ಪಟ್ಟಣದ ಮಾರುತಿ ನಗರದ ನಿವೃತ್ತ ದಪೇದಾರ್ ಕೆ.ಕೋನಪ್ಪ ನಿಧನ (94)

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ನ್ಯಾಯಾಂಗ ಇಲಾಖೆಯ ನಿವೃತ್ತ ದಪೇದಾರ್ ಕೆ.ಕೋನಪ್ಪ (94) ಪಟ್ಟಣದ ಮಾರುತಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾದರು. ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೃತರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಹಾಗೂ ಗಾಯಕ ಕೆ.ನರಸಿಂಹಮೂರ್ತಿ ಸೇರಿದಂತೆ ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ತಾಲ್ಲೂಕಿನ ಜಿ.ರೆಡ್ಡಿವಾರಿಪಲ್ಲಿ ಗ್ರಾಮದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.