ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಲಹೆಗಾರರಾದ ಮಂಜುಳಾ ಶೆಟ್ಟಿ ಮಾತನಾಡಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಹಿಸಿದ್ದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.
ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡೋ.ಸರೋಜ ಎಂ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Month: July 2024
ಶ್ರೀನಿವಾಸಪುರ : ಕ್ಷೇತ್ರದಲ್ಲಿ ಸಾವಿರಾರು ಜನ ಬಡವರಿದ್ದು, ಇದ್ದು ಅಂತಹವರಿಗೆ ನಿವೇಶನವನ್ನು ನೀಡುವ ಚಿಂತನೆ -ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ
ಶ್ರೀನಿವಾಸಪುರ : ಕ್ಷೇತ್ರದಲ್ಲಿ ಸಾವಿರಾರು ಜನ ಬಡವರಿದ್ದು, ಇದ್ದು ಅಂತಹವರಿಗೆ ನಿವೇಶನವನ್ನು ನೀಡುವ ಚಿಂತನೆ ಮಾಡಿದ್ದೇನೆ. ಅಧಿಕಾರಿಗಳು ಈ ನನ್ನ ಚಿಂತನೆಗೆ ಕೈಜೋಡಿಸಬೇಕು ಎಂದರು. ಸರ್ಕಾರದಿಂದ ಬರುವಂತಹ ವಸತಿ ಯೋಜನೆಯನ್ನು ಹಾಗೂ ಇತರೆ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಲಭಿಸುವ ವ್ಯವಸ್ಥೆ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲೂಕಿನ ಯಲ್ದೂರಿನ ನ್ಯಾಷನಲ್ ಹೈಸ್ಕೂಲ್ ಶಾಲಾವರಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ಹೂಲ ಗದ್ದೆಗಳಿಗೆ ಹೋಗುವ ಕಾಲುದಾರಿ ರಸ್ತೆಗಳನ್ನು ,ಸ್ಮಶಾನಕ್ಕೆ ಹೋಗುವ ದಾರಿಗಳನ್ನು ನಕಾಶೆಯಲ್ಲಿ ಇದ್ದರು ಸಹ ಒತ್ತುವರಿ ಮಾಡಿಕೊಳ್ಳುತ್ತಿದ್ದು ದಯವಿಟ್ಟು ಕಾಲುದಾರಿ ರಸ್ತೆಗಳನ್ನು ಒತ್ತುವರಿ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.
ವಿಕಲೇಚತನರಿಗೆ ಕ್ಷೇತದಲ್ಲಿ ಸರ್ಕಾರದಿಂದ ಈಗಾಗಲೇ 28 ತ್ರಿಚಕ್ರವಾಹನಗಳನ್ನು ವಿತರಣೆ ಮಾಡಲಾಗಿದೆ. ಶಾಸಕರ ಅನುದಾನದಲ್ಲಿ 50 ತ್ರಿಚಕ್ರವಾಹನಗಳನ್ನು ವಿತರಣೆ ಮಾಡಲು ಅವಕಾಶವಿದ್ದು, ಈಗಾಗಲೇ 20 ತ್ರಿಚಕ್ರವಾಹನಗಳನ್ನು ವಿತರಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಅತಿ ಶೀಘ್ರವಾಗಿ ಉಳಿದವುಗಳನ್ನ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕ್ಷೇತ್ರದಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಐದು ಸಾವಿರ ಎಕರೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು ಅದರಂತೆ ಯಲ್ದೂರು ಹೋಬಳಿಯಲ್ಲಿ 2000 ಎಕರೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ದೊರತಿದೆ ಅತಿ ಶೀಘ್ರವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದರು.ಅಲ್ಲದೆ ಮದನಪಲ್ಲಿ ರಸ್ತೆಗೆ ಸಂಬಂದಿಸಿದಂತೆ 3000 ಎಕರೆಯಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪಿಸಿಲಿದ್ದೇನೆ ಎಂದರು.
ರೈತರಿಗೆ ಹಾಗು ಸಾರ್ವಜನಿಕರಿಗೆ ಸಂಬಂದಿಸಿದಂತೆ ಇರುವ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ಇತ್ಯರ್ಥ ಮಾಡಿಕೊಡುವಂತೆ ತಹಶೀಲ್ದಾರ್ರವರಿಗೆ ಸೂಚಿಸಿದರು. ಹಾಗೂ ಇ ಖಾತೆಗಳನ್ನು ಯಾವದೇ ರೀತಿಯಾಗಿ ದುರಪಯೋಗವಾಗದಂತೆ ಎಚ್ಚರವಹಿಸಿ ವಿಲೆವಾರಿ ಮಾಡುವಂತೆ ಇಒ ರವರಿಗೆ ಸೂಚಿಸಿದರು. ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಸಾರ್ವಜನಿಕರು ಮಾಹಿತಿ ಪಡೆದು ಸರ್ಕಾರ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ತಹಶೀಲ್ದಾರ್ ಜಿ.ಎನ್.ಸುದೀಂದ್ರ ಮಾತನಾಡಿ ಸರ್ಕಾರದ ನಡೆ ಹಳ್ಳಿಗಳತ್ತಾ ಎನ್ನುವಂತೆ ಸಾರ್ವಜನಿಕರ ತಮ್ಮ ಅಹವಾಲುಗಳನ್ನು ಅತಿ ಶೀಘ್ರವಾಗಿ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳ ಬಗ್ಗೆ ವಿವರಿಸಿದರು. ಇದೇ ಸಮಯದಲ್ಲಿ ಕೃಷಿ ಇಲಾಖೆವತಿಯಿಂದ ನಡೆದ ಜಾಗೃತಿ ಜಾಥಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಚಾಲನೆ ನೀಡಿದರು. ಎನ್ಎಫ್ಎಸ್ಎಂ ಯೋಜನೆ ಅಡಿಯಲ್ಲಿ ರೈತರಿಗೆ ರಾಗಿ ಬಿತ್ತನೆ ಬೀಜ ವಿತರಣೆ ಮಾಡಲಾಯಿತು. ಬಳೆ ಪ್ರಾತ್ಯಕ್ಷತೆ ಬಗ್ಗೆ ವಿವರಿಸಿ , ಕೃಷಿ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.
