ಕೋಟೇಶ್ವರ ಗಾಣಿಗ ಯುವ ಸಂಘಟನೆ: ವರಮಹಾಲಕ್ಷ್ಮೀ ಪೂಜೆ

JANANUDI.COM NETWORK

ಬೀಜಾಡಿ: ಜು.31 ಸರಳವಾದ ವರಮಹಾಲಕ್ಷ್ಮೀ ಪೂಜೆಯ ಜೊತೆಗೆ ಸಾಧಕರನ್ನು ಗುರುತಿಸಿರುವುದು ಹೆಮ್ಮೆಯಾಗಿದೆ.ವರಮಹಾಲಕ್ಷ್ಮೀ ಎಲ್ಲರಿಗೂ ಸುಖ,ಶಾಂತಿ,ನೆಮ್ಮದಿಯನ್ನು ಕೊಟ್ಟು, ಸಮಾಜವನ್ನು ಒಗ್ಗಟ್ಟಿನಿಂದ ಅಭಿವೃದ್ಥಿ ಪಥದಂತ ತೆಗೆದುಕೊಂಡು ಹೋಗುವ ಶಕ್ತಿ ಕರುಣಿಸಲಿ ಎಂದು ಕೋಟೇಶ್ವರ ಗಾಣಿಗ ಯುವ ಸಂಘಟನೆಯ ಅಧ್ಯಕ್ಷ ಅಭಿಲಾಷ್ ಬಿ.ಎ ಹೇಳಿದರು.
ಅವರು ಶುಕ್ರವಾರ ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕ,ಗಾಣಿಗ ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಆಶ್ರಯದಲ್ಲಿ ಬೀಜಾಡಿ ಮಿತ್ರ ಸೌಧದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿ ಲಾವಣ್ಯ, ಕರೋನಾ ವಾರಿಯರ್ಸ್‍ಗಳಾದ ಸವಿತಾ ಗಾಣಿಗ, ನಾಗರತ್ನ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಗೌರವಾಧ್ಯಕ್ಷ ಮಂಜುನಾಥ ಹೊದ್ರೋಳಿ, ಕಾರ್ಯದರ್ಶಿ ಉದಯ ಗಾಣಿಗ, ಗಾಣಿಗ ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಗೌರವಾಧ್ಯಕ್ಷೆ ಕಲಾವತಿ ಅಚ್ಯುತ್, ಕಾರ್ಯದರ್ಶಿ ವಿಜಯ ಕೃಷ್ಣಮೂರ್ತಿ, ಕೋಶಾಧಿಕಾರಿ ಕಲ್ಯಾಣಿ ಶಂಕರ್ ಮೊದಲಾದವರು ಉಪಸ್ಥಿತರಿದ್ದರು. ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಸ್ಥಾಪಕಾಧ್ಯಕ್ಷ ನಾಗರಾಜ ಬಿ.ಜಿ,ಮಾಜಿ ಅಧ್ಯಕ್ಷ ಸುಧಾಕರ ಗಾಣಿಗ ಅತಿಥಿಗಳನ್ನು ಗೌರವಿಸಿದ್ದರು
ಗಾಣಿಗ ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷೆ ಪ್ರಭಾವತಿ ಗಾಣಿಗ ಸ್ವಾಗತಿಸಿದರು. ಮಾತೃ ಸಂಘದ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು