ಸಮಾಜ ಸರಳ ವಿವಾಹ ಪದ್ಧತಿಯನ್ನು ಗೌರವಿಸಬೇಕು;ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸಮಾಜ ಸರಳ ವಿವಾಹ ಪದ್ಧತಿಯನ್ನು ಗೌರವಿಸಬೇಕು. ಮದುವೆಗಾಗಿ ಸಾಲ ಮಾಡಿ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಮಾರ್ಕೊಂಡಪ್ಪ ಸೇವಾ ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಧೂವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಸರಳತೆಯಲ್ಲಿ ಸಂತೋಷವಿದೆ. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿದ್ದ ವಿವಾಹಗಳು ಎಲ್ಲ ಕಾಲಕ್ಕೂ ಮಾದರಿಯಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸಾಮೂಹಿಕ ವಿವಾಹ ಏರ್ಪಡಿಸಿದ್ದ ಸಮಾಜ ಸೇವಕರಾದ ಲಕ್ಷ್ಮೀನಾಯಕ, ಎಂ.ಮುನಿಶಾಮಿ ನಾಯಕ ಇದ್ದರು