ಅಪರಜಿಲ್ಲಾಧಿಕಾರಿ ಎಸ್.ಎಂ ಮಂಗಳ, ಪ್ರೋಬಿಷಿನಲ್ ತಹಶೀಲ್ದಾರ್ಗಳಾದ ಬಿ.ಕೆ.ಶ್ವೇತ, ಎನ್.ಗಂಗಾಸಿಂದು, ಇಒ ಎ.ಎನ್.ರವಿ, ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ, ಪರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಉಪತಹಶೀಲ್ದಾರ್ ಕೆ.ಎಲ್.ಜಯರಾಮ್, ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ, ಪೊಲೀಸ್ ನಿರೀಕ್ಷ ಜಯಾನಂದ್, ಅರಣ್ಯ ಇಲಾಖೆ ವಲಯ ಅರಣ್ಯಾಧಕಾರಿ ಮಹೇಶ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಸಿಡಿಪಿಒ ನವೀನ್, ಯಲ್ದೂರು ಕೃಷಿ ಅಧಿಕಾರಿ ಕೆ.ರಘು, ಯಲ್ದೂರು ಅರಣ್ಯ ಅಧಿಕಾರಿ ಸಿ.ಎನ್.ಅನಿಲ್ಕುಮಾರ್, ಮುಖಂಡರಾದ ಕೃಷ್ಣಾರೆಡ್ಡಿ, ಯಲ್ದೂರು ಮಣಿ, ಆರ್ಐಗಳಾದ ಎಸ್.ವಿ.ಜನಾರ್ಧನ್, ಮುನಿರೆಡ್ಡಿ, ಗುರುರಾಜರಾವ್,ವಿಎಗಳಾದ ಮೇಘನಾಯಕ್, ಎಂ.ಎನ್.ಶಂಕರರೆಡ್ಡಿ, ತಹಶೀಲ್ದಾರ್ ಕಚೇರಿ ಸಿಬ್ಬಂದಿ ಎಚ್.ಎಸ್.ಅಭಿಷೇಕ್, ಪಿಡಿಒ ಮಂಗಳಾಂಬ, ಕಾರ್ಯದರ್ಶಿ ಕೆ.ಪಿ.ಶ್ರೀನಿವಾಸರೆಡ್ಡಿ, ಇದ್ದರು.
ಶ್ರೀನಿವಾಸಪುರ : ಸಂರಕ್ಷಣೆಯಲ್ಲಿ ಸರಕಾರಿ ಆಸ್ತಿ ಕೋಲಾರ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ – ಜಿಲ್ಲಾಧಿಕಾರಿ ಅಕ್ರಂಪಾಷಾ
ಶ್ರೀನಿವಾಸಪುರ : ಸಂರಕ್ಷಣೆಯಲ್ಲಿ ಸರಕಾರಿ ಆಸ್ತಿ ಕೋಲಾರ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ – ಜಿಲ್ಲಾಧಿಕಾರಿ ಅಕ್ರಂಪಾಷಾ ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯಾದ್ಯಂತ ಇರುವ ಸರಕಾರಿ ಜಮೀನುಗಳನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವ ಸಮಸ್ಯೆ ಮತ್ತು ಇವುಗಳನ್ನು ತೆರವುಗೊಳಿಸಲು ನಡೆಸಬೇಕಾದ ಹಲವು ವರ್ಷಗಳ ಕಾನೂನು ಹೋರಾಟಗಳು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಸರಕಾರಿ ಆಸ್ತಿಗಳನ್ನು ವೈಜ್ಞಾನಿಕವಾಗಿ ಗುರುತಿಸಿ, ಇವು ಖಾಸಗಿಯವರ ಪಾಲಾಗದಂತೆ ರಕ್ಷಿಸಿ, ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಲ್ಯಾಂಡ್ ಬೀಟ್ ಆಪ್ ಬಳಸಿಕೊಂಡು, ವಿವಿಧ ಜಮೀನುಗಳಲ್ಲಿರುವ ಸರಕಾರಿ ಭೂಮಿಯನ್ನು ಜಿಯೋ ಫೆನ್ಸಿಂಗ್ ಮಾಡಿ, ರಕ್ಷಣೆ ಮಾಡುವ ಕಾರ್ಯದಲ್ಲಿ ಕೋಲಾರ ಜಿಲ್ಲೆಯು ಇಡೀ ರಾಜ್ಯದಲ್ಲಿಯೇ ಮುಂಚೂಣಿ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಸರಕಾರಿ ಆಸ್ತಿಗಳು ಇರುವ ಒಟ್ಟು 34375 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 27451 ಸ್ಥಳಗಳಿಗೆ ಗ್ರಾಮ ಆಡಳಿತ ಅಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ಈ ಆಸ್ತಿಗಳಿಗೆ ಜಿಯೋ ಫೆನ್ಸಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಇದು ರಾಜ್ಯದಲ್ಲಿಯೇ ಅತ್ಯಕ ಸಂಖ್ಯೆಯಾಗಿದೆ. ಈ ಜಮೀನುಗಳಲ್ಲಿರುವ ಸರಕಾರಿ ಆಸ್ತಿಗಳ ಬಗ್ಗೆ ಸಂಬಂಧಪಟ್ಟ ಗ್ರಾಮ ಅಕಾರಿಗಳು, ತಮ್ಮ ವ್ಯಾಪ್ತಿಯ ಕಂದಾಯ ನಿರೀಕ್ಷಕರಿಗೆ ಲ್ಯಾಂಡ್ ಬಿಟ್ ಆಪ್ ಮೂಲಕ ವರದಿ ನೀಡಿದ್ದು, ಆ ವರದಿಯನ್ನು ಸಂಬ೦ಧಪಟ್ಟ ತಾಲೂಕಿನ ತಹಶೀಲ್ದಾರ್ಗಳು ಅಂತಿಮಗೊಳಿಸುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 27451 ಸರಕಾರಿ ಆಸ್ತಿಗಳಿಗೆ ಸಂಪೂರ್ಣ ಜಿಯೋ ಫೆನ್ಸಿಂಗ್ ಮಾಡಲಾಗಿದ್ದು, ಈ ಮೂಲಕ ಜಿಲ್ಲೆಯ ಈ ಸರಕಾರಿ ಆಸ್ತಿಗಳ ಸಂಪೂರ್ಣ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಲಾಗಿದೆ. ಆಡಳಿತ
ಜಿಲ್ಲೆಯಲ್ಲಿ ಇದುವರೆಗೆ ಕೋಲಾರ ತಾಲೂಕಿನಲ್ಲಿನ 8920 ಸರಕಾರಿ ಆಸ್ತಿಗಳಲ್ಲಿ 7067 ಆಸ್ತಿಗಳಿಗೆ ಜಿಯೋ ಫೆನ್ಸಿಂಗ್ ಕಾರ್ಯ ಮಾಡಲು ಸ್ಥಳ ಭೇಟಿ ನಡೆಸಿ ವರದಿ ನೀಡಿದ್ದು, ಶೇ 85.72%ಆಸ್ತಿಗಳಿಗೆ ಈಗಾಗಲೇ ಸಂಪೂರ್ಣ ಜಿಯೋ ಫೆನ್ಸಿಂಗ್ ಮಾಡಲಾಗಿದೆ. ಬಂಗಾರಪೇಟೆ ತಾಲೂಕಿನ 3320ಸರಕಾರಿ ಆಸ್ತಿಗಳಲ್ಲಿ 2835 ಆಸ್ತಿಗಳಿಗೆ, ಕೆ ಜಿ ಎಫ್ ತಾಲೂಕಿನ 2895 ಆಸ್ತಿಗಳಲ್ಲಿ 2421 ಆಸ್ತಿಗಳಿಗೆ, ಮುಳಬಾಗಿಲು ತಾಲೂಕಿನ 7294 ಆಸ್ತಿಗಳಲ್ಲಿ 5883 ಆಸ್ತಿಗಳಿಗೆ, ಶ್ರೀನಿವಾಸಪುರ ತಾಲೂಕಿನ 6394 ಆಸ್ತಿಗಳಲ್ಲಿ 5394 ಆಸ್ತಿಗಳಿಗೆ ಹಾಗೂ ಮಾಲೂರು ತಾಲೂಕಿನ 5552 ‘ಆಸ್ತಿಗಳಲ್ಲಿ 4602 ಆಸ್ತಿಗಳಿಗೆ, ಈಗಾಗಲೇ ಸಂಪೂರ್ಣ ಜಿಯೋ ಫೆನ್ಸಿಂಗ್ ಮಾಡಲಾಗಿದೆ.
