ಜಪ್ತಿ ಮಾಡಿದ 4.5 ಕೆಜಿ ಕಳ್ಳ ಚಿನ್ನವನ್ನು ಪೊಲೀಸರೆ ಕದ್ದರು.

JANANUDI.COM NETWORK


ಬೆಳಗಾವಿ: ಮಂಗಳೂರಿನಿಂದ ಕೊಲ್ಲಾಪುರಕ್ಕೆ ಅಕ್ರಮವಾಗಿ ಸಾಗಣೆಯಾಗುತಿದ್ದ 4.5ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದು ಉನ್ನತ ಅಧಿಕಾರಿಗಳಿಗೆ, ಚಿನ್ನ ಸಿಗಲಿಲ್ಲವೆಂದು ಸುಳ್ಳು ಹೇಳಿ, ಈಗ ಅದೇ ಪೊಲೀಸರ ಮೇಲೆಯೇ ಆ ಚಿನ್ನ ಕದ್ದ ಆರೋಪ ಬಂದಿದ್ದು, ಪ್ರಕರಣ ಸಂಬಂಧ ಹಲವು ಪೊಲೀಸರ ವರ್ಗಾವಣೆ ಮಾಡಲಾಗಿದೆಯೆಂದು ತಿಳಿದು ಬಂದಿದೆ.
ಮಂಗಳೂರಿನಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದೇ ಚಿನ್ನವನ್ನು ಲಪಟಾಯಿಸಿ, ಕಳ್ಳರನ್ನುಹಿಡಿಯುವ ಪೊಲೀಸರೇ ಕಳ್ಳರಾಗಿ ಪೊಲೀಸ್ ಇಲಾಖೆಗೆ ಮಸಿ ಬಳಿದಿದ್ದಾರೆ. ಅಂದು ಉನ್ನತ ಮಟ್ಟ ಪೊಲೀಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಜಪ್ತಿ ಮಾಡಿದ್ದ ಸುಮಾರು 4.5ಕೆಜಿ ಚಿನ್ನ ಅಂದಾಜು 2.5ಕೋಟಿ ರೂ ಮೌಲ್ಯದ ಚಿನ್ನ ನಾಪತ್ತೆಯಾಗಿದೆ, ಈಗ ಈ ಚಿನ್ನವನ್ನು ಪೊಲೀಸರೇ ಕದ್ದದ್ದು ಎಂದು ಆರೋಪ ಎದುರಿಸುತ್ತಿದ್ದಾರೆ.


ಕಾರು ತಪಾಸಣೆ ಕೈಗೊಂಡಿದ್ದರು, ಚಿನ್ನ ಸಿಕ್ಕಿಲ್ಲ!


ಮಂಗಳೂರಿನಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಕಾರಿನಲ್ಲಿ ಅಕ್ರಮವಾಗಿ ಅಪಾರ ಪ್ರಮಾಣದ ಚಿನ್ನ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆ ಪೊಲೀಸರು ಜನವರಿ 9 ರಂದು ಹತ್ತರಗಿ ಟೋಲ್‌ ಗೇಟ್‌ ಬಳಿ ತಪಾಸಣೆ ಕೈಗೊಂಡಿದ್ದರು. ಈ ವೇಳೆ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದರು. ಆದರೆ, ಚಿನ್ನ ಸಿಗಲಿಲ್ಲ ಎಂದು, ಇತರ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಸಂಶಯಾಸ್ಪದ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು ಕಾರನ್ನು ಸ್ವಾಧೀನ ತೆಗೆದುಕೊಂಡಿದ್ದರು.
ನಂತರ ಸ್ಥಳಕ್ಕೆ ಬಂದ ಹಿರಿಯ ಅಧಿಕಾರಿಗಳಿಗೂ ಕಾರಿನಲ್ಲಿ ಬಂಗಾರ ಸಿಕ್ಕಿಲ್ಲ ಎಂದು ಜಪ್ತಿ ಮಾಡಿದ್ದ ಪೊಲೀಸರು ಮಾಹಿತಿ ನೀಡಿದ್ದರು. ಆದರೆ, ನಾಲ್ಕು ತಿಂಗಳ ನಂತರ ನಗರಕ್ಕೆ ಆಗಮಿಸಿರುವ ಸಿಐಡಿ ಪೊಲೀಸರಿಂದ ಇಡೀ
ಪ್ರಕರಣ ಬಯಲಾಗಿದೆ.


