ಕುಂದಾಪುರ: “ನಾಡಿಗೆ ಸಮರ್ಪಣಾ ಭಾವದಿಂದ ತನ್ನನ್ನು ಅರ್ಪಿಸಿಕೊಂಡು ಮಾದರಿಯಾದ ಗಿಳಿಯಾರು ಕುಶಲ ಹೆಗ್ಡೆಯವರ ಸ್ಮರಣೆಯಲ್ಲಿ ದತ್ತಿ ನಿಧಿ ಮೂಲಕ ವಿದ್ಯಾರ್ಥಿಗಳಿಗೆ, ಅಸಹಾಯಕರಿಗೆ 23 ವರ್ಷಗಳಿಂದ ಮಾಡುವ ಸಹಾಯ ಒಂದು “ಪವಿತ್ರ ಯಜ್ಞ” ಎಂದು ಕರೆಯಬಹುದಾಗಿದೆ. ಕೆಲವೇ ಮನುಷ್ಯರು ನಿಧನರಾದ ನಂತರ ಬದುಕಿದಂತೆ ಇರುತ್ತಾರೆ. ಅವರಲ್ಲಿ ಗಿಳಿಯಾರು ಕುಶಲ ಹೆಗ್ಡೆಯವರು ಪ್ರಮುಖರು. ಇಂದು ವಿಸ್ಮತಿಯ ಕಾಲ. ಜನರು ಕೆಲವೇ ವರ್ಷಗಳಲ್ಲಿ ಹಿರಿಯರನ್ನು, ಸಾಧಕರನ್ನು ಮರೆತು ಬಿಡುತ್ತಾರೆ. ಆದರೆ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನವರು, ಕುಶಲ ಹೆಗ್ಡೆಯವರ ಕುಟುಂಬ ಸದಸ್ಯರ ಸಹಕಾರದಿಂದ ನೆಲದ ಋಣ ತೀರಿಸುವ ಸತ್ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಷಯ” ಎಂದು ಹಿರಿಯ ಸಾಹಿತಿ, ಸಂಶೋಧಕ ಪ್ರೊ. ಎ. ವಿ. ನಾವಡ ಹೇಳಿದರು.
ಕುಂದಾಪುರದ ಸರಕಾರಿ ಪ. ಪೂ. ಕಾಲೇಜಿನ “ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರ”ದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಆಯೋಜಿಸಿದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಬೆಂಗಳೂರಿನ ಕಾನೂನು ಸಲಹೆಗಾರ ಹಾಗೂ ಖ್ಯಾತ ಲೆಕ್ಕ ಪರಿಶೋಧಕ, ಸಿಎ ನಾಗರಾಜ ಆಚಾರ್ ವಿದ್ಯಾರ್ಥಿ ಜೀವನವನ್ನು ಲಘುವಾಗಿ ಪರಿಗಣಿಸದಂತೆ ಕಿವಿ ಮಾತು ಹೇಳಿದರು.
ಶಿಸ್ತು, ಸಮಯದ ಸದುಪಯೋಗ, ಆರೋಗ್ಯದ ಬಗ್ಗೆ ಕಾಳಜಿ, ಗುರಿ ಸಾಧನೆಯ ಕನಸು, ಸತತ ಶ್ರಮ, ಮೌಲ್ಯಯುತ ಜೀವನ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು. “ಆರ್ಥಿಕವಾಗಿ ಸದೃಢವಾದರೂ, ಮಾನಸಿಕ ಒತ್ತಡ, ಕೌಟುಂಬಿಕ ಸಮಸ್ಯೆ ಇಂದು ಸಮಾಜವನ್ನು ಕಾಡುತ್ತಿದೆ. ಈ ಪರಿಸ್ಥಿತಿ ಮುಂದುವರೆಯದಂತೆ ಗಮನಿಸಬೇಕು” ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ದತ್ತಿ ನಿಧಿ ಅಧ್ಯಕ್ಷ ಬಿ. ಪ್ರಕಾಶ್ಚಂದ್ರ ಶೆಟ್ಟಿ ವಹಿಸಿ, ಕುಶಲ ಹೆಗ್ಡೆಯವರ ಜೀವನದ ಸಾಧನೆ ವಿವರಿಸಿದರು.
