ಕೋಲಾರ : ಏಷ್ಯಾದ ಎರಡನೇ ಅತಿ ಹೆಚ್ಚು ಟೊಮೋಟೋ ತರಕಾರಿಯ ಅತಿ ದೊಡ್ಡ ಮಾರುಕಟ್ಟೆಗೆ ಜಾಗದ ಕೊರತೆ : ಹೋರಾಟದ ಜೊತೆ ಮನವಿ

ವರದಿ:ಶಬ್ಬೀರ್ ಅಹ್ಮದ್

ಕೋಲಾರ : ಏಷ್ಯಾದ ಎರಡನೇ ಅತಿ ಹೆಚ್ಚು ಟೊಮೋಟೋ ತರಕಾರಿಯ ಅತಿ ದೊಡ್ಡ ಮಾರುಕಟ್ಟೆಗೆ ಜಾಗದ ಕೊರತೆ : ಹೋರಾಟದ ಜೊತೆ ಮನವಿ

ಕೋಲಾರ, ಏ.26: ಏಷ್ಯಾದ ಎರಡನೇ ಅತಿ ದೊಡ್ಡ ಮಾರುಕಟ್ಟೆ ಹಾಗೂ ಅತಿ ಹೆಚ್ಚು ತರಕಾರಿ ಮತ್ತು ಟೊಮೋಟೋ ಬರುವ ಮಾರುಕಟ್ಟೆಗೆ ಜಾಗದ ಕೊರತೆಯಿರುವುದರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿ ಮಾರುಕಟ್ಟೆಗೆ ಸೂಕ್ತವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ರೈತರಿಗೆ ಅನುಕೂಲ ಮಾಡಿ ಮಾರುಕಟ್ಟೆಯನ್ನು ಅಭಿವೃದ್ದಿ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಕೃಷಿ ಉತ್ಪನ್ನ ಮಾರುಕಟ್ಟೆಯ ಮುಂದೆ ಹೋರಾಟ ಮಾಡಿ ಅದ್ಯಕ್ಷ ಡಿ.ಎಲ್ ನಾಗರಾಜ್‍ರವರಿಗೆ ಮನವಿ ನೀಡಿ ಅಗ್ರಹಿಲಾಯಿತು.
ಹೋರಾಟದ ನೇತೃತ್ವವಹಿಸಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಮಾರುಕಟ್ಟೆ ಎಂಬ ಹೇಸರಾಗಿರುವ ಕೋಲಾರ ಜಿಲ್ಲೆಯ ಮಾರುಕಟ್ಟೆಯಲ್ಲಿ ಅತ್ಯಾಧಿಕವಾಗಿ ತರಕಾರಿಗಳು ಬರುವುದರಿಂದ ಜಾಗದ ಕೊರತೆಯಿಂದ ಟೊಮೋಟೋ ಬೆಳೆಗಾರರಿಗೆ ಹಾಗೂ ಖರೀದಿದಾರರಿಗೆ ತುಂಬಾ ತೊಂದರೆಯಾಗುತ್ತಿದೆ. ಅತಿ ಹೆಚ್ಚು ವಾಣಿಜ್ಯ ಬೆಳೆಗಳನ್ನು ಬೆಳೆಯುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮೋಟೋ ಪ್ರಮುಖ ಬೆಳೆಯಾಗಿರುವುದರಿಂದ ಅತಿ ಹೆಚ್ಚಾಗಿ ಅಂದರೆ ಶೇ,95ರಷ್ಟು ಟೊಮೋಟೋ ಬೆಳೆ ಬೆಳೆದು ದೇಶ ಮತ್ತು ಹೊರದೇಶಕ್ಕೆ ರಪ್ತು ಮಾಡುವ ಮಾರುಕಟ್ಟೆಯಾಗಿದೆ. ಮಾರ್ಚ್‍ಯಿಂದ ಸಪ್ಟೆಂಬರ್‍ವರೆಗೂ ಪ್ರತಿನಿತ್ಯ ನೂರಾರು ವಾಹನಗಳ ಸಂಚಾರ ದಟ್ಟವಾಗಿರುತ್ತದೆ. ಅದರ ಜೊತೆಗೆ ಇನ್ನಿತರ ಹತ್ತಾರು ತರಕಾರಿಗಳೂ ಪ್ರತಿ ನಿತ್ಯ ಲೋಡ್‍ಗಟ್ಟಲೇ ಮಾರುಕಟ್ಟೆಗ ಬರುವುದರಿಂದ ಜಾಗದ ಸಮಸ್ಯೆಯಿಂದ ತರಕಾರಿ ಮತ್ತು ಟೊಮೋಟೊ ಮಂಡಿ ಮಾಲೀಕರಿಗೆ ಹಾಗೂ ರೈತರಿಗೆ ವ್ಯಾಪರಸ್ಥರಿಗೆ ಪ್ರತಿನಿತ್ಯ ಜಗ¼ವಾಡುವಂತಾಗಿ ರೈತರಿಂದ ರಾಷ್ಟ್ರೀಯ ಹೆದ್ದಾರಿಯೂ 3-4 ಬಾರಿ ಬಂದ್ ಸಹ ನಡೆದಿದೆ. ಕಳೆದ ವರ್ಷ ಅವಕ ಹೆಚ್ಚಾಗಿದ್ದರಿಂದ ಸ್ಥಳದ ಸಮಸ್ಯೆ ಮತ್ತು ವಾಹನಗಳಿಗೆ ರಸ್ತೆಯಲ್ಲೇ ನಿಲ್ಲಿಸಿ ಟೊಮೋಟೊ ಲೋಡ್ ಮಾಡುವುದರಿಂದ ಮದ್ಯಾನ ಮಾರುಕಟ್ಟೆಗೆ ಬರುವ ತರಕಾರಿ ಜಾಗದ ಸಮಸ್ಯೆಯಿಂದ ಸರಿಯಾದ ಬೆಲೆ ಸಿಗದೆ ರೈತರು ತಮ್ಮ ತರಕಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಸುರಿದು ಪ್ರತಿಭಟನೆ ಮಾಡಿ ಲಾಟಿ ಚಾರ್ಜ ಸಹ ನಡೆದಿದ್ದರೂ ಜಿಲ್ಲಾqಳಿತ ಸೂಕ್ತ ಜಾಗದ ವ್ಯವಸ್ಥೆ ಮಾಡದೇ ಕಾಲಹರಣ ಮಾಡುತ್ತಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಯಾದ ತ್ರೀಲೋಕ್‍ಚಂದ್ರರವರು ಮಾರುಕಟ್ಟೆಗೆ ಬೇಟಿ ನೀಡಿ ದಲ್ಲಾಳರೂ, ರೈತರು, ಅಧಿಕಾರಿಗಳ ಸಭೆಗಳನ್ನು ನಡೆಸಿ, 6 ತಿಂಗಳಲ್ಲಿ ಟೊಮೋಟೋ ಮಾರುಕಟ್ಟೆಗೆ ಪರ್ಯಾಯ ಜಾಗ ಮಾಡುತ್ತೇವೆಂದು ಆ ಜವಬ್ದಾರಿಯನ್ನು ತಹಶೀಲ್ದಾರ್ ವಿಜಿಯಣ್ಣನವರಿಗೆ ವಹಿಸಿ ವರ್ಷ ಕಳೆದರು ಜಾಗವೂ ಇಲ್ಲ ಅದರ ಬಗ್ಗೆ ಪ್ರಸ್ತಾವನೆಯೂ ಇಲ್ಲದಾಗಿದೆ, ನೆಪಮಾತ್ರಕ್ಕೆ ವಕ್ಕಲೇರಿ ಬಳಿ 40 ಎಕರೆ ಜಮೀನನ್ನು ಗುರುತಿಸಿದ್ದೇವೆಂದು ಹೇಳಿದ ಮಾತೇ ಹೊರತು ಇದುವರೆಗೂ ಮಾರುಕಟ್ಟೆಯ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ರೀತಿ ರೈತನಿಗೆ ಅನುಕೂಲವಾಗುವ ಕೆಲಸವನ್ನೇ ಮಾಡಿಕೊಡದೇ ಇದ್ದರೇ ರೈತರ ಪರಿಸ್ಥಿತಿ ಏನು ಎಂಬುದು ಜಿಲ್ಲಾಡಳಿತಕ್ಕೆ ರೈತರ ಪ್ರಶ್ನೆಯಾಗಿದೆ. ಜಿಲ್ಲಾಡಳಿತ ಸೂಕ್ತ ಜಾಗವನ್ನು ಗುರುತಿಸಿ ತರಕಾರಿ ಮತ್ತು ಟೊಮೋಟೋ ಜಾಗವನ್ನು ಬೇರೆ ಬೇರೆ ಮಾಡದೇ ಹೋದರೆ ಮಾರುಕಟ್ಟೆ ಪಕ್ಕದ ಆಂದ್ರ ರಾಜ್ಯಕ್ಕೆ ವರ್ಗಾವಣೆಯಾಗುವ ಬೀತಿಯೂ ಎದ್ದು ಕಾಣುತ್ತಿದೆ ಮಾರುಕಟ್ಟೆ ಸ್ಥಳವಕಾಶ ನೀಡದೇ ಇದ್ದರೇ ಇದರ ಲಾಭ ಪಡೆಯಲು ಪಕ್ಕದ ರಾಜ್ಯದವರು ಜಿಲ್ಲೆಯ ತರಕಾರಿ ಬೆಳೆಗಾರರಿಗೆ ಗುಣಮಟ್ಟದ ಮಾರುಕಟ್ಟೆ ಕಲ್ಪಿಸಲು ಮುಂದಾಗುತ್ತಿದ್ದು, ಇದು ನಡೆದರೆ ಸರ್ಕಾರಕ್ಕೆ ಬರುವ ಕೋಟ್ಯಾಂತರ ರೂಪಾಯಿ ಆದಾಯ ಕೈತಪ್ಪುತ್ತದೆಂದು ಅಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ ಜಿಲ್ಲೆಯ ರೈತರಿಗೆ ಸಾಗಾಣಿಕೆ ಮತ್ತು ಮಾರುಕಟ್ಟೆ ದುಬಾರಿಯಾಗಿ ಪರಿಗಣಿಸುತ್ತದೆ. ಟೊಮೋಟೋ ಅವಕ ಹೆಚ್ಚಾಗುವ ಸಾದ್ಯತೆಯಿದ್ದು, ಕೂಡಲೇ ಮಾರುಕಟ್ಟೆಗೆ ಬೇಟಿ ನೀಡಿ ಸಂಬಂದಪಟ್ಟ ಅಧಿಕಾರಿಗಳನ್ನು ಸಭೆ ಕರೆದು ಟೊಮೋಟೋ ಮಾರುಕಟ್ಟೆಗೆ 50 ಎಕರೆ ಜಮೀನನ್ನು ಮಂಜೂರು ಮಾಡಿಕೊಟ್ಟು ಮುಂದೆ ಆಗುವ ಮಾರುಕಟ್ಟೆಯಲ್ಲಿನ ಅನಾಹುತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿದರು ಹಾಗೂ ಮಾರುಕಟ್ಟೆಯಲ್ಲಿ ಸಿ.ಸಿ ಕ್ಯಾಮರ, ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಮತ್ತು ಮಾರುಕಟ್ಟೆಯ ಶುಲ್ಕವನ್ನು ಪಾವತಿಸದ ಮಂಡಿ ಮಾಲೀಕರ ಪರವಾನಗಿಯನ್ನು ರದ್ದು ಮಾಡಬೇಕು ಹಾಗೂ ಎಲ್ಲಾ ಪರವಾನಗಿದಾರರು ಕಡ್ಡಾಯವಾಗಿ ತಮ್ಮ ಪರವಾನಗಿಯ ಸಂಖ್ಯೆಯನ್ನು ಅಂಗಡಿಯ ಮುಂದೆ 10*10 ಅಳತೆಯಲ್ಲಿ ಬರೆಯಿಸಬೇಕು. ಹಾಗೂ ಮಾರುಕಟ್ಟೆಯಲ್ಲಿ ಸ್ವಚ್ಚತೆಗಾಗಿ ಪ್ರತಿ ತಿಂಗಳು 3 ಲಕ್ಷ ಹಣ ಪಡೆದು ಬೇಕಾಬಿಟ್ಟು ಸ್ವಚ್ಚತೆ ಮಾಡುತ್ತಿರುವ ಟೆಂಡರ್‍ದಾರರ ಪರವಾನಗಿಯನ್ನು ರದ್ದುಪಡಿಸಿ, ಯಾವುದೇ ಕಾರಣಕ್ಕೂ ಹಣವನ್ನು ಬಿಡುಗಡೆ ಮಾಡಬಾರದೆಂದು ಒತ್ತಾಯಿಸುವ ಜೊತೆಗೆ ಮಾರುಕಟ್ಟೆಗೆ 15 ದಿನದೊಳಗೆ ಜಮೀನು ಗುರುತಿಸದೇ ಹೋದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆಯನ್ನು ನೀಡುತ್ತಿದ್ದೇವೆ.
ಮನವಿ ಸ್ವೀಕರಿಸಿ ಮಾತನಾಡಿದ ಅದ್ಯಕ್ಷರಾದ ಡಿ.ಎಲ್ ನಾಗರಾಜ್ ಮಾರುಕಟ್ಟೆ ಜಾಗದ ಕೊರತೆಯ ಬಗ್ಗೆ ಮಾನ್ಯ ಜಿಲ್ಲಾದಿಕಾರಿಗಳಿಗೆ ವರದಿಯನ್ನು ನೀಡಿದ್ದೇವೆ ಅದರ ಜೊತೆಗೆ ಚೆಲುವನಹಳ್ಳಿ ವಕ್ಕಲೇರಿಯ ಬಳಿ ಜಾಗವನ್ನು ಗುರುತಿಸಿದ್ದಾರೆ. ಇದು ಅರಣ್ಯ ಇಲಾಖೆಗೆ ಸೇರುವ ಜಾಗವಾಗಿರುವುದರಿಂದ ಕಾನೂನಿನ ಪ್ರಕಾರ ವಶಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಜೊತೆಗೆ ಈಗಾಗಲೇ 2 ಎಕರೆ ಇಪ್ಕೋಟೋಕಿಯಾ ಜಾಗವನ್ನು ತರಕಾರಿಗೆ ನೀಡಿದ್ದೇವೆ ಹಾಗೂ ಮಾರುಕಟ್ಟೆ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಸ್ವಚ್ಚತೆಯನ್ನು ನಿರ್ಲಕ್ಷೆ ಮಾಡುತ್ತಿರುವ ಟೆಂಡರ್‍ದಾರರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಹಾಗೂ 3 ವರ್ಷ ಗಳಿಂದ ಶುಲ್ಕ ಪಾವತಿಸದ ಪರವಾನಗಿ ದಾರರ ವಿರುದ್ದವೂ ಸಹ ಕ್ರಮ ಕೈಗೊಂಡು ಮಾರುಕಟ್ಟೆ ಅಭಿವೃದ್ದಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ಈ ಹೋರಾಟದಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ವಕ್ಕಲೇರಿ ಹನುಮಯ್ಯ, ಮಂಗಸಂದ್ರ ನಾಗೇಶ್, ಆಶ್ವತಪ್ಪ, ನಾರಾಯಣಸ್ವಾಮಿ, ಪುರುಷೋತ್ತಮ್, ಎಂ.ಹೊಸಹಳ್ಳಿ ಚಂದ್ರಪ್ಪ, ಕೆಂಬೋಡಿ ಕೃಷ್ಣೇಗೌಡ, ಪುತ್ತೇರಿ ರಾಜು, ಬೇತಮಂಗಲ ಮಂಜು, ನವೀನ್, ವೆಂಕಟೇಶಪ್ಪ, ಮುಂತಾದವರಿದ್ದರು.