ಪೋಲಿಸರಿಗೆ ಕಾರಿನಲ್ಲಿ ಚಿನ್ನ ಎಲ್ಲಿ ಸಿಕ್ಕಿತು! ಆದರೆ ಕಾರಿನಲ್ಲೇ, ಆದರೆ ಎಲ್ಲಿ?


ಮಂಗಳೂರಿನ ತಿಲಕ್‌ ಪೂಜಾರಿ ಎಂಬುವವರು ಕಾರಿನಲ್ಲಿ 4.5 ಕೆಜಿ ಚಿನ್ನವನ್ನು ಮಂಗಳೂರಿನಿಂದ ಬೆಳಗಾವಿ ಮೂಲಕ ಕೊಲ್ಲಾಪುರಕ್ಕೆ ಕಳುಹಿಸುತ್ತಿದ್ದರು. ಈ ಮಾಹಿತಿ ಗೊತ್ತಿದ್ದ ತಿಲಕ್‌ ಪೂಜಾರಿ ಅವರ ಸ್ನೇಹಿತನೇ ಧಾರವಾಡದ ಕಿರಣ ವೀರನಗೌಡರ, ಬೆಳಗಾವಿಯ ಡಿವೈಎಸ್ಪಿಯೊಬ್ಬರಿಗೆ ಮಾಹಿತಿ ನೀಡಿದ್ದ. ಡಿವೈಎಸ್ಪಿ ಯಮಕನಮರಡಿ ಠಾಣೆ ಪೊಲೀಸರ ಮೂಲಕ ವಾಹನ ಜಪ್ತಿ ಮಾಡಿಸಿದ್ದರು. ಜಪ್ತಿ ಸಂದರ್ಭದಲ್ಲಿ ಕಾರಿನಲ್ಲಿ ಯಾವುದೇ ಅಕ್ರಮ ವಸ್ತು ಸಿಕ್ಕಿಲ್ಲ ಎಂದು ಹೇಳಿ, ಆದರೆ, ಮೋಟಾರು ಕಾಯಿದೆ ನಿಯಮ ಉಲ್ಲಂಘಿಸಿ ವಾಹನವನ್ನು ಬದಲಾಯಿಸಿರುವುದು ಕಂಡು ಬಂದಿದೆ ಎಂದು ಪಿಎಸ್‌ಐ ರಮೇಶ್‌ ಪಾಟೀಲ ಮತ್ತು ಸಿಬ್ಬಂದಿ 96 ಕೆಪಿ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಾಹನವನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.


ಕಾರಿನ ಏರ್ ಬ್ಯಾಗ್ ನಲ್ಲಿತ್ತು 4.5ಕೆಜಿ ಚಿನ್ನವಿತ್ತು


ಚಿನ್ನ ಕಳ್ಳ ಸಾಗಣೆ ಮಾಹಿತಿ ಮೇರೆಗೆ ಕಾರಿನ ಶೋಧ ನಡೆಸಿದ್ದ ಪೊಲೀಸರಿಗೆ ಕಾರಿನಲ್ಲಿ ಚಿನ್ನ ಸಿಗಲಿಲ್ಲ. ಆದರೆ ಕಾರಿನ ಇಂಚಿಂಚೂ ಭಾಗವನ್ನೂ ಶೋಧಿಸಿದ್ದ ಪೊಲೀಸರಿಗೆ ಶಾಕ್ ಕಾದಿತ್ತು. ಏಕೆಂದರೆ ಕಾರಿನ ಏರ್ ಬ್ಯಾಗ್ ಕಂಪಾರ್ಟ್ ಮೆಂಟ್ ನಲ್ಲಿ ಚಿನ್ನ ದೊರೆತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕಾರಿನ ಮಾಲೀಕ ಚಿನ್ನವನ್ನು ಕಾರಿನ ಏರ್ ಬ್ಯಾಗ್ ಬಾಕ್ಸ್ ಅಡಗಿಸಿಟ್ಟಿದ್ದ. ಈ ವಿಚಾರ ತಿಳಿದ ಪೊಲೀಸರು ಯಾರಿಗೂ ಹೇಳದೇ ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೇ 4.5 ಕೆಜಿ ಬಂಗಾರವನ್ನು ದೋಚಿದ್ದರು. ಬಳಿಕ ಕಾರಿನಲ್ಲಿ ಏನೂ ದೊರೆತಿಲ್ಲ ಎಂದು ಹೇಳಿ, ಮೋಟಾರು ಕಾಯಿದೆ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಕಾರನ್ನು ಜಪ್ತಿ ಮಾಡಿದ್ದರು. ಬಳಿಕ ಮಾಲೀಕರಿಗೆ ನ್ಯಾಯಾಲಯದಲ್ಲಿ ದಂಡ ಕಟ್ಟಿ ಕಾರನ್ನು ಬಿಡಿಸಿಕೊಳ್ಳುವಂತೆ ಸೂಚಿಸಿದ್ದರು.
ಗುಟ್ಟು ರಟ್ಟಾದುದು ಹೇಗೆ!?