ಕುಂದಾಪುರ-ಬೈಂದೂರು ತಾಲೂಕಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ 60 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿಗೆ ಸೇರ್ಪಡೆಗೊಂಡ ಅರ್ಹ 400 ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು.
ಸಂಸ್ಥೆಯ ವಿಶ್ವಸ್ಥರಾದ ಉದಯ ಹೆಗ್ಡೆ ಅತಿಥಿಗಳನ್ನು ಗೌರವಿಸಿದರು. ಪ್ರಧಾನ ಕಾರ್ಯದರ್ಶಿ ಯು. ಎಸ್. ಶೆಣೈ ಸ್ವಾಗತಿಸಿದರು.
ವಿಶ್ವಸ್ಥರಾದ ಕೆ. ನಾರಾಯಣ, ಜಿ. ಸಂತೋಷ ಕುಮಾರ್ ಶೆಟ್ಟಿ, ಖಜಾಂಚಿ ಸ್ನೇಹಪ್ರಭಾ ರೈ ಸಾಧಕ ವಿದ್ಯಾರ್ಥಿಗಳಿಗೆ ವಿವರ ನೀಡಿದರು.
ಹಂದಕುಂದ ಸೋಮಶೇಖರ ಶೆಟ್ಟಿ ರ್ಯಾಂಕ್ ವಿಜೇತರನ್ನು ಪರಿಚಯಿಸಿದರು. ಪಿ. ಜಯವಂತ ಪೈ ವಂದಿಸಿದರು.
Month: June 2024
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ/ ಸಿ.ಪಿ.ಟಿ ಮತ್ತು ಸಿ.ಎಸ್ ಕೋರ್ಸ್ ಗಳ ಬಗ್ಗೆ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ: “ಕಾಲೇಜು ಜೀವನದ ಆರಂಭದ ವರ್ಷಗಳಿಂದಲೇ ಪಡೆಯುವ ಸಿ.ಎ/ ಸಿ.ಎಸ್ ಕೋಚಿಂಗ್ ವಿದ್ಯಾರ್ಥಿಗಳಿಗೆ ಆ ಪರೀಕ್ಷೆಯ ವಿವಿಧ ಹಂತಗಳಲ್ಲಿ ಉತ್ತೀರ್ಣಗೊಳ್ಳಲು ಸಹಕಾರಿಯಾಗುವುದು ಮಾತ್ರವಲ್ಲದೇ ಇನ್ನಿತರ ಉನ್ನತ ಅಧ್ಯಯನಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಕೂಡ ಅನುಕೂಲವಾಗುವುದು ” ಎಂದು ಉಡುಪಿಯ ತ್ರಿಶಾ ಸಮೂಹ ಸಂಸ್ಥೆಗಳ ಸ್ಥಾಪಕರಾದ C.A ಗೋಪಾಲಕೃಷ್ಣ ಭಟ್ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ/ ಸಿ.ಪಿ.ಟಿ ಮತ್ತು ಸಿ.ಎಸ್ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್ ನ ವಿವಿಧ ಹಂತಗಳು ಮತ್ತು ಆಯಾ ಹಂತಗಳ ವಿಷಯವಾರು ಸಂಗತಿಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ್ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ ಸಭೆಗೆ ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಅಶ್ವಿನಿ ನಾಯಕ್ ರವರು ಧನ್ಯವಾದ ಸಲ್ಲಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಷ್ಮಾ ಶೆಣೈ ಯವರು ಕಾರ್ಯಕ್ರಮ ನಿರೂಪಿಸಿದರು.
