

ಶ್ರೀನಿವಾಸಪುರ : ಈ ಭಾಗದಲ್ಲಿ ಸಂಭವಿಸಿದ ವಿವಿಧ ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಸಾವನ್ನುತ್ತಿರುವುದು ಆತಂಕಕಾರಿ ಇಂತಹ ದುರ್ಘಟನೆಗಳು ತಪ್ಪಿಸುವ ಉದ್ದೇಶದಿಂದ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಸಾರ್ವಜನಿಕರಲ್ಲಿ ಎಂದು ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ಮನವಿ ಮಾಡಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಸೋಮವಾರ ಪೊಲೀಸ್ ಇಲಾಖೆ ವತಿಯಿಂದ ಹೆಲ್ಮೆಟ್ ಹಾಕದೆ ಇರುವ ಗಾಡಿಗಳನ್ನು ಹಿಡಿದು ಅರಿವು ಮೂಡಿಸಿದರು.
ನಮ್ಮ ಜಿಲ್ಲಾ ರಕ್ಷಣಾಧಿಕಾರಿಗಳಾದ ಬಿ.ನಿಖಿಲ್ರವರು ಕಳೆದ ಒಂದುವಾರದಿಂದಲೂ ಸಹ ಅನೇಕ ಬಾರಿ ಪ್ರತಿಕೆಗಳ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮಗೆ ನೀಡುವ ಸೂಚನೆ ಮೇರೆಗೆ ಇಂದು ಮತ್ತು ನಾಳೆ ಎರಡು ದಿನ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಲಾಗುವುದು. ಅದರೂ ಸಹ ಹೆಲ್ಮೆಟ್ ತಂದು ಅದರೊಂದಿಗೆ ಹೆಲ್ಮೆಟ್ ಖರೀದಿಸಿರುವ ರಸೀತಿಯನ್ನು ತೋರಿಸಿದರೆ ಗಾಡಿಯನ್ನ ತೆಗೆದುಕೊಂಡು ಹೋಗಬಹುದಾಗಿದೆ ನಾಳೆದ್ದು, ಹೆಲ್ಮೆಟ್ ಧರಿಸದೆ ಬರುವ ದ್ವಿಚಕ್ರವಾಹನ ಸವಾರರಿಗೆ ಇಲಾಖೆ ಆದೇಶದಂತೆ ದಂಡ ವಿಧಿಸಲಾಗುವುದು ದಂಡ ಕಟ್ಟಿದರೂ ಸಹ ಹೆಲ್ಮೆಟ್ ತಂದು ತಮ್ಮ ಗಾಡಿಗಳನ್ನು ತೆಗೆದುಕೊಂಡು ಹೋಗಬಹುದಾಗಿದೆ ಎಂದು ಸೂಚಿಸಿದರು.
ಈಗಾಗಲೇ ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್ ಡಿಸೆಂಬರ್ 1ರಿಂದ ಹೆಲ್ಮೆಟ್ ಕಡ್ಡಾಯ ಜಾರಿಗೊಳಿಸುವಂತೆ ಕಳೆದ ತಿಂಗಳಿನಿಂದ ಜಿಲ್ಲೆಯ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜಾಗೃತಿ ಸಭೆ ಹಾಗೂ ಜಾಥಾಗಳನ್ನು ನಡಿಸಿದರು ಎಚ್ಚೆತ್ತುಕೊಳ್ಳದೇ ಇರುವುದರಿಂದ ಈ ಒಂದು ಆದೇಶವನ್ನು ಜಾರಿಗೊಳಿಸಲಾಗಿದ್ದು, ದ್ವಿಚಕ್ರವಾಹನ ಸವಾರರು ಸಹಕರಿಸಬೇಕು ಎಂದು ತಿಳಿಸಿದರು.

