ರಾಜ್ಯಕ್ಕೆ ನಾಚಿಕೆ ಬೆಚ್ಚಿ ಬೀಳಿಸುವ ಘಟನೆ : ದಲಿತ ಯುವಕನಿಗೆ ಮೂತ್ರ ಕುಡಿಸಿ ವಿಕೃತಿ ತೋರಿಸಿದ ಪಿ.ಎಸ್.ಐ. ಅರ್ಜುನ್

JANANUDI.COM NETWORK

ಚಿಕ್ಕಮಗಳೂರು ಮೇ. 22; ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ, ನಾಚಿಕೆ ಪಡುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನಿಗೆ ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಎಂಬ ಪಿಎಸ್ಐ ಮೂತ್ರ ಕುಡಿಸಿ, ಮೇಲೆ ನೆಲಕ್ಕೆ ನೆಲಕ್ಕೆ ಚೆಲ್ಲಿದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿ ತನ್ನ ವಿಕೃತಿ ತೋರಿಸಿದ್ದಾನೆಂದು ಎಂಬ ಘಟನೆ ಕೇಳಿ ಬರುತ್ತೀದೆ.
22 ವರ್ಷದ ಪುನೀತ್ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದವನು. ಐಟಿಐ ಮಾಡಿಕೊಂಡು ಹೊರಗುತ್ತಿಗೆಯಲ್ಲಿ ಕಂಪ್ಯೂಟರ್ ಕೆಲಸ ಮಾಡಿಕೊಂಡಿರುವನು.. ಆರು ತಿಂಗಳ ಹಿಂದೆ ಪುನೀತ್ ಇದೇ ಗ್ರಾಮದ ಕಾಣೆಯಾದ ಹೆಂಗಸಿನ ನಂಬರ್ ಗೆ ಕರೆ ಮಾಡಿದ್ದು.. ಈ ವಿಚಾರ ಅವರ ಮನೆಗೂ ಗೊತ್ತಾಗಿ ಕರೆಸಿ ಮದುವೆಯಾದ ಹೆಣ್ಣುಮಕ್ಕಳಿಗೆ ಕರೆ ಮಾಡಬಾರದೆಂದು ಬುದ್ದಿ ಹೇಳಿ ಕಳಿಸುತ್ತಾರೆ.
ಇದೀಗ ಆ ಹೆಣ್ಣುಮಗಳು ಪಕ್ಕದ ಮನೆಯಾತನೊಂದಿಗೆ ಓಡಿ ಹೋಗಿದ್ದು ಈ ಕ್ರತ್ಯದಲ್ಲಿ ಪುನೀತನ ಕೈವಾಡ ಇರಬಹುದೆಂಬ ಶಂಕೆಯಿಂದ ಕೆಲವರು ಆತನ ಮನೆ ಮುಂದೆ ಬಂದು ಜಗಳ ಮಾಡಿದ್ದಾರೆ. ಈ ಬಗ್ಗೆ ಮಾಹಿತಿಯೇ ಇಲ್ಲದ ಪುನೀತ್ ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಎಷ್ಟೇ ಹೇಳಿದರೂ ಜನರು ಒಪ್ಪದಿದ್ದಾಗ ಹೆದರಿದ ಆತ 112 ಪೊಲೀಸರಿಗೆ ಕರೆ ಮಾಡಿ ನಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾನೆ,. ಈತನ ಮೇಲೆ ಯಾರೂ ದೂರು ನೀಡದಿರುವುದರಿಂದ ಈತನ ಪಾತ್ರ ಏನೂ ಇಲ್ಲ ಎಂದು ಹೇಳುತ್ತಾರೆ. ಆದರೆ ಅಲ್ಲಿನ ಕೆಲ ಪೊಲೀಸರು “ಸಾರ್ ಈತನದ್ದು ಕೈವಾಡ ಇದೆ . ಅವರು ಓಡಿ ಹೋಗಲು ಈತನೇ ಕಾರಣ ’’ಎಂದು ಪಿಎಸ್ಐ ಗೆ ಕಿವಿ ಚುಚ್ಚಿದ್ದಾರಂತೆ. ಅವರ ಮಾತು ನಂಬಿದ ಪಿಎಸ್ ಐ ಪುನೀತನನ್ನು ಎತ್ತುಕೊಂಡು ಹೋಗಿ ಸ್ಟೇಷನ್ ನಲ್ಲಿ ನರಕದ ದರ್ಶನವನ್ನು ತೋರಿಸಿದ ಅರ್ಜುನ್ ತೋರಿಸಿದ್ದಾನೆ
.

