ಕುಂದಾಪುರ, ಜು.26: ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.
ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಘವೇಂದ್ರ ಎಂ. ನಾಯಕ್ ವಲಯ ಅರಣ್ಯಾಧಿಕಾರಿಗಳು ಕುಂದಾಪುರ ಇವರು ವನಮಹೋತ್ಸವ ಆಚರಣೆಯ ಮಹತ್ವ, ಮರಗಿಡಗಳ ಉಪಯೋಗ, ಪರಿಸರ ಸಂರಕ್ಷಣೆ ಕುರಿತಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಪ್ರತಿಕೂಲ ಪರಿಣಾಮಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಮರಗಿಡಗಳ ಪ್ರಾಮುಖ್ಯತೆ ಕುರಿತಾದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಅನಾವರಣಗೊಂಡವು, ವಿವಿಧ ಔಷಧಿಯ ಗಿಡಗಳ ಕುರಿತಾದ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಮೊದಲ ರೂಪಣಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 2ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ರವರು ವಹಿಸಿ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಉಪನಾಯಕ ಅಮಿತ್ ರೋಶನ್ ಡಿ’ಸೋಜಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ವಿಲ್ಶಾ ಮರಿಯಾ ಡಿ’ಅಲ್ಮೇಡಾ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿನಿ ಕುಮಾರಿ ನಿಹಾರಿಕಾ ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಪಾಯಲ್ರವರು ವಂದಿಸಿದರು. ಶಿಕ್ಷಕಿಯರಾದ ಅಂಕಿತಾ ಹಾಗು ಸೆಲಿನ್ ಡಿ’ಸೋಜಾರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.
Month: July 2024
ಕೋಲಾರ ಡಿಸಿಸಿ ಬ್ಯಾಂಕ್ ಸಾಲಮನ್ನಾ ಹಣ ದುರುಪಯೋಗದ ಆರೋಪ ಸುಳ್ಳುಚಿಂತಾಮಣಿ ಶಾಖೆಯಲ್ಲಿ 11ಕೋಟಿ ನೇರ ರೈತರ ಖಾತೆಗೆ ಜಮಾ-ಸರ್ಕಾರಕ್ಕೆ ವರದಿ
ಕೋಲಾರ:- ರಾಜ್ಯ ಸರಕಾರ 2018-19 ನೇ ಸಾಲಿನಲ್ಲಿ ಘೋಷಿಸಿದ್ದ 1 ಲಕ್ಷ ರೂ ಅಲ್ಪಾವಧಿ ಬೆಳೆ ಸಾಲ ಮನ್ನಾ ಯೋಜನೆಯಡಿ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ಚಿಂತಾಮಣಿ ಶಾಖೆಯಲ್ಲಿ 11 ಕೋಟಿ ರೂ ಸಾಲ ಮನ್ನಾದ ಮೊತ್ತವು ನೇರವಾಗಿ ರೈತರ ಖಾತೆಗಳಿಗೆ ಜಮಾ ಆಗಿದೆ ಎಂದು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್.ಶೀಲಾ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ತಳಗವಾರ ಟಿ.ಎಸ್.ಪ್ರತಾಪ್ ಎಂಬುವರು ಜೂನ್.26, 2024 ರಲ್ಲಿ ಡಿಸಿಸಿ ಬ್ಯಾಂಕಿನ ಚಿಂತಾಮಣಿ ಶಾಖೆಯಲ್ಲಿ 11 ಕೋಟಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಶಾಖಾ ವ್ಯವಸ್ಥಾಪಕ ಜಿ.ಚಂದ್ರಶೇಖರ್ ಮತ್ತು ಇತರರ ಮೇಲೆ ದೂರು ನೀಡಿ ಎಫ್ಐಆರ್ ಮಾಡಿಸಿದ್ದರು.
ದೂರಿನ ಅನ್ವಯ ಜಿ.ಚಂದ್ರಶೇಖರ್ ಇತರರು ರೈತರ ಸಾಲ ಮನ್ನಾದ 11 ಕೋಟಿ ರೂಪಾಯಿಗಳನ್ನು ರೈತರ ನಕಲಿ ಖಾತೆಗಳ ಸೃಷ್ಠಿಸಿ ಬ್ಯಾಂಕಿಗೆ ಮತ್ತು ಸರಕಾರಕ್ಕೆ ವಂಚನೆ ಮಾಡಿದ್ದರೂ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸದೆ ಬ್ಯಾಂಕಿಗೆ ನಷ್ಟ ಉಂಟು ಮಾಡಿರುವ ವ್ಯಕ್ತಿಗಳೊಂದಿಗೆ ಶಾಮೀಲಾಗಿದ್ದಾದರೆಂದು ಆರೋಪಿಸಿದ್ದರು.
ಅವ್ಯವಹಾರದ ಆರೋಪ ಕೇಳಿ ಬಂದು ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸರಕಾರವು ಡಿಸಿಸಿ ಬ್ಯಾಂಕ್ಗೆ ವಿವರಣೆ ನೀಡುವಂತೆ ಕೋರಿತ್ತುö. ಈ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಹಾಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್.ಶೀಲಾ ಅವರು, ಈ ಪ್ರಕರಣ ಸಂಬAಧ 2018-19 ರಿಂದ ಇಲ್ಲಿಯವರೆವಿಗೂ ಬ್ಯಾಂಕಿನ ಆಂತರಿಕ ಪರಿವೀಕ್ಷಣಾಧಿಕಾರಿಗಳು ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳು ಕೈಗೊಂಡ ಕ್ರಮಗಳ ಕ್ರೂಢೀಕೃöತ ವರದಿಯನ್ನು ಜುಲೈö.15, 2024 ರಂದು ಸರಕಾರಕ್ಕೆ ನೀಡಿದ್ದಾರೆ.
