ಮೋದಿಯ ದುರಾಡಳಿತದ ಬಗ್ಗೆ ಜಾಗ್ರತಿ ಮೂಡಿಸಲು ಕಾಂಗ್ರೆಸಿನ ಪಾದಯತ್ರೆಗೆ ಬನ್ನಿ

JANNUDI.COM NETWORK

ಕೇಂದ್ರ ಹಾಗೂ ರಾಜ್ಯ ಸರಕಾರದ ಭೂ ಮಸೂದೆ ಕಾಯ್ದೆ ತಿದ್ದುಪಡಿ ˌ ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ಎ.ಪಿ.ಎಂ.ಸಿ ಕಾಯ್ದೆ ತಿದ್ದು ಪಡಿ ವಿರುದ್ಧ ಜನಜಾಗ್ರತಿ, ಮೋದಿಯ ದುರಾಡಳಿತಕ್ಕೆ ಜಾಗ್ರತಿ ಮೂಡಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು* *ತಾ 22 – 02 -2021 ರಿಂದ 27 – 02 -2021 ರವರೆಗೆ ಹಮ್ಮಿಕೊಂಡ ಪಾದಯಾತ್ರೆ ಹಮ್ಮಿಕೊಂಡಿದೆ. ಸಾರ್ವಜನಿಕರು ಈ ಪಾದಯಾತ್ರೆಗೆ ಬರಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮನವಿ ಮಾದಿದೆ.

ಕೇಂದ್ರ ಮತ್ತು ರಾಜ್ಯ ಸರಕಾರದ ಕೃಷಿ ,ಕಾರ್ಮಿಕ ಮತ್ತು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ವಿರುದ್ಧ ಜನಜಾಗ್ರತಿ ಮೂಡಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹೆಜಮಾಡಿಯಿಂದ ಬೈಂದೂರು ತನಕದ 5 ನೇ ದಿನದ ಪಾದಯಾತ್ರೆಯು ನಾಳೆ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿಯಿಂದ ಪ್ರಾರಂಭವಾಗಲಿದ್ದು ,5 ನೇ ದಿನದ ಪಾದಯಾತ್ರೆಗೆ
ಪರಿಷತ್ ಮಾಜಿ ಸಭಾಪತಿ ವಿಧಾನ ಪರಿಷತ್ ಸದಸ್ಯ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ, ಚಾಲನೆ ನೀಡಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ ಕುಮಾರ ಕೊಡವೂರ ಮಾಜಿ ಸಚಿವರಾದ ಶ್ರೀ ವಿನಯ ಕುಮಾರ ಸೊರಕೆ, ಶ್ರೀ ಗೋಪಾಲ ಪೂಜಾರಿ,ಪ್ರಮೋದ್ ಮದ್ವರಾಜ್ ಭಾಗವಹಿಸಲಿದ್ದಾರೆ.

ಪಕ್ಷದ ಮುಖಂಡರು ,ಪದಾಧಿಕಾರಿಗಳು, ಜನಪ್ರತಿನಿದಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