ಶ್ರೀನಿವಾಸಪುರ, ಫಲಾನುಭವಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು :  ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ವಿ.ಶ್ರೀನಿವಾಸ್‌.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ, ಫಲಾನುಭವಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು :  ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ವಿ.ಶ್ರೀನಿವಾಸ್‌.
  ಪಟ್ಟಣದ ಸಣ್ಣ ಕೈಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ ನಿಧಿಯಿಂದ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿ, ಮುಖ್ಯವಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪೂರಕವಾದ ತರಬೇತಿ ಪಡೆದುಕೊಳ್ಳಬೇಕು. ಅದಕ್ಕೆ ಅಗತ್ಯವಾದ ಉಪಕರಣಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.
  ಸಮಾರಂಭದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರ, ಗಾರೆ ಕೆಲಸ ಸೇರಿದಂತೆ ಹಲವು ವೃತ್ತಿಗಳಿಗೆ ಅಗತ್ಯವಾದ ಯಂತ್ರಗಳು ಹಾಗೂ ಉಪಕರಣಗಳನ್ನು ವಿತರಿಸಲಾಯಿತು.
  ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಶ್‌ರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಕ್ಷುಸಾಬ್‌್, ಮುಖಂಡರಾದ ಶ್ರೀನಿವಾಸ್‌, ಜಗದೀಶ್‌, ರಾಜು ಇದ್ದರು.