ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮ ಶತಾಬ್ದಿ ಆರಾಧನಾ ಮಹೋತ್ಸವದ ಅಂಗವಾಗಿ ಖ್ಯಾತ ಗಾಯಕ ಶಂಕರ ಶ್ಯಾನುಭಾಗ ಅವರ ವತಿಯಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಿತು. ದೇವಾಲಯದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ಹಾಗೂ ಶಂಕರ ಶ್ಯಾನುಭಾಗ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರ ಶ್ಯಾನುಭಾಗ ಅವರೊಂದಿಗೆ ಶಂಕರ ಶೆಣೈ, ಲೋಕೇಶ, ಹರಿ, ಅಶ್ವಥ, ಅದೃುತ ಪೈ ಹಾರ್ಮೋನಿಯಂ, ತಬಲಾ, ತಾಳ ಸಂವಾದಿನಿಯಲ್ಲಿ ಸಹಕರಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಕೆ. ಪದ್ಮನಾಭ ಶೆಣೈ ಕಲಾವಿದರನ್ನು ಗೌರವಿಸಿದರು. ಪಿ. ಜಯವಂತ ಪೈ ನಿರೂಪಿಸಿದರು.
Month: September 2024
ಉತ್ತಮ ನಾಯಕರನ್ನ ರೂಪಿಸುವಲ್ಲಿ ರಾಜ್ಯ ಶಾಸ್ತ್ರಜ್ಞರ ಪಾತ್ರ ಅತಿಹಿರಿದು – ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ
ಉಡುಪಿ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ಇದರ ವಿಷಯಾಧಾರಿತ ಪುನಶ್ಚೇತನ ತರಬೇತಿ, ನಿವೃತ್ತ ಉಪನ್ಯಾಸಕರ ಸನ್ಮಾನ ಮತ್ತು ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಸಮಾರಂಭವು ಸರ್ಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇಲ್ಲಿಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಶಾಲಾ ಶಿಕ್ಷಣ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ಅವರು ರಾಜ್ಯಶಾಸ್ತ್ರ ಅಧ್ಯಯನದ ಮಹತ್ವ ಮತ್ತು ಕಲಾವಿಭಾಗವನ್ನು ಪುನಶ್ಚೇತನ ಗೊಳಿಸುವ ಕುರಿತು ಮತ್ತು ಮುಂದಿನ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಕಾಲೇಜಿನ ಪ್ರಾಂಶುಪಾಲರಾದ ರವೀಂದ್ರ ಉಪಾಧ್ಯ ವಹಿಸಿದ್ದು 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜು ಕೊಲ್ಲೂರು ಇಲ್ಲಿಯ ವಿದ್ಯಾರ್ಥಿ ಸುನಿಲ್ ವೈ ಎಂ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು ಇಲ್ಲಿಯ ವಿಧ್ಯಾರ್ಥಿ ಸೌಮ್ಯ ಆಚಾರ್ಯ ಇವರಿಗೆ ನಗದು ಬಹುಮಾನ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಉಪನ್ಯಾಸಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿ ವಯೋ ನಿವೃತ್ತಿಯನ್ನು ಪಡೆದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ,ಇಲ್ಲಿಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಯುತ ದಯಾನಂದ ,ಡಿ. ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬಸ್ರೂರು ಶಾರದಾ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀಯುತ ದಿನೇಶ್ ಹೆಗ್ಡೆ ಮೊಳಹಳ್ಳಿ ಉಪಸ್ಥಿತರಿದ್ದು ರಾಜ್ಯಶಾಸ್ತ್ರ ಉಪನ್ಯಾಸಕ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ವಾಸು ಮೊಗವೀರ ಪ್ರಾಸ್ತಾವಿಕ ಮಾತುಗಳೊಂದಿಗೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಎಡ್ವರ್ಡ್ ಲಾರ್ಸನ್ ಡಿಸೋಜ ವಂದಿಸಿ, ಸ.ಪ.ಪೂರ್ವ ಕಾಲೇಜು ಗೋಳಿಯಂಗಡಿಯ ರಾಜ್ಯಶಾಸ್ತ್ರ ಉಪನ್ಯಾಸಕ ನಿರೂಪಿಸಿದರು.
