನ ಹರಿಸಬೇಕು ಎಂಬ ಸಲಹೆ ನೀಡಿದರು.
ಸಭೆಯಲ್ಲಿ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಓಲಿವಿಯಾ ಡಿಮೆಲ್ಲೊ ಮಂಡಿಸಿದರೆ, 2023-24 ನೇ ಸಾಲಿನ ಲೆಕ್ಕಪತ್ರವನ್ನು ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಮಂಡಿಸಿದರು. ಮಾನಸ ಸಂಸ್ಥೆಯ ವರದಿಯನ್ನು ಅಧ್ಯಕ್ಷ ಹೆನ್ರಿ ಮಿನೇಜಸ್, ಸಶಕ್ತ ಸಮುದಾಯ ಸೇವಾ ಟ್ರಸ್ಟಿನ ವರದಿಯನ್ನು ಕಾರ್ಯದರ್ಶಿ ಆಲಿಸ್ ರೊಡ್ರಿಗಸ್ ಮಂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷರಾದ ಜಾನ್ ಡಿಸಿಲ್ವಾ, ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನಿಕಟಪೂರ್ವ ಅಧ್ಯಕ್ಷರಾದ ಮೇರಿ ಡಿಸೋಜಾ, ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಉಪಾಧ್ಯಕ್ಷರಾದ ಸೊಲೊಮನ್ ಆಲ್ವಾರಿಸ್, ಸಹಕಾರ್ಯದರ್ಶಿ ಲೂಯಿಸ್ ಡಿಸೋಜಾ, ಲೆಸ್ಲಿ ಕರ್ನೆಲಿಯೋ, ವಲಯ ಅಧ್ಯಕ್ಷರಾದ ರೋಸಿ ಕ್ವಾಡ್ರಸ್, ಜುಲಿಯೆಟ್ ಡಿಸೋಜಾ, ವಿಲ್ಸನ್ ಡಿ ಆಲ್ಮೇಡಾ, ವಿಲ್ಸನ್ ಮಸ್ಕರೇನಸ್, ಶಾಂತಿ ಪಿರೇರಾ ಉಪಸ್ಥಿತರಿದ್ದರು.
ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ ಸ್ವಾಗತಿಸಿ, ಕಾರ್ಯದರ್ಶಿ ಓಲಿವಿಯಾ ಡಿಮೆಲ್ಲೊ ವಂದಿಸಿದರು. ಹರ್ಷಿತ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
Day: June 9, 2024
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಂದೇ ರನ್ವೇಯಲ್ಲಿ ಒಂದು ವಿಮಾನ ಲ್ಯಾಂಡಿಂಗ್ ಮತ್ತೊಂದು ಟೇಕಾಫ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾದುರಂತ
ಮುಂಬೈ: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಶನಿವಾರ ಸಂಜೆ ಒಂದೇ ರನ್ವೇಯಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದರೆ ಇಂಡಿಗೋ ವಿಮಾನ ಲ್ಯಾಂಡಿಂಗ್ ಆಗಿದೆ.
ಏರ್ ಇಂಡಿಯಾ ವಿಮಾನ ತಿರುವನಂತಪುರಂಗೆ ಟೇಕಾಫ್ ಆಗುತ್ತಿತ್ತು. ಈ ಸಂದರ್ಭದಲ್ಲಿ ಇಂದೋರ್ನಿಂದ ಆಗಮಿಸಿದ ಇಂಡಿಗೋ ವಿಮಾನಕ್ಕೆ ತಪ್ಪಾಗಿ ರನ್ವೇಯಲ್ಲಿ ಲ್ಯಾಂಡಿಂಗ್ ಮಾಡಲು ಅನುಮತಿ ಸಿಕ್ಕಿದೆ.
ಅನುಮತಿ ಸಿಕ್ಕಿದ ಕಾರಣ ಪೈಲಟ್ ರನ್ವೇಯಲ್ಲಿ ಟಚ್ಡೌನ್ ಆಗುತ್ತಿದ್ದಾಗ ಏರ್ ಇಂಡಿಯಾ ಜಸ್ಟ್ ಟೇಕಾಫ್ ಆಗಿತ್ತು. ಒಂದು ವೇಳೆ ಏರ್ ಇಂಡಿಯಾ ಟೇಕಾಫ್ ಕೆಲ ಸೆಕೆಂಡ್ ವಿಳಂಬವಾಗಿದ್ದರೆ ಹಿಂದಿನಿಂದ ಏರ್ ಇಂಡಿಯಾ ವಿಮಾನ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆಗೆ ಆದೇಶಿಸಿದೆ. ಇಂಡಿಗೋ ವಿಮಾನಕ್ಕೆ ಲ್ಯಾಂಡಿಂಗ್ ಮಾಡಲು ಅನುಮತಿ ನೀಡಿದ್ದ ಎಟಿಸಿ ಸಿಬ್ಬಂದಿಯನ್ನು ತನಿಖೆ ಮುಗಿಯುವರೆಗೂ ಕೆಲಸದಿಂದ ತೆಗೆಯಲಾಗಿದೆ.
ನಾಲ್ಕು ಮಕ್ಕಳ ತಾಯಿ ನಾಪತ್ತೆ, 3 ದಿನಗಳ ಬಳಿಕ ಮಹಿಳೆ ಬೃಹತ್ ಹೆಬ್ಬಾವಿನ ಹೊಟ್ಟೆಯಲ್ಲಿ ಶವವಾಗಿ ಪತ್ತೆ
16 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಮಹಿಳೆಯನ್ನು ಸಂಪೂರ್ಣವಾಗಿ ನುಂಗಿದ ಆಘಾತಕಾರಿ ಘಟನೆಯೊಂದು ಮಧ್ಯ ಇಂಡೋನೇಷ್ಯಾದ ಮಕಾಸ್ಸರ್ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.ಮೃತ ಮಹಿಳೆ 45 ವರ್ಷದ ಫರೀದಾ ಎಂದು ಈ ಕುರಿತು ಎನ್.ಡಿ.ಟಿ.ವಿ ವೆಬ್ಸೈಟ್ ವರದಿ ಮಾಡಿದೆ.
ಈ ಕುರಿತು ಸ್ಥಳೀಯ ಅಧಿಕಾರಿಯೊಬ್ಬರು ಹೆಬ್ಬಾವಿನ ಹೊಟ್ಟೆಯೊಳಗೆ ಮಹಿಳೆ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಮಹಿಳೆ ರಾತ್ರಿ ಮನೆಯಿಂದ ಹೊರ ಹೋದವರು ಹಲವು ಗಂಟೆಗಳು ಕಳೆದರೂ ಸಹ ಹಿಂತಿರುಗಲಿಲ್ಲ. ಇದು ಕುಟುಂಬಸ್ಥರಲ್ಲಿ ಭಾರೀ ಆತಂಕ ಸೃಷ್ಟಿಸಿತು.
ಈಕೆಗೆ ನಾಲ್ಕು ಮಕ್ಕಳಿದ್ದು, ಮನೆಯವರು ಹಾಗೂ ಸ್ಥಳೀಯರು ಹುಡುಕಿಕೊಂಡು ಹೋದ ವೇಳೆ, ಬೃಹತ್ ಹೆಬ್ಬಾವೊಂದು ಕಾಣಿಸಿದ್ದು, ಅದರ ಹೊಟ್ಟೆ ಊದಿಕೊಂಡಿರುವುದು ಅನುಮಾನಕ್ಕೆ ಮೂಡಿಸಿದೆ.
ಮಹಿಳೆಗೆ ಸಂಬಂಧಿಸಿದ ಕೆಲವು ವಸ್ತುಗಳು ಸಹ ಅದೇ ಸ್ಥಳದಲ್ಲಿ ಪತ್ತೆಯಾದ ಕಾರಣ, ಸ್ಥಳೀಯರು ಆಕೆಯನ್ನು ಹೆಬ್ಬಾವು ನುಂಗಿರಬಹುದು ಎಂದು ಊಹಿಸಿ, ಹಾವಿನ ಹೊಟ್ಟೆಯನ್ನು ಕತ್ತರಿಸಿದ್ದಾರೆ.ತಕ್ಷಣವೇ ಫರೀದಾ ಅವರ ತಲೆ ಹೊರಬಂದದ್ದನ್ನು ಗಮನಿಸಿದ ಕುಟುಂಬಸ್ಥರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಹೆಬ್ಬಾವುಗಳು ಮನುಷ್ಯರನ್ನು ಜೀವಂತವಾಗಿ ನುಂಗುವ ಘಟನೆ ತೀರಾ ಅಪರೂಪವೆನಿಸಿದರೂ ಇಂಡೋನೇಷ್ಯಾದಲ್ಲಿ ಇಂತಹ ಘಟನೆಗಳು ಆಗಾಗ ಕೇಳಿ ಬರುತ್ತವೆ.
