ಕೋಲಾರ:- ಜಿಲ್ಲೆಯಲ್ಲಿರುವ ೬೫೦೦ ಯೋಧರ ಕುಟುಂಬಗಳ ಆರೋಗ್ಯ ತಪಾಸಣೆಗೆ ಅಗತ್ಯವಾದ ಇ.ಸಿ.ಹೆಚ್.ಎಸ್. ಆಸ್ಪತ್ರೆಗಾಗಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಸೀಲ್ದಾರ್ ಹರ್ಷವರ್ಧನ್ ಬುಧವಾರ ತಾಲ್ಲೂಕಿನ ಅರಾಭಿಕೊತ್ತನೂರಿನಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಇತ್ತೀಚೆಗೆ ನಿವೃತ್ತ ಯೋಧರ ಟ್ರಸ್ಟ್ ಅಧ್ಯಕ್ಷ ಜಗನ್ನಾಥನ್ ನೇತೃತ್ವದಲ್ಲಿ ಪದಾಧಿಕಾರಿಗಳು ಸುದ್ದಿಗೋಷ್ಟಿ ನಡೆಸಿ, ನಮ್ಮ ಬೇಡಿಕೆಗಳು ಈಡೇರದಿದ್ದರೆ ಕಾರ್ಗಿಲ್ ವಿಜಯೋತ್ಸವ ಬಹಿಷ್ಕರಿಸುವ ಎಚ್ಚರಿಕೆಯನ್ನೂ ನೀಡಿದ್ದರು. ಈ ನಡುವೆ ಜಿಲ್ಲಾಧಿಕಾರಿಗಳು ಯೋಧರ ಬೇಡಿಕೆಗಳಿಗೆ ಸ್ಪಂದಿಸಿ ಕೂಡಲೇ ಯೋಧರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಾದ ಜಾಗ ಗುರುತಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದ್ದರು ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ತಹಸೀಲ್ದಾರ್ ಹರ್ಷವರ್ಧನ್ ಬುಧವಾರ ರಾಷ್ಟ್ರೀಯ ಹೆದ್ದಾರಿ-೭೫ಕ್ಕೆ ಹೊಂದಿಕೊಂಡಿರುವ ಅರಾಭಿಕೊತ್ತನೂರು ಗೇಟ್ನಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಹೊಂದಿಕೊಂಡಿರುವ ಸರ್ಕಾರಿ ಜಮೀನನ್ನು ಗುರುತಿಸಿ ಸ್ಥಳ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಸುಮಾರು ೬೫೦೦ ಯೋಧರ ಕುಟುಂಬಗಳಿದ್ದು, ಅವರ ಆರೋಗ್ಯ ನಿರ್ವಹಣೆಗೆಂದು ಕೇಂದ್ರ ಸರ್ಕಾರ ಈಗಾಗಲೇ ೮.೫೦ ಕೋಟಿ ಹಣ ಮಂಜೂರು ಮಾಡಿದೆ ಅದರೆ ರಾಜ್ಯ ಸರ್ಕಾರ ಜಾಗ ಗುರುತಿಸಿ ಕೊಡುವಲ್ಲಿ ವಿಫಲವಾಗಿದೆ ಎಂದು ಯೋಧರು ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಯುದ್ದದಲ್ಲಿ ಮೃತಪಟ್ಟವರ, ನಿವೃತ್ತಿಯಾದವರ, ಕುಟುಂಬದವರ ಜೀವನ ನಿರ್ವಹಣೆಗೆ ಪ್ರತಿಯೊಬ್ಬರಿಗೆ ಕನಿಷ್ಠ ೮ ಎಕರೆ ಕೃಷಿ ಭೂಮಿಯನ್ನು ಸರ್ಕಾರ ಮಂಜೂರು ಮಾಡಲು ಕೇಂದ್ರದ ಸೂಚನೆ ಇದ್ದರೂ ಸಹ ನಮ್ಮ ರಾಜ್ಯ ಸರ್ಕಾರದ ಮತ್ತು ಜಿಲ್ಲಾಡಳಿತ ಜಮೀನು ಮಂಜೂರು ಮಾಡಿಲ್ಲ ಎಂಬುದು ಯೋಧರ ಆರೋಪವಾಗಿತ್ತು.
