ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಒಂದು ತಿಂಗಳೂಳಗೆ ಹಿಂದುರುಗಿಸಿ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

 

 

ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಒಂದು ತಿಂಗಳೂಳಗೆ ಹಿಂದುರುಗಿಸಿ

 

 

 

 

ಕೋಲಾರ, ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾಲಯಗಳ ಸಂಸ್ಥೆಯ ಅಧಿಕಾರಿಗಳು, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತೀರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ.

ಬಿ. ಪಿ. ಎಲ್. ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು ಇದನ್ನು ಸರ್ಕಾರಿ ನೌಕರರು ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಸರ್ಕಾರಿ ಅಧಿಕಾರಿ, ನೌಕರರು ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ.

ಒಂದು ವೇಳೆ ಯಾವುದೇ ಸರ್ಕಾರಿ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾಲಯಗಳ ಸಂಸ್ಥೆಯ ಅಧಿಕಾರಿಗಳು, ನೌಕರ ಅಥವಾ ಆತನ ಆಕೆಯ ಅವಲಂಬಿತ ಕುಟುಂಬ ಸದಸ್ಯ ಈಗಾಗಲೇ ಬಿ. ಪಿ. ಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ, ಈ ಸುತ್ತೋಲೆ ಹೊರಡಿಸಿದ ಒಂದು ತಿಂಗಳೊಳಗಾಗಿ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂತಿರುಗಿಸಿ ಅಮಾನ್ಯ ಅಥವಾ ರದ್ದುಪಡಿಸಿಕೊಳ್ಳತಕ್ಕದ್ದು.

ಒಂದು ವೇಳೆ, ಒಂದು ತಿಂಗಳ ನಂತರವೂ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾಲಯಗಳ ಸಂಸ್ಥೆಯ ಅಧಿಕಾರಿಗಳು, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಬಿ. ಪಿ. ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ, ದೂರುಗಳು ಸ್ವೀಕೃತವಾದರೆ ಅಂತಹ ಅಧಿಕಾರಿ, ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಮತ್ತು ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ ಎಂ ವಿಜಯ್ ಭಾಸ್ಕರ್ ಅವರು ಆದೇಶಿಸಿದ್ದಾರೆ.