

ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲಾರದ ಡಾ|| ಅಬ್ದುಲ್ ಕರೀಂ, ಶ್ರೀಮತಿ ಕ್ರಿಪಾ ಎಂ. ಎಂ ( ಅಸಿಸ್ಟೆಂಟ್ ಡೈರೆಕ್ಟರ್ ಫೀಲ್ಡ್ ಪ್ರೋಗ್ರಾಮ್ ನಮ್ಮ ಭೂಮಿ )ಮತ್ತು ನಮ್ಮಭೂಮಿಯ ಶ್ರೀ ಸುರೇಶ, ಶ್ರೀಮತಿ ಆಶಾ ಅವರು ಉಪಸ್ಥಿತರಿದ್ದರು .ಎಂ. ಬಿ. ಎ ವಿಭಾಗದ ಮುಖ್ಯಸ್ಥೆ ಡಾ|| ಸುಚಿತ್ರ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮಹಿಳಾ ಸಬಲೀಕರಣ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು ಮತ್ತು ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸಮಾನ ಹಕ್ಕು ಇರಬೇಕೆಂದು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಎಂ ಬಿ ಎ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಗೌತಮಿ ನಿರೂಪಣೆ ಮತ್ತು ವಂದನಾರ್ಪಣೆಮಾಡಿದರು.