ಈ ಲ್ಯಾಂಡ್ ಬೀಟ್ ಆಪ್ನಲ್ಲಿ, ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಮೀನುಗಳಾದ ಗೋಮಾಳ, ಹುಲ್ಲು ಬನ್ನಿ ಖರಾಬು, ಸರ್ಕಾರಿ ಫಡಾ, ಸರ್ಕಾರಿ ಖರಾಬು, ಸರ್ಕಾರಿ ಬೀಳು, ದನಗಳಿಗೆ ಮುಫತ್ತು, ಸರ್ಕಾರಿದಾರಿ, ಗುಂಡು ತೋಪು ಇತ್ಯಾದಿ ಹಾಗೂ ಸರ್ಕಾರಿ ಕೆರೆ ಮತ್ತು ಸರ್ಕಾರಿ ಸ್ಮಶಾನಗಳನ್ನು ಸಂಬ೦ಧಪಟ್ಟ ಗ್ರಾಮ ಆಡಳಿತ ಅಕಾರಿಗಳು ಲ್ಯಾಂಡ್ ಬೀಟ್ ತಂತ್ರಾ0ಶದಲ್ಲಿ ಕಡ್ಡಾಯವಾಗಿ ಕ್ಷೇತ್ರ ಪರಿಶೀಲನೆ ಮಾಡಿದ್ದಾರೆ.
ಸರ್ಕಾರಿ ಜಮೀನುಗಳ ಪೈಕಿ ಅರಣ್ಯ ಜಮೀನುಗಳು, ಇತರೆ ಯೋಜನೆಗಳಿಗೆ ಸ್ವಾಧೀನಪಡಿಸಿಕೊಂಡ ಜಮೀನುಗಳು (ಭೂಸ್ವಾಧೀನ), ಶಾಲೆಗಳು ಮತ್ತು ಆಸ್ಪತ್ರೆಗಳು ಇತ್ಯಾದಿಗಳಂತಹ ಇತರ ಜಮೀನುಗಳನ್ನು ಒಳಗೊಂಡಿದ್ದು, ಇಲಾಖೆಗಳ ಇಂತಹ ಜಮೀನುಗಳನ್ನು ಕ್ಷೇತ್ರ ಪರಿಶೀಲನೆಗಾಗಿ ಮುಂದಿನ ದಿನಗಳಲ್ಲಿ ಆಯಾ ಇಲಾಖೆಗಳಿಗೆ ಕಳುಹಿಸಲು ತಂತ್ರಾಂಶದಲ್ಲಿ ಅಗತ್ಯ ತಾಂತ್ರಿಕ ಬದಲಾವಣೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಗಳಿಗೆ ಹಾಗೂ ವಸತಿ ಯೋಜನೆಗಳ ಫಲಾನುಭವಿಗಳಿಗೆ ಸೇರಿದಂತೆ ಅಗತ್ಯವಿರುವವರಿಗೆ ಭೂಮಿಯನ್ನು ಮಂಜೂರು ಮಾಡಲು ಸರಕಾರಿ ಭೂಮಿಯ ಕೊರತೆಯಿದೆ. ಅಲ್ಲದೇ ಈಗಾಗಲೇ ಸರಕಾರಿ ಭೂಮಿ ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸುವ ಪ್ರಕ್ರಿಯೆಯು ದೀರ್ಘವಾಗಿರುವ ಜೊತೆಗೆ ಸಂಕೀರ್ಣವಾಗಿದೆ. ಸರಕಾರದ ಸೂಚನೆಯಂತೆ ಲ್ಯಾಂಡ್ ಬೀಟ್ ಆಪ್ ಮೂಲಕ ಜಿಲ್ಲೆಯಲ್ಲಿನ ಸರಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಸಮರೋಪಾದಿಯಲಿ ಕೈಗೊಂಡಿದ್ದು, ಈ ಕಾರ್ಯ ಪೂರ್ಣಗೊಂಡ ನಂತರ ಜಿಲ್ಲೆಯಲ್ಲಿ ಲಭ್ಯವಿರುವ ಸರಕಾರಿ ಜಮೀನಿನ ನಿಖರ ಪ್ರಮಾಣದ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ. ಮುಂದಿನ ದಿನಗಳಲ್ಲಿ ಇವುಗಳ ಅತಿಕ್ರಮಣವಾಗದಂತೆ ತಡೆಯುವ ಮೂಲಕ ಸಾರ್ವಜನಿಕ ಉದ್ದೇಶಗಳಿಗೆ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ದೊರೆಯಲಿದೆ.
‘ರೇಡಿಯೋ ಕುಂದಾಪ್ರ’ ಕ್ಕೆ ಬಿ. ಅಪ್ಪಣ್ಣ ಹೆಗ್ಡೆ ಭೇಟಿ
ಭಂಡಾರ್ಕರ್ಸ್ ಕಾಲೇಜಿನ ರೇಡಿಯೋ ಕುಂದಾಪ್ರ ೮೯.೬ ಎಫ್. ಎಂ. ಸಮುದಾಯ ಬಾನುಲಿ ಕೇಂದ್ರಕ್ಕೆ ಬಿ. ಅಪ್ಪಣ್ಣ ಹೆಗ್ಡೆ ಭೇಟಿ ನೀಡಿದರು.
ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು, ಟಿ. ಪ್ರಕಾಶ ಸೋನ್ಸ್, ರಾಜೇಂದ್ರ ತೋಳಾರ್, ಕೆ. ದೇವದಾಸ ಕಾಮತ್, ಪ್ರಾಂಶುಪಾಲ ಡಾ| ಶುಭಕರಾಚಾರಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ| ಜಿ. ಎಂ. ಗೊಂಡ ಸ್ವಾಗತಿಸಿ, ಅಪ್ಪಣ್ಣ ಹೆಗ್ಡೆಯವರನ್ನು ಗೌರವಿಸಿದರು.