ಕುಂದಾಪುರದಲ್ಲಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಯಿತು
ಕುಂದಾಪುರಃ ಇನ್ನರ್ ವ್ಹೀಲ್ ಕ್ಲಬ್ ಕುಂದಾಪುರ ದಕ್ಷಿಣ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ, ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮಲ್ಪೆ ಹಾಗೂ ಪಶು ಸಂಗೋಪನಾ ಇಲಾಖೆ ಕುಂದಾಪುರ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 2 ರಿಂದ 6 ರ ತನಕ ಕುಂದಾಪುರದ ಪಶು ಆಸ್ಪತ್ರೆ ವಠಾರದಲ್ಲಿ, ಮನೆಯಲ್ಲಿ ಸಾಕಿದ 27 ಗಂಡು ಮತ್ತು 63 ಹೆಣ್ಣು ಒಟ್ಟು 90 ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಕುಂದಾಪುರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ, WVS ಸಂಸ್ಥೆಯ ನುರಿತ ವೈದ್ಯರ ಮತ್ತು ಸಿಬ್ಬಂದಿಯಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಇನ್ನರ್ ವ್ಹೀಲ್ ಅಧ್ಯಕ್ಷೆ ಸುರೇಖ ಪುರಾಣಿಕ್, ಕಾರ್ಯದರ್ಶಿ ಸುಮ ಪುತ್ರನ್,ಸದಸ್ಯರಾದ ಸುಜಾತ ನಕ್ಕತ್ತಾಯ, ಅಂಬುಜ ಶೆಟ್ಟಿ, ಶಾಂತಾ ಕಾಂಚನ್,ಸುಜಾತ ಶೆಟ್ಟಿ, ಮಮತಾ, ಆಶಾ ಲುವಿಸ್, ರೋಟರಿ ಕ್ಲಬ್ಬಿನ ಅಧ್ಯಕ್ಷೆ ರೊ.ಜುಡಿತ್ ಮೆಂಡೋನ್ಸ, ಸದಸ್ಯರಾದ ರೊ.ಸತ್ಯನಾರಾಯಣ ಪುರಾಣಿಕ, ರೊ.ಜಾನ್ಸನ್ ಅಲ್ಮೇಡ, ರೊ.ವಾಸುದೇವ ಕಾರಂತ, ರೊ.ಮನೋಹರ, ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟಿನ ಪೃಥ್ವಿ ಪೈ, ಮಂಜುಳಾ ಕರ್ಕೇರಾ, ಪಶು ವೈದ್ಯಾಧಿಕಾರಿ ಡಾ. ಬಾಬಣ್ಣ ಮತ್ತು ಅಲ್ಲಿನ ಸಿಬ್ಬಂದಿ ಉಪಸ್ಥಿತರಿದ್ದರು.
ಎಂ ಐ ಟಿ ಕುಂದಾಪುರ ಲೋಗೋ ಬಿಡುಗಡೆ / MIT Kundapura logo release
ಎಂ ಐ ಟಿ ಕುಂದಾಪುರದ 20ನೇ ವರ್ಷಾಚರಣೆ ಲೋಗೋವನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಯಿತು. ಇದು ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಎಂ ಐ ಟಿ ಯು 20 ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಸಂಕೇತಿಸುತ್ತದೆ. ಮಿರಾಫ್ರಾ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ನ ಹಾರ್ಡ್ವೇರ್ ಇಂಜಿನಿಯರಿಂಗ್ ವಿಭಾಗ ಉಪಾಧ್ಯಕ್ಷ ವಿನೋದ್ ಜಾನ್, ಆರ್ಡ್ರಿಯೊ ಸಂಸ್ಥಾಪಕ ಮತ್ತು ಸಿಇಒ ಸುಮಂತ್ ಶೆಟ್ಟಿ, ಎಂಐಟಿಕೆ ಪ್ರಾಂಶುಪಾಲ ಡಾ.ಅಬ್ದುಲ್ ಕರೀಮ್ ಅವರು ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ, ಡೀನ್ ಪ್ಲೇಸ್ಮೆಂಟ್ ಅಮೃತಮಾಲಾ, ಎಲ್ಲಾ ವಿಭಾಗ ಮುಖ್ಯಸ್ಥರು, ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
MIT Kundapura logo release
Logo of MITK 20 years was released recently. It symbolises the 20 years of excellence of MITK in the field of Engineering and Technology. Mr. Vinod John, Vice President Hardware Engineering, Mirafra Technology Pvt.Ltd, Mr. Sumanth Shetty, Founder and CEO of Ordrio, Principal, Dr. Abdul Kareem, Vice Principal of MITK, Prof. Melwin D’Souza. Dean Placement, Professor Amruthamala, all the HOD’s, Staff members, students were present on the occasion.