ಈ ಹಿನ್ನಲೆಯಲ್ಲಿ ತಾಲ್ಲೂಕಿನಾದ್ಯಂತ ಸರ್ಕಾರಿ ಜಮೀನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಆದ್ಯತೆಯ ಮೇಲೆ ಯೋಧರಿಗೆ ಜಮೀನು ಒದಗಿಸಿಕೊಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ತಹಸೀಲ್ದಾರ್ ಹರ್ಷವರ್ಧನ್ ತಿಳಿಸಿದರು.
ನಮ್ಮ ಜಿಲ್ಲೆಯಲ್ಲಿ ೬೬೫೦ ಮಂದಿ ನಿವೃತ್ತ ವೀರ ಯೋಧರಿದ್ದಾರೆ. ಇದಲ್ಲದೆ ವೀರನಾರಿಯರು ೭೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಾಸವಿದ್ದಾರೆ. ಇರ್ಯಾರಿಗೂ ಶೇ ೯೮ರಷ್ಟು ಸರ್ಕಾರ ಭೂ ಮಂಜೂರಾತಿ ಮಾಡಿರುವುದಿಲ್ಲ, ಈ ಸಂಬಧವಾಗಿ ಹಲವು ಬಾರಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂಬುದು ಯೋಧರ ಅಳಲಾಗಿತ್ತು.
ಕಳೆದ ೨೦೧೬ರ ಸರ್ಕಾರದ ಸುತ್ತೋಲೆ ಸಂಖ್ಯೆ ಕಂಇ ಎಲ್ ಜಿ ಬಿ ಕರ್ನಾಟಕ ಸಚಿವಾಲಯದ ೧೯-೧೧-೨೦೧೬ರ ಸುತ್ತೋಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಕೃಷಿಗೆ ಯೋಗ್ಯವಾದ ಜಮೀನು ೩ ರಿಂದ ೬ ತಿಂಗಳ ಒಳಗೆ ಮಂಜೂರು ಮಾಡಲು ಆದೇಶ ನೀಡಿತ್ತು.
ವೀರ ಯೋಧರು ಸ್ವಾತಂತ್ರ್ಯ ಹೋರಾಟದ ನಂತರವೂ ೨ನೇ ಮಹಾಯುದ್ದ, ಚೈನಾ ಯುದ್ದ. ಪಾಕಿಸ್ತಾನದ ಯುದ್ದ, ಬರ್ಮಾಯುದ್ದಗಳಲ್ಲಿ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ತಮ್ಮ ಜೀವವನ್ನು ಬಲಿ ನೀಡಿದ್ದಾರೆ. ಅವರ ಕುಟುಂಬಗಳು ಬೀದಿಪಾಲಾಗಿದೆ ಆದ್ದರಿಂದ ಯೋಧರ ಕುಟುಂಬದ ಬೇಡಿಕೆ ಶೀಘ್ರ ಈಡೇರಿಸಲು ತಾಲ್ಲೂಕು ಆಡಳಿತ ಬದ್ದವಾಗಿದೆ ಎಂದು ತಹಸೀಲ್ದಾರ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅವರೊಂದಿಗೆ ವಕ್ಕಲೇರಿ ಕಂದಾಯ ನಿರೀಕ್ಷಕ ಲೋಕೇಶ್, ಭೂಮಾಪಕ ಸಂತೋಷ್ ಮತ್ತಿತರರಿದ್ದರು ಇದ್ದರು.
Month: July 2024
ಮದುವೆಯಾಗುವಂತೆ ಒತ್ಡ ಹೇರಿದಕ್ಕೆ ಪ್ರೇಯಸಿಯ ಕೊಲೆ ಮಾಡಿ ಶವ ಹೂತಿಟ್ಟ ಪ್ರಿಯಕರ ಪೋಲಿಸ್ ಬಲೆಗೆ
ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಳೆಂದು ಪ್ರಿಯತಮೆ ಮೇಲೆ ಹಲ್ಲೆ ನಡೆಸಿ ಪ್ರಿಯಕರ ಹತ್ಯೆಗೂ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಕೊಲೆ ಮಾಡಿದ ಆರೋಪಿ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಿಯಕರ ಕೊಲೆ ಮಾಡಿದ್ದಾನೆಂದು ತಿಳಿದುಬಂದಿದೆ.
