ಶ್ರೀನಿವಾಸಪುರ,ಕಲ್ಲೂರು ಗ್ರಾಮದ ಕೆರೆ ಅಂಗಳದಲ್ಲಿ ನಡೆಯುತ್ತಿದ್ದ ಕೋಳಿ ಜೂಜು ಕೇಂದ್ರದ ಮೇಲೆ ಪೊಲೀಸರ ದಾಳಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆ ಅಂಗಳದಲ್ಲಿ ನಡೆಯುತ್ತಿದ್ದ ಕೋಳಿ ಜೂಜು ಕೇಂದ್ರದ ಮೇಲೆ ಸೋಮವಾರ ದಾಳಿ ನಡೆಸಿದ ಪೊಲೀಸರು ಜೂಜಾಡುತ್ತಿದ್ದ 5 ಮಂದಿಯನ್ನು ಬಂಧಿಸಿ, ಬಂಧಿತರಿಂದ ಪಣಕ್ಕೆ ಇಟ್ಟಿದ್ದ ರೂ.6750 ನಗದು ಹಾಗೂ 3 ಹುಂeಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿಠ್ಠಲ್ ತಳವಾರ್, ಸಿಬ್ಬಂದಿ ವೇಣುಗೋಪಾಲ್ ದಾಳಿಯಲ್ಲಿ ಭಾಗವಹಿಸಿದ್ದರು.