ಯಲ್ದೂರು ಗ್ರಾಮದ ಕೆರೆಯಲ್ಲಿ ಶನಿವಾರ ಅಕ್ರಮವಾಗಿ ಮಣ್ಣು ತೆಗೆದು ಸಾಗಿಸುತ್ತಿದ್ದ 2 ಟ್ರ್ಯಾಕ್ಟರ್, 1500ಟನ್‌ ಮಣ್ಣು ಹಾಗೂ 2 ಜೆಸಿಬಿ ಯಂತ್ರಗಳನ್ನು ತಹಶೀಲ್ದಾರ್ ಎಸ್‌.ಎಂ.ಶ್ರೀನಿವಾಸ್‌ ವಶಪಡಿಸಿಕೊಂಡಿದ್ದಾರೆ.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದ ಕೆರೆಯಲ್ಲಿ ಶನಿವಾರ ಅಕ್ರಮವಾಗಿ ಮಣ್ಣು ತೆಗೆದು ಸಾಗಿಸುತ್ತಿದ್ದ 2 ಟ್ರ್ಯಾಕ್ಟರ್, 1500ಟನ್‌ ಮಣ್ಣು ಹಾಗೂ 2 ಜೆಸಿಬಿ ಯಂತ್ರಗಳನ್ನು ತಹಶೀಲ್ದಾರ್ ಎಸ್‌.ಎಂ.ಶ್ರೀನಿವಾಸ್‌ ವಶಪಡಿಸಿಕೊಂಡಿದ್ದಾರೆ.
  ಕೆಲವು ವ್ಯಕ್ತಿಗಳು ಕೆರೆಯಲ್ಲಿನ ಬೆಲೆಬಾಳುವ ಮಣ್ಣು ತೆಗೆದು ಬೇರೆಡೆಗೆ ಸಾಗಿಸುತ್ತಿರುವುದಾಗಿ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್‌ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಮಣ್ಣು ತೆಗೆದು ಸಾಗಿಸುತ್ತಿದ್ದ ಯಂತ್ರಗಳನ್ನು ವಶಕ್ಕೆ ಪಡೆದರು.  ಉಪ ತಹಶೀಲ್ದಾರ್‌ ಚಂದ್ರಪ್ಪ, ಕಂದಾಯ ನಿರೀಕ್ಷಕ ಸಿ.ಎನ್‌್.ವಿನೋದ್ ಇದ್ದರು.