ತೀರ್ಥಹಳ್ಳಿಯಲ್ಲಿ ಫೈನಾನ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಯುವತಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಇಬ್ಬರ ನಡುವೆ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ ಯುವಕ ಮೋಸ ಮಾಡಿದ್ದಾನೆ ಎನ್ನಲಾಗಿದೆ
ಇಬ್ಬರದ್ದು ಬೇರೆ ಬೇರೆ ಸಮುದಾಯ ಆಗಿದ್ದರಿಂದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ತೀರ್ಥಹಳ್ಳಿಗೆ ಹೋಗುತ್ತೇನೆ ಅಂತಾ ಜು.2 ರಂದು ಕೊಪ್ಪದಿಂದ ಯುವತಿ ಬಂದಿದ್ದಳು. ಯುವಕನ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಪ್ರಿಯಕರ ಹೇಳಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಯುವತಿ ಮೇಲೆ ಯುವಕ ಬಲವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆಯ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಇದರಿಂದ ಭಯಭೀತನಾದ ಯುವಕ, ಯುವತಿಯ ಶವವನ್ನು ಮುಂಬಾಳು ಬಳಿ ಹೂತಿಟ್ಟು ತೆರಳಿದ್ದ. ಇತ್ತ ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ಯುವತಿ ಪೋಷಕರು ದೂರು ನೀಡಿದ್ದರು. ಯುವಕನನ್ನು ಹುಡುಕಿಕೊಂಡು ಕೊಪ್ಪ ಪೊಲೀಸರು ಸಾಗರಕ್ಕೆ ಬಂದಿದ್ದರು. ಪೊಲೀಸರ ಎದುರು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಯುವಕ ಬಿಚ್ಚಿಟ್ಟಿದ್ದಾನೆ. ಇಂದು ತಹಶೀಲ್ದಾರ್ ಸಮ್ಮುಖದಲ್ಲಿ ಶವ ಹೊರಗೆ ತೆಗೆದಿದ್ದಾರೆ
ಉಡುಪಿ: ಪೆರಂಪಳ್ಳಿಯಲ್ಲಿ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರು
ಉಡುಪಿ: ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರ್ಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.
ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ಗಳು ತೀರಾ ಸಮೀಪದಲ್ಲಿ ಗಮನಿಸಿದ್ದರು. ತಕ್ಷಣವೇ ಅವರು ಎಮರ್ಜೆನ್ಸಿ ಬ್ರೇಕ್ ಅನ್ನು ಬಳಸಿ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು.
ಹಳಿಯಲ್ಲಿ ಬಿದ್ದ ಮರ ಪೈಲಟ್ಗಳ ಗಮನಕ್ಕೆ ಬರುವುದು ಸ್ವಲ್ಪ ತಡವಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿ ಬಂದ ಒಎಚ್ಇ ತಂಡದವರು ಮರವನ್ನು ಹಳಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಕಾಲಿಕ ಕ್ರಮದಿಂದ ದೊಡ್ಡ ಅನಾಹುತ ತಪ್ಪಿಸಿದ ಜಾಗೃತ ಮಂಡ್ಯ ಮತ್ತು ಭಟ್ಕಳದ ಲೋಕೊ ಪೈಲಟ್ ಮತ್ತು ಸಹಾಯಕ ಪೈಲಟ್ಗೆ ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ತಲಾ 15,000ರೂ ಬಹುಮಾನವನ್ನು ಘೋಷಿಸಿದ್ದು, ಸುರತ್ಕಲ್ ನಿಲ್ದಾಣದಲ್ಲಿ ಬಹುಮಾನದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.
ಬಾರಕೂರು ಹಾಲೆಕೊಡಿಯಲ್ಲಿ ವಿದ್ಯುತ್ ತಂತಿ ಮೇಲೆ ತೆಂಗಿನಮರ ಬಿದ್ದಾಗ ಮೆಸ್ಕಾಂನವರಿಗೆ ಸ್ಥಳೀಯರಿಂದ ಸಹಕಾರ
ಬಾರಕೂರು : ಕೆಲ ಒಂದು ಕೆಲಸದಲ್ಲಿ ಸ್ಥಳೀಯರು ಸಹಾಯ ಮಾಡಿದರೆ ಚೆನ್ನಾಗಿರುತ್ತದೆ ಮತ್ತು ಅದು ನಮ್ಮ ಕರ್ತವ್ಯವಾಗುತ್ತದೆ. ಕಳೆದವಾರ ಬಾರಕೂರಿನ ಹಾಳೆಕೋಡಿಯಲ್ಲಿ ಅಂತಾ ನೆರೆ ಬಂದಾಗ ಹಾಲೆಕೊಡಿಯಲ್ಲಿ ನಮ್ಮ ಮಿತ್ತರು ಉದಾರಣೆಯಾದರು.