ಮಂಗಳೂರು ಮಿಲಾಗ್ರಿಸ್ ದೇವಾಲಯದಲ್ಲಿ ಮಾತೆ ಮೇರಿಯಮ್ಮನ (ಮೊಂತಿ ಫೇಸ್ತ್ )ಭಕ್ತಿಪೂರ್ವಕ ಹಬ್ಬದ ಆಚರಣೆ /
ಮಂಗಳೂರು ಮಿಲಾಗ್ರಿಸ್ ದೇವಾಲಯದಲ್ಲಿ ಮಾತೆ ಮಾರಿಯಮ್ಮ (ಮೊಂತಿ ಫೇಸ್ತ್ )ಹಬ್ಬ ವನ್ನು ಆಚರಿಸಲಾಯಿತು ಮೊದಲಿಗೆ ಪುಟ್ಟ ಮಕ್ಕಳು ಮಾತೆಗೆ ಹೂ ಗಳನ್ನು ಅರ್ಪಿಸಿದರು ನಂತರ ಧರ್ಮ ಗುರುಗಳು ಭತ್ತ ತೆನೆ ಗಳನ್ನುವಂದನೀ ಯ ಧರ್ಮ ಗುರು ಗಳಾದ ಬೋನವೆಂಚರ್ ನಜಾರೆತ್ ಆಶೀರ್ವಾದಿ ಸಿದರು ವಂದನೀಯ ಧರ್ಮ ಗುರು ಗಳಾದ ಜೆರಾಲ್ಡ್ ಪಿಂಟೋ ರವರು ಬಲಿ ಪೂಜೆ ಅರ್ಪಿಸಿದರು ವಂದನೀಯ ಧರ್ಮ ಗುರು ಮೈಕಲ್ ಸಾo ತು ಮಾಯೆರ್ ಪ್ರಬೋಧನೆ ನೀಡಿದರು ವಂದನೀಯ ಧರ್ಮ ಗುರು ಗಳಾದ ಉದಯ್, ವಂದನೀಯ ರೋಬಿನ್ ಮತ್ತು ಧರ್ಮ ಭಗಿನಿ ಯರು ಸಾವಿರಾ ರು ಭಕ್ತ ದಿ ಗಳು ಈ ಬಲಿ ಪೂಜೆ ಯಲ್ಲಿ ಪಾಲ್ಗೊಂಡರು
The Monthi Feast was celebrated with pomp and grandeur at Milagres Church, Mangalore.
The Monthi Feast was celebrated with pomp and grandeur at Milagres Church, Mangalore. The procession with corn and first fruits began at Attavar with the statue of Infant Mary and proceeded through Sturrock Road and Mother Theresa Road to reach the church. The corn was blessed by Fr. Gerald Pinto, followed by the Holy Eucharist officiated by Dr. Michael Santhmayor. Rev. Fr. Bonaventure Nazareth, Fr. Uday Fernandes, and Fr. Robin were also present. The Parish Priest preached on the significance of first fruits and the Blessed Mother as the first fruit of salvific history and thanked those involved in the feast. Participants exchanged greetings and enjoyed the breakfast served. Around 2,000 people solemnized the festival. The church, dedicated to our Blessed Mother, aptly highlighted the Birth of the Patron.