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವನಮಹೋತ್ಸವ – ಗಿಡ ನೆಟ್ಟು ಸಂಭ್ರಮ
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ನೆಹರು ಯುವ ಕೇಂದ್ರ ಉಡುಪಿ, ಜೇಸಿಐ ಬೆಳ್ಮಣ್ಣು, ರೋಟರಿ ಸಮುದಾಯದಳ ಕೆಮ್ಮಣ್ಣು - ನಿಟ್ಟೆ ಸಹಯೋಗದಲ್ಲಿ ಸಂಘದ ರಂಗಮಂದಿರದ ಬಳಿ ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆ ವಹಿಸಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಪೂರ್ವಾಧ್ಯಕ್ಷ ದಿಣೇಶ್ ಸುವರ್ಣ, ನಿಟ್ಟೆ ಕೆಮ್ಮಣ್ಣು ರೋಟರಿ ಸಮುದಾಯದಳದ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಪೂರ್ವಾಧ್ಯಕ್ಷರುಗಳಾದ ರಘುವೀರ್ ಶೆಟ್ಟಿ ಬೋಳ, ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಉದಯ ಅಂಚನ್, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಕೋಶಾಧಿಕಾರಿ ಆರತಿ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಪುಷ್ಪ ಕುಲಾಲ್, ಸುದರ್ಶನ್ ಕುಂದರ್, ಸುಲೋಚನಾ ಕೋಟ್ಯಾನ್. ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಯೋಗೀಶ್ ಆಚಾರ್ಯ ಮೊದಲಾದವರಿದ್ದರು.
ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ 27 ರಂದು ಕೆಂಪೇಗೌಡ ಆಚರಣೆಯನ್ನು ಎಲ್ಲಾ ಕಚೇರಿಗಳಲ್ಲಿ ಆಚರಿಸಬೆಕು – ತಹಶೀಲ್ದಾರ್ ಜಿ.ಎನ್.ಸುದೀಂದ್ರ
ಶ್ರೀನಿವಾಸಪುರ : ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ 27 ರಂದು ಕೆಂಪೇಗೌಡ ಆಚರಣೆಯನ್ನು ಎಲ್ಲಾ ಕಚೇರಿಗಳಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡಬೇಕು ನಂತರ ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗುಳ್ಳಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚನೆ ನೀಡಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕೆಂಪೇಗೌಡ ಜಂಯಿತಿ ಆಚರಣೆಗಾಗಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.
ಅಲ್ಲದೆ ಕೆಂಪೇಗೌಡರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಿಳುದುಕೊಳ್ಳುವ ನಿಟ್ಟಿನಲ್ಲಿ ಶಾಲಾಕಾಲೇಜುಗಳಲ್ಲಿ ಪ್ರಬಂದ ಸ್ಪರ್ದೆ ಮಾಡಿಸಿ ಪ್ರಬಂದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲು ಚರ್ಚೆ ಮಾಡಲಾಯಿತು. ಹಾಗೂ ಹೋಬಳಿ ಕೇಂದ್ರಗಳಿಂದ ಒಂದು ಪಲ್ಲಕ್ಕಿಗಳನ್ನು ವ್ಯವಸ್ಥೆ ಮಾಡಲು ಇಒ ರವರಿಗೆ ಸೂಚಿಸಿದರು. ಅಲ್ಲದೆ ಕಾರ್ಯಕ್ರಮದ ಉಸ್ತವಾರಿ ನೋಡಿಕೊಳ್ಳಲು ಕೆಲ ಇಲಾಖಾಧಿಕಾರಿಳಿಗೆ ಹಾಗೂ ಸಮುದಾಯದ ಮುಖಂಡರಿಗೆ ಸೂಚಿಸಿದರು.
ಇಒ ಎ.ಎನ್.ರವಿ, ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಕಾರ್ಯದರ್ಶಿ ವೆಂಕಟರೆಡ್ಡಿ, ಮುಖಂಡರಾದ ಲಕ್ಷ್ಮಣರೆಡ್ಡಿ, ಬೈರಾರೆಡ್ಡಿ, ಬಚ್ಚಿರೆಡ್ಡಿ, ಕೃಷಿ ಇಲಾಖೆ ಕೆ.ಸಿ.ಮಂಜುನಾಥ್, ವಾಟರ್ಬೋರ್ಡ್ ಅಭಿಯಂತರ ನಾರಾಯಣಸ್ವಾಮಿ, ಸಿಡಿಪಿಒ ನವೀನ್, ರೇಷ್ಮ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಎಪಿಎಂಸಿ ಮಾರುಕಟ್ಟೆ ಕಾರ್ಯದರ್ಶಿ ಶಶಿಕಲಾ, ಸಬ್ರಿಜಿಸ್ಟರ್ ರಾಮಕೃಷ್ಣಪ್ಪ, ಪಶು ಇಲಾಖೆ ಸಹಾಯಕ ನಿರ್ದೇಶಕ ವಿಶ್ವನಾಥ್, ಬಿಸಿಎಂ ಇಲಾಖೆ ಅಧಿಕಾರಿ ಎಚ್.ಎನ್.ರವಿಕುಮಾರ್, ಅಬಕಾರಿ ಇಲಾಖೆ ಸಿಬ್ಬಂದಿ ಮಂಜುನಾಥ್, ರತಹಶೀಲ್ದಾರ್ ಕಚೇರಿ ಸಿಬ್ಬಂದಿ ಕೆ.ಎಂ.ಶ್ರೀನಾಥ್ ಇದ್ದರು.
