ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ  ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಒತ್ತಾಯ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ 

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ  ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಒತ್ತಾಯ

ಕೋಲಾರ.ಜೂ,6: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ವರ್ಗದವರಿಗೆ ಕರ್ನಾಟಕ ರಾಜ್ಯದಸಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಏ. 3% ರಿಂದ ಶೇ. 7.5ಕ್ಕೆ ಹೆಚ್ಚಿಸಬೇಕು. ಕುಲಶಾಸ್ತ್ರೀಯ ಅಧ್ಯಯನ ಸಮಿತಿಯ ಹೆಸರಿನಲ್ಲಿ ರಚಿಸಿರುವ ಸಮಿತಿಯನ್ನು ಈ ಕೂಡಲೇ ರದ್ದುಗೊಳಿಸಿ ಅದಕ್ಕೆ ನೀಡಿರುವ ಅನುದಾನವನ್ನು ವಾಪಸ್ಸು ಪಡೆಯಬೇಕು, ಕೆಲವು ಮುಂದುವರೆದ ವರ್ಗಗಳು ಪರಿಶಿಷ್ಟ ವರ್ಗದ ಹೆಸರನ್ನು ಬಳಸಿಕೊಂಡು ಪ್ರಧಿಕಾರದ ತಹಸೀಲ್ದಾರ್‍ಗಳಿಂದ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಅಸಂವಿಧಾನಾತ್ಮಕವಾಗಿ ಪರಿಶಿಷ್ಟ ವರ್ಗದವರಿಗೆ ಸಿಗಬೇಕಾದ ಸೌಲತ್ತುಗಳನ್ನು ಪಡೆಯುತ್ತಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಗಮನಹರಿಸಿ ಅರ್ಹರಲ್ಲದವರಿಗೆ ಪರಿಶಿಷ್ಟ ವರ್ಗದ ಪ್ರಮಾಣ ಪತ್ರ ನೀಡುವುದನ್ನು ತಡೆಗಟ್ಟಬೇಕು, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಒಟ್ಟು 50 ಬುಡಕಟ್ಟು ಗುಂಪುಗಳನ್ನು ಪರಿಶಿಷ್ಟ ವರ್ಗವೆಂದು ಅಧಿಸೂಚಿಸಲಾಗಿದೆ. ಪ್ರತಿ ಬುಡಕಟ್ಟು ತನ್ನದೇ ಆದ ಸಂಸ್ಕøತಿ, ಸಂಪ್ರದಾಯ ಆಚರಣೆಗಳನ್ನು ರೂಡಿಸಿಕೊಂಡಿದ್ದು, ಬಸಲಾವಣೆ ಸಂಧಿಗ್ದತೆಯಲ್ಲಿದೆ. ಇವರ ಮೂಲ ಸಮಸ್ಯೆಗಳಾದ ವಸತಿ, ಕೃಷಿ, ಭೂಮಿ, ಶಿಕ್ಷಣ, ಆರೋಗ್ಯ, ಉದ್ಯೋಗ, ಪೌಷ್ಟಿಕತೆ ಇತ್ಯಾದಿಗಳ ಬಗ್ಗೆ ಗಮನಹರಿಸಿ ಮುಕ್ಯ ವಾಹಿನಿಯತ್ತ ತರಲು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಾಗಿರುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ವರ್ಗದವರ ಅನೇಕ ವರ್ಷಗಳ ಬೇಡಿಕೆಯಾದ ಪ್ರತ್ಯೇಖ ಪರಿಶಿಷ್ಟ ವರ್ಗದ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ವಾಲ್ಮೀಕಿ ಭವನದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. 2017-18 ಮತ್ತು 2018-19ನೇ ಸಾಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಕೋಲಾರ ಜಿಲ್ಲಾದ್ಯಂತ ತಾಲೂಕುವಾರು ಮತ್ತು ಹೋಬಳಿವಾರು ವಾಲ್ಮೀಕಿ ಭವನಗಳನ್ನು ನಿರ್ಮಾಣ ಮಾಡಲು ಕ್ರಮ ವಹಿಸಿ ಸೂಕ್ತ ಭೂಮಿಯನ್ನು ಒದಗಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಯುವಶಕ್ತಿ ಎನ್.ಅಂಬರೀಶ್, ಮಾಲೂರು ಎನ್.ವೆಂಕಟರಾಮ್, ಕುಡುವನಹಳ್ಳಿ ಆನಂದ್, ಮಂಗಸಂದ್ರ ತಿಮ್ಮಣ್ಣ, ವಕ್ಕಲೇರಿ ನಾಗೇಂದ್ರ, ನರಸಿಂಹಯ್ಯ, ಗರುಡನಹಳ್ಳಿ ಬಾಬು, ಬೈರಂಡಹಳ್ಳಿ ನಾಗೇಶ್, ತೊಟ್ಲಿ ಮಂಜು, ಸುಬ್ಬರಾಯಪ್ಪ, ಟಿ.ಕೆ ನಾಗರಾಜ, ಈರಪ್ಪ, ಕೃಷ್ಣಪ್ಪ, ವಕೀಲ ನಾಗರಾಜ್, ರಾಮಸಂದ್ರ ಈರಣ್ಣ, ಮಡೇರಹಳ್ಳಿ ಸೋಮು, ಕೆ.ವೆಂಕಟಾಚಲಪತಿ ಇನ್ನಿತರರು ಉಪಸ್ಥಿತರಿದ್ದರು.