ಜೆಸಿಐ ಕುಂದಾಪುರ ಸಿಟಿಯಿಂದ ಜೆಸಿ ಸಪ್ತಾಹದ ಭಾಗವಾಗಿ – ತರಬೇತಿ ಕಾರ್ಯಕ್ರಮ ಉದ್ಘಾಟನೆ
ಸೆಪ್ಟೆಂಬರ್ 11, ಕುಂದಾಪುರ: ಇಲ್ಲಿನ ಡಾ .ಬಿ .ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಜೆಸಿಐ ಕುಂದಾಪುರ ಸಿಟಿ ಅವರ ಜೆಸಿ ಸಪ್ತಾಹದ ಭಾಗವಾಗಿ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್ 9 ರಂದು ಉದ್ಘಾಟನೆ ನಡೆಯಿತು.
ಜೆಸಿ ಲೋಕೇಶ್ ರೈ, JAC ಚೇರ್ಮನ್ ವಲಯ 15 ಇವರು ಕಾರ್ಯಕ್ರಮನ ಉದ್ಘಾಟಿಸಿ, ಜೆಸಿಐ ಕುಂದಾಪುರ ಸಿಟಿ ಅವರು ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಯುವ ಮನಸ್ಸುಗಳನ್ನು ತಲುಪುವ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದರು.
ಜೆಸಿಐ ಕುಂದಾಪುರ ಸಿಟಿಯ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಆಶಯ ನುಡಿಗಳನ್ನು ಆಡಿದರು. ಮುಖ್ಯ ಅತಿಥಿ ಐವನ್ ಅಲ್ಮೆಡ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭ ಜೆಸಿ ರಾಘವೇಂದ್ರ ಚರಣ ನಾವಡ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಸಾಧಕ -ಬಾಧಕಗಳ ಕುರಿತು ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಜೆಸಿ ಕುಂದಾಪುರ ಸಿಟಿಯ ಅಧ್ಯಕ್ಷ ರಾಘವೇಂದ್ರ ಕುಲಾಲ್ ಹೆಮ್ಮಾಡಿ ನಿಕಟಪೂರ್ವ ಅಧ್ಯಕ್ಷರಾದ ಡಾ .ಸೋನಿ ಡಿಕೋಸ್ಟ, ಸಪ್ತಾಹದ ಸಭಾಪತಿ ರಾಜು ಪೂಜಾರಿ ಮೂಡ್ಲು ಕಟ್ಟೆ, ಕಾರ್ಯಕ್ರಮದ ಸಂಯೋಜಕ ಜೆಸಿ ಜಗದೀಶ್ ಶೆಟ್ಟಿ, ಲೇಡಿ ಜೆಸಿ ಚೇರ್ಮನ್ ರೇಷ್ಮಾ ಕೋಟ್ಯಾನ್ ಉಪಸ್ಥಿತರಿದ್ದರು .
ಉಪ ಪ್ರಾಂಶುಪಾಲ ಡಾ .ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಯುವ ಜೇಸಿ ಚೇರ್ಮನ್ ಕಿರಣ್ ಕುಮಾರ್ ಎನ್ ವಂದಿಸಿ, ಕಾಲೇಜಿನ ಎನ್.ಎಸ್.ಎಸ್ ಘಟಕ ಎರಡರ ಕಾರ್ಯಕ್ರಮ ಅಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು
ಈ ಮೊದಲು ದಾನಿ ಐವನ್ ಅಲ್ಮೆಡ ಅವರನ್ನು ಸನ್ಮಾನಿಸಲಾಯಿತು.
ಶ್ರೀನಿವಾಸಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಕೆಲ ಕಡೆ ಜನರು ಸಂಚರಿಸುವುದೇ ಕಷ್ಟವಾಗಿದೆ
ಶ್ರೀನಿವಾಸಪುರ ; ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಕೆಲ ಕಡೆ ಜನರು ಸಂಚರಿಸುವುದೇ ಕಷ್ಟವಾಗಿದೆ ಪಟ್ಟಣದಲ್ಲಿನ ಬಹುತೇಕ ರಸ್ತೆಗಳಲ್ಲಿ ಬೀದಿ ನಾಯಿಗಳು ಹೆಚ್ಚಿವೆ. ಹೆಜ್ಜೆ ಹೆಜ್ಜೆಗೂ ಗುರ್ ಎನ್ನುವ ನಾಯಿಗಳು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸುತ್ತಿವೆ. ಬೀದಿ ನಾಯಿಗಳ ಹಾವಳಿಯಿಂದ ಜನರು ರೋಸಿ ಹೋಗಿದ್ದಾರೆ. ಪಾದಚಾರಿಗಳು ಮತ್ತು ದ್ವಿ ಚಕ್ರ ವಾಹನಗಳ ಸವಾರರ ಸಂಚಾರಕ್ಕೆ ಸಂಚಕಾರ ಎದುರಾಗಿದೆ.
ಬಡಾವಣೆಗಳಲ್ಲಿತಿಂಡಿ, ತಿನಿಸುಗಳನ್ನು ಹಿಡಿದು ಸಾಗುವ ಪುಟ್ಟ ಮಕ್ಕಳ ಮೈಮೇಲೆ ಬೀದಿ ನಾಯಿಗಳು ದಾಳಿ ಇಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಬೀದಿ ನಾಯಿಗಳ ಹಾವಳಿ ಪಟ್ಟಣದ ರಾಜಾಜಿ ರಸ್ತೆ , ಆಜಾದ್ ರಸ್ತೆ , ಹೈದರಾಲಿ ಮೊಹಲ್ಲಾ ,ಗಫರ್ ಖಾನ್ ಮೊಹಲ್ಲಾ, ಜಾಕಿರ್ ಹುಸೇನ್ ಮೊಹಲ್ಲಾ , ಪಟ್ಟಣದ ಹಲವು ಬಡಾವಣೆಗಳಲ್ಲಿ ಬೀದಿಗಳ ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳ ಕಾಟ ತಪ್ಪಿಸುವಲ್ಲಿ ಸ್ಥಳೀಯ ಪುರಸಭೆ ಅಧಿಕಾರಿಗಳು ಮತ್ತು ಪುರಸಭೆ ಸದಸ್ಯರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.
ಬೀದಿ ನಾಯಿಗಳ ಕಾಟದಿಂದ ಆರೋಗ್ಯ ಸಮಸ್ಯೆಗಳು ಉಂಟುವಾಗುತ್ತಿದೆ ನಾಯಿಗಳಿಂದ ಹರಡುವ ರೋಗಗಳು, ಸುಸ್ತು, ಮತ್ತು ಕೀಟಗಳು ಇತರ ಜೀವಿಗಳನ್ನು ಬಾಧಿಸುತ್ತವೆ. ಬೀದಿ ನಾಯಿಗಳು ಸಾಮಾನ್ಯವಾಗಿ ಜ್ವರ, ಕಾಂಟ್ಯಾರಿಯನ್ ಇತ್ಯಾದಿ ಕಾಯಿಲೆಗಳನ್ನು ಹರಿಸುತ್ತವೆ, ಇದರಿಂದ ಪಟ್ಟಣದಲ್ಲಿ ಆರೋಗ್ಯ ಸಮಸ್ಯೆಗಳನ್ನು ಉಂಟುವಾಗುತ್ತಿದೆ ಎಂದು ಸ್ಥಳೀಯರು ಹೇಳಲಾಗುತ್ತಿದೆ.
