ಕುಂದಾಪುರ : ದಿನಾಂಕ 26-06-2024 ರಂದು ಸಂತ ಜೋಸೆಫರ ಪ್ರೌಢಶಾಲೆ ಕುಂದಾಪುರ ಇಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತು ಹಾಗೂ ವಿವಿಧ ಶೈಕ್ಷಣಿಕ ಸಂಘಗಳ ಉದ್ಘಾಟನಾ ಸಮಾರಂಭ ಜರುಗಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇಲ್ಲಿನ ಶಿಕ್ಷಣ ಸಂಯೋಜಕರಾದ ಶ್ರೀಯುತ ಶೇಖರ್ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ತಿಳಿಸಿ, ಶಾಲೆಯ ನಿಯಮ ಹಾಗೂ ಶಿಸ್ತು ಕಾಪಾಡುವಲ್ಲಿ ಶಾಲಾ ಸಂಸತ್ತಿನ ಪಾತ್ರ ಅತಿ ಮುಖ್ಯವಾದದ್ದು ಎಂದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ದೈಹಿಕ ಶಿಕ್ಷಕರಾದ ಮೈಕಲ್ ಇವರು ಸಹಕರಿಸಿದರು. ವಿರೋಧ ಪಕ್ಷದ ನಾಯಕಿ ಕು. ವರ್ಷಿಣಿ ಇವರು ನಿರೂಪಿಸಿದರು. ಚಟುವಟಿಕ ಮಂತ್ರಿ ಕು. ಲತೀಕಾ ಇವರು ಸ್ವಾಗತಿಸಿದರು. ಶಾಲಾ ನಾಯಕಿ ಕು. ಶ್ರೀನಿಧಿ ಇವರು ವಂದಿಸಿದರು.
ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸಿತರಿದ್ದರು.
Month: June 2024
ಬ್ರಹ್ಮಾವರ – ಎಸ್ ಎಮ್ ಎಸ್ ಪ. ಪೂ ಕಾಲೇಜಿನಲ್ಲಿ ಮಾದಕ ವ್ಯಸನ ಮುಕ್ತ ಮಾಹಿತಿ ಕಾರ್ಯಕ್ರಮ
ಬ್ರಹ್ಮಾವರ : ಎಸ್ ಎಮ್ ಎಸ್ ಪ ಪೂ ಕಾಲೇಜಿನಲ್ಲಿ ಮಾದಕ ವ್ಯಸನ ಮುಕ್ತ ಮಾಹಿತಿ ಕಾರ್ಯಕ್ರಮ. ದಿನಾಂಕ 26/06/2024 ರಂದು ಅಂತರಾಷ್ಟ್ರೀಯ ಮಾದಕ ವಿರೋದಿ ದಿನದಂದು ನಶಾಮುಕ್ತ ಭಾರತ ಅಭಿಯಾನದಡಿ ಎಸ್ ಎಮ್ ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಹಾಗೂ ಬ್ರಹ್ಮಾವರ ಅರಕ್ಷಕ ಠಾಣೆ ಇದರ ಜಂಟಿ ಆಶ್ರ ಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಜೀವನ ಮತ್ತು ಅಕ್ರಮ ಕಳ್ಳಸಾಗಾಣೆ ಬಗ್ಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ಅರಕ್ಷಕ ಠಾಣೆಯ ಪೋಲಿಸ್ ಉಪ ನಿರೀಕ್ಷರಾದ ಶ್ರಿ ಮಧು ಬಿ ರವರು ಭಾಗವಹಿಸಿ ಮಾದಕವ್ಯಸನ , ಸೈಬರ್ ಅಪರಾಧ, ವಾಹನ ಅಪಘಾತ,ಸಾಮಾಜಿಕ ಜಾಲತಾಣದ ದುಷ್ಪರಿಣಾಮ ಹಾಗೂ ಫೊಕ್ಸೋ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗಳಿಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಲ.ಐವಾನ್ ದೊನಾತ್ ಸುವಾರಿಸ್ ಅಧ್ಯಕ್ಷತೆ ವಹಿಸಿದ್ದರು.ಉಪನ್ಯಾಸಕರಾದ ವಿಜಯ ಆಳ್ವ ಸ್ವಾಗತಿಸಿ, ಸೀಸರ್ ಗೊನ್ಸಾಲ್ವಿಸ್ ವಂದಿಸಿ ಸಂತೋಷ್ ನೀಲಾವರ್ ನಿರೂಪಿಸಿದರು. ಬ್ರಹ್ಮಾವರ ಅರಕ್ಷಕ ಠಾಣೆ ಸಿಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಹರಿಹರದ ಆರೋಗ್ಯ ಮಾತೆ ಮೈನರ್ ಬಸಲಿಕಾಗೆ ಭೇಟಿ / Visit to Minor Basalica of our lady of Health, Harihara by Hon’ble Governor of Karnataka, Shri Thawar Chand Gehlot
ದಾವಣಗೆರೆ, ಜೂನ್ 25, 2024: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಜೂನ್ 25) ಮಧ್ಯಾಹ್ನ 1 ಗಂಟೆಗೆ ಹರಿಹರದ ಅವರ್ ಲೇಡಿ ಆಫ್ ಹೆಲ್ತ್ ಮೈನರ್ ಬಸಲಿಕಾಗೆ ಭೇಟಿ ನೀಡಿ ಬಿಷಪ್ ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ. ಶಿವಮೊಗ್ಗ ಧರ್ಮಪ್ರಾಂತ್ಯ.