ಸೈಂಟ್ ಮೇರಿಸ್ ಪ. ಪೂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಉದ್ಘಾಟನೆ ಹಾಗೂ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಂದಾಪುರ, 8 ಜೂನ್ 2024 ನಗರದ ಸೈಂಟ್ ಮೇರಿಸ್ ಪ ಪೂ ಕಾಲೇಜಿನಲ್ಲಿ ದೀಪ ಬೆಳಗುವುದರ ಮೂಲಕ ಶೈಕ್ಷಣಿಕ ವರ್ಷದ ಉದ್ಘಾಟನಾ ಕಾರ್ಯಕ್ರಮವನ್ನು, ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಧರ್ಮಗುರು, ವಿದ್ಯಾ ಸಂಸ್ಥೆಯ ಸಂಚಾಲಕರಾದ ಅ|ವಂ|ಪಾವ್ಲ್ ರೇಗೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು, ದೀಪವನ್ನು ಬೆಳಗಿಸಿ ಉದ್ಘಾಟಿಸಿ “ವಿದ್ಯಾರ್ಥಿಗಳಲ್ಲಿ ಗುರಿ ಇಲ್ಲದೇ ಇದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಉತ್ತಮ ಸಾಧನೆ ಮಾಡಿ. ದೇವರ ಆಶೀರ್ವಾದ ನಿಮ್ಮ ಮೇಲೆ ಇದೆ. ಸಾಮಾಜಿಕ ಜಾಲ ತಾಣದಿಂದ ನೀವೆಲ್ಲ ದೂರವಿರಬೇಕು. ನಿಮಗೆಲ್ಲ ಉತ್ತಮ ಆರೋಗ್ಯ, ಬುದ್ಧಿಶಕ್ತಿಯನ್ನು ದೇವರು ನೀಡಲಿ, ಕಾಲೇಜಿನಲ್ಲಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವನ್ನು ಹಾರೈಸುತ್ತೇನೆ’ ಎಂದು ಸಂದೇಶ ನೀಡಿದರು.
ಈ ಸಂಧರ್ಭದಲ್ಲಿ ರಸಾಯನ ಶಾಸ್ತ್ರದಲ್ಲಿ ಅನುಭವಿ, ಅಗಾಧ ಜ್ಞಾನ ಹೊಂದಿರುವ, ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರಾದ ಆರ್ ಏನ್ ರೇವಣ್ಕರ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಥಮ ಹಾಗೂ ದ್ವೀತಿಯ ಪಿಯುಸಿಯಲ್ಲಿ ಕಲಿಯುತ್ತಿರುವ ಕೆಲವು ವಿದ್ಯಾರ್ಥಿಗಳಿಗೆ ಅವರ ಹಿಂದಿನ ವರ್ಷದ ಸಾಧನೆಗೆ ಶ್ಲಾಘಿಸಿ ಬಹುಮಾನ ವಿತರಿಸಿ ’ವಿದ್ಯಾರ್ಥಿಗಳೆ ನಿಮ್ಮ ವಿದ್ಯಾರ್ಥಿ ಜೀವನದಲ್ಲಿ ಒಂದು ನಿರ್ಧಿಷ್ಟ ಗುರಿ ಇರಬೇಕು. ನಿರಂತರ ಪ್ರಯತ್ನ ಹಾಗೂ ವ್ಯಾಸಂಗದ ಮೇಲೆ ಶ್ರದ್ಧೆ ಇರಲಿ. ಸಮಾಜದಲ್ಲಿ ಎಲ್ಲರ ಪ್ರೀತಿಪಾತ್ರರಾಗಬೇಕು ಎನ್ನುತ್ತಾ “ಬತ್ತದ ತೆನೆಯಂತೆ” ನಮ್ಮ ಜೀವನ ಇರಬೇಕು ಎಂದು ಉತ್ತಮ ಉದಾಹರಣೆ ನೀಡಿ, ವಿದ್ಯಾರ್ಥಿಗಳೇ ನೀವೆಲ್ಲರೂ “ಬೆಂಕಿಯ ಕಿಡಿ”ಯಾಗದೆ “ಬೆಳಕಿನ ಕುಡಿ”ಯಾಗಬೇಕು ಮೌಲ್ಯಯುತ ಮಾತುಗಳನ್ನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೇಷ್ಮಾ ಪೆರ್ನಾಂಡಿಸ್ ರವರು ಪ್ರಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಉಪನ್ಯಾಸಕಿ ಪ್ರೀತಿ ಕ್ರಾಸ್ತಾರವರು ಅತ್ತ್ಯುತ್ತಮ ಶ್ರೇಣಿಯ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿದರು.ಕಾರ್ಯಕ್ರಮವು ವಿದ್ಯಾರ್ಥಿಗಳ ಸುಶ್ರಾವ್ಯ ಪ್ರಾರ್ಥನೆ ಹಾಗೂ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಗಿ ವಿದ್ಯಾರ್ಥಿನಿ ರಿಯಾ ಮಿನೇಜಸ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಜೋನಿಟಾ ಮೆಂಡೊನ್ಸಾ ಧನ್ಯವಾದ ಸಮರ್ಪಿಸಿದರು.
