ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ‌

JANANUDI.COM NETWORK

 

 

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ‌

 

“ಸಮರ ಮತ್ತು ಶಾಂತಿಸಮಯಗಳೆರಡರಲ್ಲೂ ಜನರ ತುರ್ತು ಅಗತ್ಯಗಳಿಗೆ ಸ್ಪಂದಿಸುವ ರೆಡ್ ಕ್ರಾಸ್ ಸಂಸ್ಥೆಯು ಜನಪರ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು, ಘಟಕವು ಎಲ್ಲ ಸ್ಥಳೀಯ ಮಟ್ಟದಲ್ಲಿ  ಪರಿಣಾಮಕಾರಿಯಾಗಿ ಕಾರ್ಯಪೃವೃತ್ತರಾಗಿರುವುದು ಸಂತಸದಾಯಕ ”  ಎಂದು ಐ.ಆರ್
ಸಿ. ಎಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಶ್ರೀ. ಜಯಕರ ಶೆಟ್ಟಿಯವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯುನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಕರೆ‌ನೀಡಿದರು. ಇನ್ನೋರ್ವ ಅತಿಥಿ ಜೆ. ಆರ್. ಸಿ. ಕುಂದಾಪುರ ಘಟಕದ ಕಾರ್ಯ ನಿರ್ವಾಹಕ ಅಧಿಕಾರಿಯಾದ ಶ್ರೀ ಎ. ಎಮ್. ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ತತ್ವಗಳ ಪ್ರತಿಜ್ಞಾವಿಧಿ ಬೊಧಿಸಿದರು. ಎಮ್ ಸಿ  ಸದಸ್ಯರಾದ ಶ್ರೀ‌ ಗಣೇಶ್ ಆಚಾರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ‌ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ನಾಗರತ್ನ ಇವರು ಪ್ರಾರ್ಥನಾ ಗೀತೆ ಹಾಡಿದರು. ವಾಣಿಜ್ಯ ,ಉಪನ್ಯಾಸಕಿ ಪ್ರೆಸಿಲ್ಲಾ ರವರು ಧನ್ಯವಾದ ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಡಿ. ಬಿ. ಕೃಷ್ಣಮೂರ್ತಿಯವರು ಕಾರ್ಯಕ್ರಮ ನಿರ್ವಹಿಸಿದರು.