ನಿವಾಸಪುರ: ಪಟ್ಟಣದಲ್ಲಿ ಕೆಲಸವಿಲ್ಲದೆ ಬೈಕ್‍ನಲ್ಲಿ ಸುತ್ತಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರು ಲಾಟಿ ರುಚಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದಲ್ಲಿ ಕೆಲಸವಿಲ್ಲದೆ ಬೈಕ್‍ನಲ್ಲಿ ಸುತ್ತಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರು ಲಾಟಿ ರುಚಿ ತೋರಿಸಿದರು.
ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸುವ ಅವಕಾಶ ಕಲ್ಪಿಸಲಾಗಿತ್ತು. ಆದರೆ ಪೊಲೀಸರು ವಾಹನಗಳನ್ನು ಪಟ್ಟಣ ಒಳಗೆ ಬಿಡಲಿಲ್ಲ. ಖರೀದಿಗೆ ಬಂದಿದ್ದವರು ಬೈಕ್ ಮತ್ತಿತರ ವಾಹನಹಗಳನ್ನು ಪಟ್ಟಣದ ಹೊವವಲಯದಲ್ಲಿ ನಿಲ್ಲಿಸಿ, ಕಾಲ್ನಡಿಗೆಯಲ್ಲಿ ಹೋಗಿ ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ಖರೀದಿಸಿ ಹೊತ್ತು ತರುತ್ತಿದುದು ಕಂಡುಬಂದಿತು.
ಪೊಲೀಸ್ ಹಾಗೂ ಪುರಸಭೆ ಸಿಬ್ಬಂದಿ ರಸ್ತೆಯಲ್ಲಿ ನಿಂತು, ವಿನಾಕಾರಣ ಸುತ್ತಾಡುತ್ತಿದ್ದ ವಾಹನಗಳನ್ನು ಗುರುತಿಸಿ ವಶಪಡಿಸಿಕೊಂಡರು.
ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್‍ರೆಡ್ಡಿ, ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ನೇತೃತ್ವದಲ್ಲಿ ಮಾಸ್ಕ್ ಧರಿಸದ ಹಾಗೂ ವಿನಾಕಾರಣ ವಾಹನಗಳಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಯಿತು. ನಿಜವಾಗಲೂ ಅಗತ್ಯ ಇರುವವರನ್ನು ಗುರುತಿಸಿ ಕಳುಹಿಸಲಾಗುತ್ತಿತ್ತು
.