ಕುಂದಾಪುರ : ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಯೋಗ ಶಿಕ್ಷಣವನ್ನು 2024-25ನೇ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು ಇಂದು ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯ ಕಾರ್ಯಕ್ರಮದಲ್ಲಿ ಅದರ ಉದ್ಘಾಟನೆಯನ್ನು ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಸಂಯೋಜಕರಾದ ಉಮೇಶ ಶೆಟ್ಟಿ,ಅವಿನಾ,ದಿವ್ಯಾ ಪೂಜಾರಿ ಮತ್ತು ಕುಸುಮಾ ಶೆಟ್ಟಿ ಜಂಟಿಯಾಗಿ ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ನೀಡುವುದರ ಮೂಲಕ ಉದ್ಘಾಟಿಸಿದರು ಎಲ್ ಕೆ ಜಿ ಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳು ಹೊಸ ಯೋಗಸಮವಸ್ತ್ರದೊಂದಿಗೆ ಸಂಭ್ರಮದಿಂದ ಯೋಗಾಸನದ ವಿವಿಧ ಆಸನಗಳನ್ನು ಪ್ರದರ್ಶಿಸಿದರು
ಯೋಗ ಶಿಕ್ಷಕ ರತ್ನಕುಮಾರ್ ಯೋಗದ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಕೊಳುವಂತೆ ಮಾಹಿತಿ ನೀಡಿದರು
ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವರ್ಗದವರು ಯೋಗಾಸನವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಕಳೆಯನ್ನು ನೀಡಿದರು.
Day: June 22, 2024
ಓಂ ಶ್ರೀ ಯೋಗ ಕೇಂದ್ರ ಬಸ್ರೂರು – ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಸ್ರೂರು: ಓಂ ಶ್ರೀ ಯೋಗ ಕೇಂದ್ರ ಬಸ್ರೂರು ಇವರಿಂದ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ .ರಾಧಾಕೃಷ್ಣಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.
2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿ ಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಶ್ರೀ ಅನಿಲ್ ಕುಮಾರ್ ಶೆಟ್ಟಿ ಹಾಗೂ ಶ್ರೀಮತಿ ನಿರುಪಮ ಹೆಗ್ಡೆ ಉಪಸ್ಥಿತರಿದ್ದರು ಓಂ ಶ್ರೀ ಯೋಗ ಕೇಂದ್ರದ ಅಧ್ಯಕ್ಷರಾಗಿರುವ ಶ್ರೀ ಪ್ರಭಾಕರ್ ಐತಾಳ್ ಸ್ವಾಗತಿಸಿದರು ಕಾರ್ಯದರ್ಶಿಯಾಗಿರುವ ಅಶೋಕ್ ಕೆರೆಕಟ್ಟೆ ವಂದಿಸಿದರು ಶ್ರೀಮತಿ ಸಾರಿಕಾ ಅಶೋಕ್ ನಿರೂಪಿಸಿದರು.
ದಿ.ಗಂಗಾಧರ ಶೆಟ್ಟಿ ಹೇರಿಕುದ್ರು ಅವರ ಸ್ಮರಣಾರ್ಥ ಹೇರಿಕುದ್ರು ಶಾಲೆಯ ರಸ್ತೆಗೆ “ಗಂಗಾಧರ ಶೆಟ್ಟ’ ರಸ್ತೆ ಎಂದು ನಾಮಕರಣಕ್ಕೆ ಹಾಗೂ ಅವರ ಪುತ್ಥಳಿ ನಿರ್ಮಾಣಕ್ಕೆ ಮನವಿ
