ಶ್ರೀನಿವಾಸಪುರ: ಪಾತನೆಲವಂಕಿ ಗ್ರಾಮದ ಸಮೀಪ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

woman unconscious falling on ground on black background in white tone with shadow edge

ಶ್ರೀನಿವಾಸಪುರ: ಪಾತನೆಲವಂಕಿ ಗ್ರಾಮದ ಸಮೀಪ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ತಾಲ್ಲೂಕಿನ ಚಿಂತಮಾನಿಪಲ್ಲಿ ಗ್ರಾಮದ ರೇಖಾ (32) ಕೊಲೆಯಾದ ಮಹಿಳೆ.
ಭಾನುವಾರ ಪಾತನೆಲವಂಕಿ ಗ್ರಾಮದ ಸಮೀಪ ಪ್ರಯಾಣಿಕರ ತಂಗುದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದಾಗ, ಈ ಘಟನೆ ನಡೆದಿದೆ. ಕೊಲೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಹೇಳಲಾಗಿದೆ. ಕೃತ್ಯ ನಡೆದ ಬಳಿಕ ಘಟನಾ ಸ್ಥಳದಿಂದ ಓಡಿಹೋಗಿ ಲಕ್ಷ್ಮೀಸಾಗರ ಗೇಟ್‍ನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ರಾಜು (38)ವನ್ನು ಪೊಲೀಸರು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆಚ್ಚುವರಿ ರಕ್ಷಣಾಧಿಕಾರಿ ಜಾಹ್ನವಿ, ಡಿವೈಎಸ್‍ಪಿ ಗಿರಿ, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಎನ್.ಕೆ.ರಾಘವೇಂದ್ರ ಪ್ರಕಾಶ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ನಾರಾಯಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.