ಆಡಳಿತ ಮಂಡಳಿ ಸದಸ್ಯರಾದ ಯು. ಎಸ್. ಶೆಣೈ “ರೇಡಿಯೋ ಕುಂದಾಪ್ರ” ಸಮುದಾಯ ಬಾನುಲಿ ಕೇಂದ್ರದ ಬಗ್ಗೆ ವಿವರಣೆ ನೀಡಿದರು.
ಬಿ. ಅಪ್ಪಣ್ಣ ಹೆಗ್ಡೆಯವರ ಜೀವನಾನುಭವ ಸಾಧನೆ, ಆಸಕ್ತಿ ಕ್ಷೇತ್ರಗಳ ಕುರಿತು “ರೇಡಿಯೋ ಕುಂದಾಪ್ರ” ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ವಿ. ಅಲ್ಸೆ ಸಂದರ್ಶನ ನಡೆಸಿದರು.
ಕುಂದಾಪುರದಲ್ಲಿ “ರೇಡಿಯೋ ಕುಂದಾಪ್ರ”-೮೯.೬ ಎಫ್. ಎಂ. ಸ್ಥಾಪನೆಗೆ ಬಿ. ಅಪ್ಪಣ್ಣ ಹೆಗ್ಡೆ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದರು.
ಕುಂದಾಪುರ – ಸೈoಟ್ ಮೇರಿಸ್ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಸಮಾರಂಭ
ಕುಂದಾಪುರ, ಜು.2: ಸೈoಟ್ ಮೇರಿಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ .. ಜುಲೈ ತಿಂಗಳ 2 ನೇ ತಾರೀಖಿನ ಮಂಗಳವಾರ ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಚರ್ಚಿನ ಧರ್ಮ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ಜಂಟಿ ಕಾರ್ಯದರ್ಶಿ ಆಗಿರುವ ರೆ. ಫಾ. ಪಾವ್ಲ್ ರೇಗೊರವರು ಅಧ್ಯಕ್ಷತೆ ವಹಿಸಿಕೊಂಡಿದ್ದು, ಆರಿಸಿ ಬಂದ ಸಂಸತ್ತಿನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿ, ನಾಯಕತ್ವ ಗುಣಗಳು ನಿಮ್ಮಲ್ಲಿ ಬೆಳೆಯಬೇಕು. ನಕ್ಷತ್ರಗಳು ಮಿನುಗುವ ಹಾಗೆ ನೀವು ವಿದ್ಯಾ ಸಂಸ್ಥೆಯಲ್ಲಿ ಮೀನುಗಬೇಕು, ನಿಮ್ಮ ಗುರಿ ಉನ್ನತ್ತ ಮಟ್ಟದ್ದಾಗಿರಬೇಕು ಎಂದು ಹೇಳಿ ಪ್ರಮಾಣವಚನ ಬೋಧಿಸಿ ಹರಸಿದರು
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗಂಗೊಳ್ಳಿ ಚರ್ಚಿನ ಧರ್ಮ ಗುರುಗಳಾದ ರೆ. ಫಾ ತೋಮಸ್ ರೋಷನ್ ಡಿಸೋಜ ರವರು ’ನೀವೆಲ್ಲ ಭಾವಿ ಪ್ರಜೆಗಳು, ಪ್ರಯತ್ನ ನಿಮ್ಮದಾಗಿರಲಿ, ಧೈರ್ಯದಿಂದ ಮುನ್ನಡೆಯಿರಿ ಎನ್ನುತ್ತಾ ಗುರಿ ಸಾಧನೆಗಾಗಿ ಅಬ್ದುಲ್ ಕಲಾಂ ರವರ ಯಶಸ್ಸಿನ ಮಂತ್ರಗಳನ್ನು ವಿದ್ಯಾರ್ಥಿಗಳಲ್ಲಿ ಹೇಳಿಸಿ’ ಶುಭ ಹಾರೈಸಿದರು
ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಪತ್ರಕರ್ತರು, ಕೊಂಕಣಿ-ಕನ್ನಡ ಸಾಹಿತಿಗಳಾದ ಬರ್ನಾರ್ಡ್ ಡಿಕೋಸ್ತಾರವರು ಭಾಗವಹಿಸಿ “ವಿದ್ಯಾರ್ಥಿಗಳಲ್ಲಿ ಜಾತಿ ಮತ ಭಾವನೆಯಿರದೆ, ಕೆಲವೇ ಕೆಲವರ ಪರವಾಗಿ ಸೇವೆ ಮಾಡದೆ, ಎಲ್ಲರು ನಮ್ಮವರು ಏಂಬ ಸಮಾನ ರೀತಿಯಲ್ಲಿ ಸೇವೆ ಮಾಡಿ ಎಲ್ಲರ ಜನನಾಯಕರಾಗಬೇಕು’ ಎನ್ನುತ್ತಾ,ಪ್ರಮಾಣಿಕ ಪರೋಪಕಾರಿ ರೀತಿಯಲ್ಲಿ ಸಮಾಜ ಸೇವೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.
ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾದ ವಿದ್ಯಾರ್ಥಿ ಮಹಮ್ಮದ್ ಅಫ್ರಾನ್ ’ತನ್ನನ್ನು ಮತ ನೀಡಿ ಆರಿಸಿದ್ದಕ್ಕೆ, ವಂದನೆ ಸಲ್ಲಿಸಿ, ಕಾಲೇಜಿನ ಅಭಿವೃದ್ಫಿಗೆ ಶ್ರಮಿಸುತ್ತೇನೆ’ ಎಂದು ನುಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೇಶ್ಮಾ ಫೆರ್ನಾಂಡೀಸ್, ಹಾಗೂ ಸಂಸತ್ತಿನ ಬೇರೆ ಬೇರೆ ವಿದ್ಯಾರ್ಥಿ ಮಂತ್ರಿಗಳು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳ ಲಯಬದ್ಧ ಸಂಗೀತದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ, ಭೌತಶಾಸ್ತ್ರದ ಉಪನ್ಯಾಸಕಿ, ಕಾರ್ಯಕ್ರಮದ ಸಂಯೋಜಕಿ ಅಧ್ಯಾಪಕಿ ಪಲ್ಲವಿಯವರು ಸ್ವಾಗತಿಸಿದರು, ವಿದ್ಯಾರ್ಥಿ ಪರಿಷತನ ಕಾರ್ಯದರ್ಶಿ ಜೊನಿಟಾ ಮೆಂಡೊನ್ಸಾ ವಂದಿಸಿದರು , ಪ್ರಥಮ ಪಿ.ಯು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಲಿಸ್ಟನ್ ಕಾರ್ಯಕ್ರಮ ನಿರೂಪಿಸಿದರು.
weat
;
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳನ್ನು ಬೆಂಗಳೂರು ವಿವಿ ಕುಲಪತಿ ನಿರಂಜನವಾನಳ್ಳಿ, ವಿಜಯವಾಣಿ ಪ್ರದಾನ ಸಂಪಾದಕ ಕೆ.ಎನ್.ಚನ್ನೇಗೌಡ, ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಗೋಪಿನಾಥ್ ಮತ್ತಿತರರು ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು.