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ ಗೆ ಚುನಾವಣೆ
ಕುಂದಾಪುರ : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 19.06.2024 ಬುಧವಾರದಂದು ವಿದ್ಯಾರ್ಥಿ ಸಂಸತ್ ಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.
ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿಯೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವಿಕೆ, ಚಿನ್ಹೆಗಳ ವಿತರಣೆ, ಚುನಾವಣಾ ಪ್ರಚಾರ, ಅಭ್ಯರ್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು. ಬೆರಳಿಗೆ ಶಾಯಿ ಹಾಕಿಸಿಕೊಂಡ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಮತ್ತು ಜವಾಬ್ದಾರಿಯನ್ನು ಅರಿತು ತಮ್ಮ ಅಮೂಲ್ಯವಾದ ಮತವನ್ನು ತಮ್ಮ ನೆಚ್ಚಿನ ಅಭ್ಯರ್ಥಿಗೆ ನೀಡುವುದರ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಇವಿಎಂ ಮಾದರಿಯ ಟ್ಯಾಬ್ ನ ಮೂಲಕ ವಿದ್ಯಾರ್ಥಿಗಳು ಕಾಗದರಹಿತ ಮತದಾನ ನಡೆಸಿ ನೈಜ ಚುನಾವಣೆಯ ಅನುಭವ ಪಡೆದರು.
ಮಧ್ಯಾಹ್ನದ ವೇಳೆಯಲ್ಲಿ ಅಭ್ಯರ್ಥಿಗಳ ಸಮಕ್ಷಮದಲ್ಲಿ ನಡೆದ ಮೂರು ಸುತ್ತಿನ ಮತ ಎಣಿಕೆಯಲ್ಲಿ ವಿ.ಕೆ.ಆರ್ ಪ್ರೌಢಶಾಲಾ ವಿದ್ಯಾರ್ಥಿ ನಾಯಕನಾಗಿ ಶ್ರವಣ್ ಕುಮಾರ್ ಶೆಟ್ಟಿ ಮತ್ತು ವಿದ್ಯಾರ್ಥಿ ಉಪನಾಯಕಿಯಾಗಿ ಶ್ರೇಯ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಆರು ಅಭ್ಯರ್ಥಿಗಳಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿನಾಯಕನಾಗಿ ಆರವ್.ಎ.ಶೆಟ್ಟಿ ಮತ್ತು ಸಹಾಯಕ ವಿದ್ಯಾರ್ಥಿ ನಾಯಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಆರು ಅಭ್ಯರ್ಥಿಗಳಲ್ಲಿ ಸಹಾಯಕ ವಿದ್ಯಾರ್ಥಿನಾಯಕಿಯಾಗಿ ಆಧ್ಯಾ.ಜೆ.ಶೆಟ್ಟಿ ಆಯ್ಕೆಯಾದರು. ವಿಜೇತರನ್ನು ಸಂಸ್ಥೆಯ ಸಂಚಾಲಕರು, ಅಧ್ಯಕ್ಷರಾದ ಬಿ.ಎಂ.ಸುಕುಮಾರ ಶೆಟ್ಟಿ ಅಭಿನಂದಿಸಿದರು. ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ಶಿಕ್ಷಕ ಚುನಾವಣಾ ಸಿಬ್ಬಂದಿಗಳು ಮತ್ತು ಸ್ಕೌಟ್ಸ್ , ಗೈಡ್ಸ್ ವಿದ್ಯಾರ್ಥಿಗಳ ಸಹಯೋಗದೊಂದಿಗೆ ವಿದ್ಯಾರ್ಥಿ ಚುನಾವಣೆ ಸಂಪನ್ನಗೊಂಡಿತು.
ತಲ್ಲೂರು ಸಂತ ಫ್ರಾನ್ಸಿಸ್ ಆಸಿಸ್ಸಿ ಚರ್ಚ್- ಅಪ್ಪಂದಿರ ದಿನಾಚರಣೆ
ಕುಂದಾಪುರ, 2024 ಜೂನ್ 16 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸಿಸ್ಸಿ ಚರ್ಚಿನಲ್ಲಿ ಕುಟುಂಬ ಆಯೋಗದಿಂದ ವಿಶ್ವ ಅಪ್ಪಂದಿರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೊದಲಿಗೆ ಚರ್ಚಿನ ಧರ್ಮ ಗುರುಗಳಾದ ರೆ. ಫಾ. ಎಡ್ವಿನ್ ಡಿಸೋಜರವರು ಬಲಿ ಪೂಜೆಯನ್ನು ಅರ್ಪಿಸಿದರು. ನಂತರ ಅವರು ಬಳಿಕ ಚರ್ಚಿನ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾಗತ ಕೋರಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶಕರಾಗಿರುವ ಶ್ರೀಯುತ ಲೆಸ್ಲಿ ಆರೋಜರವರು ಹಾಜರಿದ್ದು ಕುಟುಂಬದಲ್ಲಿ ತಂದೆಗೆ ಇರುವ ಸ್ಥಾನಮಾನ ಮತ್ತು ಮಹತ್ವವನ್ನು ವಿವರಿಸಿದರು. ರೆ. ಫಾ. ಎಡ್ವಿನ್ ಡಿಸೋಜರವರು ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ 90 ಮಂದಿ ಅಪ್ಪಂದಿರಿಗೆ ಅಭಿನಂದಿಸಿ ಶಾಲು ಹೊದಿಸಿ ಸನ್ಮಾನಿಸಿದರು.
ವೈ.ಸಿ.ಎಸ್ ಸಂಘಟನೆಯ ಸದಸ್ಯರು ಅಭಿನಂದನಾ ಗೀತೆಯನ್ನು ಹಾಡಿದರು. ಕುಟುಂಬ ಆಯೋಗದ ಸಂಚಾಲಕರಾದ ಶ್ರೀಯುತ ರಾಜೇಶ್ ಮೆಂಡೋನ್ಸಾ ಅವರು ಧನ್ಯವಾದ ಸಲ್ಲಿಸಿ, ಕುಮಾರಿ ಜೋನಿಟಾ ಮೆಂಡೋನ್ಸಾ ಕಾರ್ಯಕ್ರಮವನ್ನು ನಿರೂಪಿಸಿದರು.ಸಹ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಸ್ಥಳೀಯ ಪ್ರದೇಶ ಅಭಿವೃದ್ದಿ ನಿದಿಯಿಂದ ಶೇಕಡ 5 ಅನುದಾನದಲ್ಲಿ ಡಾ|| ವೈ.ಎ. ನಾರಾಯಣಸ್ವಾಮಿಯವರಿಂದ ತ್ರಿಚಕ್ರ ವಾಹನವನ್ನು ವಿತರಣೆ