ಅವರ ಜೊತೆಯಲ್ಲಿ ಹರಿಹರದ ಮೈನರ್ ಬೆಸಿಲಿಕಾದ ಅವರ್ ಲೇಡಿ ಆಫ್ ಹೆಲ್ತ್ನ ರೆಕ್ಟರ್ ವೆರಿ ರೆವ್ ಫಾದರ್ ಜಾರ್ಜ್ ಕೆ ಎ. ಶಿವಮೊಗ್ಗ ಧರ್ಮಾಧ್ಯಕ್ಷರಿಗೆ ಇದೊಂದು ಐತಿಹಾಸಿಕ ಕ್ಷಣ. ಮರಿಯಾ ನಿವಾಸ್ ಶಾಲೆಯ ಮಕ್ಕಳು ಪುಷ್ಪಗಳನ್ನು ನೀಡಿ ಸ್ವಾಗತಿಸಿದರು. ಬಿಷಪ್ ಫ್ರಾನ್ಸಿಸ್ ಸೆರಾವೊ ಎಸ್.ಜೆ ಅವರನ್ನು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು.
ಅವರು ಮಧ್ಯಾಹ್ನ 12 ಗಂಟೆಗೆ ಸೇಂಟ್ ಅಲೋಶಿಯಸ್ ಇಂಟರ್ ನ್ಯಾಷನಲ್ ಶಾಲೆ ಮತ್ತು ಪಿಯು ಕಾಲೇಜು ಉದ್ಘಾಟನೆಗೆ ಬಂದಿದ್ದರು. ಹರಿಹರದ ಐತಿಹಾಸಿಕ ಮತ್ತು ಜಗತ್ಪ್ರಸಿದ್ಧ ಮರಿಯನ್ ದೇಗುಲಕ್ಕೆ ಭೇಟಿ ನೀಡಿದ ಅವರ ಇಂಗಿತ ನಮಗೆ ಬಹಳ ಗೌರವವಾಗಿದೆ.
Visit to Minor Basalica of our lady of Health, Harihara by Hon’ble Governor of Karnataka, Shri Thawar Chand Gehlot
Davanagere, June 25, 2024: Sri Thawar Chand Gehlot, Hon’ble Governor of Karnataka visited Minor Basalica of Our Lady of Health, Harihar today (June 25th) at 1pm and took the blessings from Most Rev. Dr Francis Serrao SJ, Bishop of Diocese of Shimoga.
He was accompanied by Very Rev. Fr George K A, Rector of Our Lady of Health, Minor Basilica of Harihar. It was a historical moment for the Diocese of Shimoga. Maria Nivas School children Welcomed him gladly with flowers. Bishop Francis Serrao SJ honoured him with a Shawl and garland.
He came to inaugurate St. Aloysius International School and PU College at 12pm. We are greatly honored by his gesture of visiting historic and world famous Marian Shrine at Harihar.
ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ – ಯೋಗದಿನಾಚರಣೆ ಹಾಗೂ ಯೋಗ ಶಿಕ್ಷಣ ಪಠ್ಯಕ್ರಮ ಉದ್ಘಾಟನೆ
ಕುಂದಾಪುರ :ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಯೋಗ ಶಿಕ್ಷಣವನ್ನು 2024-25ನೇ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು ಇಂದು ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯ ಕಾರ್ಯಕ್ರಮದಲ್ಲಿ ಅದರ ಉದ್ಘಾಟನೆಯನ್ನು ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಸಂಯೋಜಕರಾದ ಉಮೇಶ ಶೆಟ್ಟಿ,ಅವಿನಾ,ದಿವ್ಯಾ ಪೂಜಾರಿ ಮತ್ತು ಕುಸುಮಾ ಶೆಟ್ಟಿ ಜಂಟಿಯಾಗಿ ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ನೀಡುವುದರ ಮೂಲಕ ಉದ್ಘಾಟಿಸಿದರು ಎಲ್ ಕೆ ಜಿ ಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳು ಹೊಸ ಯೋಗಸಮವಸ್ತ್ರದೊಂದಿಗೆ ಸಂಭ್ರಮದಿಂದ ಯೋಗಾಸನದ ವಿವಿಧ ಆಸನಗಳನ್ನು ಪ್ರದರ್ಶಿಸಿದರು
ಯೋಗ ಶಿಕ್ಷಕ ರತ್ನಕುಮಾರ್ ಯೋಗದ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಕೊಳುವಂತೆ ಮಾಹಿತಿ ನೀಡಿದರು
ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವರ್ಗದವರು ಯೋಗಾಸನವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಕಳೆಯನ್ನು ನೀಡಿದರು.
ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವು ಸಂಸ್ಥೆಯ ಆಡಳಿತಾಧಿಕಾರಿಗಳಾದ ಕುಮಾರಿ ಶಮಿತಾ ರಾವ್, ಕುಮಾರಿ ರೆನಿಟಾ ಲೋಬೊ ಮತ್ತು ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಆಯ್ಕೆಯಾದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು ಶಾಲಾ ಸಂಸತ್ತಿಗೆ ಆಯ್ಕೆಯಾದ 5, 8 ಮತ್ತು 10ನೇ ತರಗತಿಯ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು ಶಿಕ್ಷಕ ಜಗದೀಶ್ ಸ್ವಾಗತಿಸಿ ಶಿಕ್ಷಕಿಯರಾದ ದೀಪಾ ವಂದಿಸಿ ಚೈತ್ರಾ ಮೆಂಡನ್ ಮತ್ತು ಅವಿನಾ ಕಾರ್ಯಕ್ರಮ ನಿರೂಪಿಸಿದರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು
ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕುರಿತು ಕಾರ್ಯಾಗಾರ
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯ ಹತ್ತನೇ ತರಗತಿ ಮತ್ತು ಪಿ ಯು ಸಿ ವಿದ್ಯಾರ್ಥಿಗಳಿಗೆ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ನಾಸಿರ್ ಹುಸೇನ್ ಮತ್ತು ಶಂಭುಲಿಂಗಯ್ಯ ಇವರು ಮಾದಕ ವಸ್ತುಗಳ ಬಳಕೆ ಅದರಿಂದಾಗುವ ದುಷ್ಪರಿಣಾಮ, ಸಮಾಜದಲ್ಲಿ ಆಗುತ್ತಿರುವ ವಿವಿಧ ರೀತಿಯ ಮಾನಸಿಕ ಮತ್ತು ದೈಹಿಕ ಕಿರುಕುಳ, ಪೋಕ್ಸೋಕಾಯಿದೆ, ಮೊಬೈಲ್ ಅತಿಯಾದ ಬಳಕೆ, ಸೈಬರ್ ಕ್ರೈಂ ಮತ್ತು ಎಚ್ಚರ, ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗೃತೆ ಕುರಿತು ವಿವಿಧ ನಿದರ್ಶನಗಳ ಮೂಲಕ ಮಾಹಿತಿ ನೀಡಿ ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಸಂಪರ್ಕಿಸುವಂತೆ ತಿಳಿಸಿದರು. ಯುವ ಜನಾಂಗ ಯಾವುದೇ ಗೊಂದಲಕ್ಕೆ ಒಳಗಾಗದೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕುವಂತೆ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದರು ಹಾಗೂ ಸಮಾಜದಲ್ಲಿ ಯುವ ಜನತೆ ಮಾದಕ ವ್ಯಸನಿಗಳಾಗುತ್ತಿರುವುದಕ್ಕೆ ವಿಷಾಧ ವ್ಯಕ್ತಪಡಿಸಿದರು
ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಉಪಪ್ರಾಂಶುಪಾಲರಾದ ಮಂಜುನಾಥ್ ಬಾಯರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕಿ ಅಕ್ಷತಾ ವಂದಿಸಿದರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ / International Yoga Day Celebration at Moodlekatte Engineering College
ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವಿಭಾಗದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಭೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ ಆಸನಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಮಧ್ಯಾಹ್ನದ ವಿಭಾಗದಲ್ಲಿ ಮಂಗಳೂರಿನ ಇಶಾ ಹಟ ಯೋಗ ಶಿಕ್ಷಕರಾದ ಶ್ರೀ ಪ್ರವೀಣ ಕುಮಾರ್ ಇವರು ಯೋಗದ ಬಗ್ಗೆ ತಮ್ಮ ಅನುಭವದ ಜೊತೆಗೆ ಹೇಗೆ ಒಬ್ಬ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಅಭಿವೃದ್ಧಿಗೆ ಕಾರಣ ಎಂದು ವಿವರಿಸಿದ್ದಲ್ಲದೆ ಓಂಕಾರದ ಪ್ರಾತ್ಯಕ್ಷಿಕೆ ವಿಧ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದರು. ಕಾರ್ಯಕ್ರಮ ಸಂಯೋಜಕರಾದ ಪ್ರೊಫೆಸರ್ ಬಾಲನಾಗೇಶ್ವರ್ ಸ್ವಾಗತಿಸಿ, ಡಾ|ರಾಮಕೃಷ್ಣ ಹೆಗ್ಡೆ ವಂದಿಸಿದರು. ಪ್ರೊಫೆಸರ್ ಸೂಕ್ಷ್ಮ ಅಡಿಗ ಕಾರ್ಯಕ್ರಮ ನಿರ್ವಹಿಸಿದರು.
International Yoga Day Celebration at Moodlekatte Engineering College
Kundapura: Special programs were organized at MIT Kundapura as part of the International Day of Yoga. In the morning session, yoga training was organised by NSS unit and YRC unit ofMITK. Sri Manjunath Bijuru, a renowned Yoga teacher, was present as a resource person. He explained in detail the rules that we should follow while doing Yogasanas and also taught the students some simple asanas that can be done on a daily basis.In the afternoon session, Mr. Praveen Kumar, Isha Hata Yoga teacher from Mangalore explained his experience about yoga and how it is the cause of mental and physical development of a person and also gave a demonstration of Omkara to the students. The staff and students of the college benefited from it. Program Coordinator Professor Balanageshwar welcomed and Director Brand Building IMJ Institutions Dr.Ramakrishna Hegde proposed the vote of thanks. Professor Sookshma Adiga conducted the programme.
ಆರ್.ಎಲ್.ಜಾಲಪ್ಪ ನಾರಾಯಣ ಹೃದಯಾಲಯದ ವತಿಯಿಂದ ಪತ್ರಕರ್ತರಿಗೆ ಪ್ರಿವಿಲೇಜ್ ಕಾರ್ಡ್ ವಿತರಣೆ
ಕೋಲಾರ,ಜೂ.24: ಜುಲೈ 1ರ ಪತ್ರಿಕಾ ದಿನಾಚರಣೆ ಕೊಡುಗೆಯಾಗಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆರ್.ಎಲ್.ಜಾಲಪ್ಪ ನಾರಾಯಣ ಹೃದಯಾಲಯವು ೧೪ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಆದ್ಯತೆ ಮೇಲೆ ಹಾಗೂ ರಿಯಾಯಿತಿ ದರದ ಚಿಕಿತ್ಸೆಗಾಗಿ ಪ್ರಿವಿಲೇಜ್ ಕಾರ್ಡ್ (ಹೆಲ್ತ್ ಕಾರ್ಡ್) ಅನ್ನು ಸೋಮವಾರ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿತು.
ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದಲ್ಲಿ ಕೋಲಾರ ನಗರದ ಪತ್ರಕರ್ತರಿಗೆ ಈ ಕಾರ್ಡ್ಗಳನ್ನು ನೀಡಲಾಯಿತು.