ವಂಶೋದಯ ಅಡ್ವಾನ್ಸ್ಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ನಿಂದ ಉಚಿತ ಸೇವೆ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಆರೋಗ್ಯ ತಪಾಸಣೆ
ಕೋಲಾರ:- ಕೆಲಸದ ಒತ್ತಡದದಲ್ಲಿರುವ ಪತ್ರಕರ್ತರು ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವ ಮೂಲಕ ರಕ್ತದೊತ್ತಡ, ಡಯಾಬಿಟೀಸ್ನಿಂದಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಾಗಬೇಕು ಎಂದು ನಗರದ ವಂಶೋದಯ ಅಡ್ವಾನ್ಸ್ಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಿರ್ದೇಶಕ ಡಾ.ಅರವಿಂದ್ ಸಲಹೆ ನೀಡಿದರು.
ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲೆಯ ಪತ್ರಕರ್ತರಿಗೆ ನಗರದ ವಂಶೋದಯ ಅಡ್ವಾನ್ಸ್ಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಅವರು ಮಾತನಾಡುತ್ತಿದ್ದರು.
ಅನೇಕರಿಗೆ ರಕ್ತದೊತ್ತಡ, ಡಯಾಬಿಟೀಸ್ ಇದ್ದರೂ ಅದರ ಅರಿವು ಇರುವುದಿಲ್ಲ ಮತ್ತು ತಪಾಸಣೆಗೆ ಒಳಗಾಗುವುದಿಲ್ಲ, ಇದು ಮುಂದೊಂದು ದಿನ ಮಾರಕ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ ಅವರು, ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವ ಮೂಲಕ ಸೂಕ್ತ ಮುಂಜಾಗ್ರತೆ, ಅಹಾರ ಪದ್ದತಿಯಲ್ಲಿ ಬದಲಾವಣೆ ಮಾಡಿಕೊಂಡರೆ ಈ ಕಾಯಿಲೆಗಳನ್ನು ನಿಯಂತ್ರಣದಲ್ಲಿಡಬಹುದು ಎಂದರು.
ಇಂದು ಬದಲಾದ ಆಹಾರ ಪದ್ದತಿ ಹಾಗೂ ವ್ಯಾಯಾಮವಿಲ್ಲದ ಜೀವನದಿಂದ ಅನೇಕ ಆರೋಗ್ಯಸಮಸ್ಯೆಗಳು ಹತ್ತಿರವಾಗುತ್ತಿವೆ, ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡುವಾಗ ನೀವೂ ಆರೋಗ್ಯದಿಂದಿರಬೇಕು, ನಿಮಗಾಗಿ ನಿಮ್ಮ ಕುಟುಂಬವಿದೆ ಎಂಬುದನ್ನು ಅರಿತು ತಪಾಸಣೆ ಮಾಡಿಸಿಕೊಳ್ಳಿ ಮುಂಜಾಗ್ರತೆ ವಹಿಸಿ ಸಮಸ್ಯೆಯಿಂದ ಸುಲಭವಾಗಿ ಪಾರಗಬಹುದು ಎಂದರು.
ವಶೋದಯ ಆಸ್ಪತ್ರೆ ಸಮಾಜಮುಖಿಯಾಗಿಯೂ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಉಚಿತ ಆರೋಗ್ಯ ಶಿಬಿರಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ ಎಂದ ಅವರು, ವಂಶೋದಯ ಆಸ್ಪತ್ರೆಯಲ್ಲಿ ನಿಮಗೆ ಎಲ್ಲಾ ರೀತಿಯ ಆಧುನಿಕ ಚಿಕಿತ್ಸಾ ವಿಧಾನ ಸೌಲಭ್ಯಗಳಿದ್ದು, ಇದರ ಪ್ರಯೋಜನ ಪಡೆಯಿರಿ ಎಂದ ಅವರು, ಉತ್ತಮ ಆರೋಗ್ಯವಿದ್ದರೆ ಮಾತ್ರ ಉತ್ತಮ ಮನಸ್ಥಿತಿ ಇರುತ್ತದೆ ಎಂಬ ಮಾತಿದೆ, ನಿಮ್ಮ ಕರ್ತವ್ಯ ನಿರ್ವಹಣೆಗೂ ಆರೋಗ್ಯ ರಕ್ಷಣೆ ಅತಿ ಮುಖ್ಯವಾಗಿದೆ ಎಂದರು.
ಶಿಬಿರದಲ್ಲಿ 150ಕ್ಕೂ ಹೆಚ್ಚು ಪತ್ರಕರ್ತರ ತಪಾಸಣೆಗೆ ಒಳಗಾಗಿದ್ದು, ಉಚಿತವಾಗಿ ಔಷಧಿ ವಿತರಿಸಲಾಯಿತು. ಹೆಚ್ಚಿನ ಚಿಕಿತ್ಸೆ ಇರುವ ಪತ್ರಕರ್ತರನ್ನು ಆಸ್ಪತ್ರೆಗೆ ಆಹ್ವಾನಿಸಲಾಯಿತು.
ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ಪತ್ರಕರ್ತರ ಆರೋಗ್ಯದ ಕುರಿತು ಕಾಳಜಿವಹಿಸಿ, ಪತ್ರಿಕಾ ದಿನದಂದೇ ಉಚಿತ ಆರೋಗ್ಯ ತಪಾಸಣೆ ನಡೆಸಿದ ವಂಶೋಧಯ ಆಸ್ಪತ್ರೆಯ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಪತ್ರಕರ್ತರಿಗೆ ರಕ್ತದೊತ್ತಡ, ಡಯಾಬಿಟೀಸ್ ಪರೀಕ್ಷೆ ಜತೆಗೆ ಉಸಿರಾಟ, ಶ್ವಾಸಕೋಶ ತೊಂದರೆಗಳ ಕುರಿತು ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಂಶೋದಯ ಆಸ್ಪತ್ರೆಯ ನಿರ್ದೇಶಕರಾದ ಡಾ.ಅರವಿಂದ್, ಡಾ.ವಿನಯ್, ವೈದ್ಯ ಡಾ.ಮೊಹಮದ್ ಸುಹೇಲ್, ಸಾರ್ವಜನಿಕ ಸಂಪರ್ಕಾಧಿಕಾರಿ ಪವಿತ್ರ, ಮಾರ್ಕೆಟಿಂಗ್ ಮ್ಯಾನೇಜರ್ ನಾಗೇಶ್ ಹಾಗೂ ವಂಶೋದಯ ಆಸ್ಪತ್ರೆ ಸಿಬ್ಬಂದಿ ಭಾಗಿಯಾಗಿದ್ದರು.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನಮಕ್ಕಳನ್ನು ಪತ್ರಿಕೋದ್ಯಮ ಓದಲು ಪೋಷಕರು ಪ್ರೋತ್ಸಾಹಿಸಿ-ಕೆ.ಎನ್.ಚನ್ನೇಗೌಡ
ಕೋಲಾರ:- ಪ್ರತಿಭಾವಂತ ಪತ್ರಕರ್ತರು ಇಂದು ಪತ್ರಿಕಾರಂಗಕ್ಕೆ ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳನ್ನು ಮೆಡಿಕಲ್,ಇಂಜಿನಿಯರಿಂಗ್ಗೆ ಸೀಮಿತ ಮಾಡದೇ ಪತ್ರಿಕೋದ್ಯಮ ಓದಲು ಪ್ರೇರಣೆ ನೀಡಬೇಕು ಎಂದು ವಿಜಯವಾಣಿ ಪತ್ರಿಕೆ ಪ್ರಧಾನ ಸಂಪಾದಕ ಕೆ.ಎನ್.ಚನ್ನೇಗೌಡ ಕರೆ ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾಧಕ ಪತ್ರಕರ್ತರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.
ಪತ್ರಿಕೋದ್ಯಮ ಶಿಕ್ಷಣ ಪಡೆದರೆ ಪತ್ರಕರ್ತರೇ ಆಗಬೇಕಿಂದಿಲ್ಲ, ಸರ್ಕಾರಿ ಉದ್ಯೋಗಗಳು ಸಿಗಲಿದೆ, ಸಚಿವರು,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಪಡೆಯಬಹುದು ಇದಕ್ಕೆ ಹಿರಿಯ ಪತ್ರಕರ್ತರಾಗಿದ್ದು, ಇದೀಗ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಕೆ.ವಿ.ಪ್ರಭಾಕರ್ ಸಾಕ್ಷಿಯಾಗಿದ್ದಾರೆ ಎಂದರು.
ಇತ್ತೀದಿನ ದಿನಗಳಲ್ಲಿ ಉತ್ತರ ಕನ್ನಡ,ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ರಾಜ್ಯ ಮಾಧ್ಯಮವಲಯದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ, ಬಯಲು ಸೀಮೆಯಿಂದಲೂ ಪ್ರತಿಭಾನ್ವಿತ ಪತ್ರಕರ್ತರ ಅಗತ್ಯವಿದೆ ಎಂಬುದನ್ನು ಮನಗಂಡು ಪತ್ರಿಕೋದ್ಯಮ ಶಿಕ್ಷಣ ಪಡೆಯಲು ಸಲಹೆ ನೀಡಿದರು.
ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಮುಂದಿನ ತಲೆಮಾರಿನಲ್ಲಿ ಯುವ ಪತ್ರಕರ್ತರನ್ನು ಹುಡುಕುವ ಪರಿಸ್ಥಿತಿ ತಲೆದೋರಲಿದೆ, ಜಿಲ್ಲಾ ಪತ್ರಕರ್ತರ ಸಂಘವೂ ಯುವ ಪತ್ರಕರ್ತರಿಗೆ ತರಬೇತಿ ಆಯೋಜಿಸಬೇಕು ಎಂದು ಕಿವಿಮಾತು ಹೇಳಿದರು.
ಪತ್ರಿಕಾರಂಗದಲ್ಲಿನ ಜಿಲ್ಲೆಯ ಸಾಧಕರು
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿದ್ದು, ದಿವಂಗತ ಜಿ.ನಾರಾಯಣಸ್ವಾಮಿ ನೆನಪಿನಲ್ಲಿ: ಕೋಲಾರದ ಪ್ರಿಯಪತ್ರಿಕೆ ದಿನಪತ್ರಿಕೆಯ ಸಂಪಾದಕ ಕೋ.ನಾ.ಮಂಜುನಾಥ್, ಕೆ.ಆರ್.ಕೃಷ್ಣಸ್ವಾಮಿ ನೆನಪಿನಲ್ಲಿ: ಶ್ರೀನಿವಾಸಪುರದ ವಿಜಯಧ್ವನಿ ದಿನಪತ್ರಿಕೆಯ ತಾಲೂಕು ವರದಿಗಾರ ಎನ್.ಕೃಷ್ಣಮೂರ್ತಿ, ಬಿ.ವಿ.ನರಸಿಂಹಮೂರ್ತಿ ನೆನಪಿನಲ್ಲಿ: ಕೋಲಾರದ ಕೋಲಾರ ಶಕ್ತಿ ದಿನಪತ್ರಿಕೆಯ ಸಂಪಾದಕಿ ಕೆ.ಗೋಪಿಕಾಮಲ್ಲೇಶ್, ಎಂ.ಮಲ್ಲೇಶ್ ನೆನಪಿನಲ್ಲಿ: ಬೂದಿಕೋಟೆ ಸಂಯುಕ್ತಕರ್ನಾಟಕ ದಿನಪತ್ರಿಕೆಯ ಹೋಬಳಿ ವರದಿಗಾರ ಪ್ಯಾರೇಜಾನ್, ಬಿ.ಎನ್.ಗುರುಪ್ರಸಾದ್ ನೆನಪಿನಲ್ಲಿ: ಮಾಲೂರಿನ ಈಸಂಜೆ ದಿನಪತ್ರಿಕೆಯ ತಾಲೂಕು ವರದಿಗಾರ ಎಸ್.