ಶ್ರೀನಿವಾಸಪುರ ವಿಶೇಷ ಚೇತನರೆಂದರೆ ಅಸಮರ್ಥರು ಎನ್ನುವ ತಪ್ಪು ಬ್ರೇಮೆ ಬೇಡ, ಅವರಲ್ಲಿಯೂ ವಿಶೇಷ ಸಾಮಥ್ರ್ಯ ಇರುತ್ತದೆ ಇದಕ್ಕೆ ಸಾಕ್ಷಿಯೇ ಪತ್ರ ಕರ್ತರಾದ ಸೋಮಶೇಖರ್ ಹಾಗೂ ನಿರಂತರ ಶ್ರಮವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು ಎಂದ ವಿಧಾನ ಪರಿಷತ್ ಮಾಜಿ ಸಚೇತಕ ಡಾ|| ವೈ.ಎ. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕರ್ನಾಟಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ 2023-24ನೇ ಸಾಲಿನ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಸ್ಥಳೀಯ ಪ್ರದೇಶ ಅಭಿವೃದ್ದಿ ನಿದಿಯಿಂದ ಶೇಕಡ 5 ಅನುದಾನದಲ್ಲಿ ತ್ರಿಚಕ್ರ ವಾಹನವನ್ನು ವಿತರಿಸಿ ಮಾತನಾಡಿದ ವೈ.ಎ. ನಾರಾಯಣಸ್ವಾಮಿ ವಿಶೇಷ ಚೇತನರೆಂದರೆ ಯಾರಿಗೂ ಅನುಕಂಪ ಬೇಡ ಅವರಲ್ಲಿನ ಸಾಮಥ್ರ್ಯವನ್ನು ಚೇತನವನ್ನು ಗುರುತಿಸಬೇಕು ಇಂದು ಎಲ್ಲಾ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ ಅಂತಹ ಆನೇಕ ಸಾಧಕರು ನಮ್ಮ ಕಣ್ಣುಂದೆ ಇದ್ದಾರೆ, ವಿಶೇಷ ಚೇತನರನ್ನು ಸೋಲಿಸುವವರು ಮತ್ತೊಬ್ಬರಿಲ್ಲ, ಅಷ್ಟು ಅಪಾರವಾದ ಶಕ್ತಿ ಅವರಲ್ಲಿರುತ್ತದೆ ಎಂದ ಇವರು ಪತ್ರಕರ್ತರಾದ ಸೋಮಶೇಖರ್ ವಿಶೇಷ ಚೇತನರಾದರೂ ಅವರಲ್ಲಿ ಪ್ರತಿಭೆ ಅಡಿಗಿದೆ ಸಮಾಜದಲ್ಲಿ ಅಂಕು ಡೊಂಕ್ಕುಗಳನ್ನು ತಿದ್ದುವ ಹಾಗೂ ಪತ್ರಿಕೆಯ ಮೂಲಕ ಸಾರ್ವಜನಿಕರಿಗೆ ಉತ್ತಮ ಸಂದೇಶವನ್ನು ನೀಡುವ ವೃತ್ತಿಯಲ್ಲಿ ತೊಡಿಗಿದ್ದಾರೆ. ನಾನೂ ಸಹ ನನ್ನ ಅವಧಿಯಲ್ಲಿ ವಿಶೇಷ ಚೇತನರಿಗೆ ನನ್ನ ಪ್ರದೇಶ ಅಭಿವೃದ್ದಿ ಅನುದಾನದಿಂದ ತ್ರಿಚಕ್ರ ವಾಹನವನ್ನು ನೀಡಿದ್ದೇನೆ. ನನಗೆ ಇಂದು ಸಂತಸವಾಗಿದೆ ಇದನ್ನು ಸದ್ಬಳಿಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಕರೆ ನೀಡಿದರು.
