ಶ್ರೀನಿವಾಸಪುರ ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ 

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

 

 

 

ಶ್ರೀನಿವಾಸಪುರ ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ  

 

 

ಶ್ರೀನಿವಾಸಪುರ: ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಸಹಾಯ ಸಂಘದ ಸದಸ್ಯರು ಸಸಿಗಳನ್ನು ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಅಗತ್ಯ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು. ಕೊರೊನಾ ವೈರಾಣು ತಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಮಾಸ್ಕ್‌, ಸ್ಯಾನಿಟೈಸರ್ ಬಳಕೆ ಮಾಡುವ ಬಗ್ಗೆ ಪ್ರತ್ಯಕ್ಷಿತೆ ಏರ್ಪಡಿಸಲಾಗಿತ್ತು.
ವಲಯ ಮೇಲ್ವಿಚಾರಕಿ ಜ್ಯೋತಿ, ಕಿರಿಯ ಆರೋಗ್ಯ ಸಹಾಯಕಿಯರಾದ ಆಂಜನಮ್ಮ, ಪದ್ಮ, ಶಿಕ್ಷಕಿ ಲೀಲಾವತಮ್ಮ ಇದ್ದರು.