ಈ ವರದಿಯಲ್ಲಿ ಡಿಸಿಸಿ ಬ್ಯಾಂಕ್ ಸಾಲ ಮನ್ನಾ ಹಣವು ರೈತರ ಖಾತೆಗಳಿಗೆ ಜಮಾ ಆಗಿದೆ, ಶಾಖಾ ವ್ಯವಸ್ಥಾಪಕ ಜಿ.ಚಂದ್ರಶೇಖರ್ರ ನಿರ್ಲಕ್ಷ÷್ಯ ಹಾಗೂ ಅಧಿಕಾರ ದುರುಪಯೋಗದಿಂದ ಬ್ಯಾಂಕಿನ ಸಂಪನ್ಮೂಲಗಳಿಗೆ ತಾತ್ಕಾಲಿಕ ಅವಧಿಗೆ ಧಕ್ಕೆ ಉಂಟಾಗಿದ್ದರಿAದ ಬ್ಯಾಂಕಿನ ಆಡಳಿತ ಮಂಡಳಿ ಸಭಾ ನಡವಳಿ ರೀತ್ಯಾ ಇವರಿಗೆ ಕಠಿಣ ದಂಡನೆಯ ಶಿಕ್ಷೆ ವಿಧಿಸಿ, ಹಿರಿಯ ಸಹಾಯಕರ ಹುದ್ದೆಯಿಂದ ಕಿರಿಯ ಸಹಾಯಕರ ಹುದ್ದೆಗೆ ಹಿಂಬಡ್ತಿ ನೀಡಿ 11.01.2001 ರಲ್ಲಿಯೇ ಆದೇಶ ಹೊರಡಿಸಲಾಗಿದೆಯೆಂದು ಸ್ಪಷ್ಟವಡಿಸಿದ್ದಾರೆ.
ಡಿಸಿಸಿ ಬ್ಯಾಂಕಿನ ಆರ್ಥಿಕ ಸಂಪನ್ಮೂಲ ತಾತ್ಕಾಲಿಕ ಅವಗೆ ದುರಬಳಕೆಯಾಗಿದ್ದನ್ನು ಪತ್ತೆ ಹಚ್ಚಿ ಬಡ್ಡಿ ಸಮೇತ ಬ್ಯಾಂಕಿಗೆ ಮುಂದಿನ ದಿನಾಂಕಗಳಲ್ಲಿ ಮರು ಪಾವತಿಯಾಗಿದೆ ಎಂದು ಪರಿವೀಕ್ಷಣಾ ವರದಿ ದೃಢಪಡಿಸಿದೆ.
ವರದಿಯ ಪ್ರಕಾರ, ದಿನಾಂಕ 08.12.2018ರಿಂದ 24.06.2020 ರ ಅವಧಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘಗಳಾದ ಕುರುಬೂರು, ಯಮಮಲಪಾಡಿ, ಯಗವಕೋಟೆ, ನಂದಿಗಾನಹಳ್ಳಿö, ಟಿ.ಗೊಲ್ಲಹಳ್ಳಿö, ಬೊಮ್ಮೇನಹಳ್ಳಿ ಹಾಗೂ ಪಾಲಗುಮ್ಮನಹಳ್ಳಿ ಸಂಘಗಳಿAದ ರಿಸೀವಲ್ ಖಾತೆಗೆ ಕೃತಕ ಖರ್ಚು ಸಂಘದ ಚಾಲ್ತಿ ಖಾತೆಗೆ ಜಮಾ ಮಾಡಿದ 993.62 ಲಕ್ಷ ರೂ ಮತ್ತು ಇದರ ಶೇ.6 ರಂತೆ ಬಡ್ಡಿ 32.95 ಲಕ್ಷ ರೂಪಾಯಿಗಳನ್ನು ವಸೂಲು ಮಾಡಲಾಗಿದೆಯೆಂದು ಪರಿವೀಕ್ಷಣಾ ವರದಿ ಸ್ಪಷ್ಟಪಡಿಸಿದೆ.
ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಈ ಕುರಿತು 26.06.2021 ರಲ್ಲಿ ದೂರು ನೀಡಿದ್ದರ ಅನ್ವಯ, ಬೆಂಗಳೂರು ಮೂರನೇ ವಲಯ ಸಹಕಾರ ಸಂಘಗಳ ಉಪ ನಿಬಂಧಕ ಡಾ.ಉಮೇಶ್ ಐ ನೇತೃತ್ವದ ಪರಿವೀಕ್ಷಣಾ ತಂಡವು ಸಂಘಗಳಿಗೆ ಭೇಟಿ ನೀಡಿ ಸಂಬAಧಿತ ದಾಖಲೆಗಳನ್ನು ಮತ್ತು ಹೇಳಿಕೆಗಳನ್ನು ಪಡೆದು 19.09.2021 ರಲ್ಲಿ ಪರಿವೀಕ್ಷಣಾ ವರದಿಯನ್ನು ನೀಡಿದ್ದರು.