ಮಾಂಸಭಕ್ಷಣೆಗೆ ನಾಯಿಗಳು:
ಪಟ್ಟಣದಲ್ಲಿರುವ ಮಾಂಸದ ಅಂಗಡಿಗಳ ತ್ಯಾಜ್ಯಕ್ಕಾಗಿ ದಿನವಿಡಿ ಹತ್ತಾರು ನಾಯಿಗಳು ಕಾಯುತ್ತಾ ಇರುತ್ತವೆ. ರಾತ್ರಿಯಲ್ಲೂ ಇದೇ ಮಾಂಸದಂಗಡಿಗಳ ಮುಂದೆ ಇರುವ ರಸ್ತೆಗಳಲ್ಲಿ ಬೀಡು ಬಿಟ್ಟಿರುವ ನಾಯಿಗಳು ಬೈಕ್ಗಳ ಮೇಲೆರಗುತ್ತಿವೆ.
ಬೆಳಗಿನ ಜಾವ ವ್ಯಾಯಾಮ ಹೋಗುವ ಮಹಿಳೆಯರು ಮತ್ತು ವೃದ್ಧಾಪ್ಯ ಸ್ಥಳೀಯರು , ನಮಾಜ್ , ಅರಬ್ಬಿ ಮದ್ರಸಗಳಿಗೆ , ಶಾಲೆಗಳು ತೆರಳುವ ಮೇಲೆ ಮತ್ತು ಚಿಕ್ಕ ಮಕ್ಕಳಗಳ ಮೇಲೆ ನಾಯಿಗಳ ಗುಂಪು ದಾಳಿ ಮಾಡಲು ಮುಂದಾಗುವುದು , ಬೆಳಗಿನ ಹೊತ್ತಿನಲ್ಲೂಕಪ್ಪು ಬಣ್ಣದ ಪ್ಲಾಸ್ಟಿಕ್ಗಳಲ್ಲಿ ಯಾವುದೇ ತಿಂಡಿ, ತಿನಿಸುಗಳನ್ನು ಬೈಕ್ ಹಾಗೂ ಸೈಕಲ್ ಹ್ಯಾಂಡಲ್ಗೆ ಹಾಕಿಕೊಂಡು ಹೋಗುತ್ತಿರುವುದು ನಾಯಿಗಳ ಕಣ್ಣಿಗೆ ಬಿದ್ದರೆ, ಅವುಗಳನ್ನು ಬಾಯಿಯಿಂದ ಕಚ್ಚಿ ಕಿತ್ತುಕೊಳ್ಳುತ್ತಿವೆ.ಜಾಕಿರ್ ಹುಸೇನ್ ಮೊಹಲ್ಲಾ ಹಾಗೂ ಕೆಲ ಬಡಾವಣೆಗಳಲ್ಲಿ ನಾಯಿಗಳ ದಾಳಿಗೆ ಕುರಿ , ಮೇಕೆ ಮತ್ತು ಕೋಳಿಗಳು ಸಹ ಬಲಿ ಯಾಗಿದ್ದಾರೆ , ಚಿಕ್ಕಮಕ್ಕಳು ಅಂಗಡಿಗಳಿಂದ ಬಿಸ್ಕಿಟ್, ಬನ್ಗಳನ್ನು ತರುವುದಕ್ಕೂ ಹೆದರುತ್ತಿದ್ದಾರೆ .
ಈಗಲಾದರೂ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ನಾಯಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು. ಅಲ್ಲದೇ ಮಾಂಸದ ತ್ಯಾಜ್ಯವನ್ನು ಎಲ್ಲೆಂದರಲ್ಲಿಎಸೆಯುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ರಾಜರಾಜೇಶ್ವರಿ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ
ಕೋಲಾರ,ಸೆ.10: ಕಳೆದ ಆಗಸ್ಟ್-2024ರಲ್ಲಿ ನಡೆದ ಕಂಪ್ಯೂಟರ್ ಪರೀಕ್ಷೆಯಲ್ಲಿ ನಗರದ ರಾಜರಾಜೇಶ್ವರಿ ವಾಣಿಜ್ಯ ಮತ್ತು ಕಂಪ್ಯೂಟರ್
ವಿದ್ಯಾಸಂಸ್ಥೆಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶ ಲಭಿಸಿದೆ.