ಆನಗಳ್ಳಿ ಗ್ರಾಮದ ಹೇರಿಕುದ್ರು ನಿವಾಸಿಯಾಗಿದ್ದ ಗಂಗಾಧರ ಶೆಟ್ಟಿಯವರು ಸಮಾಜ ಸೇವಕರಾಗಿದ್ದು, ಆನಗಳ್ಳಿ ಮತ್ತು ಹೇರಿಕುದ್ರುವಿಗಾಗಿ ಅಮೂಲ್ಯ ಸೇವೆಯನ್ನು ನೀಡಿದ್ದರು, ಈಗ ಅವರ ಸ್ಮರ್ಣಾರ್ಥ ಹೇರಿಕುದ್ರು ಶಾಲೆಯ ರಸ್ತೆಗೆ ಗಂಗಾಧರ ಶೆಟ್ಟಿ ರಸ್ತೆ ಎಂದು ನಾಮಕರಣ ಹಾಗೂ ಅವರ ಪುತ್ಥಳಿ ನಿರ್ಮಾಣ ಮಾಡುವ ಬಗ್ಗೆ ಮನವಿ ಅವರ ಅಭಿಮಾನಿಗಳು ಆನಗಳ್ಳಿ ಗ್ರಾಮ ಪಂಚಾಯ್ತಿಗೆ ಮನವಿ ನೀಡಿದ್ದಾರೆ, ಎಂದು ಅವರ ಅಭಿಮಾನಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ. ಈ ಮನವಿ ಕೆಳಕಂಡಂತ್ತೆ ಇದೆ
ಆನಗಳ್ಳಿ ಗ್ರಾಮದ ಹೇರಿಕುದ್ರು ನಿವಾಸಿಯಾಗಿದ್ದ ಗಂಗಾಧರ ಶೆಟ್ಟಿಯವರು ನಮ್ಮ ಊರಿನ ಹೆಮ್ಮೆಯ ಪುತ್ರ ಹಾಗೂ ಆನಗಳ್ಳಿ ಗ್ರಾಮ ಪಂಚಾಯತಿನ ದೀರ್ಘಾವಧಿ ಸದಸ್ಯರು ಮತ್ತು ಜನರ ಪ್ರೀತಿ ಪಾತ್ರರಾಗಿದ್ದ ಶ್ರೀಯುತ ಗಂಗಾಧರ ಶೆಟ್ಟಿ ಅವರ ಅಕಾಲಿಕ ಮರಣದಿಂದ ಇಡೀ ಗ್ರಾಮದ ಜನರು ದುಃಖಿತರಾಗಿದ್ದೇವೆ. ವೈಯಕ್ತಿಕವಾಗಿ ನಮಗೆ ಹಾಗೂ ನಮ್ಮ ಕುಟುಂಬಕ್ಕೆ ಮತ್ತು ನಮ್ಮ ಊರಿಗೆ ಗಂಗಾಧರ ಶೆಟ್ಟಿ ಅವರು ಸಲ್ಲಿಸಿದ ಸೇವೆ ನಾವು ಎಂದಿಗೂ ಮರೆಯಲಾಗದು. ಗಂಗಾಧರ ಶೆಟ್ಟಿ ಅವರು ತಮ್ಮ ಜೀವಿತಾವಧಿಯುದ್ದಕ್ಕೂ ಜನರಿಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ನಮ್ಮ ಊರಿನ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಅವರ ಕೊಡುಗೆಯನ್ನು ಎಂದಿಗೂ ಮರೆಯಲಾರರು ಸದ್ರಿ ಊರಿನ ಪ್ರತಿಯೊಬ್ಬ ವ್ಯಕ್ತಿಯು ಕೂಡ ಗಂಗಾಧರ ಶೆಟ್ಟಿ ಅವರ ಸವಿ ನೆನಪಿಗಾಗಿ ಹೇರಿಕುದ್ರಿನ ಮುಖ್ಯ ರಸ್ತೆಗೆ ಗಂಗಾಧರ ಶೆಟ್ಟಿ ರಸ್ತೆ ಎಂದು ನಾಮಕರಣ ಮಾಡಬೇಕು ಎಂದು ಅಪೇಕ್ಷೆ ಪಡುತ್ತಿದ್ದಾರೆ ಜೊತೆಗೆ ಹರ್ಷವರ್ಧನ ಶೆಟ್ಟಿ ಅವರ ಅಂಗಡಿ ಬಳಿ ಶ್ರೀಯುತ ಪಂಜು ಪೂಜಾರಿ ಮತ್ತು ರಾಧ ಪೂಜಾರ್ತಿ ಹಾಗೂ ಮಕ್ಕಳ ಜಾಗದಲ್ಲಿ ಪುತ್ತಳಿ ನಿರ್ಮಾಣ ಮಾಡುವ ಬಗ್ಗೆ ಊರಿನ ಪ್ರಮುಖರು ತೀರ್ಮಾನಿಸಿದ್ದು ಇದಕ್ಕೆ ನಮ್ಮ ಬೆಂಬಲ ಇರುತ್ತದೆ. ದಯವಿಟ್ಟು ತಾವು ಪಂಚಾಯತ್ ನಿರ್ಣಯ ಕೈಗೊಂಡು ಕೂಡಲೇ ರಸ್ತೆಗೆ ನಾಮಕರಣ ಮಾಡಿ ಪುತ್ತಳಿ ನಿರ್ಮಾಣ ಮಾಡಲು ಅನುಮತಿ ನೀಡಬೇಕಾಗಿ ವಿನಂತಿ.
ಮನವಿ ನೀಡುವ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಸವಿತಾ ಬಿಲ್ಲವ,ಉಪಾಧ್ಯಕ್ಷರಾದ ಉದಯ ಪೂಜಾರಿ, ಸದಸ್ಯರಾದ ಲಾರೆನ್ಸ್ ಡಿಸೋಜಾ, ಗೀತಾ ಎಸ್ , ಸುರೇಶ್ ನಾಯ್ಕ, ಪ್ರಭಾಕರ ನಾಯ್ಕ, ಅಭಿಜಿತ್ ಪೂಜಾರಿ ,ಮುಕಾಂಬು , ನಿರ್ಮಲ ಇನ್ನಿತರರು ಉಪಸ್ಥಿತರಿದ್ದರು
ಪಿಡಿಒ ಅನಿಲ್ ಬಿರಾದಾರ ರವರಿಗೆ ಮನವಿಯನ್ನು ಸಲ್ಲಿಸಲಾಗಿದೆ.