‘ನನ್ನನ್ನು ಪೊಲೀಸ್ ವಾಹನದಿಂದ ಕೆಳಗಿಳಿಸಿದ ತಕ್ಷಣ ಠಾಣೆಯ ಮೇಲಿನ ಕೋಣೆಯೊಂದಕ್ಕೆ ಕರೆದುಕೊಂಡು ಹೋದರು. ನನ್ನ ಮೇಲೆ ದೂರಿಲ್ಲ ಎಂದು ಬೇಡಿಕೊಂಡರೂ ಕೇಳಲಿಲ್ಲ. ಬಟ್ಟೆ ಬಿಚ್ಚು ಸೂ.. ಮಗನೇ ಎಂದು ಬೈದರು. ನನ್ನ ಕೈ ಕಾಲು ಕಂಬಕ್ಕೆ ಕಟ್ಟಿ ನೇತು ಹಾಕಿದರು. ಮಧ್ಯೆ ಕಬ್ಬಿಣದ ರಾಡು ಇಟ್ಟರು. ಮುಂಗಾಲಿಗೆ, ಅಂಗಾಲಿಗೆ ಹೊಡೆದರು. ಸುಮಾರು 2 ಗಂಟೆ ಹಿಂಸೆ ಕೊಟ್ಟರು. ಸಾರ್ ನಾನೇನಾದ್ರೂ ಇದರಲ್ಲಿ ಇದ್ದೀನಿ ಎಂದರೆ ಸತ್ತು ಹೋಗುತ್ತೇನೆ ಅವರನ್ನು ಕರೆಸಿ ಒಂದು ಮಾತು ಕೇಳಿ ಎಂದು ಅತ್ತು ಬೇಡಿಕೊಂಡೆ’ಎಂದು ಪುನೀತ್ ಹೇಳುತ್ತಾನೆ. “ಆದರೂ ಅವರ ಮನ ಕರಗಲಿಲ್ಲ. ಬದಲಾಗಿನೀನೇ ಮಾಡಿರುವುದು ಎಂದು ಒಪ್ಪಿಕೋ’ ಎಂದು ಮತ್ತೆ ಹೊಡೆದರು ಕೊನೆಗೆ ಇವರ ಹೊಡೆತ, ಹಿಂಸೆ ಹೆಚ್ಚಾದಾಗ ಸಾಯಿಸುತ್ತಾರೆ ಎಂದು ಹೆದರಿ ಒಪ್ಪಿಕೊಂಡೆ . ಆಗ ಸ್ವಲ್ಪ ಹೊತ್ತು ಸುಮ್ಮನಾದರು. ನಾನು ನೇತಾಡುತ್ತಲೇ ಇದ್ದೆ.

ನೀನು ಅಪ್ಪನಿಗೆ ಹುಟ್ಟಿದ್ದೀಯಾ..? ಎಂದು ಕೇಳಿದರು. ಹೌದು ಎಂದೆ. ಇದಕ್ಕೆ ಗ್ಯಾರಂಟಿ ಏನು..? ಯಾವ ಜಾತಿ..?ಎಂದು ಕೇಳಿದರು. ಎಸ್ಸಿ ಎಂದಿದ್ದಕ್ಕೆ ಮತ್ತೆ ಹೊಡೆದರು. ನಿಮ್ಮದು ಇದೇ ಕೆಲಸ ಸೂ.. ಮಕ್ಕಳ ಎಂದು ಪಾದಕ್ಕೆ ಹೊಡೆದರು. ಕೊನೆಗೆ ಬಾಯಿ ಬಾಯಾರಿಕೆ ತಡೆಯದೆ ಸಾಯುವಂತಾಗುತ್ತಿತ್ತು. ನೀರು ಬೇಕೇ ಬೇಕೆಂದು ಅಂಗಲಾಚಿಕೊಂಡೆ’