ಅಂದು ನೆರೆ ಬಂದ ದಿನ ನಾಗಬನದ ಹತ್ತಿರ ತೆಂಗಿನಮರವೊಂದು ಉರುಳಿ ಬಿತ್ತು, ಆದರೆ ಮರ ಬಿದ್ದಾಗ ವಿದ್ಯುತ್ ತಂತಿ ತುಂಡಾಗದೆ ವಿದ್ಯುತ್ ತಂತಿ ಮೇಲೆ ಸಿಕ್ಕಿ ಬಿದ್ದಿತ್ತು. ಮೆಸ್ಕಾಂನ ಸಿಬ್ಬಂದಿ ಮೂರು ಜನ ಸ್ಥಳಕ್ಕೆ ಧಾವಿಸಿದರು, ಆದರೆ ಮರವನ್ನು ತೆರವುಗೊಳಿಸುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ.
ಮರವನ್ನು ತೆರವು ಮಾಡಿ ತಂತಿಗಳನ್ನು ಪುನಃ ಜೋಡಿಸುವುದು ಕಷ್ಟಕರ ಕೆಲಸಕ್ಕೆ ಸ್ಥಳೀಯರಾದ ಮಿತ್ರರಾದ ದಯಾನಂದ. ಅನಿಲ್ . ಮುದ್ದ, ಜಾನ್ಸನ್. ಚಾರ್ಲಿ. ರೋಶನ್ ಇವರುಗಳು ನೆರೆಯಲ್ಲಿ ದೋಣಿಯನ್ನು ತಂದು, ಮೆಸ್ಕಾಂ ನವರಿಗೆ ಮರವನ್ನು ತೆರವು ಮಾಡಲು ಸಹಕರಿಸಿದರು. ಮೆಸ್ಕಾಂ ಸಿಬಂದಿ ನೆರೆ ಮತ್ತು ಮಳೆಯಲ್ಲೂ ತಮ್ಮ ಕೆಲಸವನ್ನು ಪೂರ್ಣಗೊಳಿಸಿದ್ದಕ್ಕೆ ಹಾಳೆಕೋಡಿ ಮಿತ್ರರ ಗುಂಪು ಮೆಸ್ಕಾಂ ಸಿಬಂದಿವರಿಗೂ ಆತ್ಮೀಯವಾದ ಧನ್ಯವಾದಗಳನ್ನು ಹೇಳುತ್ತಾರೆ.
ಟೇಕಾಫ್ ಆಗುವ ವೇಳೆ ವಿಮಾನ ಪತನ 19 ರಲ್ಲಿ 18 ಮಂದಿ ಮ್ರತ್ಯು ಪೈಲಟ್ ಬಚಾವ್
ಕಠ್ಮಂಡು: ಟೇಕಾಫ್ ಆಗುವ ವೇಳೆ ಶೌರ್ಯ ಏರ್ಲೈನ್ಸ್ನ 9ಎನ್-ಎಎಂಇ (ಸಿಆರ್ಜೆ 200) ವಿಮಾನ ಪತನಗೊಂಡು 18 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಜುಲೈ 24) ಬೆಳಗ್ಗೆ ನಡೆದಿದೆ.
ಈ ಘಟನೆಯಲ್ಲಿ ಪೈಲಟ್ ಬಚಾವ್ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.ಇದೀಗ ವಿಮಾನ ಪತನಗೊಂಡ ವಿಡಿಯೋ ಆನ್ಲೈನ್ನಲ್ಲಿ ಹರಿದಾಡುತ್ತಿದೆ. ಶೌರ್ಯ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾದ ನಿಖರವಾದ ದೃಶ್ಯವು ವಿಡಿಯೋದಲ್ಲಿದೆ. ರನ್ವೇಯಿಂದ ಬಾನಿಗೆ ಏರಿದ ಸ್ವಲ್ಪ ಸಮಯದ ನಂತರ ವಿಮಾನವು ನೆಲಕ್ಕೆ ಅಪ್ಪಳಿಸಿದೆ.
