

ಕೋಟ: ಯೇಸು ಕ್ರಿಸ್ತರ ಜೆರುಸಲೇಮ್ ಪುರ ಪ್ರವೇಶದ ಸ್ಮರಣೆಯಾಗಿ ಆಚರಿಸುವ ಗರಿಗಳ ಭಾನುವಾರವನ್ನು ಮಾರ್ಚ್ ೨೯ ರಂದು ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಅತಿಥಿ ಧರ್ಮಗುರುಗಳಾಗಿ ಆಗಮಿಸಿದ ಉಡುಪಿ ಧರ್ಮ ಪ್ರಾಂತ್ಯದ ಯುವ ಆಯೋಗದ ನಿರ್ದೇಶಕರಾದ ವಂದನೀಯ ಸ್ಟೀವನ್ ಫೆರ್ನಾಂಡಿಸ್ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ಇಗರ್ಜಿಯ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಬಲಿಪೂಜೆಯುಲ್ಲಿ ಸಹಕರಿಸಿದರು.






