ನನ್ನನ್ನು ಇರಿಸಿಕೊಂಡಿದ್ದ ಕೋಣೆಯಲ್ಲಿ ಕಳ್ಳತನದ ಆರೋಪದಲ್ಲಿ ಚೇತನ್ ಎಂಬುವನನ್ನು ಕೂರಿಸಿಕೊಂಡಿದ್ದರು. ಆತನನ್ನು ಕರೆದ ಅರ್ಜುನ್ `ಈತನಿಗೆ ನೀರು ಬೇಕೆಂತೆ ಉಚ್ಚೆ ಹೂಯ್ಯೋ ‘ ಎಂದರು ಆತ ಹಿಂಜರಿದ. ಆದರೆ ಆತನಿಗೆ ಭಯ ಹುಟ್ಟಿಸಿ ನಿನಗೂ ಇದೇ ರೀತಿ ಮಾಡುತ್ತೇನೆಂದು ಹೆದರಿಸಿದರು. ಆಗ ನನ್ನ ಬಳಿ ಬಂದ ಆತ ಜಿಪ್ಪು ಬಿಚ್ಚಿ ನನ್ನ ಬಾಯಿಗೆ ಮೂತ್ರ ಮಾಡಿದ. ನಾನು ತಲೆ ಎತ್ತಿ ಬೇಡ ಎಂದರೂ ಬಿಡದ ಪಿಎಸ್ಐ ಕೇಳಲಿಲ್ಲ. ನನಗೆ ಆಗಲೇ ಸಾವು ಬರಬಾರದೆ ಅನಿಸಿತು. ಹೊಡೆದ ಹೊಡೆತಕ್ಕೆ ಕೈಕಾಲುಗಳು
ಸಂಪೂರ್ಣ ಬಿದ್ದು ಹೋಗಿದ್ದವು. ಆಮೇಲೆ ನೆಲಕ್ಕೆಬಿದ್ದ ಮೂತ್ರವನ್ನು ನನ್ನಿಂದ ನೆಕ್ಕಿಸಿದರು.
. 5.30 ಕ್ಕೆ ನನ್ನ ಮಾವ ಬಂದಿದ್ದರೂ ನನ್ನ ಭೇಟಿಯಾಗಲು ಬಿಟ್ಟಿರಲಿಲ್ಲ. ರಾತ್ರಿ 10 ಗಂಟೆಗೆ ಬರಲು ಹೇಳಿದ್ದರು. ಕೊನೆಗೆ 10.30 ಕ್ಕೆ ಮಾವ ಬಂದರು. ನನ್ನ ಸ್ಥಿತಿ ನೋಡಿ ಅತ್ತರು.