ಮಾಲೀಕ ತಿಲಕ್ ಪೂಜಾರಿ, ಪೊಲೀಸರಿಗೆ ತನ್ನ ಚಿನ್ನ ಸಿಗಲಿಲ್ಲವೆಂದು ಒಂದು ಕಡೆ ಆನಂದ ಪಟ್ಟು ತನ್ನ ಚಿನ್ನ ಮತ್ತು ಕಾರು ವಾಪಸು ಸಿಗುತ್ತದೆಯೆಂದು, ನ್ಯಾಯಾಲಯದಿಂದ ಕಾರು ಬಿಡಿಸಿಕೊಳ್ಳಲು ಕಾರಿನ ಮಾಲೀಕರು ಯತ್ನಿಸಿ ಸಫಲರಾಗಿ, ನಂತರ ಕಾರಿನಲ್ಲಿ ಚಿನ್ನ ಇಲ್ಲದಿರುವುದು ಮಾಲೀಕ ತಿಲಕ್‌ ಅವರಿಗೆ ಗೊತ್ತಾಗಿ, ಚಿನ್ನ ಇತ್ತು ಎಂದು ಅವರು ಯಮಕನಮರಡಿ ಪೊಲೀಸರ ವಿರುದ್ಧ ಐಜಿಪಿಗೆ ದೂರು ನೀಡಿದ್ದಾರೆ. ದೂರು ಪಡೆದುಕೊಂಡ ಐಜಿಪಿ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿದ್ದು. ಅವರು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದರು. ಆದರೆ ತನಿಖೆಯಲ್ಲಿ ಹಿರಿಯ ಅಧಿಕಾರಿಗಳು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಂಶಯ ಬಂದಾಗ, ಇಲಾಖೆ ಗಮನಕ್ಕೆ ತಂದು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.


ಕಿರಣ ವೀರನ ಗೌಡರ ಮತ್ತು ಕೆಲವು ಪೊಲೀಸ್ ಇಲಾಖೆಯವರಿಗೆ ಪಾಲು ಸಿಗದಿದ್ದಕ್ಕೆ ಹಿಂಗಾಯ್ತೇ ಎಂಬ ಅನುಮಾನ ಕಾಡುತ್ತೆ


ಇದೆಲ್ಲಾ ಒದುವಾಗ, ಚಿನ್ನ ಸಾಗಿಸುವಾತ ಐಜಿಪಿಗೆ ದೂರು ನೀಡುವ ಧೈರ್ಯ ತೋರಿಸಿದನ್ನು ಕಾಣುವಾಗ, ಇದು ಅವ್ಯವಾಹಿತವಾಗಿ ನೆಡೆಯುತ್ತಲೇ ಇದ,ಪಾಲು ಸಿಗದೆ ಕ್ರತ್ಯ ನಡೆಸಿದಕ್ಕೆ, ಅಂತಿಮವಾಗಿ, ತನಿಕೆ ಸಿಐಡಿಗೆ ತಲುಪುವಂತ್ತ ಘಟ್ಟಕ್ಕೆ ಮುಟ್ಟಿತೇ ಎಂಬ ಅನುಮಾನ ಬರುತ್ತೆ.