20 ಅತ್ಯುತ್ತಮ ಶ್ರೇಣಿ, 05 ಪ್ರಥಮ ಶ್ರೇಣಿ, 06 ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಶಾಲೆಗೆ ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮತ್ತು ಬೋಧಕ ವೃಂದದವರು ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲ ಟಿ.ಎಸ್.ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ
ಕೋಲಾರ,ಸೆ.10: ನಗರದ ಸಹ್ಯಾದ್ರಿ ಪದವಿ ಕಾಲೇಜು ವತಿಯಿಂದ 2021-24ನೇ ಸಾಲಿನ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಮಹಿಳಾ ಕಾಲೇಜು ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಪ್ರಕಾಶ್ ಎನ್, ವಿದ್ಯಾರ್ಥಿಗಳು ತಾವು ಇಲ್ಲಿಂದ ನಿರ್ಗಮಿಸುತ್ತಿದ್ದೀರ ಎಂದರೆ ನಿಮ್ಮ ಜೀವನವನ್ನು ನೀವೇ ರೂಪಿಸಿಕೊಳ್ಳುತ್ತಿದ್ದೀರ ಹಾಗೂ ಜವಾಬ್ದಾರಿಗಳು ಹೆಚ್ಚಾಗುತ್ತದೆ ಎಂದು ತಿಳಿಸಿದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ.ಎ.ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ಜೀವನವನ್ನು ಹೇಗೆ ಛಲದಿಂದ ಬದುಕಬೇಕು. ಛಲ ಇದ್ದರೆ ಗುರಿ ತಾನಾಗೆ ಬರುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಪದವಿ ಕಾಲೇಜು ಪ್ರಾಂಶುಪಾಲ ಬಿ,ಬದ್ರಿನಾಥ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಗಣಕ ವಿಭಾಗದ ಮುಖ್ಯಸ್ಥ ಸಂತು ರಾಮ್ ಸಿಂಗ್, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಿ.ಬಿ.ರಾಧಿಕಾ, ವಾಣಿಜ್ಯ ವಿಭಾಗದ ಮುಖ್ಯಸ್ಥ ಕೆ.ಎಂ.ರಾಜಶೇಖರ್, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತ್ತು ಪೆÇೀಷಕರು ಉಪಸ್ಥಿತರಿದ್ದರು.
ಕನ್ನಡ ಆಧ್ಯಾಪಕ ಸಿ.ಮುನಿಶಾಮಪ್ಪ ನಿರೂಪಿಸಿ, ಪಿಯುಸಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಪ್ರಾರ್ಥಿಸಿ, ಸಂತರಾಮ್ ಸಿಂಗ್ ವಂದಿಸಿದರು.
ವಿದ್ಯಾರ್ಥಿನಿ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ 2021-22 ಸಾಲಿನಲ್ಲಿ ಬಿ.ಎಸ್ಸಿ ಪದವಿ ಪಡೆದ ಅನ್ನಪೂರ್ಣ .ಎಸ್ ಎಂಬ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಒಂಬತ್ತು ಚಿನ್ನದ ಪದಕಗಳು ಹಾಗೂ ಮೂರು ನಗದು ಬಹುಮಾನಗಳನ್ನು ಪಡೆದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಈ ವಿದ್ಯಾರ್ಥಿನಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ. ಉದಯ್ ಕುಮಾರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭ ಹಾರೃಸಿದ್ದಾರೆ.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ 2021-22 ಸಾಲಿನಲ್ಲಿ ಬಿ.ಎಸ್ಸಿ ಪದವಿ ಪಡೆದ ಅನ್ನಪೂರ್ಣ .ಎಸ್ ಎಂಬ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಒಂಬತ್ತು ಚಿನ್ನದ ಪದಕಗಳು ಹಾಗೂ ಮೂರು ನಗದು ಬಹುಮಾನಗಳನ್ನು ಪಡೆದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಈ ವಿದ್ಯಾರ್ಥಿನಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಉದಯ್ ಕುಮಾರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭ ಹಾರೃಸಿದ್ದಾರೆ.