

ಕೋಲಾರ,ಜೂ.30: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1 ರಂದು ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 10-00 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಿದ್ದಾರೆ. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲ್ಯೂ.ಜೆ ಖಜಾಂಚಿ ಎಂ.ವಾಸುದೇವಹೊಳ್ಳ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು ಮುಖ್ಯ ಅತಿಥಿಗಳಾಗಿರುವರು.
ಇದೇ ಸಂದರ್ಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯ ಹಿರಿಯ ಪತ್ರಕರ್ತರ ನೆನಪಿನಲ್ಲಿ ಪ್ರತಿಭಾವಂತ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು.
ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ಪತ್ರಕರ್ತರು ಆಗಮಿಸಲು ಸಂಘದ ಪ್ರಕಟಣೆ ಕೋರಿದೆ.
ಅಂದು ಮಧ್ಯಾಹ್ನ 2-00 ಗಂಟೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಲಾಗಿದೆ.
ಸಂಘದ ಎಲ್ಲಾ ಸದಸ್ಯರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಕರ್ತರಿಗೆ ಆರೋಗ್ಯ ತಪಾಸಣೆ:
ಅಂದು ಬೆಳಗ್ಗೆ 8-30 ರಿಂದ 10-30 ರವರೆಗೆ ವಂಶೋದಯ ಅಡ್ವಾನ್ಸ್ಡ್ ಮಲ್ಟಿಸ್ಪಷಾಲಿಟಿ ಆಸ್ಪತ್ರೆ ವತಿಯಿಂದ ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ನಗರದ ಪತ್ರಕರ್ತರ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ನರಶಸ್ತ್ರ ಚಿಕಿತ್ಸಕರು ಹಾಗೂ ಮೂಳೆ ತಜ್ಞರಿಂದ ಉಚಿತ ಸಮಾಲೋಚನೆ ಏರ್ಪಡಿಸಲಾಗಿದೆ.

2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳ ವಿವರ:
ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ: ಮಾಲೂರಿನ ವಿಜಯವಾಣಿ ದಿನಪತ್ರಿಕೆಯ ತಾಲೂಕು ವರದಿಗಾರ ಎಂ.ವಿ.ರವೀಂದ್ರ, ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ: ಕೋಲಾರದ ವಿಜಯಕರ್ನಾಟಕ ದಿನಪತ್ರಿಕೆಯ ವರದಿಗಾರ ಕೆ.ಎನ್.ರಾಘವೇಂದ್ರಪ್ರಸಾದ್, ಬಿ.ವಿ.ನರಸಿಂಹಮೂರ್ತಿ ಅವರ ನೆನಪಿನಲ್ಲಿ: ಕೋಲಾರದ ಕನ್ನಡಮಿತ್ರ ದಿನಪತ್ರಿಕೆಯ ಸಂಪಾದಕ ಕೋ.ನಾ.ಪ್ರಭಾಕರ್, ಕೆ.ಪ್ರಹ್ಲಾದರಾವ್ ಅವರ ನೆನಪಿನಲ್ಲಿ: ಕೋಲಾರದ ಅಧಿನಾಯಕ ದಿನಪತ್ರಿಕೆಯ ಸಂಪಾದಕಿ ಎಂ.ವರಲಕ್ಷ್ಮಿ, ಬಿ.ಆರ್ಮುಗಂ ನೆನಪಿನಲ್ಲಿ: ಕೆ.ಜಿ.ಎಫ್ ಅಂತರಗಂಗೆ ದಿನಪತ್ರಿಕೆಯ ತಾಲೂಕು ವರದಿಗಾರ ಕೆ.ಸುದರ್ಶನ್, ಎಂ.ಮಲ್ಲೇಶ್ ನೆನಪಿನಲ್ಲಿ: ಬಂಗಾರಪೇಟೆಯ ಡೈಲಿ ಸಾಲಾರ್ ದಿನಪತ್ರಿಕೆಯ ತಾಲೂಕು ವರದಿಗಾರ ಮೊಹಮ್ಮದ್ ಏಸಾನುಲ್ಲಾ, ಬಿ.ಎನ್.ಗುರುಪ್ರಸಾದ್ ನೆನಪಿನಲ್ಲಿ: ಕೋಲಾರದ ಟಿ.ವಿ-9 ಕ್ಯಾಮರಾಮೆನ್ ಕೆ.ಜಿ.ಮಂಜುನಾಥ್, ಹೆಚ್.ಎನ್.ಸೋಮಶೇಖರಗೌಡ ನೆನಪಿನಲ್ಲಿ: ಶ್ರೀನಿವಾಸಪುರದ ಉದಯಮಿತ್ರ ದಿನಪತ್ರಿಕೆಯ ತಾಲೂಕು ವರದಿಗಾರ ಹೆಚ್.ರಮೇಶ್, ಸಿ.ಎಂ.ರಂಗಾರೆಡ್ಡಿ ನೆನಪಿನಲ್ಲಿ: ಮುಳಬಾಗಿಲಿನ ಕೋಲಾರಶಕ್ತಿ ದಿನಪತ್ರಿಕೆಯ ತಾಲೂಕು ವರದಿಗಾರ ವಿ.ಶಂಕರಪ್ಪ, ವಿ.ಎಂ.ನಾಗಪ್ಪ ಅವರ ನೆನಪಿನಲ್ಲಿ: ಕೋಲಾರದ ನ್ಯೂಸ್ ಅಲರ್ಟ್ ಟಿ.ವಿ ಜಿಲ್ಲಾ ವರದಿಗಾರ ವಿ.ಈಶ್ವರ್ ಅವರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

