ನೂತನ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರಿಗೆ ಸರ್ಕಾರಿ ನೌಕರರ ಸಂಘದಿಂದ ಆತ್ಮೀಯ ಸ್ವಾಗತ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ:- ಕೋಲಾರದ ನೂತನ ಜಿಲ್ಲಾಧಿಕಾರಿಯಾಗಿ ಭಾನುವಾರ ಮಧ್ಯಾಹ್ನ ಅಧಿಕಾರ ವಹಿಸಿಕೊಂಡಿದ್ದ ಡಾ.ಆರ್.ಸೆಲ್ವಮಣಿ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಮತ್ತು ಇತರೆ ಪದಾಧಿಕಾರಿಗಳು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಜಿಲ್ಲಾ ನೌಕರರ ಸಂಘದ ಸಂಪ್ರದಾಯದಂತೆ ಜಿಲ್ಲಾಧಿಕಾರಿಗಳನ್ನು ನೌಕರರ ಭವನಕ್ಕೆ ಆಹ್ವಾನಿಸಿದ ಸುರೇಶ್‍ಬಾಬು, ಜಿಲ್ಲೆಯ ಜನತೆಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವ ಕಾರ್ಯದಲ್ಲಿ ತಮ್ಮ ಮಾರ್ಗದರ್ಶನದಂತೆ ಕೆಲಸ ಮಾಡುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲೆಯ ಜನರ ಕೆಲಸ ಮಾಡಲು ಸರ್ಕಾರ ನಮ್ಮನ್ನು ನೇಮಿಸಿದೆ, ಈ ಕಾರ್ಯದಲ್ಲಿ ಎಲ್ಲಾ ನೌಕರರ ಸಹಕಾರ ಅಗತ್ಯವಿದೆ ಎಂದು ತಿಳಿಸಿ, ನೌಕರರ ಸಮಸ್ಯೆಗಳಿದ್ದರೆ ತಿಳಿಸಿ ಜಿಲ್ಲಾಡಳಿತದ ಕಡೆಯಿಂದಲೂ ಸಹಕಾರದ ಭರವಸೆ ನೀಡಿದರು.
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗೆ ತಲುಪಿಸುವ ಕಾರ್ಯದಲ್ಲಿ ಯಾವುದೇ ರಾಜಿ ಬೇಡ, ಜಿಲ್ಲಾಡಳಿತ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿ, ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವ ಮೂಲಕ ಕಚೇರಿಗಳಿಗೆ ಅಲೆದಾಟ ತಪ್ಪಿಸೋಣ ಸಹಕಾರದಿಂದ ಜನರ ಕೆಲಸ ಮಾಡೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೌಕರರ ಗೌರವಾಧ್ಯಕ್ಷ ರವಿಚಂದ್ರ, ಸಂಘದ ಖಜಾಂಚಿ ವಿಜಯ್, ಮಾಜಿ ಅಧ್ಯಕ್ಷ ಕೆ.ಎನ್.ಮಂಜುನಾಥ್, ಹಾಲಿ ಉಪಾಧ್ಯಕ್ಷರಾದ ಶ್ರೀನಿವಾಸರೆಡ್ಡಿ, ಪುರುಷೋತ್ತಮ್, ಕ್ರೀಡಾ,ಸಾಂಸ್ಕøತಿಕ ಸಂಘದ ಅಧ್ಯಕ್ಷ ಎಂ.ನಾಗರಾಜ್, ಕಾರ್ಯದರ್ಶಿ ಡಾ.ಇಂಚರ ನಾರಾಯಣಸ್ವಾಮಿ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಗೌತಮ್, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಅಜಯ್, ಅರಣ್ಯ ಇಲಾಖೆಯ ಮಂಜುನಾಥ್, ಸಂಘದ ಸಂದೀಪ್, ನಂಜುಂಡಪ್ಪ,ಸುನೀಲ್, ನಗರಾಭಿವೃದ್ದಿ ಯೋಜನಾ ಕೋಶದ ಚೌಡೇಗೌಡ, ಗಾಯತ್ರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಮಾರುತಿ ಮತ್ತಿತರರಿದ್ದರು
.