

ಶ್ರೀನಿವಾಸಪುರ : ಹಬ್ಬಗಳನ್ನು ಖುಸಿಯಾಗಿರಲು ಆಚರಣೆ ಮಾಡಬೇಕು ವಿನಃ, ಸ್ವಾರ್ಥದಿಂದ ಸಮಾಜದ ಸ್ವಾಸ್ಥ್ಯ ಕಡೆಸುವಂತೆ ಇರಬಾರದು. ಅಂತವರಿಂದ ಎಚ್ಚರಿಕೆಯಿಂದ ಇರಬೇಕು. ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮುಖಾಂತರ ಮೊತ್ತೊಬ್ಬರಿಗೆ ಮಾದರಿಯಾಗಿರಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಮಹ್ಮದ್ ಗೊರವನಕೊಳ್ಳ ಅಭಿಪ್ರಾಯಪಟ್ಟರು.
ಪಟ್ಟಣ ಪೊಲೀಸ್ಠಾಣೆಯಲ್ಲಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮತನಾಡಿದರು.
ನೀವು ಮಾಡುವ ಕೆಲಸ ಕಾರ್ಯಗಳ ಬಗ್ಗೆ ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಧಾರ್ಮಿಕ ಕೆಲಸ ಕಾರ್ಯಗಳಿಗೆ ದಕ್ಕೆ ಆಗದಂತೆ ನಡೆಯದಂತೆ ಎಚ್ಚರವಹಿಸಿ ಎಂದು ಸಲಹೆ ನೀಡಿದರು.
ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ. ಪೊಲೀಸ್ ಇಲಾಖೆ ಎಲ್ಲಾ ಸಮಾಜದೊಂದಿಗೆ ಉತ್ತಮ ಬಾಂದವ್ಯವನ್ನು ಹೊಂದಿದೆ, ಒಳ್ಳೇಯ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರು ಇಲಾಖೆಗೆ ಸಹಕಾರವನ್ನು ನೀಡುವಂತೆ ಮನವಿ ಮಾಡಿದರು. ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಇಲಾಖೆಯ ನಿಯಮಗಳನ್ನು ಪಾಲಸಿ ಪೊಲೀಸ್ರೊಂದಿಗೆ ಸಹಕರಿಸಬೇಕು ಎಂದರು.
ಪಿಎಸ್ಐ ಜಯರಾಮ್, ಸಿಬ್ಬಂದಿ ರಾಜೇಶ್, ಒಕ್ಕಲಿಗರ ಸಂಘ್ ತಾಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಪ್ರಭಾಕರಗೌಡ, ರಾಮಾಂಜಮ್ಮ, ಚಲ್ದಿಗಾನಹಳ್ಳಿ ಈರಪ್ಪ, ಮುನಿವೆಂಕಟಪ್ಪ, ನಾಗದೇನಹಳ್ಳಿ ಶ್ರೀನಿವಾಸ್, ಸಾಧಿಕ್ಅಹ್ಮದ್, ಮಹಬೂಬ್ ಪಾಷ, ಲಕ್ಕಿ, ಫಾರೂಕ್ಪಾಷ, ಅಬ್ದುಲ್ಲಾ, ಕಾರ್ತಿಕ್, ಹೊಗಳಗೆರೆ ಆಂಜಿ ಇದ್ದರು.