ದೋರ್ನಹಳ್ಳಿ ಮೈಸೂರಿನಲ್ಲಿ ನಡೆದ ಸಂತ ಅಂತೋನಿಯವರ ವಾರ್ಷಿಕ ಹಬ್ಬದ ಹಿಂದಿನ ಐದನೇ ದಿನದ ಭಕ್ತಿ / Fifth day of Devotion preceding Annual Feast of St Anthony held at Dornahalli Mysore
ದೋರ್ನಹಳ್ಳಿ : ಪಡುವಾ ಸಂತ ಅಂತೋನಿಯವರ ವಾರ್ಷಿಕ ಹಬ್ಬದ ಹಿಂದಿನ ಐದನೇ ದಿನದ ನೊವೆನಾ ಭಕ್ತಿಯನ್ನು ಜೂನ್ 08, 2024 ರಂದು ಸೇಂಟ್ ಅಂತೋನಿ ಬೆಸಿಲಿಕಾ ಡೋರ್ನಹಳ್ಳಿ ಮೈಸೂರಿನಲ್ಲಿ ನಡೆಸಲಾಯಿತು.
ರೆವ್ ಫ್ರಾ ಆಗಸ್ಟಿನ್ ಒಸಿಡಿ,ಧ್ಯಾನವನ, ಮೈಸೂರಿನವರು ಮಹಾಮಸ್ತಕಾಭಿಷೇಕವನ್ನು ಆಚರಿಸಿದರು ಮತ್ತು ಭಕ್ತರ ಉದ್ದೇಶಗಳಿಗಾಗಿ ಪ್ರಾರ್ಥಿಸಿದರು. ಪ್ರವೀಣ್ ಪೆದ್ರು, ಆಡಳಿತಾಧಿಕಾರಿ, ಸೇಂಟ್ ಅಂತೋನಿ ಬೆಸಿಲಿಕಾ ದೋರ್ನಹಳ್ಳಿ ಮೈಸೂರು.
ಸಾಮೂಹಿಕ ಪ್ರಾರ್ಥನೆಯ ಕೊನೆಯಲ್ಲಿ, ಸಂತ ಅಂತೋನಿಯವರ ಗೌರವಾರ್ಥವಾಗಿ ನೊವೆನಾ ನಡೆಯಿತು, ಈ ಸಂದರ್ಭದಲ್ಲಿ ಭಕ್ತಾದಿಗಳ ವಿವಿಧ ಅಗತ್ಯತೆಗಳು ಮತ್ತು ಪ್ರಾರ್ಥನೆ ಉದ್ದೇಶಗಳಿಗಾಗಿ ಅಧಿವೇಶನದ ವಿಶೇಷ ಮಧ್ಯಸ್ಥಿಕೆಯನ್ನು ಕೋರಲಾಯಿತು. ಸಂತ ಅಂತೋನಿಯವರ ಪವಿತ್ರ ಪ್ರತಿಮೆಯ ಮೆರವಣಿಗೆ ಮತ್ತು ಪವಿತ್ರ ಆಶೀರ್ವಾದ. ಸಾಮೂಹಿಕ ಪೂಜೆಯ ನಂತರ ಪ್ರಸಾದವನ್ನು ಏರ್ಪಡಿಸಲಾಗಿತ್ತು.
Fifth day of Devotion preceding Annual Feast of St Anthony held at Dornahalli Mysore
Dornahalli : The fifth day of Novena devotion preceding the annual feast of St Anthony of Padua was held on June 08, 2024, at St Anthony’s Basilica Dornahalli Mysore
Rev Fr Augustine OCD, Dhyanavana, Mysore, celebrated the Eucharistic and prayed for intentions of the devotees with Rev. Fr N.T Joseph,Rector,St Anthony’s Basilica Dornahalli and Rev.Fr. Praveen Pedru, Administrator, St Anthony’s Basilica Dornahalli Mysore .
At the end of the mass, novena was held in honour of St Anthony, during which the special intercession of the session was sought for the various needs and prayer intentions of the devotees.Procession of the holy statue of St Anthony and benediction of the holy eucharist was organised after the mass.