ಈ ಸಮಯದಲ್ಲಿ ಎಂ ಆರ್ ಡಬ್ಲ್ಯೂ ವೈ,ವಿ, ಶ್ರೀನಿವಾಸಗೌಡ ಮುಖಂಡರಾದ ಕೆ.ಕೆ. ಮಂಜುನಾಥ್, ತೂಪಲ್ಲಿ ಮಧು, ಅಮರನಾಥರೆಡ್ಡಿ, ದಿಂಬಾಲು ಹರ್ಷ, ಮಧುಸೂದನರೆಡ್ಡಿ, ಕಾರ್ ಬಾಬು, ರಾಜ್ ದ್ವನಿವರ್ಧಕ ಮಾಲೀಕ ಶ್ರೀನಿವಾಸ್, ಜಗನ್, ಎಸ್ಡಿಎಂಸಿ ಅಧ್ಯಕ್ಷ ಆನಂದರೆಡ್ಡಿ, ಮುಖ್ಯ ಶಿಕ್ಷಕ ಎಂ.ಬೈರೇಗೌಡ, ಬುಲೆಟ್ವೆಂಕಟರೆಡ್ಡಿ, ಪೂಲುಶಿವಾರೆಡ್ಡಿ, ವಿ.ಆರ್ ಡಬ್ಲ್ಯೂ ಮೋಹನ್, ಇನ್ನೀತರರು ಉಪಸ್ಥಿತರಿದ್ದರು,
ದೇಶದಲ್ಲೆ ಎಲ್ಐಸಿಯು ದೊಡ್ಡ ಸಂಸ್ಥೆಯಾಗಿದ್ದು, ಎಲ್ಐಸಿ ಸಂಸ್ಥೆಯು ಖಾಸಗಿ ಸಂಸ್ಥೆಗಳಿಂತ ಹೆಚ್ಚು ಭದ್ರತೆಯನ್ನು ನೀಡಲಿದೆ- ಕೆ.ಅರವಿಂದ್
ಶ್ರೀನಿವಾಸಪುರ : ದೇಶದಲ್ಲೆ ಎಲ್ಐಸಿಯು ದೊಡ್ಡ ಸಂಸ್ಥೆಯಾಗಿದ್ದು, ಎಲ್ಐಸಿ ಸಂಸ್ಥೆಯು ಖಾಸಗಿ ಸಂಸ್ಥೆಗಳಿಂತ ಹೆಚ್ಚು ಭದ್ರತೆಯನ್ನು ನೀಡಲಿದೆ. ದೇಶದ ಅತಿವೃಷ್ಟಿ , ಅನಾವೃಷ್ಟಿ ಸಮಯದಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದೆ ಎಂದು ಎಲ್ಐಸಿ ಕೇಂದ್ರ ಶಾಖೆಯ ಬೆಂಗಳೂರಿನ ವಿಭಾಗ-2ರ ಮಾರುಕಟ್ಟೆ ವ್ಯವಸ್ಥಾಪಕ ಕೆ.ಅರವಿಂದ್ ಹೇಳಿದರು.
ಪಟ್ಟಣದ ಎಲ್ಐಸಿ ಉಪಶಾಖೆಯಲ್ಲಿ ಮಂಗಳವಾರ ಪಾಲಸಿ ಅಭಿಯಾನದ ಅಂಗವಾಗಿ ತಾಲೂಕಿನ ಎಲ್ಐಸಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ಪ್ರತಿನಿಧಿಗಳು ಗ್ರಾಮಗಳಿಗೆ ಭೇಟಿ ನೀಡಿ ಎಲ್ಐಸಿ ಪ್ರಚಾರ ಮಾಡಬೇಕು. ಮುಖ್ಯವಾಗಿ ಮಹಿಳೆಯರಿಗೆ ಅರಿವು ಮೂಡಿಸಿದಲ್ಲಿ ಹೆಚ್ಚಿನ ಪ್ರಯೋಜನವಾಗುತ್ತದೆ. ಮಹಿಳಾ ಪಾಲಿಸಿದಾರರ ಸಂಖ್ಯೆ ಹೆಚ್ಚಿಸಬೇಕು. ದುರ್ಘಟನೆಗಳು ಹೇಳಿ ಕೇಳಿ ಬರುವುದಿಲ್ಲ. ಅಂಥ ಸಂದರ್ಭದಲ್ಲಿ ಎಲ್ಐಸಿ ಪಾಲಿಸಿದಾರರ ಕುಟುಂಬಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.
24-6-24 ರ ಒಳಗೆ ಪ್ರತಿನಿದಿಗಳು ಹತ್ತು ಸಾವಿರ ಪಾಲಿಸಿಗಳನ್ನು ಮಾಡಿಸಬೇಕು ಪ್ರತಿನಿದಿಗಳು ಹತ್ತು ಸಾವಿರ ಪಾಲಿಸಿಗಳ ಗುರಿಯನ್ನ ಮಟ್ಟಲು ಶ್ರಮಿಸುವಂತೆ ಎಂದು ಸೂಚಿಸಿದರು.
