ಕೋವಿಡ್ ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾದವರಿಗೆ ಕರ್ನಾಟಕದಿಂದ 1250 ಕೋಟಿ ರೂ ವಿಶೇಷ ಪ್ಯಾಕೇಜಿನ ದಯೆ

ಲಾಕ್ ಡೌನ್ ಮುಂದುವರೆಸುವ ಬಗ್ಗೆ ಮೇ 23 ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ – ಸಿಎಂ ಬಿಎಸ್ ಯಡಿಯೂರಪ್ಪ.

JANANUDI.COM NETWORK

ಕೋವಿಡ್ ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟ 1250 ಕೋಟಿ ರೂ ವಿಶೇಷ ಪ್ಯಾಕೇಜಿನ ದಯೆ
ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೊರೋನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗಿದ್ದರಿಂದ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಈ ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 1,250 ಕೋಟಿ ರೂ.ಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ.
ಇಂದು ಹಿರಿಯ ಸಚಿವರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು. ಕೊರೊಣಾ ನಿಯಂತ್ರಣಕ್ಕೆ ಲಾಕ್ ಡೌನ್ ಅನಿವಾರ್ಯವಾಗಿತ್ತು. ಮೇ.24ರವರೆಗೆ ನಿರ್ಬಂಧ ವಿಧಿಸಲಾಗಿತ್ತು. ಲಾಕ್ ಡೌನ್ ವೇಳೆ ಅಗತ್ಯ ಸೇವೆಗೆ ಅವಕಾಶ ಕಲ್ಪಸಿದ್ದವು. ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವಿಗಾಗಿ ಸರ್ಕಾರದಿಂದ 1250 ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಣೆಯ ದಯೆ ತೋರಿದೆ


ಪ್ಯಾಕೇಜ್ ಘೋಷಣೆ ಈ ಥರಹ ಇದೆ.


ಆಟೋ ಟ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ಪರಿಹಾರ.
ಬೀದಿ ಬದಿ ವ್ಯಾಪರಿಗಳಿಗೆ 3 ಸಾವಿರ
ಹೂವು ಹಣ್ಣು ವ್ಯಾಪರಿಗಳಿಗೆ 3 ಸಾವಿರ
ಕಲಾವಿದರು,ಕಲಾ ತಂಡಗಳಿಗೆತಲಾ 3 ಸಾವಿರ

ಹೂವು ಬೆಳೆಗಾರರಿಗೆ ಹೆಕ್ಟೇರ್ ಗೆ 10 ಸಾವಿರ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ 70 ಕೋಟಿ ಖರ್ಚಾಗಲಿದೆ.
ಅಸಂಘಟಿತ ಕಾರ್ಮಿಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ತಲ 2 ಸಾವಿರ ರೂ ಸಹಾಯ ಧನ,
ಬಿಪಿಎಲ್ ಅಂತ್ಯೋದಯ ಕಾರ್ಡುದಾರರಿಗೆ 5 ಕೆ.ಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿ, ನಗರ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟಿನ್ ನಲ್ಲಿ ಉಚಿತ ಊಟ ನೀಡಲಾಗುತ್ತದೆ.
ಕೊರೋನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ.
ಕೋವಿಡ್ ನಿರ್ವಹಣೆಗೆ ಗ್ರಾಮಪಂಚಾಯಿತಿಗಳಿಗೆ 50 ಸಾವಿರ ರೂ ಮುಂಗಡವಾಗಿ ನೀಡಲಾಗುವುದು. ಇದರಿಂದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಅನುಕೂಲವಾಗಲಿದೆ.
3 ದಿನಗಳೊಳಗೆ 2150 ವೈದ್ಯರ ನೇಮಕ ಮಾಡಲಾಗುವುದು


[ಇನ್ನು ಲಾಕ್ ಡೌನ್ ಮುಂದುವರೆಸುವ ಬಗ್ಗೆ ಮೇ 23 ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ]