ಎಸ್.ಆರ್.ವಿಶ್ವನಾಥ್ ಅವರಿಂದ ಎಚ್.ವಿಶ್ವನಾಥ್ ಅವರಿಗೆ ಮಂಗಳಾರತಿ

JANANUDI.COM NETWORK

ಬೆಂಗಳೂರು:ತಮಗೆ ಸ್ಥಾನಮಾನ ನೀಡಿದ ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಪಕ್ಷಕ್ಕೆ ಓಡಿ ಹೋಗಿ ಈಗ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿರುವ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತೀವ್ರ ಆಕ್ರೋಶ ಗೊಂಡು ಅವರಿಗೆ ಮಂಗಳಾರತಿ ಮಾಡಿದ್ದಾರೆ.  

   “ಬೇರೆ ಪಕ್ಷಕ್ಕೆ ರಾಜೀನಾಮೆ ನೀಡಿ ಬಂದ ನಿಮಗೆ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದು ಪಕ್ಷ ಹೇಳಿದ್ದರೂ ಹಠಕ್ಕೆ ಬಿದ್ದು ಸ್ಪರ್ಧಿಸಿ ಹೀನಾಯವಾಗಿ ಸೋತಿರಿ. ಸೋಲನುಭವಿಸಿದ ನಿಮಗೆ ಮೇಲ್ಮನೆಗೆ ನಾಮನಿರ್ದೇಶನ ಮಾಡುವ ಅಗತ್ಯವಿರಲಿಲ್ಲ. ಆದರೆ, ಕರೆತಂದು ಟಿಕೆಟ್ ಕೊಟ್ಟು ನಿಮಗೆ ಗೌರವ ಕೊಟ್ಟು ಎಂಎಲ್ ಸಿ ಮಾಡಿದ ಯಡಿಯೂರಪ್ಪ ಮತ್ತು ಸರ್ಕಾರದ ವಿರುದ್ಧವೇ ಮಾತನಾಡುವ ಮೂಲಕ ಪಕ್ಷದ್ರೋಹ ಮಾಡುತ್ತಿದ್ದೀರಿ” ಎಂದು ಎಚ್.ವಿಶ್ವನಾಥ್ ಗೆ ಮೂದಲಿಸಿದ್ದಾರೆ.

     ಪ್ರತಿಕ್ರಿಯೆ ನೀಡುತ್ತಾ ಎಸ್.ಆರ್.ವಿಶ್ವನಾಥ್ ಅವರು, ಎಚ್.ವಿಶ್ವನಾಥ್ ನೀವು ನಮ್ಮ ಪಕ್ಷದಲ್ಲಿದ್ದುಕೊಂಡು ಪಕ್ಷ ಮತ್ತು ಸರ್ಕಾರದ ವಿರುದ್ಧ ಹೇಳಿಕೆ ನೀಡುವುದನ್ನು ಬಿಡಿ. ಇಲ್ಲವಾದರೆ, ಪಕ್ಷದಿಂದ ಹೊರಹೋಗಿ.ನಿಮ್ಮ ಅಗತ್ಯ ನಮ್ಮ ಪಕ್ಷಕ್ಕಿಲ್ಲ’ ಎಂದು ಕಿಡಿಕಾರಿದ್ದಾರೆ.

  ಇದೊಂದು ಪಕ್ಷಾಂತರ ಮಾಡುವರಿಗೆ ಪಾಠವಾಗ ಬಹುದೇ?