ಇದರಿಂದ ರಾಜ್ಯ ಸರಕಾರದ 1 ಲಕ್ಷ ರೂ ಕೃಷಿ ಅಲ್ಪಾವಧಿ ಬೆಳೆ ಸಾಲ ಮನ್ನಾ ಯೋಜನೆಯಡಿ ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗಿರುವುದಿಲ್ಲö, ಎಲ್ಲಾ ಅರ್ಹ ರೈತರಿಗೂ ರಾಜ್ಯ ಸರಕಾರದ ಕೃಷಿ ಸಾಲ ಅಲ್ಪಾವ ಬೆಳೆ ಸಾಲ ಮನ್ನಾ ಯೋಜನೆಯ ಸೌಲಭ್ಯ ದೊರೆತಿದೆಯೆಂದು ವರದಿ ಸ್ಪಷ್ಟಪಡಿಸಿದೆ. ಎಫ್ಐಆರ್ ಆರೋಪವನ್ನು ಡಿಸಿಸಿ ಬ್ಯಾಂಕ್ ಸಂಪೂರ್ಣವಾಗಿ ತಳ್ಳಿಹಾಕಿದಂತಾಗಿದೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪಾರಿ ಹಾಗೂ ಸಮಾಜ ಸೇವಕ ಎಚ್.ಎಸ್. ರಂಗಯ್ಯ ಶೆಟ್ಟಿ (94)ನಿಧನ
ಕಂಪ್ಯೂಟರ್ ಕೊಡುಗೆ ನೀಡಿದ ಶಿಕ್ಷಕಿ ಪದ್ಮಾವತಮ್ಮ ಅವರಿಗೆ ಸನ್ಮಾನ
ಶ್ರೀನಿವಾಸಪುರದಲ್ಲಿ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾ ಲೋಕಾಯುಕ್ತ ವರಿಷ್ಠಾಧಿಕಾರಿ ಡಿ.ಕೆ.ಉಮೇಶ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ತಾಕೀತು
ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡಲು ಅವಕಾಶ ನೀಡಬಾರದು ಎಂದು ಜಿಲ್ಲಾ ಲೋಕಾಯುಕ್ತ ವರಿಷ್ಠಾಧಿಕಾರಿ ಡಿ.ಕೆ.ಉಮೇಶ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಅರ್ಜಿ ಸ್ವೀಕರಿಸಿದ 30 ದಿನಗಳ ಒಳಗೆ ಸಮಸ್ಯೆ ಬಹೆಹರಿಸಬೇಕು. ಸಾಧ್ಯವಿಲ್ಲವಾದರೆ ಅದಕ್ಕೆ ಪೂರಕವಾಗಿ ಹಿಂಬರಹ ನೀಡಬೇಕು ಎಂದು ಹೇಳಿದರು.
ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕು. ಅವರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಕಂದಾಯ, ತಾಲ್ಲೂಕು ಪಂಚಾಯಿತಿ ಮತ್ತಿತರ ಇಲಾಖೆಗಳಿಗೆ ಸಂಬAಧಿಸಿದAತೆ 52 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಸೂರ್ಯನಾರಾಯಣ, ಇನ್ಸ್ಪೆಕ್ಟರ್ ರೇಣುಕಾ, ಸಿಬ್ಬಂದಿ ಎಂ.ಎನ್.ಶ್ರೀನಾಥ್, ದೇವಪ್ಪ, ನಾಗವೇಣಿ, ಶಿವಪ್ಪ, ಮಾನಸ ಇದ್ದರು,
ಮಹಿಳಾ ಮತ್ತು ಮಕ್ಕಳ ಇಲಾಖೆಯ ವಿವಿಧ ಯೋಜನೆಗಳ ತ್ರೈಮಾಸಿಕ ಸಭೆ
ಕೋಲಾರ : ಸರ್ಕಾರಿ ದತ್ತು ಸಂಸ್ಥೆಯು 0-6 ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ ಮಿಷನ್ ವಾತ್ಸಲ್ಯ ವಿವಿಧ ಯೋಜನೆಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇಂತಹ ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆಯನ್ನು ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ. ವೀಕ್ಷಣಾಲಯ ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ 18 ವರ್ಷದೊಳಗಿನ ಮಕ್ಕಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಬಾಕಿ ಇರುವ ಅವಧಿಯಲ್ಲಿ ತಾತ್ಕಾಲಿಕವಾಗಿ ಅಭಿರಕ್ಷಣೆ ಒದಗಿಸುವ ಸಂಸ್ಥೆಯಾಗಿದೆ ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಂದ ಮಕ್ಕಳ ಪ್ರಕರಣ ವಿಚಾರಣೆ ವೇಳೆಯಲ್ಲಿ ರಕ್ಷಣೆ ಮತ್ತು ಘೋಷಣೆ ಅಗತ್ಯವಿರುವ ಮಕ್ಕಳ ಪಾಲನೆ ಮತ್ತು ರಕ್ಷಣೆಗಾಗಿ ಹಾಗೂ ದೀರ್ಘಾವಧಿ ಪುನರ್ವಸತಿಗಾಗಿ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಬಾಲ ಮಂದಿರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒಟ್ಟು 52 ಮಕ್ಕಳು ದಾಖಲಾಗಿರುತ್ತಾರೆ ಎಂದರು. ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೋವಿಡ್-19 ರಿಂದ ಇಬ್ಬರು ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ ರೂ.3,500/- ಗಳ ಆರ್ಥಿಕ ಧನ ಸಹಾಯವನ್ನು ಆರ್.ಟಿ.ಜಿ.ಎಸ್ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯನ್ನು ಮಾಡಲಾಗುತ್ತಿದೆ. ಪಿ.ಎಂ ಕೇರ್ ಫಾರ್ ಚಿಲ್ಡನ್ ಯೋಜನೆಯಡಿ 08 ಮಕ್ಕಳ ಮಾಹಿತಿಯನ್ನು ಪಿ.ಎಂ. ಕೇರ್ ಪೋರ್ಟಲ್ನಲ್ಲಿ ಅಳವಡಿಸಲಾಗಿದ್ದು, ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ರಾಷ್ಟ್ರ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಮಕ್ಕಳ ಸಹಾಯವಾಣಿ ಯಾವುದೇ ರೀತಿಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ರಕ್ಷಣೆ ಮತ್ತು ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸಲು ಮಕ್ಕಳ ಸಹಾಯವಾಣಿ-1098 ನ್ನು ಇ.ಆರ್.ಎಸ್.ಎಸ್-112 ನೊಂದಿಗೆ ವಿಲೀನಗೊಳಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಅನುಸ್ಥಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್.ಹೊಸಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚೆನ್ನೈ ಕಾರಿಡಾರ್ ರಸ್ತೆಗಾಗಿ ಭೂಸ್ವಾಧಿನಾವಾಗಿರುವ ರೈತರ 2ನೇ ಕಂತಿನ ಪರಿಹಾರ ವಿಳಂಭ ವಿರುದ್ದ ಕ್ರಮ ಕೈಗೊಂಡು ಪರಿಹಾರ ವಿತರಣೆ ಮಾಡಿ- ರೈತ ಸಂಘ
ಕೋಲಾರ,ಜು.23: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ದಿಗೆ ಭೂಸ್ವಾಧಿನಾವಾಗಿರುವ ಗಡಿಭಾಗದ ರೈತರ 2ನೇ ಕಂತಿನ ಪರಿಹಾರ ವಿತರಣೆ ಮಾಡಲು ವಿಳಂಭ ಮಾಡುತ್ತಿರುವ ವಿಶೇಷ ಭೂಸ್ವಾಧಿನಾಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಪರಿಹಾರ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಮಾನ್ಯ ಸಂಸದರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಗಡಿಭಾಗದ ರೈತರಿಗೆ ಪರಿಹಾರ ವಿತರಣೆ ಮಾಡಬೇಕಾದರೆ ವಿಶೇಷ ಭೂ ಸ್ವಾದಿನಾಧಿಕಾರಿಗಳಿಗೆ ತಾಲ್ಲೂಕು ದಂಡಾಧಿಕಾರಿಗಳ ವರದಿ ಬೇಕು ಆದರೆ ಕೊಳತೂರು ಮಾಲೂರು ವ್ಯಾಪ್ತಿಯ ರೈತರ ಪರಿಹಾರ ನೀಡಲು ಯಾವುದೇ ವರದಿ ಕೇಳುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಭೂಸ್ವಾಧಿನಾಧಿಕಾರಿಗಳ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ದೂರು ನೀಡಿದರು.
ರಸ್ತೆ ಕಾಮಗಾರಿ ಕೊನೆಯ ಹಂತ ತಲುಪುತ್ತಿದ್ದು 10 ವರ್ಷಗಳಿಂದ ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ದಿಗೆ ಭೂಸ್ವಾದಿನವಾಗಿರುವ ಗಡಿಭಾಗದ ಏತುರಹಳ್ಳಿ ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ರೈತರು ತಾಲ್ಲೂಕಾಡಳಿತಕ್ಕೆ ಏನೂ ಪಾಪ ಮಾಡಿದ್ದಾರೋ ಗೊತ್ತಿಲ್ಲ, ಸರ್ವೇ ನಂ.34 ರಲ್ಲಿ ಮಾರಪ್ಪ ಬಿನ್ ಲೇಟ್ ವೆಂಕಟೇಶಪ್ಪ, ವೆಂಕಟೇಶಪ್ಪ ಬಿನ್ ಲೇಟ್ ವೆಂಕಟಪ್ಪ ರವರಿಗೆ ಸಿಗಬೇಕಾದ ಭೂಮಿ ಹಾಗೂ ಮರಗಿಡಗಳ ಪರಿಹಾರ ಪಡೆಯಲು ಹತ್ತಾರು ವರ್ಷಗಳಿಂದ ತಾಲ್ಲೂಕಾಡಳಿತದ ಅಧಿಕಾರಿಗಳ ಬಳಿ ಅಲೆದಾಡಿದರೂ ಕನಿಷ್ಠ ಸೌಜನ್ಯಕ್ಕಾದರೂ ರೈತರಿಗೆ ಗೌರವ ನೀಡದೇ ದಾಖಲೆಗಳನ್ನು ಕೊಡದೆ ವರದಿಯನ್ನು ಸಮರ್ಪಕವಾಗಿ ನೀಡದೇ ಪ್ರತಿ ದಿನ ನಕ್ಷತ್ರಗಳನ್ನು ತೋರಿಸುತ್ತಿರುವ ಇಲಾಖೆಯ ಶ್ರೀನಿವಾಸ್ ಕೇಳಿದರೆ ಆರ್.ಐ ವಿ.ಎ ವರದಿ ಬರಲಿ ಎಂದು ಹೇಳುತ್ತಾರೆ. ವರದಿ ಬಂದರೆ ತಹಶೀಲ್ದಾರ್ರವರು ಸಿಗುತ್ತಿಲ್ಲ ಎಂದು ಹೇಳುತ್ತಿರುವ ಅಧಿಕಾರಿಯ ವಿರುದ್ದ ಕ್ರಮವಿಲ್ಲವೇಕೆ? ರೈತರೆಂದರೆ ಅಷ್ಟು ಬೇಜವಬ್ದಾರಿಯೇ ವರದಿ ಇಲ್ಲ ಎಂದರೆ ಕಡತ ಕೊಡಿ ಕಡತ ಇಲ್ಲವೆಂದರೆ ಸಂಭಂದಪಟ್ಟ ಅಧಿಕಾರಿಗಳನ್ನು ವಜಾ ಮಾಡಿ ರೈತರಿಗೆ ನ್ಯಾಯ ಕೊಡಿಸಬಹುದಲ್ಲವೇ ಎಂದು ಸಂಸದರಿಗೆ ಪ್ರಶ್ನೆ ಮಾಡಿದರು.
ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಬಡ ರೈತರೆಂದರೆ ಅಧಿಕಾರಿಗಳಿಗೆ ಏಕೆ ನಿರ್ಲಕ್ಷ ಸರ್ಕಾರದಿಂದ ಬರುವ ಪರಿಹಾರವನ್ನು ಪಡೆಯಲು ಇನ್ನಷ್ಟು ದಿನ ಕೆಲಸ ಬಿಟ್ಟು ಅಧಿಕಾರಿಗಳ ಕಾಲು ಕೈ ಹಿಡಿಯಬೇಕು. ಭೂಗಳ್ಳರಿಗೆ 24 ಗಂಟೆಯಲ್ಲಿ ಸಿಗುವ ದಾಖಲೆಗಳು ಬಡ ರೈತರ ದಾಖಲೆಗಳು ಏಕೆ ಸಿಗುತ್ತಿಲ್ಲ. ದಾಖಲೆಗಳು ಇಲ್ಲ ವರದಿಯೂ ಇಲ್ಲ ಅಧಿಕಾರಿಗಳಿಂದ ಉತ್ತರವೂ ಇಲ್ಲ, ಕಡೆಯದಾಗಿ ದಲಿತ ರೈತರಿಗೆ ನ್ಯಾಯ ಕೊಡಿಸಬೇಕೆಂದು ಸಂಸದರನ್ನು ಒತ್ತಾಯಿಸಿದರು.
ಗಡಿಭಾಗದ ಏತುರಹಳ್ಳಿ ಚುಕ್ಕನಹಳ್ಳಿ ರೈತರ 2ನೇ ಕಂತಿನ ಹಣವನ್ನು ಬಿಡುಗಡೆ ಮಾಡುವಂತೆ ವಿಶೇಷ ಭೂಸ್ವಾಧಿನಾಧಿಕಾರಿಗಳಿಗೆ ಸೂಚನೆ ಮಾಡುವಂತೆ ಮನವಿ ನಿಡುವ ಜೊತೆಗೆ ಒಚಿದು ವೇಳೆ ಗಡಿಭಾಗದ ರೈತರಿಗೆ ಪರಿಹಾರ ನೀಡಲು ಪದೇ ಪದೇ ವರದಿ ನೆಪದಲ್ಲಿ ಬಡರೈತರನ್ನು ವಂಚನೆ ಮಾಡಿದರೆ ಆ.1 ರಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಹೋರಾಟದ ಸ್ಥಳಕ್ಕೆ ಸಮಸ್ಯೆ ಬಗೆಹರಿಸುವರೆಗೂ ಆಹೋರಾತ್ರಿ ಹೋರಾಟ ಮಾಡುವುದಾಗಿ ಸಂಸದರು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಂಸದರಾದ ಮಲ್ಲೇಶ್ಬಾಬು ಹಾಗೂ ಜಿಲ್ಲಾಧಿಕಾರಿಗಳಾದ ಆಕ್ರಂ ಪಾಷರವರು ಗಡಿಭಾಗದ ರೈತರ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.
ಮನವಿ ನೀಡುವಾಗ ತಾಲ್ಲೂಕಾದ್ಯಕ್ಷ ಮೂರಾಂಡಹಳ್ಳಿ ಶಿವಾರೆಡ್ಡಿ, ಗೀರೀಶ್, ಸುಪ್ರೀಂ ಚಲ, ಶಶಿ, ಶಿವ, ನಾರಾಯಣಸ್ವಾಮಿ, ಮಾರಪ್ಪ, ಮಂಗಸಚಿದ್ರ ತಿಮ್ಮಣ್ಣ, ವೆಂಕಟೇಶಪ್ಪ, ಶೈಲಜ, ರಾಧಮ್ಮ, ಶೋಭ, ಚೌಡಮ್ಮ, ಸುಗುಣ, ನಾಗರತ್, ಮುಂತಾದವರಿದ್ದರು.
Mangaluru St Agnes PU College,organized Eco-Week 2024 / ಮಂಗಳೂರು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಪರಿಸರ ವಾರ 2024
Mangaluru: “Environment” encompasses everything around us & it plays a crucial role in sustaining of life on earth A healthy environment is essential for human well – being, economic prosperity and sustainable development. To foster the interest& care for nature among the students, the Eco- club “SRISHTI” under the aegis of the Department of Biology, St Agnes PU College, Mangaluru, organized Eco-Week 2024.
On the occasion of VanMahotsav, a series of activities were organized for the I& II PUC Biology students. These activities were designed to instill in them a sense of responsibility towards the environment. The festival of trees, provided an excellent opportunity to engage students in activities that ignited their passion for the nature and to promote environmental awareness and sustainability.
The event was marked by a flurry of activities that would tap into the latent creativity and artistic flair of the students. The students displayed their love for nature through various mediums which included rock paintings, card making, charts etc that carried the message of oneness with nature and the pressing need of the day to preserve and espouse the cause of nature conservation. They also highlighted the detrimental impact of plastic pollution and advocated the need for a plastic- free environment. An exhibition on home remedies, for common ailments, fostered a greater appreciation for traditional knowledge and practices. A classroom awareness initiative was launched to educate students about the significance of Van Mahotsav and the need for environmental stewardship. A quiz competition was conducted to test students’ knowledge on the topic of environment including biodiversity, conservation and the importance of trees. Theme- centered melodious group song performances created a festive atmosphere and reinforced the message of protecting and preserving the environment. The students enthusiastically showcased their scientific skills by creating intricate models of various concepts related to nature conservation.
The Van Mahotsav celebration by Eco Club was a resounding success and students displayed intense ferv our by actively participating in various activities. The event not only promoted environmental awareness but also nurtured creativity, collaboration and instilled a sense of responsibility towards nature. The Eco club, at St Agnes Pu College, looks forward to organizing more such events to continue promoting sustainable practices and environmental education.
ಮಂಗಳೂರು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಪರಿಸರ ವಾರ 2024
ಮಂಗಳೂರು: “ಪರಿಸರ”ವು ನಮ್ಮ ಸುತ್ತಲಿನ ಎಲ್ಲವನ್ನೂ ಒಳಗೊಳ್ಳುತ್ತದೆ ಮತ್ತು ಭೂಮಿಯ ಮೇಲಿನ ಜೀವವನ್ನು ಉಳಿಸಿಕೊಳ್ಳುವಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮಾನವನ ಯೋಗಕ್ಷೇಮ, ಆರ್ಥಿಕ ಸಮೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಆರೋಗ್ಯಕರ ಪರಿಸರ ಅತ್ಯಗತ್ಯ. ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಆಸಕ್ತಿ ಮತ್ತು ಕಾಳಜಿಯನ್ನು ಬೆಳೆಸಲು, ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ಜೀವಶಾಸ್ತ್ರ ವಿಭಾಗದ ಆಶ್ರಯದಲ್ಲಿ ಇಕೋ-ಕ್ಲಬ್ “ಸೃಷ್ಟಿ” ಪರಿಸರ ಸಪ್ತಾಹ 2024 ಅನ್ನು ಆಯೋಜಿಸಿದೆ.
ವನಮಹೋತ್ಸವದ ಸಂದರ್ಭದಲ್ಲಿ, I& II PUC ಜೀವಶಾಸ್ತ್ರ ವಿದ್ಯಾರ್ಥಿಗಳಿಗೆ ಸರಣಿ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಪರಿಸರದ ಬಗೆಗಿನ ಜವಾಬ್ದಾರಿಯ ಪ್ರಜ್ಞೆಯನ್ನು ಅವರಲ್ಲಿ ಮೂಡಿಸಲು ಈ ಚಟುವಟಿಕೆಗಳನ್ನು ವಿನ್ಯಾಸಗೊಳಿಸಲಾಗಿದೆ. ವೃಕ್ಷಗಳ ಹಬ್ಬವು ವಿದ್ಯಾರ್ಥಿಗಳನ್ನು ನಿಸರ್ಗದ ಬಗೆಗಿನ ಉತ್ಸಾಹವನ್ನು ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಪರಿಸರ ಜಾಗೃತಿ ಮತ್ತು ಸುಸ್ಥಿರತೆಯನ್ನು ಉತ್ತೇಜಿಸಲು ಅತ್ಯುತ್ತಮ ಅವಕಾಶವನ್ನು ಒದಗಿಸಿದೆ.
ವಿದ್ಯಾರ್ಥಿಗಳ ಸುಪ್ತ ಕ್ರಿಯಾಶೀಲತೆ ಮತ್ತು ಕಲಾತ್ಮಕ ಸಾಮರ್ಥ್ಯಗಳನ್ನು ಟ್ಯಾಪ್ ಮಾಡುವ ಚಟುವಟಿಕೆಗಳ ಕೋಲಾಹಲದಿಂದ ಈವೆಂಟ್ ಗುರುತಿಸಲ್ಪಟ್ಟಿತು. ನಿಸರ್ಗದೊಂದಿಗಿನ ಏಕತೆಯ ಸಂದೇಶವನ್ನು ಸಾರುವ ರಾಕ್ ಪೇಂಟಿಂಗ್ಗಳು, ಕಾರ್ಡ್ಗಳ ತಯಾರಿಕೆ, ಚಾರ್ಟ್ಗಳು ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು ಪ್ರಕೃತಿಯ ಮೇಲಿನ ತಮ್ಮ ಪ್ರೀತಿಯನ್ನು ಪ್ರದರ್ಶಿಸಿದರು ಮತ್ತು ಪ್ರಕೃತಿಯ ಸಂರಕ್ಷಣೆಯ ಕಾರಣವನ್ನು ಸಂರಕ್ಷಿಸುವ ಮತ್ತು ಪ್ರತಿಪಾದಿಸುವ ದಿನದ ತುರ್ತು ಅಗತ್ಯ. ಅವರು ಪ್ಲಾಸ್ಟಿಕ್ ಮಾಲಿನ್ಯದ ಹಾನಿಕಾರಕ ಪರಿಣಾಮವನ್ನು ಎತ್ತಿ ತೋರಿಸಿದರು ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರದ ಅಗತ್ಯವನ್ನು ಪ್ರತಿಪಾದಿಸಿದರು. ಸಾಮಾನ್ಯ ಕಾಯಿಲೆಗಳಿಗೆ ಮನೆಮದ್ದುಗಳ ಪ್ರದರ್ಶನವು ಸಾಂಪ್ರದಾಯಿಕ ಜ್ಞಾನ ಮತ್ತು ಅಭ್ಯಾಸಗಳ ಬಗ್ಗೆ ಹೆಚ್ಚಿನ ಮೆಚ್ಚುಗೆಯನ್ನು ಬೆಳೆಸಿತು. ವನ ಮಹೋತ್ಸವದ ಮಹತ್ವ ಮತ್ತು ಪರಿಸರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ತರಗತಿಯ ಜಾಗೃತಿ ಉಪಕ್ರಮವನ್ನು ಪ್ರಾರಂಭಿಸಲಾಯಿತು. ಜೀವವೈವಿಧ್ಯ, ಸಂರಕ್ಷಣೆ ಮತ್ತು ಮರಗಳ ಮಹತ್ವ ಸೇರಿದಂತೆ ಪರಿಸರ ವಿಷಯದ ಕುರಿತು ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸಲು ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಯಿತು. ವಿಷಯಾಧಾರಿತ ಸುಮಧುರ ಸಮೂಹ ಗೀತೆಗಳ ಪ್ರದರ್ಶನವು ಹಬ್ಬದ ವಾತಾವರಣವನ್ನು ಸೃಷ್ಟಿಸಿತು ಮತ್ತು ಪರಿಸರವನ್ನು ರಕ್ಷಿಸುವ ಮತ್ತು ಸಂರಕ್ಷಿಸುವ ಸಂದೇಶವನ್ನು ಬಲಪಡಿಸಿತು. ಪ್ರಕೃತಿ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ಪರಿಕಲ್ಪನೆಗಳ ಸಂಕೀರ್ಣ ಮಾದರಿಗಳನ್ನು ರಚಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಕೌಶಲ್ಯಗಳನ್ನು ಉತ್ಸಾಹದಿಂದ ಪ್ರದರ್ಶಿಸಿದರು.