ಮತ್ತೆ ಟಾರ್ಚರ್ ಕೊಡಲು ಆರಂಭಿಸಿದರು
ಅದಾಗಿ ಮತ್ತೆ ಅರ್ಜುನ್ ಅವರೇ ಕರೆ ಮಾಡಿ ನೀನೇ ಅವರನ್ನು ಎಲ್ಲಿಗೆ ಕಳಿಸಿದ್ದೀಯಾ ಕರೆದುಕೊಂಡು ಬಾ ಎಂದು ಹೆದರಿಸಿದರು. ಆಗ ಭಯ ಇನ್ನೂ ಶುರುವಾಯ್ತು. ಸಾಯಬೇಕೆನಿಸಿತು. ಕೊನೆಗೆ ಮಾವನಿಗೆ ಹೇಳಿದೆ. ನಂತರ ಗೊತ್ತಿರುವ ಪತ್ರಕರ್ತರ ಮೂಲಕ ಎಸ್ಪಿ, ಐಡಿ, ಡಿಐಜಿ , ಎಸ್ಪಿ ಮಾನವ ಹಕ್ಕು ಆಯೋಗಕ್ಕೆ ಪತ್ರ ಬರೆದೆವು. ಮಾಧ್ಯಮಗಳಲ್ಲಿ ಸುದ್ದಿ ಬಂತು. ಘಟನೆ ಬಗ್ಗೆ ನಮ್ಮ ಎಂಎಲ್ ಎ ಎಂಪಿ ಕುಮಾರಸ್ವಾಮಿ, ಮೋಟಮ್ಮ ಮೊದಲಾದವರು ವಿಚಾರಿಸಿಕೊಂಡರು. ದಲಿತ ಸಂಘಟನೆಗಳೆಲ್ಲ ನಮ್ಮ ಪರ ಬಂದರು. ಈ ನಡುವೆ ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಸ್ಪಿಗೆ ವಹಿಸಲಾಗಿದ್ದು, ಅವರು ಬಂದು ನನ್ನ ಹೇಳಿಕೆ ತೆಗೆದುಕೊಂಡಿದ್ದಾರೆ. ಮೂತ್ರ ಕುಡಿಸಿದ ಚೇತನ್ ನಾಪತ್ತೆಯಾಗಿದ್ದಾನೆ. ಆತನಿಗೆ ಹಣ ಮತ್ತು ಬೆದರಿಕೆ ಹಾಕಿ ಎಲ್ಲೋ ಬಚ್ಚಿಡಲಾಗಿದೆ. ಆತ ಯಾರ ಕೈಗೂ ಸಿಗುತ್ತಿಲ್ಲ. ಕೆಲವು.

ಪೊಲೀಸರು ಹಾಗೂ ಕೆಲ ಮುಖಂಡರು ನನ್ನ ಮನೆಗೆ ಬಂದಿದ್ದರು ಎರಡು ಲಕ್ಷ ಹಣ ಕೊಡುತ್ತೇವೆ , ಕೆಲಸ ಕೊಡಿಸುತ್ತೇವೆ ರಾಜಿ ಮಾಡಿಕೋ ಎಂದರು. ನಾನು ಒಪ್ಪಿಕೊಳ್ಳಲಿಲ್ಲ. ನನಗೆ ಅವನ ಮೇಲೆ ವೈಯಕ್ತಿಕ ದ್ವೇಷ ಇಲ್ಲ. ನನಗೆ ಆದ ಅವಮಾನ ಯಾರಿಗೂ ಆಗಬಾರದು. ಆತನನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆದರೆ, ಆತನ ಅಮಾನತ್ತು ಆಗಬೇಕು ನನಗೆ ನ್ಯಾಯ ಬೇಕು’ ಎಂದು ಪುನೀತ್ ಏಳುತ್ತಾನೆ


ಇಂತಹ ಅಮಾನವೀಯ ಕ್ರತ್ಯನಡೆಸಿದ ಪಿಎಸ್ಐಗೆ ಶಿಕ್ಷೆಯಾಗಬೇಡವೇ!?
ಇಂತಹುದೊಂದು ಅಮಾನವೀಯ ಕೃತ್ಯ ನಡೆದರೂ ಅರ್ಜುನ್ ಎಂಬ ಪಿಎಸ್ಐ ಗೆ ಈವರೆಗೂ ಯಾವ ಶಿಕ್ಷೆಯೂ ಆಗಿಲ್ಲ. ಜನರ ಕೋಪ, ಆಕ್ರೋಶ ಶಮನಗೊಳಿಸಲು ಆತನನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿಕೊಂಡಿರುವ ಇಲಾಖೆ ಮುಖ್ಯಸ್ಥರು ಕೇವಲ ಕಣ್ಣೊರೆಸುವ ಕೆಲಸ ಮಾಡಿದ್ದಾರೆ. ಮೂತ್ರ ಕುಡಿಸಿದಂತ ಅತ್ಯಂತ ಅಮಾನವೀಯ ಪ್ರಕರಣ ನಡೆದರೂ ಮಾನವ ಹಕ್ಕು ಆಯೋಗ ತುಟಿ ಬಿಚ್ಚದಿರುವುದು ನಾಡಿನ ಜನಕ್ಕೆ ಅವಮಾನವೇ ಸರಿ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.