ವಿ.ಲೋಕೇಶ್, ಹೆಚ್.ಎನ್.ಸೋಮಶೇಖರಗೌಡ ನೆನಪಿನಲ್ಲಿ: ಕೋಲಾರದ ಸುವರ್ಣ ಟಿ.ವಿ ಜಿಲ್ಲಾ ವರದಿಗಾರ ಸಿ.ದೀಪಕ್, ಬಿ.ಆರ್ಮುಗಂ ನೆನಪಿನಲ್ಲಿ: ಕೆ.ಜಿ.ಎಫ್ ಹೊಸದಿಗಂತ ದಿನಪತ್ರಿಕೆಯ ತಾಲೂಕು ವರದಿಗಾರ ಸಿ.ಎ.ಮುರಳೀಧರರಾವ್, ಸಿ.ಎಂ.ರಂಗಾರೆಡ್ಡಿ ನೆನಪಿನಲ್ಲಿ: ಮುಳಬಾಗಿಲಿನ ಕನ್ನಡಮಿತ್ರ ದಿನಪತ್ರಿಕೆಯ ತಾಲೂಕು ವರದಿಗಾರ ಪಿ.ಎಲ್.ಅಮೃತಯ್ಯ, ವಿ.ಎಂ.ನಾಗಪ್ಪ ಅವರ ನೆನಪಿನಲ್ಲಿ: ಕೋಲಾರದ ಪ್ರಜಾ ಟಿ.ವಿ ಕೆಮರಾಮೆನ್ ಸಿ.ಎನ್.ಪವನ್ಕುಮಾರ್ರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ,ದ್ವಿತೀಯ ಪಿಯುಸಿ,ಪದವಿಯಲ್ಲಿ ಉತ್ತಮ ಸಾಧನೆ ಮಾಡಿದ 32 ಮಂದಿ ಪತ್ರಕರ್ತರ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಪ್ರಧಾನ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ರಾಜ್ಯಸಂಘದ ಖಜಾಂಚಿ ವಾಸುದೇವಹೊಳ್ಳ, ಕಾರ್ಯಕಾರಿ ಸದಸ್ಯರಾದ ಮುನಿರಾಜು, ಕೆ.ಎಸ್.ಗಣೇಶ್,ಮಹಮದ್ ಯೂನಸ್ ಸೇರಿದಂತೆ ಜಿಲ್ಲೆಯ ಪತ್ರಕರ್ತರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ಇತರೆಲ್ಲಾ ಮಾಧ್ಯಮಗಳೊಂದಿಗೆ ಸೆಣಸುವುದು ಮುದ್ರಣ ಮಾಧ್ಯಮಕ್ಕೆ ಸವಾಲುಬೆಂಗಳೂರು ವಿವಿಯಿಂದ ಪತ್ರಕರ್ತರಿಗಾಗಿ ಡಿಪ್ಲೋಮೋ ಕೋರ್ಸ್-ನಿರಂಜನವಾನಳ್ಳಿ
ಕೋಲಾರ:- ಕಾಲಕ್ಕೆ ಎದುರಾಗಿ ಹೋಗುತ್ತಿರುವ ಇತರೆಲ್ಲಾ ಮಾಧ್ಯಮಗಳೊಂದಿಗೆ ಸೆಣಸುವುದು ಮುದ್ರಣ ಮಾಧ್ಯಮಕ್ಕೆ ಸವಾಲಾಗಿದೆ ಮತ್ತು ಯಾರು ಪತ್ರಕರ್ತರು ಎಂಬುದನ್ನು ನಿಷ್ಕರ್ಷೆ ಮಾಡುವ ಕಾಲದಲ್ಲಿರುವ ಸುದ್ದಿ ಮಾಧ್ಯಮ ಇಂದು ಸಂಕಟದಲ್ಲಿದೆ ಎಂದು ತಿಳಿಸಿದ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ನಿರಂಜನವಾನಳ್ಳಿ ಜಿಲ್ಲೆಯ ಪತ್ರಕರ್ತರಿಗಾಗಿ ವಿವಿಯಿಂದ ಡಿಪ್ಲೊಮೋ ಕೋರ್ಸ್ ತೆರೆಯುವ ಭರವಸೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಪತ್ರಿಕಾದಿನ, ವೈದ್ಯರ ದಿನ,ಲೆಕ್ಕಪರಿಶೋಧಕರ ದಿನ ಎಲ್ಲವೂ ಜು.1 ಆಗಿದೆ ವೈದ್ಯರು ದೇಹಕ್ಕೆ ಒಳಿತಾಗುವ ಕೆಲಸ ಮಾಡುವಂತೆ ಪತ್ರಕರ್ತರು ಸಮಾಜಕ್ಕೆ ಒಳಿತಾಗುವ ಕೆಲಸ ಮಾಡುತ್ತಿದ್ದು, ಮಾಧ್ಯಮ ಪ್ರತಿನಿಧಿಗಳು ಸಮಾಜದ ವೈದ್ಯರು ಎಂದು ಅಭಿಪ್ರಾಯಪಟ್ಟರು.
ಸಮಾಜದ ನಾಡಿಮಿಡಿತ ಅರ್ಥಮಾಡಿಕೊಂಡು ಸಾಗಬೇಕಾದ ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಯೂ ಅಗತ್ಯವಿದೆ, ಇಡೀ ಮಾಧ್ಯಮ ಬದಲಾವಣೆ ಹಂತದಲ್ಲಿದ್ದು, ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್ ಚಾಲನೆ, ಫೇಸ್ಬುಕ್ಗಳು ಯಾರ ಹಂಗಿಲ್ಲ ಇವಕ್ಕೆ ಗೇಟ್ ಕೀಪರ್ ಇಲ್ಲ ಆದರೆ ಮುದ್ರಣ ಮಾಧ್ಯಮಕ್ಕೆ ಗೇಟ್ ಕೀಪರ್ ಇದ್ದು, ಈ ಎಲ್ಲದರ ನಡುವೆಯೂ ವಸ್ತುನಿಷ್ಟವಾದ ಸುದ್ದಿಸಂಪ್ರದಾಯ ಪಾಲಿಸಿಕೊಂಡು ಬಂದಿದೆ ಎಂದರು.
ಪತ್ರಕರ್ತರಿಗಾಗಿಯೇ ಡಿಪ್ಲೋಮೋ ಕೋರ್ಸ್
ಬೆಂಗಳೂರು ಉತ್ತರ ವಿವಿಯಿಂದ ಹಾಲಿ ಪತ್ರಕರ್ತರಿಗಾಗಿಯೇ ಡಿಪ್ಲೋಮೋ ಕೋರ್ಸ್ ತೆರೆಯಲು ತಾವು ಸಿದ್ದರಿದ್ದು, ಶನಿವಾರ,ಭಾನುವಾರವೂ ತರಗತಿ ನಡೆಸುವ ಮೂಲಕ ನೀವು ಸಹಕಾರ ನೀಡಿದರೆ ಪತ್ರಿಕಾ ಭವನದಲ್ಲೇ ತರಗತಿ ನಡೆಸಿ ಪ್ರಮಾಣ ಪತ್ರ ನೀಡಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಪತ್ರಿಕೋದ್ಯಮದ ಮೌಲ್ಯ ಕಾಪಾಡಿಕೊಳ್ಳಲು ಭಾಷೆಯ ಅಗತ್ಯವಿದೆ, ಪತ್ರಿಕೋಧ್ಯಮ ತರಗತಿಗೆ ಬರುವ ಅನೇಕರಿಗೆ ಕನ್ನಡ,ಇಂಗ್ಲೀಷ್ ಬರೊಲ್ಲ ಆದ್ದರಿಂದ ಮೊದಲು ಭಾಷೆ ಕಟ್ಟುವ ಕೆಲಸವಾಗಬೇಕು ಎಂದು ತಿಳಿಸಿದರು.