ಮಾರುಕಟ್ಟೆಯ ಸೇಲ್ಸ್ ಮ್ಯಾನೇಜರ್ ಬಷೀರ್ ಅಹಮ್ಮದ್, ಸ್ಥಳೀಯ ಶಾಖೆಯ ವ್ಯವಸ್ಥಾಪಕ ಎಸ್.ವಿ.ಪ್ರಸಾದ್, ಅಧಿಕಾರಿಗಳಾದ ರವಿಶಂಕರ್, ಬಾಲಚಂದ್ರ, ಶ್ರೀನಿವಾಸ್, ಲಿಖಿತ್ಕುಮಾರ್ ಹಾಗೂ ಪ್ರತಿನಿಧಿಗಳು ಇದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಗಣಿತ ವಿಷಯದ ಪರೀಕ್ಷೆ ಯಶಸ್ವಿ3759 ಹಾಜರಿ-534 ಮಂದಿ ಗೈರು-ಡಿಡಿಪಿಐ ಕೃಷ್ಣಮೂರ್ತಿ
ಕೋಲಾರ:- ಜಿಲ್ಲೆಯ 17 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇಂದು ಪರೀಕ್ಷೆಗೆ ಜಿಲ್ಲೆಯ 385 ಪ್ರೌಢಶಾಲೆಗಳ 4293 ಮಂದಿ ನೋಂದಣಿ ಮಾಡಿದ್ದು, 534 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೇ ಪರೀಕ್ಷೆ ನಡೆದಿದೆ, ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 4293 ಮಂದಿ ಪೈಕಿ 3759 ವಿದ್ಯಾರ್ಥಿಗಳ ಪೈಕಿ 3516 ಮಂದಿ ಹಾಜರಾಗಿದ್ದು, 534 ಮಂದಿ ಗೈರಾಗಿದ್ದರು ಎಂದು ತಿಳಿಸಿದರು.
ತಾಲ್ಲೂಕುವಾರು ಕೇಂದ್ರಗಳ ವಿವರ
ಬಂಗಾರಪೇಟೆ ತಾಲ್ಲೂಕಿನ 3 ಕೇಂದ್ರಗಳಲ್ಲಿ ಗಣಿತ ವಿಷಯಕ್ಕೆ ಒಟ್ಟು 849 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 729 ವಿದ್ಯಾರ್ಥಿಗಳು ಹಾಜರಾಗಿ 120 ಮಂದಿ ಗೈರಾಗಿದ್ದಾರೆ. ಕೆಜಿಎಫ್ ತಾಲ್ಲೂಕಿನ 3 ಕೇಂದ್ರಗಳಲ್ಲಿ 955 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, 882 ಮಂದಿ ಹಾಜರಾಗಿ 73 ಮಂದಿ ಗೈರಾಗಿದ್ದಾರೆ. ಕೋಲಾರದ 5 ಕೇಂದ್ರಗಳಲ್ಲಿ 757 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 706 ಮಂದಿ ಹಾಜರಾಗಿ 114 ಮಂದಿ ಗೈರಾಗಿದ್ದಾರೆ ಎಂದು ತಿಳಿಸಿದರು.
ಮಾಲೂರಿನ 2 ಕೇಂದ್ರಗಳಲ್ಲಿ 703 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, 606 ಮಂದಿ ಹಾಜರಾಗಿ 97 ಮಂದಿ ಗೈರಾಗಿದ್ದಾರೆ. ಮುಳಬಾಗಿಲಿನ 3 ಕೇಂದ್ರಗಳಲ್ಲಿ 664 ಮಂದಿ ನೋಂದಾಯಿಸಿದ್ದು, ಈ ಪೈಕಿ 569 ಮಂದಿ ಹಾಜರಾಗಿ 95 ಮಂದಿ ಗೈರಾಗಿದ್ದಾರೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 1 ಕೇಂದ್ರದಲ್ಲಿ 242 ಮಂದಿ ನೋಂದಾಯಿಸಿದ್ದು, 207 ಮಂದಿ ಹಾಜರಾಗಿ 35 ಮಂದಿ ಗೈರಾಗಿದ್ದಾರೆ ಎಂದು ತಿಳಿಸಿದರು.
ಮೂರನೇ ದಿನದ ಗಣಿತ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ ಎಂದರು.