ಸರಕಾರಿ ಆಸ್ಪತ್ತೆಗಳಲ್ಲಿ ಲಸಿಕೆ ಕೊರತೆ – ಕೂಡಲೇ ಪೂರೈಕೆ ಮಾಡಲು ಸಿಪಿಐ(ಎಂ) ಆಗ್ರಹ

JANANUDI.COM NETWORK

ಕುಂದಾಪುರ, ಮೇ. 5. ಕೋಟೇಶ್ವರ, ಬ್ರಹ್ಮಾವರ ಮೊದಲಾದ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆಯಿಂದಾಗಿ ಜನರಿಗೆ ತೊಂದರೆ ಆಗಿದೆ. ದಿನ ನಿತ್ಯ ವ್ಯಾಪಾರ, ವಹಿವಾಟು, ಕೂಲಿ ಕೆಲಸ ಮಾಡುವ ಬಡ, ಮಧ್ಯಮ ವರ್ಗದ ಜನರು ತಮ್ಮ ಆದಾಯಕ್ಕೆ ಸಂಚಕಾರ ತಂದುಕೊಂಡು ಆಸ್ಪತ್ರೆಗೆ ಹೋಗುತ್ತಾರೆ. ಆಶಾ ಕಾರ್ಯಕರ್ತೆಯರು ಸಮಯ ನಿಗದಿ ಮಾಡಿ ತಿಳಿಸಿದ್ದರೂ ಆಸ್ಪತ್ರೆಗೆ ಹೋದಾಗ, ‘ನಾಳೆ ಬನ್ನಿ’ ಎಂದು ವಾಪಾಸು ಕಳಿಸಿದ್ದಾರೆ.
ಈ ಕೂಡಲೇ ಜಿಲ್ಲಾಡಳಿತ ಮತ್ತು ಜನ ಪ್ರತಿನಿಧಿಗಳು ಸರಕಾರದ ಮೇಲೆ ಒತ್ತಡ ತಂದು ಎಲ್ಲಾ ಸರಕಾರಿ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕೆಂದು ಸಿಪಿಐ(ಎಂ] ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ ಎಂದು ಬಾಲಕೃಷ್ಣ ಶೆಟ್ಟಿ ಕಾರ್ಯದರ್ಶಿ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಮಾಧ್ಯಮಕ್ಕೆ ತಿಳಿಸಿದ್ದಾರೆ