ಇಕೋ ಕ್ಲಬ್ನಿಂದ ವನ ಮಹೋತ್ಸವ ಆಚರಣೆಯು ಅದ್ಭುತ ಯಶಸ್ಸನ್ನು ಕಂಡಿತು ಮತ್ತು ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತೀವ್ರ ಉತ್ಸಾಹವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಪರಿಸರ ಜಾಗೃತಿಯನ್ನು ಉತ್ತೇಜಿಸುವುದಲ್ಲದೆ ಸೃಜನಶೀಲತೆ, ಸಹಯೋಗವನ್ನು ಪೋಷಿಸಿತು ಮತ್ತು ಪ್ರಕೃತಿಯ ಬಗ್ಗೆ ಜವಾಬ್ದಾರಿಯ ಪ್ರಜ್ಞೆಯನ್ನು ಹುಟ್ಟುಹಾಕಿತು. ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿರುವ ಇಕೋ ಕ್ಲಬ್, ಸುಸ್ಥಿರ ಅಭ್ಯಾಸಗಳು ಮತ್ತು ಪರಿಸರ ಶಿಕ್ಷಣವನ್ನು ಉತ್ತೇಜಿಸುವುದನ್ನು ಮುಂದುವರಿಸಲು ಇಂತಹ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲು ಎದುರು ನೋಡುತ್ತಿದೆ.
ಆರ್ಡಿಪಿಆರ್ ಇಲಾಖೆಯಿಂದ ಸೂಲೂರಿನಲ್ಲಿ ಸ್ವಚ್ಚತಾ ಅಭಿಯಾನದ ದಾಖಲೀಕರಣ ಸಾಂಕ್ರಾಮಿಕ ರೋಗ ಮುಕ್ತ ವಾತಾವರಣಕ್ಕೆ ಬದ್ದತೆಯಿಂದ ಕೆಲಸ ಮಾಡಿ-ಪದ್ಮಬಸವಂತಪ್ಪ
ಕೋಲಾರ:- ಗ್ರಾಮೀಣಭಾಗದಲ್ಲಿ ಸ್ವಚ್ಚತೆಗೆ ಒತ್ತು ನೀಡಿ, ಸಾಂಕ್ರಾಮಿಕ ರೋಗ ಮುಕ್ತ ವಾತಾವರಣ ನಿರ್ಮಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಬದ್ದತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಬಸವಂತಪ್ಪ ಕರೆ ನೀಡಿದರು.
ತಾಲ್ಲೂಕಿನ ಸೂಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಚಭಾರತ ಅಭಿಯಾನದಡಿ ನಡೆದ ಸ್ವಚ್ಚತಾ ಕಾರ್ಯಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ದಾಖಲೀಕರಣ ಮಾಡುವ ಕಾರ್ಯಕ್ರಮಕ್ಕೆ ಗಿಡ ನೆಟ್ಟು ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಮಾರಕ ಡೆಂಗ್ಯೂ ಮತ್ತಿತರ ಮಾರಕ ರೋಗಗಳಿಂದ ಮುಕ್ತವಾದ ವಾತಾವರಣ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿಯೊAದಿಗೆ ಸಾರ್ವಜನಿಕರೂ ಸಹಕರಿಸಬೇಕು, ಕಸ,ಕೊಳಕು ಮುಕ್ತ ಉತ್ತಮ ಪರಿಸರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ಸಿಕ್ಕಿದೆ, ಇದು ಗ್ರಾಮ ಸರ್ಕಾರವಾಗಿದೆ ಎಂದ ಅವರು, ವಿಕೇಂದ್ರೀಕರಣದ ಮೂಲ ಉದ್ದೇಶ ಸಫಲಗೊಳ್ಳಲು ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿ ಬರುವ ಜನಪ್ರತಿನಿಧಿಗಳು, ಅವರೊಂದಿಗೆ ಕೆಲಸ ಮಾಡುವ ಸರ್ಕಾರದ ಸಿಬ್ಬಂದಿ,ಅಧಿಕಾರಿಗಳು ಬದ್ದತೆಯಿಂದ ಕೆಲಸ ಮಾಡಬೇಕಾಗಿದೆ, ಗಾಂಧಿ ಕನಸಿನ ಸ್ವಚ್ಚಭಾರತ ಕಲ್ಪನೆಯನ್ನು ಸಾಕಾರಗೊಳಿಸಬೇಕಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಡೆಂಗ್ಯು ಅತಿ ವೇಗವಾಗಿ ಹರಡುತ್ತಿದೆ, ಇದರ ತಡೆಗೆ ಅಗತ್ಯ ಕ್ರಮವಹಿಸಬೇಕು ಗ್ರಾಮೀಣ ಜನತೆಯಲ್ಲಿ ಜಾಗೃತಿ ಮೂಡಿಸಿ, ವಾರಕ್ಕೊಂದು ದಿನ ಶುಕ್ರವಾರ ಒಣದಿನವನ್ನಾಗಿ ಆಚರಿಸಿ, ನೀರು ಸಂಗ್ರಹ ತಾಣಗಳನ್ನು ಸ್ವಚ್ಚಗೊಳಿಸಿ ಎಂದು ಸಲಹೆ ನೀಡಿದರು.
ಈ ರೋಗಕ್ಕೆ ಕಾರಣವಾದ ಈಡೀಸ್ ಸೊಳ್ಳೆ ಶುದ್ದ ನೀರಿನ ಮೂಲಕವೇ ತನ್ನ ಸಂತಾನೋತ್ಪತ್ತಿ ಹೆಚ್ಚಿಸಿಕೊಳ್ಳುವುದರಿಂದ ಮನೆಗಳ ಸುತ್ತ ನೀರಿನತಾಣ ಸ್ವಚ್ಚಗೊಳಿಸಿ, ತೆಂಗಿನ ಚಿಪ್ಪು, ಟೈರು, ಪ್ಲಾಸ್ಟಿಕ್ ಲೋಟಗಳಲ್ಲಿ ನೀರು ಸಂಗ್ರಹವಾಗಿದ್ದರೆ ತೆರವುಗೊಳಿಸಿ ಎಂದು ಸೂಚಿಸಿದರು.
ಸೊಳ್ಳೆಗಳು ನೀರಿನ ಮೂಲ
ಆರ್ಡಿಪಿಆರ್ ಇಲಾಖೆ ದಾಖಲೀಕರಣಕ್ಕೆ ಸೂಲೂರು ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿಕೊಂಡಿದೆ, ಇಲ್ಲಿ ಆಡಳಿತ ಮಂಡಳಿ ಉತ್ತಮವಾಗಿ ಕೆಲಸ ಮಾಡುತ್ತಿದೆ, ಸಾಂಕ್ರಾಮಿಕ ರೋಗ ತಡೆಗೆ ಮತ್ತಷ್ಟು ಸ್ವಚ್ಚತಾ ಕಾರ್ಯಕ್ಕೆ ಮುನ್ನುಡಿ ಬರೆಯಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಮಾತನಾಡಿ, ಈಗಾಗಲೇ ಡೆಂಗ್ಯು ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ, ನೀರು ಸಂಗ್ರಹ ತಾಣಗಳು, ಚರಂಡಿಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಕಲಾಗಿದೆ, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದ್ದು, ಎಲ್ಲಾ ಸದಸ್ಯರು ಸಹಕಾರ ನೀಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಸೂಲೂರು ಗ್ರಾ.ಪಂ ವ್ಯಾಪ್ತಿಯ ಕೆಂದಟ್ಟಿಯಲ್ಲಿ ವೀರಗಲ್ಲುಗಳ ಸಂರಕ್ಷಣೆ, ಕುಡಿಯುವ ನೀರಿನ ವಾಟರ್ಫಿಲ್ಟರ್ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದ್ದು, ಅಧ್ಯಕ್ಷ ಸುರೇಶ್ ನೇತೃತ್ವ ವಹಿಸಿದ್ದರು.
ಇಂದಿನ ಸ್ವಚ್ಚತಾ ಅಭಿಯಾನದಲ್ಲಿ ಸೂಲೂರು ಬಸ್ ನಿಲ್ದಾಣದ ಸುತ್ತಮುತ್ತ ಪಾರ್ಥೇನಿಯಂ ನಾಶ, ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಪೆಮ್ಮಶೆಟ್ಟಿಹಳ್ಳಿ ಗ್ರಾಮದಲ್ಲಿ ಕಲ್ಯಾಣಿ, ಓವರ್ ಹೆಡ್ ಟ್ಯಾಂಕ್, ಅಂಗನವಾಡಿ ಕೇಂದ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಸೂಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂದಟ್ಟಿ ಮಡಿವಾಳ. ಸೂಲೂರು. ಪೆಮ್ಮಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಸ್ವಚ್ಛತಾ ಕಾರ್ಯದಲ್ಲಿ ಜಿಲ್ಲಾ ಪಂಚಾಯತ್ನ ಸ್ವಚ್ಚಭಾರತ ಅಭಿಯಾನದ ಉಸ್ತುವಾರಿ ವಹಿಸಿಕೊಂಡಿರುವ ಜಗದೀಶ್, ಸೂಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೂಪವಿಜಯ್, ಸದಸ್ಯರುಗಳಾದ ಕೆಂದಟ್ಟಿ ಎಂ.ನಾರಾಯಣಸ್ವಾಮಿ , ನಂದಿನಿ, ಮೇಷ್ಟ್ರು ನಾರಾಯಣ್ ಸ್ವಾಮಿ, ಸೂಲೂರು ಅಶೋಕ್, ಗಾಯಿತ್ರಮ್ಮ ಮುನಿರೆಡ್ಡಿ, ನುಗ್ಲಾಪುರ ಕೃಷ್ಣಮೂರ್ತಿ, ಚಳ್ಳಹಳ್ಳಿ ಆದಿಮೂರ್ತಿ, ತಲಗುಂದ ವೆಂಕಟೇಶಪ್ಪ , ರಬಿನಾತಾಜ್, ನರಸ್ರಾಜ್, ಗರುಡನಹಳ್ಳಿ ಲೋಕೇಶ್, ಸಿದ್ದಮ್ಮ, ಹೊಗರಿ ಗೊಲ್ಲಹಳ್ಳಿ ಶ್ಯಾಮಲಮ್ಮ, ಪಿಡಿಒ ಬಾಲಾಜಿ, ಕಾರ್ಯದರ್ಶಿ ಶ್ರೀನಿವಾಸಪ್ಪ, ಸಿಬ್ಬಂದಿ ಪ್ರದೀಪ್ ಕುಮಾರ್ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗ್ರಾ.ಪಂ ಸಿರ್ಬಂದಿ ಭಾಗವಹಿಸಿದ್ದರು.