ವಿಮಾನದಲ್ಲಿ ಪೈಲಟ್ ಸೇರಿ 19 ಮಂದಿ ಇದ್ದರು. 18 ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದ ಅವಶೇಷಗಳಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ 37 ವರ್ಷದ ಪೈಲಟ್ ಮನಿಶ್ ಶಕ್ಯ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೌರ್ಯ ಏರ್ಲೈನ್ಸ್ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನವು ಕಠ್ಮಂಡುವಿನಿಂದ ಪೋಖರಾಗೆ ತೆರಳುತ್ತಿತ್ತು. ಟೇಕಾಫ್ ಆಗುವಾಗ ರನ್ವೇನಿಂದ ಜಾರಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿತು. ಈ ಅಪಘಾತದ ನಂತರ ವಿಮಾನದಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.
ಪಿಜಿಯೊಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಪರಾರಿ
ಬೆಂಗಳೂರು: ಮಹಿಳಾ ಪೇಯಿಂಗ್ ಗೆಸ್ಟ್ ಒಂದಕ್ಕೆ ತಡರಾತ್ರಿ ಯುವಕನೊಬ್ಬ 11.10ರ ಸುಮಾರಿಗೆ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾದ ಯುವತಿ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದ್ದು, ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ : ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲಾ ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನಾ ಸಮಾರಂಭ
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರರ್ತಿತ ಎಚ್. ಎಮ್. ಎಮ್ ಹಾಗೂ ವಿ.ಕೆ.ಆರ್ ಶಾಲೆಗಳಲ್ಲಿ 2024-25 ರ ಶೈಕ್ಷಣಿಕ ರ್ಷದಲ್ಲಿ ಹೊಸದಾಗಿ ಸರ್ಪಡೆಗೊಂಡಿರುವ ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನೆಯು ದಿನಾಂಕ : 22.07.2024 ಸೋಮವಾರದಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ರವರ ಮರ್ಗರ್ಶನದಲ್ಲಿ ನೆರವೇರಿತು. ಪರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ. ಜಿ ಭಟ್ ರವರು ಮುಖ್ಯ ಅತಿಥಿಗಳಾಗಿ ಶಿಕ್ಷಕ ವಿದ್ಯರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕ ವಿದ್ಯರ್ಥಿಗಳಿಗೆ ಪುಷ್ಪವನ್ನು ನೀಡುವ ಮೂಲಕ ಸ್ವಾಗತಿಸಲಾಯಿತು. ಡಾ. ಚಿಂತನಾ ರಾಜೇಶ್ ರವರು ಟೀಚರ್ ಟ್ರೈನಿಂಗ್ನ ಉದ್ದೇಶ ಮತ್ತು ಪ್ರಯೋಜನಗಳ ಕುರಿತು ತಿಳಿಸಿದರು. ಸಂಸ್ಥೆಯ ಕೋರ್ಡಿನೇಟರ್ ವಿಲ್ಮಾ. ಡಿ. ಸಿಲ್ವರವರು ಕರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು
ಆನಗಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಅಡಿಕೆ ಮರಗಳು ಮತ್ತು ತೆಂಗಿನ ಮರ ಮನೆ ಮೇಲೆ ಉರುಳಿಬಿದ್ದು ಸೊತ್ತು ನಶ್ಟ
ಕುಂದಾಪುರ, ಜು.24: ಆನಗಳ್ಳಿ ಕಳುವಿನ ಹತ್ತಿರ ಆನಗಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಇಂದು (ಜು.24) ಬೀಸಿದ ಭಾರೀ ಗಾಳಿ ಮಳೆಯಿಂದ, ಸ್ಥಳೀಯರಾದ ಜಾರ್ಜ್ ಬರೆಟ್ಟೊ ಇವರ ಜಾಗದಲ್ಲಿ ೩ ಅಡಿಕೆ ಮರಗಳು ಮತ್ತು ಒಂದು ತೆಂಗಿನ ಮರ ಬಿದ್ದು ಹಲವು ಸಾವಿರ ರೂಪಾಯಿಗಳ ಸೊತ್ತು ನಶ್ಟ ಉಂಟಾಗಿದೆ.