ಆಸ್ಪತ್ರೆಯ ತಜ್ಞ ವೈದ್ಯ ಡಾ.ಮುರಳಿ ಬಾಬು ಮಾತನಾಡಿ, ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ನಾರಾಯಣ ಹೃದಯಾಲಯ ಘಟಕವು 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. 8 ತಿಂಗಳ ಮಕ್ಕಳಿಂದ ಹಿಡಿದು 72 ವರ್ಷ ವಯೋವೃದ್ಧರವರೆಗೆ ಶಸ್ತ್ರ ಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆ ನೀಡಿದ್ದೇವೆ. 11 ಸಾವಿರ ಆ್ಯಂಜಿಯೊಗ್ರಾಂ, 8 ಸಾವಿರ ಸ್ಟೆಂಟ್ ನೆರವೇರಿಸಿದ್ದೇವೆ. ಹೊರ ಹಾಗೂ ಒಳರೋಗಿಗಳು ಸೇರಿದಂತೆ 1.2 ಲಕ್ಷ ಮಂದಿಗೆ ಶಸ್ತ್ರ ಚಿಕಿತ್ಸೆ ಸೇರಿದಂತೆ ವಿವಿಧ ರೀತಿಯ ಚಿಕಿತ್ಸೆ ನೀಡಲಾಗಿದೆ ಎಂದರು.
ಪತ್ರಕರ್ತರಿಗೆ ಶೇ 10 ರಿಯಾಯಿತಿಯಲ್ಲಿ ಚಿಕಿತ್ಸೆ ನೀಡಲಾಗುವುದು. ಹೃದಯ ತಪಾಸಣೆ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸುತ್ತೇವೆ. ನಮ್ಮ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆರೋಗ್ಯ ವಿಮೆ ಸೌಲಭ್ಯ ಇದೆ ಎಂದರು.
ಯಶಸ್ವಿನಿ ಯೋಜನೆ ಇನ್ನೂ ನಮ್ಮಲ್ಲಿ ಶುರುವಾಗಿಲ್ಲ. ಸರ್ಕಾರದಿಂದ ನಿರ್ದೇಶನ ಬಂದ ತಕ್ಷಣ ಶುರು ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಪ್ರಕರಣ ಹೆಚ್ಚಿದೆಯೇ ಎಂಬ ಪ್ರಶ್ನೆಗೆ, ಕೊರೊನಾ ಲಸಿಕೆಯೇ ಇದಕ್ಕೆ ನಿಶ್ಚಿತ ಕಾರಣವಲ್ಲ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪ್ರಿವಿಲೇಜ್ ಕಾರ್ಡುಗಳನ್ನು ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ನೀಡಿರುವುದು ಶ್ಲಾಘನೀಯ. ಹಾಗಯೇ ಯಾವುದೇ ಪತ್ರಕರ್ತರು ತಮ್ಮ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಾಗ ಆತ್ಮೀಯವಾಗಿ ಸ್ಪಂದಿಸಿ ಅವರಿಗೆ ಸೂಕ್ತ ಚಿಕ್ಸತೆ ನೀಡುವಂತೆ ಕೊರಿದರು.
ಮೊದಲ ಹಂತದಲ್ಲಿ ನಗರದಲ್ಲಿರುವ ಪತ್ರಕರ್ತರಿಗೆ ಕಾರ್ಡ್ಗಳನ್ನು ವಿತರಿಸಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪತ್ರಕರ್ತರ ಸಂಘದ ಸದಸ್ಯರಿಗೆ ಜುಲೈ ಮೊದಲ ವಾರದಲ್ಲಿ ಆಯಾ ತಾಲ್ಲೂಕುಗಳಲ್ಲಿಯೇ ಕಾರ್ಡುಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ತಜ್ಞ ವೈದ್ಯರಾದ ಡಾ.ಭರತ್ ಕಿರಣ್, ಪೆಸಿಲಿಟಿ ಡೈರಕ್ಟರ್ ನಾಗರಾಜ್, ಮಾರ್ಕೆಂಟಿಂಗ್ ಮ್ಯಾನೇಜರ್ ಶಶಿಧರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಎಂ.ವಾಸುದೇವಹೊಳ್ಳ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು, ಜಿಲ್ಲಾ ಸಂಘದ ಖಜಾಂಚಿ ಎ.ಜಿ.ಸುರೇಶ್ ಕುಮಾರ್ ಹಾಗೂ ಪತ್ರಕರ್ತರು, ಪಿ.ಆರ್.ಓಗಳಾದ ನರೇಶ್, ವೆಂಕಟರಾಮರೆಡ್ಡಿ ಇದ್ದರು.