ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಕ್ಕೆ ನೂತನ ಸಾರಥಿ

JANANUDI.COM NETWORK

ಉಪಾಧ್ಯಕ್ಷರಾಗಿ ಕುಂದಾಪುರದ ವಿನಯ್ ಪಾಯ್ಸ್ ಆಯ್ಕೆ

ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಉಪಾಧ್ಯಕ್ಷರಾಗಿ ವಿನಯ್ ಪಾಯ್ಸ್, ಆರ್.ಬಿ. ಜಗದೀಶ್ ಆಯ್ಕೆ,ಕೋಶಾಧಿಕಾರಿಯಾಗಿ ಉಮೇಶ ಮಾರ್ಪಳ್ಳಿ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರಮೋದ್ ಸುವರ್ಣ,ಹರಿಪ್ರಸಾದ್ ನಂದಳಿಕೆ,ಗಣೇಶ ಸಾಯ್ಬರ ಕಟ್ಟೆ, ಸಂಜೀವ, ಸಂತೋಷ ನಾಯ್ಕ್, ಉದಯ ಕುಮಾರ್ ತಲ್ಲೂರು, ಹರ್ಷಿಣಿ ಇವರುಗಳು ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿನಾಕರ ಭಂಡಾರಿ ಲೆಕ್ಕ ಪತ್ರ ಮಂಡಿಸಿದರು.