ತೆಂಗಿನ ಮರವು ತುಂಡಾಗಿ ಜಾರ್ಜ್ ಬರೆಟ್ಟೊ ಇವರ ಹಳೆಯ ಮನೆ ಮೇಲೆ ಬಿದ್ದು, ತಗಡಿನ ಛಾವಣಿಗೆ ಮತ್ತು ಮನೆಯ ಬಾವಿಗೆ ಕೂಡ ಹಾನಿಯಾಗಿದೆ. ಬಾವಿಯ ಎರಡು ಕಂಬಗಳಿಗೆ ಹಾನಿಯಾಗಿದಲ್ಲದೆ, ಪಂಪ್ಸೆಟ್ಟಿಗೂ ಹಾನಿಯಾಗಿದ್ದು ಲಕ್ಷಾಂತ್ತರ ರೂಪಾಯಿ ನಶ್ಟ ಉಂಟಾಗಿದೆ. ಅಡಿಕೆ ಮರಗಳು ನೆರೆಮನೆಯ ಹಿತ್ತಲುಗಳಲ್ಲಿ ಉರುಳಿ ಬಿದ್ದೀವೆ.
ಕಡಲ್ಕೊರೆತ ಪೀಡಿತ ಮಣೂರು –ಪಡುಕರೆಗೆ ಮೀನುಗಾರಿಕಾ ಇಲಾಖೆ ಅಧಿಕಾರಿ ಮತ್ತು ಜಯಪ್ರಕಾಶ್ ಹೆಗ್ಡೆಯವರ ಭೇಟಿ
ಕೋಟ, ಜು. 22: ಮಣೂರು-ಪಡುಕರೆ ಭಾಗದಲ್ಲಿ ಈ ಬಾರಿ ಕಡಲ್ಕೊರೆತ ತೀವ್ರಗೊಂಡಿದ್ದರಿಂದ ಮೀನುಗಾರಿಕೆ ಇಲಾಖೆ ಎಂಜಿನಿಯರ್ ಡಯಾಸ್ ಹಾಗೂ ಮಾಜಿ ಸಚಿವ. ಜಯಪ್ರಕಾಶ್ ಹೆಗ್ಡೆ ಸ್ಟಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದ್ದಾರೆ. ಇಲ್ಲಿನ. ಜಿ.ಎ. ಕಾಂಚನ್ ರಸ್ತೆ ಹಾಗೂ ಲಿಲ್ಲಿ ಫೆರ್ನಾಂಡಿಸ್ ರಸ್ತೆಯಲ್ಲಿ ಸುಮಾರು 300 ಮೀಟರ್ನಷ್ಟುಸ್ಥಳದಲ್ಲಿ ಶಾಸ್ವತ ತಡೆಗೋಡೆ ಇಲ್ಲ, ಹಾಗಾಗಿ ಪ್ರತಿ ವರ್ಷ ಇಲ್ಲೆ ಸಮಸ್ಯೆ ಎದುರಾಗುತ್ತದೆ. ಕಳೆದ ಮಳೆಗಾಲದಲ್ಲಿ ತೀವ್ರವಾದ ಕಡಲ್ಕೊರೆತ ಉಂಟಾಗಿತ್ತು. ಕಡಲ ಅಲೆಗಳ ಹೊಡೆತಕ್ಕೆ ಇಲ್ಲಿನ ಸಂಪರ್ಕ ರಸ್ತೆ ಕಡಿತವಾಗುವ ಭೀತಿ ಇದೆ, ಹೀಗಾಗಿ ಶಾಶ್ವತ ಪರಿಹಾರ ಕ್ರಮಗಳು ಅಗತ್ಯ. ಎಂದು, ಸ್ಥಳೀಯರು ಅಧಿಕಾರಿಗಳು ಮತ್ತು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆಯವರಲ್ಲಿ ಮನವಿ ಮಾಡಿದರು. ಮನವಿಯನ್ನು ಆಲಿಸಿದ ಅವರು ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಆರಂಭದಲ್ಲಿ ತಾತ್ಕಾಲಿಕ ಪರಿಹಾರ ಹಾಗೂ ಮುಂದೆ ಶಾಶ್ವತ ಪರಿಹಾರದ ಬಗ್ಗೆ ಕ್ರಮಕೈಗೊಳ್ಳಬೇಕು. ಎಂದು ತಿಳಿಸಿದರು. ಅಧಿಕಾರಿಗಳು ಪೂರಕ ಕ್ರಮಕೈಗೊಳ್ಳುವುದಾಗಿ ಹೇಳಿದರು.