ಇತರೆ ಮಾಧ್ಯಮ ದಾರಿ ತಪ್ಪಿದರೂ ಮುದ್ರಣ ಮಾಧ್ಯಮ ದಾರಿ ತಪ್ಪಬಾರದು ಎಂದ ಅವರು, ಇಂದು ಅಸ್ಥಿತ್ವದ ಪ್ರಶ್ನೆ ಎದುರಾಗಿದ್ದು, ಎಲ್ಲಾ ಸವಾಲು ಮೆಟ್ಟಿನಿಂದು ತಮ್ಮತನ ಉಳಿಸಿಕೊಳ್ಳಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಸ್ವಂತ ಶಕ್ತಿಯಿಂದ ಹಾಗೂ ಸ್ವಂತ ಭವನದಲ್ಲೇ ನಮ್ಮ ಪತ್ರಿಕಾದಿನಾಚರಣೆ ಮಾಡಬೇಕು ಎಂಬ ಆಶಯ ಈಡೇರಿದೆ, ಸಂಘದ ಹಿರಿಯರ ಮಾರ್ಗದರ್ಶನದಲ್ಲಿ ಕಳೆದ 25 ವರ್ಷಗಳಿಂದ ಆತ್ಮಸಾಕ್ಷಿಗನುಗುಣವಾಗಿ ಸಾಗಿ ಬಂದಿದ್ದೇವೆ ಎಂದರು.
ಇಂದು ಇಡೀ ಪತ್ರಿಕೋದ್ಯಮಕ್ಕೆ ಗೇಟ್ ಕೀಪರ್ ಅಗತ್ಯವಿದೆ, ನಾವು ಯಡವಟ್ಟು ಮಾಡಿ ಸುದ್ದಿ ಮಾಡಿದರೆ ಅದರಿಂದ ಸಮಾಜಕ್ಕೆ ಹಾನಿ ಎಂದು ಎಚ್ಚರಿಸಿದ ಅವರು, ಮಕ್ಕಳು ಕೇವಲ ಇಂಜಿನಿಯರ್ ಡಾಕ್ಟರ್ ಮಾತ್ರವಲ್ಲ ಪತ್ರಕರ್ತರಾಗಿ ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಬೆಳೆಯಬಹುದಾಗಿದೆ ಅದಕ್ಕೆ ನಮ್ಮ ಜಿಲ್ಲೆಯವರೇ ಆದ ಕಾಮರೂಪಿ ಪ್ರಭಾಕರ್, ಸಚ್ಚಿ, ಪ್ರಭಾಕರ್ ಮತ್ತಿತರರು ಸಾಕ್ಷಿಯಾಗಿದ್ದಾರೆ ಎಂದರು.
ರಾಜ್ಯ ಪತ್ರಕರ್ತರ ಸಂಘದ ಖಜಾಂಚಿ ವಾಸುದೇವಹೊಳ್ಳ ಮಾತನಾಡಿ, ರಾಜ್ಯದ ಪತ್ರಕರ್ತರ ಭವನ ರಾಜ್ಯಕ್ಕೆ ಮಾದರಿಯಾಗಿದೆ, ಕೋಲಾರ ಜಿಲ್ಲೆಯ ಪತ್ರಕರ್ತರು ರಾಜ್ಯದ ಎಲ್ಲಾ ದೊಡ್ಡಪತ್ರಿಕೆಗಳು,ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸದಸ್ಯ ವಿ.ಮುನಿರಾಜು ಮಾತನಾಡಿ, ಪತ್ರಕರ್ತರು ಒತ್ತಡದಿಂದ ಕೆಲಸ ಮಾಡುವುದು ಬೇಡ, ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ತಿಳಿಸಿ, ಇತ್ತೀಚೆಗೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಒಂದೇ ಸುದ್ದಿಯನ್ನು ನಿರಂತರವಾಗಿ ತೋರಿಸುತ್ತಿದ್ದು ಇದು ಸರಿಯಲ್ಲ ಎಂದ ಅವರು, ಆ ಸುದ್ದಿಗಳ ಜತೆಗೆ ಸಮಾಜಮುಖಿ ಸುದ್ದಿಗಳನ್ನು ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ವಿಜಯವಾಣಿ ದಿನಪತ್ರಿಕೆ ಪ್ರಧಾನ ಸಂಪಾದಕ ಕೆ.ಎನ್.ಚನ್ನೇಗೌಡ ವಿತರಿಸಿ, ಜಿಲ್ಲೆಯ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಶುಭಾಷಯ ತಿಳಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೋಲಾರದ ಪತ್ರಿಕಾರಂಗಕ್ಕೆ ನೂರು ವರ್ಷಗಳ ಇತಿಹಾಸವಿದೆ, 181 ವರ್ಷಗಳ ಹಿಂದೆಯೇಧ ಪತ್ರಿಕಾರಂಗದ ಭೀಷ್ಮರಾದ ಡಿ.ವಿ.ಗುಂಡಪ್ಪ ಅವರು ಭಾರತ, ಕರ್ನಾಟಕ, ಸುಮತಿ ಪತ್ರಿಕೆಗಳನ್ನು ಆರಂಭಿಸಿದ್ದರು ಹಾಗೆಯೇ ನಾಗಪ್ಪ ಅವರು ಕೈಬರಹದ ಪತ್ರಿಕೆ ಹೊರತಂದಿದ್ದರು ಎಂದು ಸ್ಮರಿಸಿದರು.
ಎಸ್ಸೆಸ್ಸೆಲ್ಸಿ,ಪಿಯುಸಿ ಪದವಿಯಲ್ಲಿ ಸಾಧನೆ ಮಾಡಿದ 32 ಮಂದಿ ಪತ್ರಕರ್ತರ ಮಕ್ಕಳಿಗೆ ನಗದು ಪುರಸ್ಕಾರ ನೀಡಲಾಯಿತು. ಜಿಲ್ಲೆಯ ಹಿರಿಯ ಸಾಧಕರ ಹೆಸರಿನಲ್ಲಿ 9 ಮಂದಿ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನಗರದ ವಂಶೋದಯ ಆಸ್ಪತ್ರೆಯಿಂದ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮಹಮದ್ ಯೂನಸ್ ಉಪಸ್ಥಿತರಿದ್ದು, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ಸ್ವಾಗತಿಸಿ, ಸಂಘದ ಖಜಾಂಚಿ ಎ.ಜಿ.ಸುರೇಶ್ ಕುಮಾರ್ ನಿರೂಪಿಸಿದರು. ಟಿ.ಕೆ.ನಾಗರಾಜ್ ಸ್ವಾಗತಿಸಿದರು. ವಿವಿಧ ಸಂಘಟನೆಗಳ ಮುಖಂಡರು, ಜಿಲ್ಲೆಯ ಹಿರಿಯ ಪತ್ರಕರ್ತರು, ವಿವಿಧತಾಲ್ಲೂಕುಗಳ ಪದಾಧಿಕಾರಿಗಳು,ಪತ್ರಕರ್ತರು ಹಾಜರಿದ್ದರು.